ಕ್ಯಾಂಪಸ್‌

ಶೇ. 80ರಷ್ಟು ಜನರಿಗೆ ಹಲ್ಲಿನ ಸಮಸ್ಯೆ | ದಂತ ಚಿಕಿತ್ಸಾ ಶಿಬಿರದಲ್ಲಿ ಡಾ. ಅರವಿಂದ್

ಪುತ್ತೂರು: ಸಮಾಜದಲ್ಲಿ ಶೇಕಡಾ 80ರಷ್ಟು ಜನ ಒಂದಲ್ಲ ಒಂದು ರೀತಿಯ ಹಲ್ಲಿನ ಸಮಸ್ಯೆಯಿಂದ ಬಳಲುತ್ತಾರೆ. ಆದರೆ ಅದು ತೀವ್ರತೆಯ ಮಟ್ಟಕ್ಕೆ ತಲಪುವವರೆಗೆ ಸುಮ್ಮನಿರುತ್ತಾರೆ ಎಂದು ಸುಳ್ಯದ ಕೆವಿಜಿ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ಡಾ.ಅರವಿಂದ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎನ್‌ಎಸ್‌ಎಸ್ ಹಾಗೂ ಯೂತ್ ರೆಡ್ ಕ್ರಾಸ್ ಘಟಕ, ರೋಟರಿ ಕ್ಲಬ್ ಪುತ್ತೂರು ಪೂರ್ವ ಮತ್ತು ಸುಳ್ಯದ ಕೆವಿಜಿ ದಂತ ವೈದ್ಯಕೀಯ ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ […]

ಶೇ. 80ರಷ್ಟು ಜನರಿಗೆ ಹಲ್ಲಿನ ಸಮಸ್ಯೆ | ದಂತ ಚಿಕಿತ್ಸಾ ಶಿಬಿರದಲ್ಲಿ ಡಾ. ಅರವಿಂದ್ Read More »

ಪ್ರೊ. ಶ್ರೀಕೃಷ್ಣ ಭಟ್ ಅರ್ತಿಕಜೆಯವರೊಂದಿಗೆ ಶಿಷ್ಯಮಿಲನ

ಪುತ್ತೂರು: ಪುತ್ತೂರಿಗೆ ಆಗಮಿಸಿದ ಪ್ರೊ. ಶ್ರೀಕೃಷ್ಣ ಭಟ್ ಅರ್ತಿಕಜೆಯವರೊಂದಿಗೆ ಪುತ್ತೂರಿನ ಭಾಗದ ಅವರ ಶಿಷ್ಯಂದಿರ ಸುಮಧುರ ನೆನಪುಗಳ ಶಿಷ್ಯ ಮಿಲನ ಕಾರ್ಯಕ್ರಮ ಅನುರಾಗ ವಠಾರದಲ್ಲಿ ನಡೆಯಿತು. ಮದರಾಸು ವಿಶ್ವವಿದ್ಯಾಲಯದ ಕನ್ನಡ ವಿಭಾಗ ಎನ್ನುವಾಗ ಕನ್ನಡಿಗರಿಗೆ ಪ್ರೊ. ಮರಿಯಪ್ಪ ಭಟ್ಟ, ಪ್ರೊ. ಕುಶಾಲಪ್ಪ ಗೌಡ, ಪ್ರೊ. ಶ್ರೀಕೃಷ್ಣ ಭಟ್ ಅರ್ತಿಕಜೆ ಈ ಹೆಸರುಗಳು ಸ್ಮರಣೆಗೆ ಬಂದು ಹೋಗುತ್ತವೆ. ಯಾಕೆಂದರೆ ಅವರುಗಳು ಬರೀ ಪಾಠ ಮಾಡಿದವರಲ್ಲ. ಆದರಾಚೆಗೆ ನಿಂತು ವಿದ್ಯಾರ್ಥಿಗಳನ್ನು ಮದರಾಸಿನಲ್ಲಿ ನೋಡಿ ಕೊಂಡವರು, ಸಾಕಿದವರು, ಬೆಳೆಸಿದವರು. ವಿದ್ಯಾರ್ಥಿಗಳ ಜೊತೆಗೆ

