ಕ್ಯಾಂಪಸ್‌

ನಾಳೆ (ಜೂ.6) : ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

ಪುತ್ತೂರು: ಇಲ್ಲಿಯ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಜೂ.6 ಮಂಗಳವಾರ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ಕ್ರೀಡಾ ಕೂಟದ ಉದ್ಘಾಟನೆ ನಡೆಯಲಿದೆ. ಕೊಂಬೆಟ್ಟು ಸರಕಾರಿ ಕಾಲೇಜು ಪ್ರಾಂಶುಪಾಲ ಡಾ.ಗೋಪಾಲಕೃಷ್ಣ ಕೆ. ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ರಾಜ್ಯ ಪ್ರಶಸ್ತಿ ವಿಜೇತ ತರಬೇತುದಾರ ದಯಾನಂದ ರೈ ಕೋರ್ಮಂಡ ಪಾಲ್ಗೊಳ್ಳುವರು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ನಾಳೆ (ಜೂ.6) : ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ Read More »

ನಮ್ಮನ್ನು ನಾವು ಕಾಪಾಡಿಕೊಳ್ಳಲು ಪ್ರಕೃತಿಯ ಸಂರಕ್ಷಣೆ ಅನಿವಾರ್ಯ: ದಿನೇಶ್ ನಾಗೇಗೌಡ | ವಿವೇಕ ಸಂಜೀವಿನಿ’ ತರಬೇತಿ ಶಿಬಿರ ಉದ್ಘಾಟನೆ

ಪುತ್ತೂರು: ಪ್ರಸ್ತುತ ಕಾಲಘಟ್ಟದಲ್ಲಿ ಪ್ಲಾಸ್ಟಿಕ್ ಹೊರತು ಬದುಕೇ ಇಲ್ಲ ಎಂಬ ಪರಿಸ್ಥಿತಿ ನಿರ್ಮಾಣಗೊಂಡಿದೆ. ಪ್ಲಾಸ್ಟಿಕ್ ಸಂಸ್ಕರಣೆ ಸಂಪೂರ್ಣವಾಗಿ ಆಗದಿದ್ದರೂ ತಕ್ಕ ಮಟ್ಟಿಗೆ ಮಾಡಲು ಸಾಧ್ಯ. ಈ ನೆಲೆಯಲ್ಲಿ ಸರಕಾರ ಹಾಗೂ ಉನ್ನತ ಮಟ್ಟದ ಅಧಿಕಾರಿಗಳು ಸೂಕ್ತ ಯೋಜನೆ ರೂಪಿಸಬೇಕಾದ ಅಗತ್ಯವಿದೆ ಎಂದು ಹಿರಿಯ ವಿಜ್ಞಾನಿ ಮತ್ತು ಬೆಂಗಳೂರಿನ ಸೆಂಟ್ರಲ್ ಇನ್ಸ್‌ಟ್ಯೂಟ್ ಆಫ್ ಮೆಡಿಸಿನಲ್ ಆಂಡ್ ರೋಮೆಟಿಕ್ ಪ್ಲಾಂಟ್ಸ್ ಮುಖ್ಯಸ್ಥ ಡಾ. ದಿನೇಶ್ ನಾಗೇಗೌಡ ಹೇಳಿದರು. ಅವರು ಸೋಮವಾರ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಔ?ಧೀಯ ಸಸ್ಯಗಳ

ನಮ್ಮನ್ನು ನಾವು ಕಾಪಾಡಿಕೊಳ್ಳಲು ಪ್ರಕೃತಿಯ ಸಂರಕ್ಷಣೆ ಅನಿವಾರ್ಯ: ದಿನೇಶ್ ನಾಗೇಗೌಡ | ವಿವೇಕ ಸಂಜೀವಿನಿ’ ತರಬೇತಿ ಶಿಬಿರ ಉದ್ಘಾಟನೆ Read More »

