ಕ್ಯಾಂಪಸ್‌

ಕಾಣಿಯೂರು ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ರೇವತಿಯವರಿಗೆ ಗೌರವಾರ್ಪಣೆ

ಕಾಣಿಯೂರು: ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ದೈಹಿಕ ಶಿಕ್ಷಣ ಶಿಕ್ಷಕಿ ರೇವತಿ ಪಿ. ಅವರು ಮೇ 31ರಂದು ಕರ್ತವ್ಯದಿಂದ ನಿವೃತ್ತರಾದ ಹಿನ್ನಲೆಯಲ್ಲಿ ಅವರನ್ನು ಕಾಣಿಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಕಡಬ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮತ್ತು ಕಡಬ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಗ್ರೇಡ್-2 ವತಿಯಿಂದ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ರೇವತಿ ಪಿ ಅವರನ್ನು ಶಾಲು ಹೊದಿಸಿ, ಫಲಪುಷ್ಪ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಡಬ  ತಾಲೂಕು […]

ಕಾಣಿಯೂರು ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ರೇವತಿಯವರಿಗೆ ಗೌರವಾರ್ಪಣೆ Read More »

ವಿವೇಕಾನಂದ ಕಾಲೇಜಿನಲ್ಲಿ ಆರೋಹಣ – 2023

ಪುತ್ತೂರು: ಸಾಧನೆಗೆ ಅತೀ ಮುಖ್ಯವಾದದ್ದು ಸ್ಪಷ್ಟ ಗುರಿ.  ಜೀವನದಲ್ಲಿ ಏನನ್ನಾದರೂ ಸಾಧಿಸಬೇಕಾದರೆ ಮೊದಲು ನಾವು ನಮ್ಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಅದರ ಮೇಲೆ ನಮ್ಮ ಜೀವನದ ಗೆಲುವು ಅವಲಂಬಿತವಾಗಿರುತ್ತದೆ. ನಮ್ಮ ಜೀವನದಲ್ಲಿ ಧನಾತ್ಮಕವಾಗಿ ಚಿಂತಿಸುವುದನ್ನು ರೂಢಿಸಿಕೊಳ್ಳುವುದು ಅತ್ಯವಶ್ಯಕ. ಹಾಗಾಗಿ ವಿದ್ಯಾರ್ಥಿ ದೆಸೆಯಲ್ಲಿಯೇ ನಾವು ವೃತ್ತಿಯ ಬಗೆಗೆ ಯೋಚಿಸಬೇಕು ಎಂದು ಎನ್.ಎ.ಎಂ. ಎಫ್.ಐ  ನೊಂದಾಯಿತ ಮ್ಯೂಚುವಲ್ ಫಂಡ್ ವಿತರಕ ವಿನೋದ್ ಕುಮಾರ್ ಹೇಳಿದರು. ವಿವೇಕಾನಂದ ಕಾಲೇಜಿನ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ )ದ ವಾಣಿಜ್ಯ ವಿಭಾಗ ಹಾಗೂ

ವಿವೇಕಾನಂದ ಕಾಲೇಜಿನಲ್ಲಿ ಆರೋಹಣ – 2023 Read More »

SSLC ಮರು ಮೌಲ್ಯಮಾಪನದಲ್ಲಿ 624 ಅಂಕ | ಕಾಣಿಯೂರು ಪ್ರಗತಿಯ ಉತ್ತಮ್ ರಾಜ್ಯಕ್ಕೆ ದ್ವಿತೀಯ

ಪುತ್ತೂರು: SSLC ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ವಿಭಾಗದ ಉತ್ತಮ್ ಜಿ. 624 ಅಂಕ ಪಡೆದುಕೊಂಡಿದ್ದು, ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಉತ್ತಮ್ ಅವರಿಗೆ ಸಮಾಜ ವಿಜ್ಞಾನದಲ್ಲಿ ಈ ಹಿಂದೆ 98 ಅಂಕ ಗಳಿಸಿದ್ದರು. ಇದೀಗ ಮರುಮೌಲ್ಯಮಾಪನದಲ್ಲಿ 99 ಅಂಕ ಗಳಿಸುವ ಮೂಲಕ 624 ಅಂಕ ಪಡೆದುಕೊಂಡಿದ್ದಾರೆ ಎಂದು ಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ ತಿಳಿಸಿದ್ದಾರೆ. ಇವರು ಕಾಣಿಯೂರು ಗ್ರಾಮದ ಗುಂಡಿಗದ್ದೆ ಪದ್ಮನಾಭ ಜಿ. ಹಾಗೂ ಹೇಮಾವತಿ ದಂಪತಿ ಪುತ್ರ.

