ಕ್ಯಾಂಪಸ್‌

ಅವಳಿ ಸಹೋದರಿಯರ ಅವಳಿ ಮಾರ್ಕ್ಸ್ | ಪಿಯು ಫಲಿತಾಂಶದಲ್ಲಿ ಅಚ್ಚರಿಯ ಸಾಧನೆ

ಬೆಳ್ತಂಗಡಿ: ಸ್ಪಂದನಾ ಹಾಗೂ ಸ್ಪರ್ಷಾ ಅವಳಿ ಸಹೋದರಿಯರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ (ವಾಣಿಜ್ಯ ವಿಭಾಗದಲ್ಲಿ )  ಇಬ್ಬರೂ 600ರಲ್ಲಿ 594 ಸಮಾನ (ಶೇಕಡ 99)ಅಂಕ ಪಡೆದು ಅಚ್ಚರಿ ಮೂಡಿಸಿದ್ದಾರೆ. ತಾಲೂಕಿನ ನೆರಿಯ ಗ್ರಾಮದ ಪುಣ್ಕೆದಡಿ ಹೊನ್ನಪ್ಪ ಗೌಡ ಮತ್ತು ಗಿರಿಜಾ ಇವರ ಮೊಮ್ಮಕ್ಕಳು, ನೆರಿಯ ಉಮೇಶ್ ಗೌಡ ಪಿ‌.ಹೆಚ್- ‌ಮತ್ತು ಗೀತಾ ದಂಪತಿಯ ಅವಳಿ ಮಕ್ಕಳು ಇವರಾಗಿದ್ದಾರೆ. ಇವರು ಉಜಿರೆ ಎಸ್ ಡಿಎಂ ಕಾಲೇಜಿನಲ್ಲಿ ಪಿಯು ವಿದ್ಯಾಭ್ಯಾಸ ಮಾಡಿರುತ್ತಾರೆ.

ಅವಳಿ ಸಹೋದರಿಯರ ಅವಳಿ ಮಾರ್ಕ್ಸ್ | ಪಿಯು ಫಲಿತಾಂಶದಲ್ಲಿ ಅಚ್ಚರಿಯ ಸಾಧನೆ Read More »

ವಿದ್ಯಾರಶ್ಮಿಗೆ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಫಲಿತಾಂಶ

ಪುತ್ತೂರು: ಮಾರ್ಚ್ 2023 ರಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ ವಿದ್ಯಾರಶ್ಮಿ ವಿದ್ಯಾಲಯದ ವಾಣಿಜ್ಯ ವಿಭಾಗದ 25 ಮತ್ತು ವಿಜ್ಞಾನ ವಿಭಾಗದ 6 ಅಭ್ಯರ್ಥಿಗಳು ಸೇರಿದಂತೆ ಒಟ್ಟು 34 ವಿದ್ಯಾರ್ಥಿಗಳು ಹಾಜರಾಗಿದ್ದು, 31 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಪೈಕಿ 7 ವಿಶಿಷ್ಟ ಶ್ರೇಣಿ,15 ಪ್ರಥಮ ಹಾಗೂ 3 ದ್ವಿತೀಯ ಹಾಗೂ 6 ಮಂದಿ ತೃತೀಯ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ತೇಜಸ್ ಕೆ. (531) ಲೋಕನಾಥ ಮತ್ತು ಶಶಿಕಲಾ ಕುದ್ಮಾರು ದಂಪತಿ ಪುತ್ರ, ನಿಶಾಂತ್ ಡಿ. ಎಚ್

ವಿದ್ಯಾರಶ್ಮಿಗೆ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಫಲಿತಾಂಶ Read More »

ಪಿಯು ಫಲಿತಾಂಶ ಪ್ರಕಟ: ಪ್ರೇರಣಾ ಸಂಸ್ಥೆಯಲ್ಲಿ ತರಬೇತಿ ಪಡೆದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಿಶಿಷ್ಟ ಶ್ರೇಣಿ

