ವಿಜ್ಞಾನ ಆಸಕ್ತಿಯ ಕ್ಷೇತ್ರವಾದಾಗ ಸಾಧನೆಗಳು ಸಾಧ್ಯ | ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಸತ್ಯಜಿತ್ ಉಪಾಧ್ಯಾಯ
ಪುತ್ತೂರು : ವಿಜ್ಞಾನವನ್ನು ಕೇವಲ ಒಂದು ವಿಷಯವಾಗಿ ನೋಡುವುದರ ಬದಲು ಅದನ್ನು ಆಸಕ್ತಿಯ ಕ್ಷೇತ್ರವನ್ನಾಗಿ ಪರಿವರ್ತಿಸಿಕೊಳ್ಳಬೇಕು. ಮಾತ್ರವಲ್ಲದೆ ಸಂಶೋಧನೆ ಕೈಗೊಳ್ಳಬೇಕು. ತನ್ಮೂಲಕ ನಮ್ಮ ದೇಶವನ್ನು ಯಶಸ್ಸಿನ ಕಡೆ ಕೊಂಡೊಯ್ಯುಬೇಕು ಎಂದು ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇಯಲ್ಲಿ ಆಚರಿಸಲಾದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಂಗಳವಾರ ಮಾತನಾಡಿದರು. ಸಿವಿ ರಾಮನ್ರವರ ಅಪೂರ್ವ ಸಾಧನೆಯ […]