ಕ್ಯಾಂಪಸ್‌

ರಾಜ್ಯಮಟ್ಟದ ಅಂತರ್ ವಲಯ ಯುವಜನೋತ್ಸವ-2023 | ವಿವೇಕಾನಂದ ಕಾನೂನು ಮಹಾವಿದ್ಯಾಲಯಕ್ಕೆ ದ್ವಿತೀಯ ಸ್ಥಾನ

ಪುತ್ತೂರು: ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ಮಹಾವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ ಅಂತರ್ ವಲಯ ಯುವಜನೋತ್ಸವ-2023ರಲ್ಲಿ ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸ್ಪರ್ದಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ವಿವಿಧ ವಲಯಗಳಿಂದ ಆಯ್ದ 30 ಕಾಲೇಜುಗಳ ವಿದ್ಯಾರ್ಥಿ ತಂಡಗಳು ಭಾಗವಹಿಸಿದ್ದವು. ಈ ಸ್ಪರ್ಧೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ 4ನೇ ವರ್ಷದ ಬಿ.ಎ ಎಲ್.ಎಲ್.ಬಿ ವಿದ್ಯಾರ್ಥಿನಿ ಲಘು ಸಂಗೀತಾ ದಲ್ಲಿ ಪ್ರಥಮ ಸ್ಥಾನ, 4ನೇ ವರ್ಷದ ಬಿ.ಎ ಎಲ್.ಎಲ್.ಬಿ ವಿದ್ಯಾರ್ಥಿ ಶ್ರೇಯಸ್ ಎಂ ರಾವ್ ಭಾಷಣ […]

ರಾಜ್ಯಮಟ್ಟದ ಅಂತರ್ ವಲಯ ಯುವಜನೋತ್ಸವ-2023 | ವಿವೇಕಾನಂದ ಕಾನೂನು ಮಹಾವಿದ್ಯಾಲಯಕ್ಕೆ ದ್ವಿತೀಯ ಸ್ಥಾನ Read More »

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ವಿಶ್ವ ಯೋಗ ದಿನಾಚರಣೆ

ಪುತ್ತೂರು: ಯೋಗವನ್ನು ಪ್ರತಿಯೊಬ್ಬರೂ ಕೂಡಾ ತನ್ನ ದೈನಂದಿನ ದಿನಚರಿಯ ಭಾಗವನ್ನಾಗಿ ಅಳವಡಿಸಿಕೊಳ್ಳುವುದರಿಂದ ಒತ್ತಡ ನಿವಾರಣೆ, ಮಾನಸಿಕ ಸ್ಥಿತಿಯ ಸುಧಾರಣೆ, ದೈಹಿಕ ಸಧೃಢತೆಯನ್ನು ಸಾಧಿಸಬಹುದು ಎಂದು ವಿದ್ಯಾಭಾರತಿಯ ದಕ್ಷಿಣ ಕನ್ನಡದ ಯೋಗ ಸಂಯೋಜಕ ಶ್ರೀ.ಚಂದ್ರಶೇಖರ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಎಂಬಿಎ ವಿಭಾಗದ ಆಶ್ರಯದಲ್ಲಿ ಕಾಲೇಜಿನ ವಿಶ್ವೇಶ್ವರಯ್ಯ ಸಭಾ ಭವನದಲ್ಲಿ ನಡೆದ 9ನೇ ಅಂತಾರಾಷ್ಟ್ರೀಯ ಯೋಗದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಯೋಗ ಇಂದು ವಿಶ್ವವ್ಯಾಪಿಯಾಗಿದೆ, ವಿದೇಶಗಳೂ ಅದರ ಮಹತ್ವವನ್ನು ಅರಿತಿವೆ.

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ವಿಶ್ವ ಯೋಗ ದಿನಾಚರಣೆ Read More »

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಮೇ-ಜೂನ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳು https://karresults.nic.in/ ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶ ನೋಡಬಹುದಾಗಿದೆ. ಪೂರಕ ಪರೀಕ್ಷೆಯ ಫಲಿತಾಂಶದಲ್ಲಿಯೂ ಬಾಲಕಿಯರು ಮುಂದಿದ್ದಾರೆ. ಒಟ್ಟು 62,111 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದು,ಇವರಲ್ಲಿ 21,577 ವಿದ್ಯಾರ್ಥಿನಿಯರು (ಶೇ.34.74) ಉತ್ತೀರ್ಣರಾಗಿದ್ದಾರೆ. 95,645 ಬಾಲಕರು ಪರೀಕ್ಷೆಗೆ ಹಾಜರಾಗಿದ್ದು, 28, 901 ಬಾಲಕರು (ಶೇ.30.22) ಉತ್ತೀರ್ಣರಾಗಿದ್ದಾರೆ. ನಗರ ಪ್ರದೇಶದ ಶೇ.32.69 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ ಗ್ರಾಮಾಂತರ ಭಾಗದ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ Read More »

ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ IRCMD ಶಿಕ್ಷಣ ಸಂಸ್ಥೆ ವತಿಯಿಂದ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ.