SSLC ಮರು ಮೌಲ್ಯಮಾಪನದಲ್ಲಿ 624 ಅಂಕ | ಕಾಣಿಯೂರು ಪ್ರಗತಿಯ ಉತ್ತಮ್ ರಾಜ್ಯಕ್ಕೆ ದ್ವಿತೀಯ Read More »

ಸುಲಲಿತವಾಗಿ ಇಂಗ್ಲೀಷ್ ಮಾತನಾಡಬೇಕೇ? ಪ್ರೇರಣಾದಲ್ಲಿ ಶೀಘ್ರ ಸ್ಪೋಕನ್ ಇಂಗ್ಲೀಷ್ ಹೊಸ ಬ್ಯಾಚ್ ಆರಂಭ

ಪುತ್ತೂರು: ಸುಲಭವಾಗಿ ಇಂಗ್ಲೀಷ್ ಭಾಷೆಯನ್ನು ಮಾತನಾಡಬಲ್ಲವರಾಗಿದ್ದರೆ ಮಾತ್ರ ಪೈಪೋಟಿಯ ಪ್ರಪಂಚದಲ್ಲಿ ಮೇಲುಗೈ ಸಾಧಿಸಲು ಸಾಧ್ಯ. ಇದಕ್ಕಾಗಿ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಪ್ರೇರಣಾದಲ್ಲಿ ಸ್ಪೋಕನ್ ಇಂಗ್ಲೀಷ್ ತರಗತಿಯ ಹೊಸ ಬ್ಯಾಚ್ ಅನ್ನು ಆರಂಭಿಸಲಾಗುತ್ತಿದೆ. ಸುಲಲಿತವಾಗಿ ಇಂಗ್ಲೀಷ್ ಬಲ್ಲವರಾಗಿದ್ದರೆ, ಪ್ರಪಂಚದ ಯಾವುದೇ ಮೂಲೆಗಾದರೂ ಹೋಗಿ ವ್ಯವಹರಿಸಬಹುದು. ಆದರೆ ಗ್ರಾಮೀಣ ಭಾಗದವರಿಗೆ ಇಂಗ್ಲೀಷ್ ಎಂದರೆ ತುಸು ಕಷ್ಟವೇ. ಇಂತಹ ಮನಸ್ಥಿತಿಯನ್ನು ದೂರಮಾಡಿ, ಇಂಗ್ಲೀಷ್ ಭಾಷೆಯನ್ನು ಸುಲಭವಾಗಿ ಹೇಗೆ ಮಾತನಾಡಬಹುದು ಎನ್ನುವುದನ್ನು ಪ್ರೇರಣಾದಲ್ಲಿ ನುರಿತ ಶಿಕ್ಷಕರು ಹೇಳಿಕೊಡಲಿದ್ದಾರೆ. ಆಧುನಿಕ ಜಗತ್ತಿನ ಸ್ಪರ್ಧೆಗೆ ಸರಿಯಾಗಿ

ಸುಲಲಿತವಾಗಿ ಇಂಗ್ಲೀಷ್ ಮಾತನಾಡಬೇಕೇ? ಪ್ರೇರಣಾದಲ್ಲಿ ಶೀಘ್ರ ಸ್ಪೋಕನ್ ಇಂಗ್ಲೀಷ್ ಹೊಸ ಬ್ಯಾಚ್ ಆರಂಭ Read More »

ನೂಜಿಬಾಳ್ತಿಲ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಗೆ ಸೇತುವೆ ಅಳವಡಿಕೆ

