ಅಕ್ಷರ ದೇಗುಲಕ್ಕೆ ಮೊದಲ ಹೆಜ್ಜೆ ಇಟ್ಟ ಪುಟಾಣಿಗಳಿಗೆ ಅಕ್ಕರೆಯ ಆರತಿ | ವೀರಮಂಗಲ ಪಿಎಂಶ್ರೀ ಶಾಲಾ ಆರಂಭೋತ್ಸವ
ಪುತ್ತೂರು: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲದಲ್ಲಿ ಮಕ್ಕಳ ಕಲರವ. ಅಕ್ಷರ ದೇಗುಲಕ್ಕೆ ನೂತನವಾಗಿ ಕಾಲಿಡುವ ಭಾರತದ ಭವಿತವ್ಯದ ಕನಸುಗಳಿಗೆ ಅಕ್ಕರೆಯ ಆರತಿ . ತಲೆಗೊಂದು ಅಕ್ಷರ ಕಿರೀಟ, ಕೈಲೊಂದು ಬಲೂನ್, ಬ್ಯಾಂಡ್ ವಾಲಗದ ನಾದಕ್ಕೆ ಹೆಜ್ಜೆ ಇಡುತ್ತಾ ಬಂದ ಮಕ್ಕಳ ಮೊಗದಲ್ಲಿ ಸಂಭ್ರಮದ ಕಲೆ. ಹಸಿರು ಅಂಗಿ ಧರಿಸಿದ ವಿದ್ಯಾರ್ಥಿಗಳು ಮೆರವಣಿಗೆಯ ಮೂಲಕ ಸಾಗಿ ಬಂದ ದೃಶ್ಯವನ್ನು ಸಂಭ್ರಮಿಸುವ ಕ್ಷಣಕ್ಕೆ ಪೋಷಕರು,ಶಿಕ್ಷಕರು ಸಾಕ್ಷಿಯಾದರು. ಇಂದು ಪ್ರಧಾನಮಂತ್ರಿ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ (ಪಿಎಂಶ್ರೀ) ಶಾಲೆ […]