ಕಡಬ : ಕಡಬದ ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಅಬಾಕಸ್ ಗಣಿತ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ಪ್ರಾಂಶುಪಾಲರಾದ ವಂದನೀಯ ಫಾದರ್ ಅಮಿತ್ ಪ್ರಕಾಶ್ ರೋಡ್ರಿಗಸ್ ರವರು ವಹಿಸಿ ಮಾತನಾಡಿ, ಅಬಾಕಸ್ ತರಗತಿಯನ್ನು ನಮ್ಮ ವಿದ್ಯಾರ್ಥಿಗಳಿಗೆ ನೀಡುವುದರಿಂದ ವಿದ್ಯಾರ್ಥಿಗಳ ಬುದ್ದಿ ಶಕ್ತಿ ಉತ್ತಮಗೊಳ್ಳುತ್ತದೆ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಇನ್ನಿತರ ಚಟುವಟಿಕೆಗಳಲ್ಲಿಯೂ ಪ್ರಗತಿ ಸಾಧಿಸುತ್ತಾರೆ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಪುತ್ತೂರು

ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ IRCMD ಶಿಕ್ಷಣ ಸಂಸ್ಥೆ ವತಿಯಿಂದ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ. Read More »

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆ ಕಾರ್ಯಕ್ರಮ

ಪುತ್ತೂರು: ಸಾಂಸ್ಕೃತಿಕ ಕಲೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿದ್ದು ಭಾರತೀಯ ಮನಸ್ಸಿನ ಬೆಳವಣಿಗೆಗೆ ಪೂರಕವಾಗಿದೆ. ಇವುಗಳು ಮನಸ್ಸಿಗೆ ಮನೋರಂಜನೆ ಒದಗಿಸುವುದು ಮಾತ್ರವಲ್ಲದೆ ವ್ಯಕ್ತಿಯನ್ನು ಸಂವೇದನಶೀಲರನ್ನಾಗಿಸುತ್ತದೆ. ಎಂದು ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಭಟ್ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆ-2023 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ನಾಲ್ಕು ಗೋಡೆಯ ಶಿಕ್ಷಣ ಪ್ರಸ್ತುತ ಕಾಲಘಟ್ಟದಲ್ಲಿ ಸಾಕಾಗುವುದಿಲ್ಲ. ಜ್ಞಾನ ಹೆಚ್ಚಿಸಿಕೊಳ್ಳಬೇಕಾದರೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಓದುವುದರ ಜೊತೆಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆ ಕಾರ್ಯಕ್ರಮ Read More »

ಜೆ.ಇ.ಇ. ಎಡ್ವಾನ್ಸ್ಡ್ ರಾಷ್ಟ್ರೀಯ ಮಟ್ಟದ ಪರೀಕ್ಷೆ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವರ್ಷಿತ್ ಮತ್ತು ಅಮೋಘ್‌ರವರಿಗೆ ರ್‍ಯಾಂಕ್ | ಐ.ಐ.ಟಿ. ಸಂಸ್ಥೆಗಳ ಪ್ರವೇಶಕ್ಕೆ ಅರ್ಹತೆ

ಪುತ್ತೂರು: ಕೇಂದ್ರ ಸರಕಾರದ ಎನ್.ಟಿ.ಎ. ನಡೆಸುವ ರಾಷ್ಟ್ರೀಯ ಮಟ್ಟದ ಜೆ.ಇ.ಇ. ಎಡ್ವಾನ್ಸ್ಡ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವರ್ಷಿತ್ ಜೆ ಮತ್ತು ಅಮೋಘ್ ಎ.ಪಿ. ಉತ್ತಮ ರ್‍ಯಾಂಕುಗಳನ್ನು ಗಳಿಸಿ ರಾಷ್ಟ್ರಮಟ್ಟದ ಐ.ಐ.ಟಿ. ಸಂಸ್ಥೆಗಳ ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ. ವರ್ಷಿತ್ ಜೆ 108 ಅಂಕಗಳನ್ನು ಗಳಿಸುವ ಮೂಲಕ ಸಾಮಾನ್ಯ ವರ್ಗದಲ್ಲಿ 1540 ರ್‍ಯಾಂಕ್, ಒ.ಬಿ.ಸಿ. ವಿಭಾಗದಲ್ಲಿ 3806  ರ್‍ಯಾಂಕ್ ಗಳಿಸಿದ್ದಾರೆ. ಇವರು ಬಂಟ್ವಾಳ ತಾಲೂಕಿನ ಮೂಡ ಭಂಡಾರಿ ಬೆಟ್ಟುವಿನ ಜಯಂತ ಆರ್ ಮತ್ತು ಸೌಮ್ಯ ಜೆ ದಂಪತಿ

