ಬಪ್ಪಳಿಗೆಯ ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ | ಗಣ ಹೋಮ, ಶಾರದಾ ಪೂಜೆಯೊಂದಿಗೆ ಆರತಿ ಬೆಳಗಿ ತಿಲಕವಿಟ್ಟು ಸ್ವಾಗತ
ಪುತ್ತೂರು: ಅಂಬಿಕಾ ಸಿ.ಬಿ.ಎಸ್.ಇ ಶಾಲೆಯ 2023-24ನೇ ಸಾಲಿನ ಶೈಕ್ಷಣಿಕ ವರ್ಷವನ್ನು ಗಣಪತಿ ಹೋಮ, ಶಾರದಾ ಪೂಜೆಯೊಂದಿಗೆ ಪುನರಾರಂಭಗೊಂಡಿತು. ವೇದಮೂರ್ತಿ ಶ್ರೀಕೃಷ್ಣ ಉಪಾಧ್ಯಾಯ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ನೂತನ ಶೈಕ್ಷಣಿಕ ವರ್ಷ ಆರಂಭಗೊಂಡಿದೆ. ಮೊದಲ ದಿನದಿಂದಲೇ ಓದುವಿಕೆ, ಬರೆಯುವಿಕೆಯ ಕಡೆ ಹೆಚ್ಚಿನ ಗಮನ ಹರಿಸಬೇಕು. ಶಿಕ್ಷಕರು ನೀಡಿದ ಕೆಲಸವನ್ನು ಅಂದೇ ಪೂರ್ತಿ ಗೊಳಿಸಬೇಕು. ಕಳೆದ ಬಾರಿ ಕಡಿಮೆ ಅಂಕ ಗಳಿಸಿದ್ದರೆ ಅದನ್ನು […]