ಕಡಬ: ಕಡಬ ತಾಲೂಕಿನ ನೂಜಿಬಾಳ್ತಿಲ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಸಂಪರ್ಕದ ಚರಂಡಿಗೆ ಕಬ್ಬಿಣದ ಸೇತುವೆ ಅಳವಡಿಸಲಾಯಿತು. ಈ ಕೆಲಸವನ್ನು  ಶ್ರಮದಾನದ ಮೂಲಕ ಮೂಲಕ ನಡೆಸಲಾಯಿತು. ಈ ಸಂದರ್ಭದಲ್ಲಿ ಮೋಹನ ಹಳೆನೂಜಿ, ತಿಮ್ಮಪ್ಪ ಪಾಲೆತ್ತಡಿ, ಡೀಕಯ್ಯ ಪಾಲೆತ್ತಡಿ, ಮಹೇಶ್ ಪಾಲೆತ್ತಡಿ, ಹರೀಶ್ ನೀರಾರಿ, ಸುಂದರ ಪಡಲಡ್ಕ, ಉಮೇಶ್ ಶೆಟ್ಟಿ ಸಾಯಿರಾಮ್, ಮತ್ತಿತರರು ಭಾಗವಹಿಸಿದ್ದರು.

ನೂಜಿಬಾಳ್ತಿಲ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಗೆ ಸೇತುವೆ ಅಳವಡಿಕೆ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಮಹಾಸಭೆ

ಪುತ್ತೂರು: ಮಕ್ಕಳ ಸರ್ವತೋಮುಖ ವಿಕಾಸದಲ್ಲಿ ಶಿಕ್ಷಕರ ಜೊತೆಗೆ ಪಾಲಕರ ಪಾತ್ರ ಮಹತ್ವದ್ದಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅವರ ಶೈಕ್ಷಣಿಕ ಸಾಧನೆಗಳ ವಿಶ್ಲೇಷಣೆಗೆ ಪೂರಕವಾದ, ವಿದ್ಯಾರ್ಥಿಗಳ ವರ್ತನೆ, ನೈತಿಕತೆ, ಕಲಿಕಾ ಪ್ರಗತಿಗೆ ಪೂರಕವಾದ ವಿಚಾರಗಳ ಬಗ್ಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳಬೇಕು.ಇದು ದೇಶದ ಸುಂದರ ಭವಿಷ್ಯ ನಿರ್ಮಾಣದ ಹೆಜ್ಜೆಗಳಾಗಲಿ ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್‍ಯದರ್ಶಿ ರೂಪಲೇಖ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಮಹಾಸಭೆಯಲ್ಲಿ ಅವರು ಮಾತನಾಡಿದರು. ಕಾಲೇಜಿನ ಆಡಳಿತ ಮಂಡಳಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಮಹಾಸಭೆ Read More »

ವೀರಮಂಗಲ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಪುತ್ತೂರು: ಪಿಎಂಶ್ರೀ ಯೋಜನೆಯಡಿ ಆಯ್ಕೆಯಾದ ವೀರಮಂಗಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ  ದಿನಾಚರಣೆಯನ್ನು ಆಚರಿಸಲಾಯಿತು. ಗಿಡಗಳನ್ನು ನೀಡುವುದರ ಮೂಲಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸ್ಕೌಟ್ ವಿದ್ಯಾರ್ಥಿಗಳು ಮತ್ತು ಇತರ ವಿದ್ಯಾರ್ಥಿಗಳು ಗಿಡಗಳನ್ನು ಮನೆಯಿಂದ ತಂದು ನೀಡಲು ಸಹಕರಿಸಿದರು. ಶಾಲಾ ವಿದ್ಯಾರ್ಥಿಗಳು ಪರಿಸರ ಗೀತೆಯನ್ನು ಹಾಡಿದರು.  ಬಳಿಕ ಸ್ಲೋಗನ್ ಗಳನ್ನು ಹಾಕಿ ಮಕ್ಕಳಿಂದ ಹೇಳಿಸಲಾಯಿತು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇಲಾಖೆಯ ವತಿಯಿಂದ ನೀಡಲಾದ  ಮಾಹಿತಿಯ ವೀಡಿಯೋವನ್ನು ನೇರ ಪ್ರಸಾರದಲ್ಲಿ ತೋರಿಸಲಾಯಿತು. ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ

ವೀರಮಂಗಲ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಮಾಣಿಲ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ | ಪರಿಸರ ಜಾಗೃತಿ ಮೂಡಿಸಲು ಜಾಥಾ