ಜೆ.ಇ.ಇ. ಎಡ್ವಾನ್ಸ್ಡ್ ರಾಷ್ಟ್ರೀಯ ಮಟ್ಟದ ಪರೀಕ್ಷೆ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವರ್ಷಿತ್ ಮತ್ತು ಅಮೋಘ್‌ರವರಿಗೆ ರ್‍ಯಾಂಕ್ | ಐ.ಐ.ಟಿ. ಸಂಸ್ಥೆಗಳ ಪ್ರವೇಶಕ್ಕೆ ಅರ್ಹತೆ Read More »

ನ್ಯಾ. ರಾಜೇಶ್ ರೈ ಕಲ್ಲಂಗಳ ರವರಿಗೆ ಅಭಿನಂದನೆ

ಪುತ್ತೂರು: ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಆಯ್ಕೆಯಾಗಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿ ನ್ಯಾ. ರಾಜೇಶ್ ರೈ ಕಲ್ಲಂಗಳ ರವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರ ಮದ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ರವರು ಸನ್ಮಾನ ನಡೆಸಿ ಮಾತನಾಡಿದರು. ಈ ಸಂದರ್ಭದಲ್ಲಿ  ವಿವೇಕಾನಂದ ಕಾನೂನು ಮಹಾವಿದ್ಯಾಲಯದ  ವಿದ್ಯಾರ್ಥಿಗಳಿಗೆ ತಮ್ಮ ಶುಭದಿನಗಳ ಸಂಧರ್ಭದಲ್ಲಿ ನೆನಪಿನಾರ್ಥವಾಗಿ ಕೊಡುಗೆ ನೀಡುವ ಯೋಜನೆಯಾಗಿರುವ ‘ಶುಭಸ್ಮೃತಿ’ಯ ಪ್ರಯುಕ್ತ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಾಹನ

ನ್ಯಾ. ರಾಜೇಶ್ ರೈ ಕಲ್ಲಂಗಳ ರವರಿಗೆ ಅಭಿನಂದನೆ Read More »

ಸಂಶೋಧನಾ ಜರ್ನಲ್ ‘ಲೀಗಲ್ ಸ್ಪೆಕ್ಟ್ರಂ -4’ರ ಬಿಡುಗಡೆ

ಪುತ್ತೂರು: ನೆಹರೂನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಆಯ್ಕೆಯಾಗಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಯಾದ ನ್ಯಾ. ರಾಜೇಶ್ ರೈ ಕಲ್ಲಂಗಳ ರವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಮಹಾವಿದ್ಯಾಲಯದ ಸಂಶೋಧನಾ ಜರ್ನಲ್ ಲೀಗಲ್ ಸ್ಪೆಕ್ಟ್ರಂ -4 ರ ಬಿಡುಗಡೆ ಸಮಾರಂಭ ಶನಿವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ನ್ಯಾ. ರಾಜೇಶ್ ರೈ ಕಲ್ಲಂಗಳ ರವರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಂಶೋಧನಾ ಜರ್ನಲ್ ಲೀಗಲ್

ಸಂಶೋಧನಾ ಜರ್ನಲ್ ‘ಲೀಗಲ್ ಸ್ಪೆಕ್ಟ್ರಂ -4’ರ ಬಿಡುಗಡೆ Read More »

“ಪ್ರೇರಣಾ” ಸಂಸ್ಥೆಯಲ್ಲಿ “ಸ್ಪೋಕನ್ ಇಂಗ್ಲಿಷ್ ತರಬೇತಿ”ಯ 3ನೇ ಬ್ಯಾಚ್‍ಗೆ ಚಾಲನೆ | ಕಲಿಕೆಗೆ ವಯಸ್ಸಿನ ಮಿತಿಯಿಲ್ಲ : ಪ್ರೀತಾ

