ಕ್ಯಾಂಪಸ್‌

ಸವಣೂರುನಲ್ಲಿ ತಂಬಾಕು ವಿರೋಧಿ ದಿನಾಚರಣೆ

ತಂಬಾಕು ಸೇವನೆ ರೋಗವನ್ನು ಕ್ರಯಕ್ಕೆ ಪಡೆದಂತೆ – ತಾರಾನಾಥ ಸವಣೂರು ಸವಣೂರು :  ತಂಬಾಕು ಸೇವನೆಯೊಂದು ಚಟ. ಈ ಚಟದಿಂದ ರೋಗಗಳನ್ನು ಕ್ರಯಕ್ಕೆ ಪಡೆದಂತೆ ಎಂದು ವೀರಮಂಗಲ ಶಾಲಾ ಮುಖ್ಯಗುರು ತಾರಾನಾಥ ಸವಣೂರು ನುಡಿದರು. ಅವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್  ಸವಣೂರು , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸವಣೂರು ವಲಯ ಇವುಗಳ ಆಶ್ರಯದಲ್ಲಿ ಸವಣೂರಿನ ಶ್ರೀ ವಿನಾಯಕ ಸಭಾ ಭವನದಲ್ಲಿ ನಡೆದ […]

ಸವಣೂರುನಲ್ಲಿ ತಂಬಾಕು ವಿರೋಧಿ ದಿನಾಚರಣೆ Read More »

ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ಚಂಡೆ, ಮದ್ದಳೆ ಮತ್ತು ಭಾಗವತಿಕೆಯ ತರಬೇತಿ.ಉದ್ಘಾಟನೆ

ಪುತ್ತೂರು: ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ಚಂಡೆ ವಾದನ ತರಬೇತಿ ಉದ್ಗಾಟನೆ ನಡೆಯಿತು. ತೆಂಕತಿಟ್ಟಿನ ಹೆಸರಾಂತ ಚಂಡೆ ವಾದಕ ದೇಲಂತಮಜಲು ಸುಬ್ರಹ್ಮಣ್ಯ ಭಟ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ತರಬೇತಿಯ ಪ್ರಯೋಜನವನ್ನು ಪಡೆದು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಎಸ್. ಡಿ.ಎಂ.ಸಿ ಸದಸ್ಯ ವಿಷ್ಣು ಕನ್ನಡಗುಳಿ,ಮಾಣಿಲ ಮಾತನಾಡಿ, ಅನೇಕ ಪ್ರಸಿದ್ಧ ಹಿಮ್ಮೇಳ ಹಾಗೂ ಮುಮ್ಮೇಳ ಕಲಾವಿದರ ತವರೂರಾಗಿದೆ, ಮುಂದೆ ನಮ್ಮ ವಿದ್ಯಾರ್ಥಿಗಳೂ ಸಹ ಇಂತಹ ಕಲಾವಿದರಾಗಿ ರೂಪುಗೊಳ್ಳಲಿ ಎಂದರು. ಮುಖ್ಯಶಿಕ್ಷಕ ಭುವನೇಶ್ವರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು.

ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ಚಂಡೆ, ಮದ್ದಳೆ ಮತ್ತು ಭಾಗವತಿಕೆಯ ತರಬೇತಿ.ಉದ್ಘಾಟನೆ Read More »

ಪುತ್ತೂರು: ಸವಣೂರು : ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಸವಣೂರು :  ಇಂಡಿಯನ್ ರೆಡ್ ಕ್ರಾಸ್ ಘಟಕ ಪುತ್ತೂರು, ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನ ಘಟಕ ಹಾಗೂ ರೋಟರ‍್ಯಾಕ್ಟ್ ಕ್ಲಬ್ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಸವಣೂರು ಯುವಕ ಮಂಡಲ ಹಾಗೂ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಇದರ ಜಂಟಿ ಆಶ್ರಯದಲ್ಲಿ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ ಜೂ.10ರಂದು  ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ  ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು

ಪುತ್ತೂರು: ಸವಣೂರು : ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ Read More »

ರಾಷ್ಟ್ರ ಮಟ್ಟದ ಯೋಗ ಪಂದ್ಯಾಟಕ್ಕೆ ವಿವೇಕಾನಂದ  ಪದವಿ ಪೂರ್ವ  ಕಾಲೇಜಿನ ನಿಶ್ಚಲ್ ಕೆ ಜೆ ಆಯ್ಕೆ

ಪುತ್ತೂರು : ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ ದೆಹಲಿಯಲ್ಲಿ ನಡೆಸುವ  99ನೇ ರಾಷ್ಟ್ರ ಮಟ್ಟದ ಯೋಗ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ ಜೆ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ಅವರು ಪುತ್ತೂರಿನ ನೆಹರೂನಗರದ ಪಿಎಮ್‌ಜಿಎಸ್‌ವೈ ಇಂಜಿನಿಯರ್ ಜನಾರ್ದನ ಕೆ.ಬಿ ಮತ್ತು ಜ್ಯೋತಿ ದಂಪತಿ ಪುತ್ರ. ಈತನ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ರಾಷ್ಟ್ರ ಮಟ್ಟದ ಯೋಗ ಪಂದ್ಯಾಟಕ್ಕೆ ವಿವೇಕಾನಂದ  ಪದವಿ ಪೂರ್ವ  ಕಾಲೇಜಿನ ನಿಶ್ಚಲ್ ಕೆ ಜೆ ಆಯ್ಕೆ Read More »