ಪುತ್ತೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರೇರಣಾ ಸಂಸ್ಥೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಒಟ್ಟು 53 ವಿದ್ಯಾರ್ಥಿಗಳು ಪ್ರೇರಣಾದಲ್ಲಿ ತರಬೇತಿ ಪಡೆದುಕೊಂಡಿದ್ದು, ಅದರಲ್ಲಿ 10 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. 30 ವಿದ್ಯಾರ್ಥಿಗಳು ಪ್ರಥಮ ದರ್ಜೆ, 13 ಮಂದಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದ ಮಹಮ್ಮದ್ ಶಾಝ್ (560), ಎನ್. ಅಮನ್ ಅಡ್ಯಂತ್ತಾಯ (560), ನೆಬಿಸಾ (544), ಹರ್ಷಿದಾ (535), ನಿಯಾಫ್‍ (524), ಅನ್ಸಫ್ (517), ಅಬ್ದುಲ್ ಅಹದ್ (512),

ಪಿಯು ಫಲಿತಾಂಶ ಪ್ರಕಟ: ಪ್ರೇರಣಾ ಸಂಸ್ಥೆಯಲ್ಲಿ ತರಬೇತಿ ಪಡೆದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವಿಶಿಷ್ಟ ಶ್ರೇಣಿ Read More »

ಆಳ್ವಾಸ್‌ ಕಾಲೇಜು ವಿದ್ಯಾರ್ಥಿನಿ ಅನನ್ಯ ರಾಜ್ಯಕ್ಕೆ ಪ್ರಥಮ

ಕಾರ್ಕಳ : 2023 ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೂಡುಬಿದಿರೆ ಆಳ್ವಾಸ್‌ ಕಾಲೇಜಿನ ವಾಣಿಜ್ಯ ವಿಭಾಗದ ಅನನ್ಯ 600 ಕ್ಕೆ 600 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಕೌಶಿಕ್ 600ಕ್ಕೆ 596 ಅಂಕಗಳನ್ನು ಗಳಿಸಿ ಮೊದಲನೇ ಸ್ಥಾನ ಪಡೆದರೆ, ಕಲಾ ವಿಭಾಗದಲ್ಲಿ ಜಯನಗರ NMKRV ಕಾಲೇಜು ವಿದ್ಯಾರ್ಥಿನಿ ಥಬಸುಮ್ ಶಾಯಿಕ್ 600ಕ್ಕೆ 593 ಪಡೆದು ಪ್ರಥಮ ಸ್ಥಾನಿಯಾಗಿದ್ದಾರೆ. ಶುಕ್ರವಾರ ಬೆಳಿಗ್ಗೆ ಫಲಿತಾಂಶ ಪ್ರಕಟ ಪಡಿಸಲಾಗಿದೆ

ಆಳ್ವಾಸ್‌ ಕಾಲೇಜು ವಿದ್ಯಾರ್ಥಿನಿ ಅನನ್ಯ ರಾಜ್ಯಕ್ಕೆ ಪ್ರಥಮ Read More »

ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ಪುತ್ತೂರು: ನರೇಂದ್ರ ಪದವಿಪೂರ್ವ ಕಾಲೇಜಿನ 20 ಬಡ ವಿದ್ಯಾರ್ಥಿಗಳಿಗೆ ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ 190 ವತಿಯಿಂದ ತಲಾ 5 ರೂ. ಸಾವಿರ ವಿದ್ಯಾರ್ಥಿವೇತನ ವಿತರಿಸಲಾಯಿತು. ಎಂ ಸಿ ಆರ್ ಟಿ ನ ಅಧ್ಯಕ್ಷ ನಿಹಾಲ್ ಶೆಟ್ಟಿ, ಉಪಾಧ್ಯಕ್ಷ ವಿಖ್ಯಾತ್ ಶೆಟ್ಟಿ , ಖಜಾಂಚಿ ಆಶ್ರಯ್ ಭಂಡಾರಿ, ಕಾರ್ಯದರ್ಶಿ ಕಿರಣ್  ಹಾಗೂ ಎಂ ಸಿ ಆರ್ ಟಿ ನ ಟೇಬಲರ್,  ಪುತ್ತೂರಿನ ಸ್ವರ್ಣೋದ್ಯಮಿ ಸುಧನ್ವ ಆಚಾರ್ಯ 1.22 ಲಕ್ಷದ ಚೆಕ್ಕನ್ನು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಖಜಾಂಚಿ

ಮಂಗಳೂರು ಕೋಸ್ಟಲ್ ರೌಂಡ್ ಟೇಬಲ್ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ Read More »

ದ್ವಿತೀಯ ಪಿಯು ಫಲಿತಾಂಶ ಪ್ರಕಟಕ್ಕೆ ಕ್ಷಣಗಣನೆ

ಪುತ್ತೂರು: ಮಾರ್ಚಿನಲ್ಲಿ ನಡೆದ ದ್ವಿತೀಯ ಪಿಯು ಫಲಿತಾಂಶ ಏ. 21ರಂದು ಬೆಳಿಗ್ಗೆ 10ಕ್ಕೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಠಿ ಕರೆಯಲಾಗಿದೆ. ಇಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಬಳಿಕ ಇಲಾಖೆಯ ವೆಬ್ ತಾಣ https://karresults.nic.inನಲ್ಲಿ ಫಲಿತಾಂಶ ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಅಧ್ಯಕ್ಷರ ಪ್ರಕಟಣೆ ತಿಳಿಸಿದೆ.

ದ್ವಿತೀಯ ಪಿಯು ಫಲಿತಾಂಶ ಪ್ರಕಟಕ್ಕೆ ಕ್ಷಣಗಣನೆ Read More »

ವಿವೇಕಾನಂದ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಮೊದಲ ಸೆಮಿಸ್ಟರ್ ಫಲಿತಾಂಶ

ಪುತ್ತೂರು:  ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ದ ಸ್ನಾತಕೋತ್ತರ ಪದವಿಯ ಮೊದಲ ಸೆಮಿಸ್ಟರ್ ಫಲಿತಾಂಶವು ದಿನಾಂಕ ಏ.18 ರಂದು ಬೆಳಿಗ್ಗೆಯಿಂದ ಕಾಲೇಜಿನ ವೆಬ್‌ಸೈಟ್‌ನಲ್ಲಿ (vcputtur.ac.in) ದೊರೆಯಲಿದೆ. ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರನ್ನು ಬಳಸಿ ಫಲಿತಾಂಶವನ್ನು ಪಡೆಯಲು ಅವಕಾಶವಿದೆ. ಒಟ್ಟು ಶೇ.98 ಉತ್ತೀರ್ಣತೆ ದಾಖಲಾಗಿದೆ. ಪ್ರಥಮ ಎಂ.ಎ. (ಪತ್ರಿಕೋದ್ಯಮ) ಶೇ.100, ಎಂ.ಎಸ್ಸಿ. (ಗಣಿತಶಾಸ್ತ್ರ) ಶೇ.60, ಎಂ.ಕಾಂ. ಶೇ. 100,  ಎಂ.ಎಸ್ಸಿ. (ರಸಾಯನಶಾಸ್ತ್ರ) ಶೇ.100 ರಂತೆ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಸ್ವಾಯತ್ತ ಸಂಸ್ಥೆಯಾಗಿ ಪರಿವರ್ತನೆಯಾದ ಬಳಿಕ ಪ್ರಕಟವಾಗುತ್ತಿರುವ

ವಿವೇಕಾನಂದ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಮೊದಲ ಸೆಮಿಸ್ಟರ್ ಫಲಿತಾಂಶ Read More »