ಪುತ್ತೂರು: ನಗರದ ಅರುಣಾ ಥಿಯೇಟರ್ ಬಳಿಯ ಪ್ರಭು ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿರುವ “ಪ್ರೇರಣಾ” ಸಂಸ್ಥೆಯಲ್ಲಿ “ಸ್ಪೋಕನ್ ಇಂಗ್ಲಿಷ್ ತರಬೇತಿ”ಯ 3ನೇ ಬ್ಯಾಚ್‍ಗೆ ಗುರುವಾರ ಚಾಲನೆ ನೀಡಲಾಯಿತು. ಪ್ರಗತಿ ಪ್ಯಾರಾ ಮೆಡಿಕಲ್ & ಅಲೈಡ್ ಸೈನ್ಸ್ ನ ಪ್ರಾಂಶುಪಾಲೆ ಪ್ರೀತಾ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಕಲಿಕೆಗೆ ವಯಸ್ಸಿನ ಮಿತಿಯಿಲ್ಲ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ತನ್ನ ಆಸಕ್ತಿ ನೆಲೆಯಲ್ಲಿ ಯಾವುದೇ ವಿಷಯವನ್ನು ಕಲಿಯಬಹುದು.  ಪ್ರಸ್ತುತ ದಿನಗಳಲ್ಲಿ ಆಂಗ್ಲ ಭಾಷೆ ಪ್ರತಿಯೊಂದು ಕ್ಷೇತ್ರದಲ್ಲಿ ಅತೀ ಅಗತ್ಯವಿದ್ದು, ದೊಡ್ಡ ದೊಡ್ಡ ನಗರಗಳಲ್ಲಿ

“ಪ್ರೇರಣಾ” ಸಂಸ್ಥೆಯಲ್ಲಿ “ಸ್ಪೋಕನ್ ಇಂಗ್ಲಿಷ್ ತರಬೇತಿ”ಯ 3ನೇ ಬ್ಯಾಚ್‍ಗೆ ಚಾಲನೆ | ಕಲಿಕೆಗೆ ವಯಸ್ಸಿನ ಮಿತಿಯಿಲ್ಲ : ಪ್ರೀತಾ Read More »

ಔಷಧೀಯ ಸಸ್ಯಗಳ ಸಂರಕ್ಷಣೆಯ ಕಾರ್‍ಯಕ್ರಮ “ವಿವೇಕ ಸಂಜೀವಿನಿ”

ಪುತ್ತೂರು : ಭಾರತೀಯ ಸಂಸ್ಕೃತಿಯಲ್ಲಿ ಪರಂಪರಾನುಗತವಾಗಿ ಗಿಡಮೂಲಿಕೆಯ ಉಪಚಾರವನ್ನು ನಡೆಸಿಕೊಂಡು ಬರಲಾಗುತ್ತಿದೆ. ಆದರೆ, ಆಧುನಿಕ ವೈದ್ಯ ಪದ್ಧತಿಯ ಪ್ರಭಾವ ಮತ್ತು ವಿದೇಶಿ ಸಂಸ್ಕೃತಿಯ ಪ್ರವೇಶದಿಂದಾಗಿ ಸಾಂಪ್ರದಾಯಿಕ ಔ?ಧೀಯ ವ್ಯವಸ್ಥೆ ಅವನತಿಯ ಭೀತಿ ಎದುರಿಸುತ್ತಿದೆ ಎಂದು ಕಾಲೇಜಿನ ಪ್ರಿನ್ಸಿಪಾಲ್ ಪ್ರಸಾದ್ ಶ್ಯಾನಭಾಗ್ ಹೇಳಿದರು. ಅವರು ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ವಿವೇಕ ಸಂಜೀವಿನಿ ಕಾರ್‍ಯಕ್ರಮದಲ್ಲಿ ಮಾತನಾಡಿದರು. ಸಾಂಪ್ರದಾಯಿಕವಾಗಿ ಬಳಸಲಾಗುತ್ತಿದ್ದ ಗಿಡಮೂಲಿಕೆಗಳೂ ನಶಿಸಿ ಹೋಗುತ್ತಿವೆ. ಈ ನಿಟ್ಟಿನಲ್ಲಿ ಔಷಧೀಯ ಸಸ್ಯ ಸಂಕುಲದ ಸಂರಕ್ಷಣೆಯ ಉದ್ದೇಶದ ಜೊತೆಗೆ ಸಸ್ಯಗಳ

ಔಷಧೀಯ ಸಸ್ಯಗಳ ಸಂರಕ್ಷಣೆಯ ಕಾರ್‍ಯಕ್ರಮ “ವಿವೇಕ ಸಂಜೀವಿನಿ” Read More »

error: Content is protected !!
Scroll to Top