ಪುತ್ತೂರು: ಪರಿಸರ ಪ್ರಜ್ಞೆಯನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕಾದ್ದು ಇಂದಿನ ಅಗತ್ಯ  ಎಂದು  ಶಿಕ್ಷಕಿ ಲತಾ ಯು. ಹೇಳಿದರು. ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ  ‘ವಿಶ್ವಪರಿಸರ ದಿನ’ ದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಿಡವೊಂದಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕನ್ನಡ ಶಿಕ್ಷಕ ಸುಧೀಶ್ ಕೆ , ವಿಜ್ಞಾನ ಶಿಕ್ಷಕಿ ಮಮತಾ ರಾವ್. ಬಿ ಪರಿಸರ ದಿನಾಚರಣೆಯ ಮಹತ್ವ ವಿವರಿಸಿದರು.  ವಿದ್ಯಾರ್ಥಿಗಳು ಪರಿಸರ ಗೀತೆಗಳನ್ನು ಹಾಡಿದರು. ಗಿಡಮರಗಳ ಮಹತ್ವ ಸಾರುವ ನೃತ್ಯವನ್ನು ಗೀತಾಲಕ್ಷ್ಮೀ  ಮತ್ತು

ಮಾಣಿಲ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ | ಪರಿಸರ ಜಾಗೃತಿ ಮೂಡಿಸಲು ಜಾಥಾ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಮತ್ತು ಜನ ಜಾಗೃತಿ ಜಾಥಾ

ಪುತ್ತೂರು: ಮಕ್ಕಳ ಮೇಲೆ ನಡೆಯುವ ಲೈಂಗಿಕ ಹಾಗೂ ಇತರೇ ಪ್ರಕಾರದ ದೌರ್ಜನ್ಯಗಳನ್ನು ತಡೆಯುವ ನಿಟ್ಟಿನಲ್ಲಿ 2012ರಲ್ಲಿ ಜಾರಿಗೆ ಬಂದಿದ್ದೇ ಪೋಕ್ಸೋ ಕಾಯ್ದೆ. ಅದು ಯಶಸ್ವಿಯಾಗಬೇಕಾದರೆ ಅದರ ಕುರಿತು ಮಾಹಿತಿಯನ್ನು ಸಮಾಜದ ಎಲ್ಲರಿಗೂ ತಿಳಿಸಬೇಕಾದ ಅನಿವಾರ್ಯತೆಯಿದೆ ಎಂದು ವಕೀಲ ಶ್ಯಾಮ್ ಪ್ರಸಾದ್ ಕೈಲಾರ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಅರಿವು ನೆರವು ಘಟಕದ ವತಿಯಿಂದ ನಡೆದ ವಿಶೇಷ ಉಪನ್ಯಾಸ ಮತ್ತು ಜನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ-2012ರ ಕುರಿತು ವಿಶೇಷ

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಮತ್ತು ಜನ ಜಾಗೃತಿ ಜಾಥಾ Read More »

ಅಕ್ಷಯ ಕಾಲೇಜಿನ B.Com with Hospitality Management  ನ ಒಂದು ದಿನದ ಶೈಕ್ಷಣಿಕ ಪ್ರವಾಸ

ಪುತ್ತೂರು: ಇತ್ತೀಚೆಗೆ   ಅಕ್ಷಯ ಕಾಲೇಜಿನ ವೃತ್ತಿಪರ ಕೋರ್ಸ್ BCom with Aviation & Hospitality Managemnt  ನ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ wings of fortune Aviation ಆಸೋಸಿಯೆಶನಿಂದ ಒಂದು ದಿನದ ಶೈಕ್ಷಣಿಕ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.  ಏವಿಯೇಷನ್ ಹಾಗೂ ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್‌ನ ಕುರಿತಾಗಿ ಅಧ್ಯಯನ ಮಾಡಲು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದ ತೆರಳಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ಧಾಣದ ಕಾರ್ಯಚರಣೆಗಳನ್ನು ತಿಳಿದುಕೊಂಡು ಅಲ್ಲಿಂದ ಇಂಡಿಗೋ ವಿಮಾನದ ಮೂಲಕ  ಬೆಂಗಳೂರು ಅಂತರಾಷ್ಟ್ರೀಯ ವಿಮಾಣ ನಿಲ್ಧಾಣಕ್ಕೆ

ಅಕ್ಷಯ ಕಾಲೇಜಿನ B.Com with Hospitality Management  ನ ಒಂದು ದಿನದ ಶೈಕ್ಷಣಿಕ ಪ್ರವಾಸ Read More »

error: Content is protected !!
Scroll to Top