‘ಸನ್ಮತಿ’ ಶಿಕ್ಷಕರ ಕಲಿಕಾ ಕಾರ್ಯಾಗಾರ

ಪುತ್ತೂರು: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಆರಂಭಿಕ ಕಾರ್ಯಕ್ರಮವಾಗಿ ಶಿಕ್ಷಕರಿಗೆ ‘ಸನ್ಮತಿ’ ಕಲಿಕಾ ಕಾರ್ಯಾಗಾರ ನಡೆಯಿತು. ಮೂರು ದಿನಗಳ ಕಾಲ ನಡೆದ ಕಾರ್ಯಾಗಾರದಲ್ಲಿ ಬೆಂಗಳೂರು ‘ಸಂವಿತ್’ಸAಶೋಧನಾ ಕೇಂದ್ರದ ಯೋಗ ವಿಭಾಗದ  ಮುಖ್ಯಸ್ಥ ಡಾ.ಸಿಂಧೂ ಮಾತನಾಡಿ, ಯೋಗ ಹಾಗೂ ಮೌಲ್ಯಶಿಕ್ಷಣವು ಪಠ್ಯ ವಿಷಯಗಳಲ್ಲಿ ಬೆಸೆದುಕೊಂಡಿದ್ದು ಇದನ್ನು ಗುರುತಿಸಿ ಮಕ್ಕಳಿಗೆ ಹೇಳಲು ಪ್ರತ್ಯೇಕ ಶಿಕ್ಷಕರ ಅಗತ್ಯವಿರುವುದಿಲ್ಲ. ಪ್ರತಿಯೊಬ್ಬ ಶಿಕ್ಷಕರು ಇದನ್ನು ಗುರುತಿಸಿ ತಮ್ಮಲ್ಲಿ ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದರು. ಜಿಲ್ಲಾ ಸಂಯೋಜಕರಾದ ಚಂದ್ರಶೇಖರ ಹಾಗೂ ಸಂಜಯ್ ಕಥಾ

‘ಸನ್ಮತಿ’ ಶಿಕ್ಷಕರ ಕಲಿಕಾ ಕಾರ್ಯಾಗಾರ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿಗಳ ತರಗತಿ ಪ್ರವೇಶೋತ್ಸವ

ಪುತ್ತೂರು: ಇಲ್ಲಿನ ಕೃಷ್ಣನಗರ ಅಲಂಬುಡದಲ್ಲಿ ನೂತನವಾಗಿ ಆರಂಭಗೊಂಡಿರುವ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ಜೂನ್ 5ರಂದು ನಡೆಯಿತು. ತಾಳ್ಮೆಯಿಂದ ಮಕ್ಕಳನ್ನು ಬೆಳೆಸಬೇಕು: ಡಾ. ಸುಕುಮಾರ್ ಗೌಡ,ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಿಕ್ಷಣ ತಜ್ಞ ಡಾ. ಸುಕುಮಾರ್ ಗೌಡ, ಮಕ್ಕಳನ್ನು ತಾಳ್ಮೆಯಿಂದ ಬೆಳೆಸಿ. ಆಗ ಮಕ್ಕಳು ಬೆಳೆಯುತ್ತಾರೆ ಎಂದ ಅವರು, ವಿದ್ಯಾಸಂಸ್ಥೆಯ ಸುತ್ತಲಿನ ಕಾಡನ್ನು ಇದೇ ರೀತಿ ಉಳಿಸುಕೊಳ್ಳಿ ಎಂದು‌ ಕಿವಿಮಾತು ಹೇಳಿದರು.ಶಿಕ್ಷಣ ತಜ್ಞ ಎನಿಸಿಕೊಳ್ಳಲು ಕಾಳಜಿ ಇರಬೇಕು. ಆ ಕಾಳಜಿ

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿಗಳ ತರಗತಿ ಪ್ರವೇಶೋತ್ಸವ Read More »

ವಿದ್ಯಾರ್ಥಿ ದಿಶೆಯಿಂದಲೇ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು : ವಸಂತ ಕೋನಡ್ಕ | ಸಾಧನಾಭಿವಂದನಾ – ಅಭಿನಂದನಾ ಕಾರ್ಯಕ್ರಮ

