ನಮ್ಮ ಕ್ರೀಡಾಳುಗಳಿಂದ ದೇಶಕ್ಕೆ ಹೆಮ್ಮೆ ತರುವ ಕಾರ್ಯ | ಅಂಬಿಕಾ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಸುರೇಶ ಶೆಟ್ಟಿ
ಪುತ್ತೂರು: ದಶಕಗಳ ಹಿಂದೆ ಕ್ರೀಡಾಕ್ಷೇತ್ರದಲ್ಲಿ ಭಾರತದ ಪ್ರದರ್ಶನ ನೀರಸವಾಗಿರುತ್ತಿತ್ತು. ಅಲ್ಲೋ ಇಲ್ಲೋ ಒಬ್ಬ ಕ್ರೀಡಾಪಟು ಮೂರು – ನಾಲ್ಕನೇ ಸ್ಥಾನ ಗಳಿಸುವುದೇ ದೊಡ್ಡ ಸಾಧನೆ ಎನಿಸುತ್ತಿತ್ತು. ಆದರೆ ಈಗ ಚಿತ್ರಣ ಬದಲಾಗುತ್ತಿದೆ. ಒಲಿಂಪಿಕ್ಸ್ ನಂತಹ ಸ್ಪರ್ಧೆಗಳಲ್ಲೂ ನಿರಂತರವಾಗಿ ಚಿನ್ನ, ಬೆಳ್ಳಿ ಪದಕಗಳು ಭಾರತಕ್ಕೆ ಬರಲಾರಂಭಿಸಿವೆ. ಹಾಗಾಗಿ ನಮ್ಮ ಕ್ರೀಡಾಳುಗಳು ದೇಶಕ್ಕೆ ಹೆಮ್ಮೆ ತರುವ ಕಾರ್ಯ ಮಾಡುತ್ತಿದ್ದಾರೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸದಸ್ಯ ಸುರೇಶ ಶೆಟ್ಟಿ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ […]