ಸಂತ ಫಿಲೋಮಿನಾ ಕಾಲೇಜಿನ ಎನ್‌ ಎಸ್‌ ಎಸ್‌ ಶಿಬಿರ ಸಮಾರೋಪ

ಪುತ್ತೂರು: ಬಡಗನ್ನೂರು ಪಟ್ಟೆ ವಿದ್ಯಾಸಂಸ್ಥೆಯಲ್ಲಿ ಏಳು ದಿನಗಳ ಕಾಲ ನಡೆದ ಸಂತ ಫಿಲೋಮಿನಾ ಕಾಲೇಜಿನ ಎನ್‌ ಎಸ್‌ ಎಸ್‌ ಶಿಬಿರ ಸಮಾರೋಪಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ ಅತಿ ವಂ| ಲಾರೆನ್ಸ್‌ ಮಸ್ಕರೇನ್ಹಸ್ ಮಾತನಾಡಿ, ವಿದ್ಯಾರ್ಥಿಗಳಿಗೆ ಪರಿಸರ ಪ್ರೀತಿ, ಸಹಬಾಳ್ವೆ, ಶಿಸ್ತಿನ ಜೀವನ ನಡೆಸಲು ಎನ್‌ ಎಸ್‌ ಎಸ್‌ ಶಿಬಿರಗಳು ಸಹಕಾರಿಯಾಗುತ್ತವೆ. ಇಂತಹ ಶಿಬಿರಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವವಿಕಸನವಾಗುವುದು. ವಿದ್ಯಾರ್ಥಿಗಳಿಗೆ ಸೇವೆಯ ಮಹತ್ವ ಹಾಗೂ ತಮ್ಮ ಶ್ರಮದ ಬೆಲೆ ಈ ಶಿಬಿರದಲ್ಲಿ ಭಾಗವಹಿಸಿದ್ದರಿಂದ

ಸಂತ ಫಿಲೋಮಿನಾ ಕಾಲೇಜಿನ ಎನ್‌ ಎಸ್‌ ಎಸ್‌ ಶಿಬಿರ ಸಮಾರೋಪ Read More »

ಅಂಬಿಕಾ ಕ್ಯಾಂಪಸ್‌ಗೆ ಮಹಾಲಿಂಗೇಶ್ವರ ದೇವರ ಸವಾರಿ

ಪುತ್ತೂರು: ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣಕ್ಕೆ ಗುರುವಾರ ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ ಆಗಮಿಸಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ದಂಪತಿ ಹಾಗೂ ಪುತ್ರ ಶ್ರೀಕೃಷ್ಣ ನಟ್ಟೋಜ ದೇವರನ್ನು ಬರಮಾಡಿಕೊಂಡರು. ನಂತರ ದೇವರಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗಳ ವತಿಯಿಂದ ಕಟ್ಟೆಪೂಜೆ ನಡೆಯಿತು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಅಂಬಿಕಾ ಮಹಾವಿದ್ಯಾಲಯದ

ಅಂಬಿಕಾ ಕ್ಯಾಂಪಸ್‌ಗೆ ಮಹಾಲಿಂಗೇಶ್ವರ ದೇವರ ಸವಾರಿ Read More »

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ

ಪುತ್ತೂರು:  ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಶಾಲಾ ಹಿರಿಯ ಶಿಕ್ಷಕ  ರಾಧಾಕೃಷ್ಣ ರೈ ಅಂಬೇಡ್ಕರ್ ಕುರಿತು ಮಾತನಾಡಿ, ಸಂವಿಧಾನ ಶಿಲ್ಪಿ ಅಂಬೇಡ್ಕರ್ ರನ್ನು ನಾವು ದೇವತಾ  ಮನುಷ್ಯರಂತೆ ಕಾಣಬೇಕು. ಅವರು ಸಂವಿಧಾನದ ರಚನೆಯ ಮೂಲಕ ದೇಶದ ಸಮಸ್ತ ಪ್ರಜೆಗಳ ಏಳಿಗೆಗಾಗಿ ಶ್ರಮಿಸಿದ ಭಾರತ ಕಂಡ  ಮಹಾನ್ ಚೇತನ” ಎಂದು ಹೇಳಿದರು. ಶಾಲಾ ಮುಖ್ಯ ಶಿಕ್ಷಕ ಸತೀಶ್ ಕುಮಾರ್ ರೈ ಅಂಬೇಡ್ಕರ್  ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.  ಹಿರಿಯ  ದೈಹಿಕ  ಶಿಕ್ಷಣ  ಶಿಕ್ಷಕ  ಭಾಸ್ಕರ್  ಗೌಡ  ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಾಲಾ ಎಸ್ಟೇಟ್ ಮ್ಯಾನೇಜರ್ ಚರಣರಾಜ್,  ಶಿಕ್ಷಕ- ಕ್ಷಕೇತರ  ಸ್ಕೌಟ್ಸ್ ಮತ್ತು ನಿವೇದಿತಾ ಗೈಡ್ಸ್  ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ Read More »

error: Content is protected !!
Scroll to Top