ಪುತ್ತೂರು: ‘ನಮ್ಮಲ್ಲಿ ನಾವು ಪ್ರಮುಖವಾಗಿ ಐದು ಗುಣಗಳಾದ ಯೋಚನಾ ಸಾಮರ್ಥ್ಯ, ಯೋಜನಾ ಬದ್ಧತೆ, ಸಾಮಾನ್ಯಜ್ಞಾನ, ಸಮಯ ಪ್ರಜ್ಞೆ, ಸಮಾಜಮುಖಿ ಬದುಕು ಇವುಗಳನ್ನು ಬದುಕಿನಲ್ಲಿ ರೂಢಿಸಿಕೊಳ್ಳಬೇಕಾಗಿದೆ ಎಂದು ಬೆಂಗಳೂರಿನ ವಕೀಲ ವಸಂತ ಕೋನಡ್ಕ ಹೇಳಿದರು. ವಿವೇಕಾನAದ ಕನ್ನಡ ಮಾಧ್ಯಮ ಶಾಲೆಯಲ್ಲಿ 2022-23ನೇ ಸಾಲಿನ ಹತ್ತನೇ ತರಗತಿ ಮಕ್ಕಳ ಉತ್ತಮ ಫಲಿತಾಂಶಕ್ಕಾಗಿ ಆಯೋಜಿಸಲಾದ ಸಾಧನಾಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇನ್ನೊರ್ವ ಅತಿಥಿಯಾಗಿ ಪುತ್ತೂರು ಪಿ.ಎಸ್ ಪ್ರೊಜೆಕ್ಟ್ ಮಾಲಕ ಪ್ರತಾಪಸಿಂಹ ವರ್ವ ವಿದ್ಯಾರ್ಥಿಗಳಿಗೆ ನೀಡಿದ ಅಭಿನಂದನಾ ಪತ್ರ, ಸಸ್ಯದ ಕೊಡುಗೆ ಮಾಡಿದ

ವಿದ್ಯಾರ್ಥಿ ದಿಶೆಯಿಂದಲೇ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು : ವಸಂತ ಕೋನಡ್ಕ | ಸಾಧನಾಭಿವಂದನಾ – ಅಭಿನಂದನಾ ಕಾರ್ಯಕ್ರಮ Read More »

ಶೈಕ್ಷಣಿಕ ಹಬ್‌ ಹಿರಿಮೆಗೆ ಮತ್ತೊಂದು ಗರಿಮೆ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್  | ಜೂನ್ 5: ತರಗತಿಗಳಿಗೆ ವಿದ್ಯಾರ್ಥಿಗಳ ಪ್ರವೇಶೋತ್ಸವ

ಪುತ್ತೂರು: ಆಧುನಿಕತೆಯ ವೇಗಕ್ಕೆ ಸಂಸ್ಕಾರ ಪಾಠಗಳು ಮೂಲೆಗುಂಪಾಗುತ್ತಿವೆ ಎನ್ನುವ ಆತಂಕದ ನಡುವೆ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಭರವಸೆಯ ಸೆಲೆಯಾಗಿ ಟಿಸಿಲೊಡೆದಿದೆ. ಪುತ್ತೂರು – ಉಪ್ಪಿನಂಗಡಿ ಟ್ವಿನ್ ಸಿಟಿಯ ನಡುವಿನ ಬನ್ನೂರು ಪುತ್ತೂರು ಪೇಟೆಗೆ ಕೂಗಳತೆಯ ದೂರದಲ್ಲಿದೆ. ಇಲ್ಲಿನ ಅಲುಂಬುಡ ಪ್ರದೇಶದಲ್ಲಿ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ತಲೆಎತ್ತಿದೆ. ಪಟ್ಟಣದ್ದೇ ವಾತಾವರಣ ಆದರೆ ತೋಟದ ನಡುವೆ ಶಾಲೆ. ಹೇಗಿರಬಹುದು ನೀವೇ ಊಹಿಸಿ. ಕಣ್ಣು ಸುಸ್ತಾಗಿ ಹೊರ ನೋಡಿದರೆ ಹಚ್ಚ ಹಸುರಿನ ಪರಿಸರ ಕಣ್ಣಿಗೆ ಇಂಪು. ದಿನವಿಡೀ ಸ್ವಚ್ಛ

ಶೈಕ್ಷಣಿಕ ಹಬ್‌ ಹಿರಿಮೆಗೆ ಮತ್ತೊಂದು ಗರಿಮೆ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್  | ಜೂನ್ 5: ತರಗತಿಗಳಿಗೆ ವಿದ್ಯಾರ್ಥಿಗಳ ಪ್ರವೇಶೋತ್ಸವ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಭಾರತೀಯ ಪರಂಪರಾ ದಿನಾಚರಣೆ