ಪ್ರೊ. ಶ್ರೀಕೃಷ್ಣ ಭಟ್ ಅರ್ತಿಕಜೆಯವರೊಂದಿಗೆ ಶಿಷ್ಯಮಿಲನ Read More »

ಶಿಕ್ಷಕ ವೆಂಕಟೇಶ್ ಪ್ರಸಾದ್ ಗೆ ರಾಷ್ಟ್ರಮಟ್ಟದ ಅಥ್ಲೆಟಿಕ್ಟ್ ನಲ್ಲಿ ಕಂಚಿನ ಪದಕ

ಪುತ್ತೂರು: ಕರ್ನಾಟಕ ಮಾಸ್ಟರ್ಸ್ ಆತ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಾರ್ಚ್  27ರಿಂದ 30ರವರೆಗೆ ನಡೆದ  42ನೇ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಶಿಕ್ಷಕ, ಪುತ್ತೂರು ತಾಲೂಕು, ದರ್ಬೆತ್ತಡ್ಕದ  ವೆಂಕಟೇಶ್ ಪ್ರಸಾದ್  45ರ ವಯೋಮಾನದ ಎತ್ತರ ಜಿಗಿತದಲ್ಲಿ ಕಂಚಿನ ಪದಕ ಗಳಿಸಿರುತ್ತಾರೆ. ಅವರು ದರ್ಬೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೆರ್ನಾಜೆ ಶ್ರೀ ಸೀತಾರಾಘವ ಪದವಿಪೂರ್ವ ಕಾಲೇಜು ಹಾಗೂ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದಾರೆ.

ಶಿಕ್ಷಕ ವೆಂಕಟೇಶ್ ಪ್ರಸಾದ್ ಗೆ ರಾಷ್ಟ್ರಮಟ್ಟದ ಅಥ್ಲೆಟಿಕ್ಟ್ ನಲ್ಲಿ ಕಂಚಿನ ಪದಕ Read More »

ವಾಕ್ಚಾತುರ್ಯ ಎಂಬುದು ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಬಹು ಮುಖ್ಯ: ಹೇಮ ಸುಭಾಷಿಣಿ

ಪುತ್ತೂರು :  ವಾಕ್ಚಾತುರ್ಯ ಚಾತುರ್ಯತೆ ಎಂಬುದು ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಬಹುಮುಖ್ಯ ಅಂಶದ ಜತೆ ಮಾತಿನಲ್ಲಿ ಸ್ಪಷ್ಪತೆ ಇರಬೇಕು. ಅದರೊಂದಿಗೆ  ವಿದ್ಯಾರ್ಥಿಗಳು ಪ್ರಾಯೋಗಿಕ ಕಲಿಕೆಯಲ್ಲೂ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು  ಉಪನ್ಯಾಸಕಿ ಹೇಮ ಸುಭಾಷಿಣಿ ಹೇಳಿದರು. ಅವರು ವಿವೇಕಾನಂದ ಮಹಾವಿದ್ಯಾಲಯ ಕಲಾ, ವಿಜ್ಞಾನ, ವಾಣಿಜ್ಯ (ಸ್ವಾಯತ್ತ)ದ ಐಕ್ಯೂಎಸಿ ಘಟಕ ಹಾಗೂ ಪತ್ರಿಕೋದ್ಯಮ ವಿಭಾಗ ಆಯೋಜಿಸಿದ ಮಣಿಕರ್ಣಿಕ ಮಾತುಗಾರರ ವೇದಿಕೆಯಲ್ಲಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿ. ಗಣಪತಿ ಭಟ್ ಮಾತನಾಡಿ, ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆಯು

ವಾಕ್ಚಾತುರ್ಯ ಎಂಬುದು ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಬಹು ಮುಖ್ಯ: ಹೇಮ ಸುಭಾಷಿಣಿ Read More »

ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದಲ್ಲಿ ರಾಮನವಮಿ ಆಚರಣೆ

ಪುತ್ತೂರು: ಭಾರತ ಸಂಸ್ಕೃತಿಯಲ್ಲಿ ನಮ್ಮದೇ ಆದ ವೇಳಾಪಟ್ಟಿ ಇದೆ, ಅದುವೇ ಪಂಚಾಂಗ. ಚೈತ್ರ ಮಾಸದ ನವಮಿಯಂದು ರಾಮ ಹುಟ್ಟಿದ್ದರಿಂದ ಆ ದಿನ ರಾಮನವಮಿಯನ್ನು ಆಚರಣೆ ಮಾಡುತ್ತೇವೆ ಎಂದು ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ತತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ವಿದ್ವಾನ್ ತೇಜ ಶಂಕರ ಸೋಮಯಾಜಿ ಹೇಳಿದರು. ಅವರು ನಗರದ ಬಪ್ಪಳಿಗೆಯ ಅಂಬಿಕಾ ಸಿಬಿಎಸ್ ಇ ವಿದ್ಯಾಲಯದಲ್ಲಿ ರಾಮನವಮಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನಾವು ಯೋಚಿಸುವಾಗ ಕೆಟ್ಟದರಲ್ಲೂ  ಏನು ಒಳ್ಳೆಯದಿದೆ ಎಂಬುವುದನ್ನು ಯೋಚಿಸಬೇಕು. ಅಂತೆಯೇ ಜೀವನದಲ್ಲಿ ತಪ್ಪು ಕಲ್ಪನೆಯನ್ನು ಹೋಗಲಾಡಿಸಲು

ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದಲ್ಲಿ ರಾಮನವಮಿ ಆಚರಣೆ Read More »

ನಾಳೆಯಿಂದ (ಏ.1)  ಸಂತಫಿಲೋಮಿನಾ ಕಾಲೇಜು ಕ್ರೀಡಾಂಗಣದಲ್ಲಿ ಉಚಿತವೈಟ್‌ ಲಿಪ್ಟಿಂಗ್‌, ಅಥ್ಲೆಟಿಕ್ಸ್‌ ಹಾಗೂ ಕ್ರಿಕೆಟ್‌ ತರಬೇತಿ ಶಿಬಿರ

ಪುತ್ತೂರು:  ಮಂಗಳೂರು ವಿಶ್ವವಿದ್ಯಾನಿ ಲಯ ಹಾಗೂ ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ವೈಟ್ ಲಿಫ್ಟಿಂಗ್, ಅಥ್ಲೆಟಿಕ್ಸ್ ಹಾಗೂ ಕ್ರಿಕೆಟ್ ತರಬೇತಿ ಶಿಬಿರ ಏ.1 ರಿಂದ ಕಾಲೇಜಿನ ಕ್ರೀಡಾಂಗಣದಲ್ಲಿ ಆರಂಭಗೊಳ್ಳಲಿದೆ. 18 ವರ್ಷದ ಒಳಗಿನ ಹುಡುಗ-ಹುಡುಗಿಯರಿಗೆ ತರಬೇತಿ ನಡೆಯಲಿದ್ದು, ಒಂದು ತಿಂಗಳ ಕಾಲ ಶಿಬಿರ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಎಲ್ಯಾಸ್‌ ಪಿಂಟೋ (9448549616) ಹಾಗೂ ರಾಜೇಶ್‌ ಮೂಲ್ಯ (9964084411) ರವರನ್ನು ಸಂಪರ್ಕಿಸಬಹುದು ಎಂದು ಕಾಲೇಜು ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆಯಿಂದ (ಏ.1)  ಸಂತಫಿಲೋಮಿನಾ ಕಾಲೇಜು ಕ್ರೀಡಾಂಗಣದಲ್ಲಿ ಉಚಿತವೈಟ್‌ ಲಿಪ್ಟಿಂಗ್‌, ಅಥ್ಲೆಟಿಕ್ಸ್‌ ಹಾಗೂ ಕ್ರಿಕೆಟ್‌ ತರಬೇತಿ ಶಿಬಿರ Read More »

ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ

ಪುತ್ತೂರು: ಶೃಂಗೇರಿಯಲ್ಲಿ ನಿರ್ಮಾಣವಾದ 3 ಅಡಿ ಎತ್ತರ, 100 ಕೆ.ಜಿ ತೂಕದ ಪಂಚಲೋಹದ ಶಾರದಾ ಮಾತೆಯ ವಿಗ್ರಹವನ್ನು ಪಾಕ್ ಗಡಿ ಬಳಿಯ ತೀತ್ವಾಲ್ ಬಳಿ ಇತ್ತೀಚೆಗೆ ಯಶಸ್ವಿಯಾಗಿ ಪ್ರತಿಷ್ಠಾಪನೆ ಮಾಡಲಾಗಿದೆ. ತನ್ಮೂಲಕ ಒಂದನೇ ಶತಮಾನದಿಂದಲೂ ಹಿಂದೂಗಳ ಧಾರ್ಮಿಕ ಶ್ರದ್ಧಾಕೇಂದ್ರವಾಗಿದ್ದು, ತದನಂತರ ದುಷ್ಟ ಅರಸರು ಹಾಗೂ ಪಾಕ್  ದಾಳಿಯಿಂದ ಶಿಥಿಲವಾಗಿದ್ದ ಈ ಶಾರದಾದೇವಿಯ ಆರಾಧನಾ ಸ್ಥಳ ಮತ್ತೆ ಪುನರುಜ್ಜೀವಗೊಂಡಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ಅಂಬಿಕಾ ಮಹಾವಿದ್ಯಾಲಯದಲ್ಲಿ ಕಾಶ್ಮೀರದ ಶಾರದಾ

ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ರಂಗಭೂಮಿ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಯಕ್ಷ ಕಲಾಕೇಂದ್ರ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸ್ಪಂದನ ಸಭಾಂಗಣದಲ್ಲಿ ವಿಶ್ವ ರಂಗಭೂಮಿ ದಿನವನ್ನು ಆಚರಿಸಲಾಯಿತು.  ಕಾಲೇಜಿನ ಉಪಪ್ರಾಂಶುಪಾಲ ಡಾ| ಎ ಪಿ ರಾಧಾಕೃಷ್ಣ ಮುಖ್ಯ ಅತಿಥಿಯಾಗಿ ವಿದ್ಯಾರ್ಥಿಗಳಿಗೆ ಯಕ್ಷಗಾನ ಹಾಗೂ ರಂಗಭೂಮಿಯ ಮಹತ್ವವನ್ನು ತಿಳಿಸಿ ತಮ್ಮ ಜೀವನದಲ್ಲಿ ಅವು ಬೀರಿದ ಪ್ರಭಾವವನ್ನು ವಿವರಿಸಿದರು. ಕಾಲೇಜಿನ ಪ್ರಾಂಶುಪಾ ವಂ| ಡಾ ಆಂಟನಿ ಪ್ರಕಾಶ್‌ ಮೊಂತೆರೋ ಅಧ್ಯಕ್ಷತೆ ವಹಿಸಿ ನಾಟಕ ಹಾಗೂ ರಂಗಭೂಮಿ ನಮ್ಮ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ.

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ರಂಗಭೂಮಿ ದಿನಾಚರಣೆ Read More »

ಪ್ರಾಂಶುಪಾಲರಿಗೆ ಸೂಚನೆ ನೀಡಿ, ವಿದ್ಯಾರ್ಥಿಗಳಿಗೆ ತಿಳಿಹೇಳಿದ ಶಾಸಕ ಸಂಜೀವ ಮಠಂದೂರು | ಜಿಡೆಕಲ್ಲು ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ ವಾಪಾಸ್