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಖೋ ಖೋ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ ದೆಹಲಿಯಲ್ಲಿ ನಡೆಸುವ 99ನೇ ರಾಷ್ಟ್ರಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ವಿದ್ಯಾಭಾರತಿ ತಂಡವನ್ನು ಪ್ರತಿನಿಧಿಸಲಿದ್ದಾರೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಬಾರ್ತಿಕುಮೆರ್ ಇವರ ನೇತೃತ್ವದಲ್ಲಿ  ಈ ತಂಡವು ತರಬೇತಿಯನ್ನು ಪಡೆದಿರುತ್ತದೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಖೋ ಖೋ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಸವಣೂರು ವಿದ್ಯಾರಶ್ಮಿಯಲ್ಲಿ ಶಾಲಾ ಪ್ರಾರಂಭೋತ್ಸವ, ಸವಣೂರು ಸೀತಾರಾಮ ರೈ ಅವರ 76ನೇ ಹುಟ್ಟುಹಬ್ಬ

ಸವಣೂರು: ಎಸ್.ಎನ್.ಆರ್.ರೂರಲ್ ಎಜುಕೇನಲ್ ಟ್ರಸ್ಟ್ ಪ್ರವರ್ತಿತ ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ಅವರ 76ನೇ ಹುಟ್ಟುಹಬ್ಬ ಜೂ.9ರಂದು ನಡೆಯಿತು. ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಯ ವಿದ್ಯಾಚೇತನ ಸಭಾಂಗಣದ ಶೀಂಟೂರು ನಾರಾಯಣ ರೈ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಭಾಗೀರಥಿ ಮುರುಳ್ಯ ಅವರನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಟ್ರಸ್ಟಿ ಎನ್.ಸುಂದರ ರೈ ,ಕಸ್ತೂರಿ ಕಲಾ ಸೀತಾರಾಮ ರೈ

ಸವಣೂರು ವಿದ್ಯಾರಶ್ಮಿಯಲ್ಲಿ ಶಾಲಾ ಪ್ರಾರಂಭೋತ್ಸವ, ಸವಣೂರು ಸೀತಾರಾಮ ರೈ ಅವರ 76ನೇ ಹುಟ್ಟುಹಬ್ಬ Read More »

ಸಿಇಟಿ ಫಲಿತಾಂಶದ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು | ಜೂನ್ ಎರಡನೇ ವಾರದಲ್ಲಿ ಪ್ರಕಟವಾಗುವ ನಿರೀಕ್ಷೆ

ಬೆಂಗಳೂರು :  ವಿದ್ಯಾರ್ಥಿಗಳು ಸಿಇಟಿ ಫಲಿತಾಂಶದ ನಿರೀಕ್ಷೆಯಲ್ಲಿದ್ದು,  ಮೇ 20 ಮತ್ತು 21 ರಂದು ನಡೆದ ಪರೀಕ್ಷೆಯ ಫಲಿತಾಂಶ ಜೂನ್ ಎರಡನೇ ವಾರದ ವೇಳೆಗೆ ಪ್ರಕಟವಾಗುವ ನಿರೀಕ್ಷೆಯಿದೆ. KCET ಫಲಿತಾಂಶವನ್ನು ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ cetonline.karnataka.gov.in ಮೂಲಕ ತಿಳಿದುಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ಲಾಗಿನ್ ವಿವರಗಳನ್ನು ಬಳಸಿಕೊಂಡು ತಮ್ಮ ಫಲಿತಾಂಶಗಳನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು. ಕೆಸಿಇಟಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಪ್ರತಿ ವರ್ಷ ನಡೆಸುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯಾಗಿದ್ದು, ಈ ಬಾರಿ KEA

ಸಿಇಟಿ ಫಲಿತಾಂಶದ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು | ಜೂನ್ ಎರಡನೇ ವಾರದಲ್ಲಿ ಪ್ರಕಟವಾಗುವ ನಿರೀಕ್ಷೆ Read More »

ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಯುಜಿ ಲೆವೆಲ್ ಫೆಸ್ಟ್  ಉದ್ಘಾಟನೆ.

ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ  ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಯುಜಿ ಲೆವೆಲ್ ಫೆಸ್ಟ್ “ಕೃತ್ವ 2023” ಕಾರ್ಯಕ್ರಮ ಗುರುವಾರ ನಡೆಯಿತು. ಕಾರ್ಯಕ್ರಮವನ್ನು ಅಕ್ಷಯ ಕಾಲೇಜಿನ ಆಡಳಿತ ವ್ಯವಸ್ಥಾಪಕಿ ಕಲಾವತಿ ಜಯಂತ್ ದೀಪ ಬೆಳಗಿಸಿ ಉದ್ಘಾಟಿಸಿ, ಟ್ರೋಪಿಗಳನ್ನು ಅನಾವರಣಗೊಳಿಸಿದರು. ಮುಖ್ಯ ಅತಿಥಿಗಳಾಗಿ ಕುಳಾಯಿ ಫೌಂಡೇಶನ್ ಸ್ಥಾಪಕಾಧ್ಯಕ್ಷೆ ಪ್ರತಿಭಾ ಕುಳಾಯಿ ಮಾತನಾಡಿ, ವಿದ್ಯಾರ್ಥಿಗಳು  ಶಿಕ್ಷಣದ ಮಹತ್ವವನ್ನು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮೈಗೂಡಿಸಿಕೊಳ್ಳಬೇಕಾದ ನೈತಿಕತೆಯನ್ನು ತಿಳಿ ಹೇಳಿದರು. ಮತ್ತೋರ್ವ ಅತಿಥಿ ಕೆನರಾ

ಅಕ್ಷಯ ಕಾಲೇಜಿನಲ್ಲಿ “ಕೃತ್ವ 2023” ಯುಜಿ ಲೆವೆಲ್ ಫೆಸ್ಟ್  ಉದ್ಘಾಟನೆ. Read More »

ಇಂದು (ಜೂ.8)  :ಅಕ್ಷಯ ಕಾಲೇಜಿನಲ್ಲಿ ಮಂಗಳೂರು ವಿ.ವಿ ಪದವಿ ಕಾಲೇಜುಗಳ ಅಂತರ್-ಕಾಲೇಜು ಫೆಸ್ಟ್

ಪುತ್ತೂರು: ಸಂಪ್ಯದಲ್ಲಿ ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪದವಿ ಕಾಲೇಜುಗಳ ಅಂತರ್-ಕಾಲೇಜು ಮ್ಯಾನೇಜ್ಮೆಂಟ್ ಹಾಗೂ ಸಾಂಸ್ಕೃತಿಕ ಫೆಸ್ಟ್ ‘ಕೃತ್ವ ‘ಜೂ.8 ರಂದು ಕಾಲೇಜಿನಲ್ಲಿ ಜರಗಲಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಫೈನಾನ್ಸ್ ಆಫೀಸರ್ ಪ್ರೊ|ವೈ ಸಂಗಪ್ಪರವರು ಫೆಸ್ಟ್ ಅನ್ನು ದೀಪ ನ ಬೆಳಗಿಸಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಅಕ್ಷಯ ಕಾಲೇಜಿನ ಚೇರ್ ಮ್ಯಾನ್ ಜಯಂತ್ ನಡುಬೈಲುರವರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಮಾಜಿ  ಕಾರ್ಪೋರೇಟರ್ ಹಾಗೂ ಕುಳಾಯಿ ಫೌಂಡೇಶನ್ ನ

ಇಂದು (ಜೂ.8)  :ಅಕ್ಷಯ ಕಾಲೇಜಿನಲ್ಲಿ ಮಂಗಳೂರು ವಿ.ವಿ ಪದವಿ ಕಾಲೇಜುಗಳ ಅಂತರ್-ಕಾಲೇಜು ಫೆಸ್ಟ್ Read More »

ಸವಣೂರು : ಮೊಗರು ಶಾಲೆಯಲ್ಲಿ  ರಂಗಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ

ಸವಣೂರು : ಸವಣೂರು ಗ್ರಾಮದ ಮೊಗರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಂಗಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಸವಣೂರು ಗ್ರಾಮ ಪಂಚಾಯತ್ ಸದಸ್ಯರಾದ  ಬಾಬು ಅವರು ತೆಂಗಿನಕಾಯಿ ಒಡೆಯುವುದರ ಕಾಮಗಾರಿಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ,ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮನ್ಮಥ  ,ಗ್ರಾಮ ಪಂಚಾಯತ್ ಸದಸ್ಯರಾದ  ರಜಾಕ್ ಕೆನರಾ,  ಚೆನ್ನು,ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಫೀಕ್ ಎಂ. ಎ. ಉಪಾಧ್ಯಕ್ಷೆ ದಿವ್ಯಲತಾ, ಪ್ರಭಾರ ಮುಖ್ಯಗುರು ಮಮತಾ ಎನ್.ಶಾಲಾಭಿವೃದ್ದಿ ಸಮಿತಿ ಸದಸ್ಯರುಗಳು,ಸಿವಿಲ್ ಇಂಜಿನಿಯರ್ ರಾಜೇಶ್ ,ಗುತ್ತಿಗೆದಾರ ಗಂಗಾಧರ,ಶಾಲಾ ಶಿಕ್ಷಕ ವೃಂದ,

ಸವಣೂರು : ಮೊಗರು ಶಾಲೆಯಲ್ಲಿ  ರಂಗಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ Read More »

error: Content is protected !!
Scroll to Top