ಪುತ್ತೂರು: ನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಭಾರತೀಯ ಪರಂಪರಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಖ್ಯಾತ ಚಿಂತಕರಾದ ಕಶೆಕೋಡಿ ಸೂರ್ಯನಾರಾಯಣ ಭಟ್ ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿ, ಪ್ರಪಂಚದ ಇತರೆ ದೇಶಗಳಿಗೆ ಹೋಲಿಸಿದಾಗ ನಮ್ಮ ದೇಶ ಅವಿಚ್ಛಿನ್ನವಾದ ಸಾಂಸೃತಿಕ ವೈಭವವನ್ನು ಹೊಂದಿದೆ. ರೋಮಾಂಚಕ ಇತಿಹಾಸ, ಶ್ರೀಮಂತ ಸಂಸ್ಕೃತಿ, ಅದ್ಭುತ ಸ್ಮಾರಕಗಳು ಮತ್ತು ಪರಂಪರೆಯನ್ನು ಹೊಂದಿರುವ ದೇಶ ಭಾರತ. ಸಿಂಧೂ ಬಯಲಿನ ನಾಗರಿಕತೆಯನ್ನು ನಾಗರಿಕತೆಗಳ ತೊಟ್ಟಿಲು ಎನ್ನುತ್ತಾರೆ.  ಅದಕ್ಕೆ ತಕ್ಕಂತೆ ನಮ್ಮ ಭಾರತದ ಶ್ರೇಷ್ಠ ಪರಂಪರೆ ಬೆಳೆದುಬಂದಿದೆ ಎಂದು

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಭಾರತೀಯ ಪರಂಪರಾ ದಿನಾಚರಣೆ Read More »

ದೂರ ಶಿಕ್ಷಣ ಇನ್ನು ಹತ್ತಿರ | ಶಿಕ್ಷಣ ಪಡೆಯುವ ನಿಮ್ಮ ಕನಸು ಪ್ರೇರಣಾದಲ್ಲಿ ನನಸು! | ವಯಸ್ಸಿನ ಅಂಜಿಕೆ ಬೇಡ, ಸದಾವಕಾಶದ ಬಾಗಿಲು ತೆರೆದ ಪ್ರೇರಣಾ

ಪುತ್ತೂರು: ಶಿಕ್ಷಣ ಪಡೆಯುವ ವಯಸ್ಸಲ್ಲಿ ಶಿಕ್ಷಣ ಪಡೆದಿಲ್ಲವೇ? ಕೆಲಸದ ಒತ್ತಡದಿಂದ ಶಿಕ್ಷಣದಿಂದ ದೂರ ಉಳಿದಿರುವಿರೇ? ಹೀಗಿದ್ದು, ವಿದ್ಯಾಭ್ಯಾಸ ಮುಂದುವರಿಸುವ ಅಪೇಕ್ಷೆ ನಿಮ್ಮದಾಗಿದ್ದರೆ ಪುತ್ತೂರಿನ ಪ್ರೇರಣಾ ಸಂಸ್ಥೆಗೆ ಭೇಟಿ ನೀಡಿ. ವಿದ್ಯಾಭ್ಯಾಸ ಪಡೆಯುವುದು ಎಲ್ಲರ ಬಯಕೆಯೂ ಹೌದು. ಅದರಲ್ಲೂ ಅನಿವಾರ್ಯ ಕಾರಣಗಳಿಂದ ಶಿಕ್ಷಣದಿಂದ ವಂಚಿತರಾಗಿ ಕೆಲಸಕ್ಕೆ ಸೇರಿದವರು ಕಾಲೇಜನ್ನು, ಕಾಲೇಜು ವಿದ್ಯಾರ್ಥಿಗಳನ್ನು ನೋಡಿ ತಾವು ಶಿಕ್ಷಣ ಮುಂದುವರಿಸಬೇಕು ಎಂದು ಅಪೇಕ್ಷೆ ಪಡುತ್ತಿರುತ್ತಾರೆ. ಆದರೆ ಅದು ಹೇಗೆ ಎಂದು ತಿಳಿಯದು. ಆದ್ದರಿಂದ ಶಿಕ್ಷಣ ಪಡೆಯಬೇಕೆಂಬ ಕನಸು ಕನಸಾಗಿಯೇ ಉಳಿದಿರುತ್ತದೆ. ಆದರೆ