ಪುತ್ತೂರು: ಪಿ.ಡಿ. ಹಾಗೂ ಗ್ರಂಥಪಾಲಕ ಹುದ್ದೆ ರದ್ದುಗೊಳಿಸಿರುವ ಕ್ರಮದ ವಿರುದ್ಧ ಜಿಡೆಕಲ್ಲು ಕಾಲೇಜು ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ಶಾಸಕ ಸಂಜೀವ ಮಠಂದೂರು ಭರವಸೆ ಬಳಿಕ ವಾಪಾಸ್ ಪಡೆಯಲಾಗಿದೆ. ವಿದ್ಯಾರ್ಥಿಗಳಿಂದ ಮನವಿ ಪಡೆದುಕೊಂಡು ಮಾತನಾಡಿದ ಶಾಸಕ ಸಂಜೀವ ಮಠಂದೂರು, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಉಪನ್ಯಾಸಕ ಹುದ್ದೆಯನ್ನು ನೀಡಲಾಗುತ್ತದೆ. ಜಿಡೆಕಲ್ಲು ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದ್ದು, ಆದ್ದರಿಂದ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ಗ್ರಂಥಪಾಲಕ ಹುದ್ದೆಯನ್ನು ಸರಕಾರ ತೆರವು ಮಾಡಿದೆ. ಇದರ ಬಗ್ಗೆ ಈಗಾಗಲೇ ಉನ್ನತ ಶಿಕ್ಷಣ ಸಚಿವರಲ್ಲಿ

ಪ್ರಾಂಶುಪಾಲರಿಗೆ ಸೂಚನೆ ನೀಡಿ, ವಿದ್ಯಾರ್ಥಿಗಳಿಗೆ ತಿಳಿಹೇಳಿದ ಶಾಸಕ ಸಂಜೀವ ಮಠಂದೂರು | ಜಿಡೆಕಲ್ಲು ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ ವಾಪಾಸ್ Read More »

ಹಂಟ್ಯಾರು ಶಾಲೆಗೆ ನೀರಿನ ಟ್ಯಾಂಕ್ ಹಸ್ತಾಂತರ

ಪುತ್ತೂರು : ಹಂಟ್ಯಾರು ಸರಕಾರಿ ಉನ್ನತ ಹಿರಿಯ ಪ್ರಾರ್ಥಮಿಕ ಶಾಲೆಗೆ ಅಗತ್ಯವಾಗಿ ಬೇಕಾಗಿದ್ದ ಕುಡಿಯುವ ನೀರಿನ ಟ್ಯಾಂಕನ್ನು ದಾನಿಗಳ ಮೂಲಕ ಹಸ್ತಾಂತರಿಸಲಾಯಿತು. ಆರ್ಯಾಪು ಗ್ರಾಮ ಪಂಚಾಯಿತಿ ಸದಸ್ಯರಾದ ಯತೀಶ್ ದೇವ ಮತ್ತು  ಹರೀಶ್ ನಾಯಕ್ ಬಳಕ್ಕ ಅವರ ನೇತೃತ್ವದಲ್ಲಿ ಆರ್ಯಾಪು ಗ್ರಾಮ ಪಂಚಾಯಿತಿ ಮತ್ತು ದಾನಿಗಳಾದ ಗಣೇಶ್ ರೈ ಮೂಲೆ, ಸೀತಾರಾಮ ರೈ ಕೈಕಾರ ಅವರ ಸಹಕಾರದಿಂದ ಸೋಮವಾರ ಶಾಲಾ ಆಡಳಿತ ಮಂಡಳಿಗೆ  ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಆರ್ಯಾಪು ಪಂಚಾಯಿತಿ ಸದಸ್ಯರಾದ ಯತೀಶ್ ದೇವ, ಹರೀಶ್ ನಾಯಕ್ ಬಳಕ್ಕ,

ಹಂಟ್ಯಾರು ಶಾಲೆಗೆ ನೀರಿನ ಟ್ಯಾಂಕ್ ಹಸ್ತಾಂತರ Read More »

error: Content is protected !!
Scroll to Top