ದೂರ ಶಿಕ್ಷಣ ಇನ್ನು ಹತ್ತಿರ | ಶಿಕ್ಷಣ ಪಡೆಯುವ ನಿಮ್ಮ ಕನಸು ಪ್ರೇರಣಾದಲ್ಲಿ ನನಸು! | ವಯಸ್ಸಿನ ಅಂಜಿಕೆ ಬೇಡ, ಸದಾವಕಾಶದ ಬಾಗಿಲು ತೆರೆದ ಪ್ರೇರಣಾ Read More »

ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

ಪುತ್ತೂರು: ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ವಿವೇಕಾನಂದ ಪದವಿ ಕಾಲೇಜಿನ ಭೌತಶಾಸ್ತç ಉಪನ್ಯಾಸಕ ಡಾ. ಶ್ರೀಶ ಭಟ್ ಹೇಳಿದರು. ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ  ವಾಣಿಜ್ಯ ಮತ್ತು ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ನಡೆದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ  ಅವರು ಮಾತನಾಡಿದರು. ಹೂವಿಗೆ ಪರಿಮಳವಿದ್ದಂತೆ ಮಾನವರಿಗೆ ವ್ಯಕ್ತಿತ್ವ ಅಷ್ಟೇ ಮುಖ್ಯ. ಪ್ರತಿಯೊಬ್ಬರ ಜೀವನದ ಒಳಿತು ಕೆಡಕುಗಳಿಗೆ ಅವರೇ ಶಿಲ್ಪಿಗಳಾಗಿರುತ್ತಾರೆ. ಮನುಷ್ಯ ತನ್ನ ಜೀವನವನ್ನು ತನ್ನಿಷ್ಟದಂತೆ ರೂಪಿಸಿಕೊಳ್ಳುತ್ತಾನೆ

ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ Read More »

ಜೂ.5 : ಔಷಧೀಯ ಸಸ್ಯಗಳ ಸಂರಕ್ಷಣೆ, ಸಂವರ್ಧನೆ, ಬಳಕೆ ಹಾಗೂ ಜನಜಾಗೃತಿಗಾಗಿ ಅಭಿಯಾನ ಆಂದೋಲನ “ವಿವೇಕ ಸಂಜೀವಿನಿ” ತರಬೇತುದಾರರ ತರಬೇತಿ ಶಿಬಿರ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ಔಷಧೀಯ ಸಸ್ಯಗಳ ಸಂರಕ್ಷಣೆ, ಸಂವರ್ಧನೆ, ಬಳಕೆ ಹಾಗೂ ಜನಜಾಗೃತಿಗಾಗಿ ಅಭಿಯಾನ ಆಂದೋಲನ “ವಿವೇಕ ಸಂಜೀವಿನಿ” ತರಬೇತುದಾರರ ತರಬೇತಿ ಶಿಬಿರ ಜೂ.5 ರಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ  ಶ್ರೀರಾಮ ಸಭಾಭವನದಲ್ಲಿ ನಡೆಯಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಬರುವ 29 ಕ್ಯಾಂಪಸ್‍ನ ಎಲ್ಲಾ ಶಾಲೆಗಳ ಮಕ್ಕಳನ್ನು ಸೇರಿಸಿಕೊಂಡು ಈ ಆಂದೋಲನವನ್ನು ಮಾಡಲಾಗುವುದು. ಈ ಆಂದೋಲನ ಅಂಗವಾಗಿ

ಜೂ.5 : ಔಷಧೀಯ ಸಸ್ಯಗಳ ಸಂರಕ್ಷಣೆ, ಸಂವರ್ಧನೆ, ಬಳಕೆ ಹಾಗೂ ಜನಜಾಗೃತಿಗಾಗಿ ಅಭಿಯಾನ ಆಂದೋಲನ “ವಿವೇಕ ಸಂಜೀವಿನಿ” ತರಬೇತುದಾರರ ತರಬೇತಿ ಶಿಬಿರ Read More »

error: Content is protected !!
Scroll to Top