ಕ್ಯಾಂಪಸ್‌

ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯ  ಸದಸ್ಯರಿಗೆ  ಲಾಭಾಂಶ  ವಿತರಣೆ

ಉಪ್ಪಿನಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯ  ಸದಸ್ಯರಿಗೆ  ಲಾಭಾಂಶ  ವಿತರಣೆ ಮಾಡಲಾಯಿತು. ಪೆರ್ನೆ ವಲಯದ  ಪೆರಾಜೆ ನೇರಳಕಟ್ಟೆ ಒಕ್ಕೂಟಗಳ  ಗಜಾನನ ಪ್ರಗತಿ ಬಂಧು ಸಂಘ, ಸ್ವರ್ಣ ನಿಧಿ ಪ್ರಗತಿ  ಬಂಧು ಸಂಘ ದವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯಿಂದ  ಲಾಭಾಂಶ  ವಿತರಿಸಲಾಗಿದೆ. ಪೆರ್ನೆ ವಲಯ ಮೇಲ್ವಿಚಾರಕರಾದ  ಶಾರದಾ, ಸೇವಾಪ್ರತಿನಿಧಿ ರಮ್ಲತ್ ವಿತರಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯ  ಸದಸ್ಯರಿಗೆ  ಲಾಭಾಂಶ  ವಿತರಣೆ Read More »

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ  ವೈಷ್ಣವಿ ಪೈ ಪ್ರತಿಭಾ ಕಾರಂಜಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್,  ಶಾಲಾ ಶಿಕ್ಷಣ ಇಲಾಖೆ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಸಮೂಹ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಹಾಗೂ ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರೌಢ ವಿಭಾಗದಲ್ಲಿ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ 10ನೇ ತರಗತಿಯ ವೈಷ್ಣವಿ ಪೈ ಇಂಗ್ಲೀಷ್ ಭಾಷಣದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 9ನೇ ತರಗತಿಯ ನಿಲಿಷ್ಕಾ ಚಿತ್ರಕಲೆಯಲ್ಲಿ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ  ವೈಷ್ಣವಿ ಪೈ ಪ್ರತಿಭಾ ಕಾರಂಜಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ Read More »

ನಾವು ಯೋಚಿಸಿದಂತೆ ನಮ್ಮ ನಡತೆ ಇರುತ್ತದೆ : ಅರವಿಂದಚೊಕ್ಕಾಡಿ | ವಿದ್ಯಾಸ್ಪೂರ್ತಿ – 2024 ಉದ್ಘಾಟನೆ

ಪುತ್ತೂರು: ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್  ಸಾರಥ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಹಾಗೂ  ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಸಹಯೋಗದೊಂದಿಗೆ  ಶ್ರೀರಾಮ ಸಭಾಭವನದಲ್ಲಿ  ‘ವಿದ್ಯಾಸ್ಫೂರ್ತಿ – 2024’ ನ್ನು ಉದ್ಘಾಟಿಸಲಾಯಿತು. ಮುಖ್ಯ ಅತಿಥಿಗಳಾಗಿ ಸಾಹಿತಿ ಅರವಿಂದ ಚೊಕ್ಕಾಡಿ ಮಾತನಾಡಿ, ನಾವು ಯೋಚಿಸಿದಂತೆ ನಮ್ಮ ನಡತೆ ಇರುತ್ತದೆ, ಎಷ್ಟು ಸಂಸ್ಕಾರ ಎನ್ನುವುದು ಯೋಚನೆ ಮತ್ತು ಯೋಜನೆಗಳಲ್ಲಿ ಕಾರ್ಯಗತವಾಗಬೇಕು. ವಿದ್ಯಾಸ್ಪೂರ್ತಿಯಂತಹ ಕಾರ್ಯಕ್ರಮಮ ಬಹು ವಿಧದ ಚಿಂತನೆಯಲ್ಲಿ ಸಹಕರಿಸುತ್ತದೆ ಎಂದುಹೇಳಿದರು. ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಸಂಚಾಲಕ ಟಿ.

ನಾವು ಯೋಚಿಸಿದಂತೆ ನಮ್ಮ ನಡತೆ ಇರುತ್ತದೆ : ಅರವಿಂದಚೊಕ್ಕಾಡಿ | ವಿದ್ಯಾಸ್ಪೂರ್ತಿ – 2024 ಉದ್ಘಾಟನೆ Read More »

ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಹೆತ್ತವರ ಸಭೆ | ವಿದ್ಯಾರ್ಥಿಗಳು ದೇಶದ ಸಾಂಸ್ಕೃತಿಕ ರಾಯಭಾರಿಗಳಾಗಬೇಕು : ಸುಬ್ರಹ್ಮಣ್ಯ ನಟ್ಟೋಜ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ಪದವಿ ಪೂರ್ವ ವಿದ್ಯಾಲಯದಲ್ಲಿ ಭಾನುವಾರ ರಕ್ಷಕ ಶಿಕ್ಷಕ ಸಂಘದ ಸಭೆ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ, ವಸತಿ ನಿಲಯದಲ್ಲಿರುವ ಮಕ್ಕಳು ಶೈಕ್ಷಣಿಕ ಕ್ಷೇತ್ರದಲ್ಲಿ ಮಾತ್ರ ಮುಂಚೂಣಿಯಲ್ಲಿರದೆ ದೇಶದ ಸಂಸ್ಕೃತಿಯನ್ನು ಬಿಂಬಿಸುವ ರಾಯಬಾರಿಗಳಾಗಬೇಕು. ಮುಂದಿನ ದಿನಗಳಲ್ಲಿ ಪಠ್ಯ ವಿ?ಯಗಳು ಮಾತ್ರವಲ್ಲದೆ ಧಾರ್ಮಿಕ ವಿಷಯಗಳನ್ನು ಬೋಧಿಸುವ, ನಮ್ಮ ಸಂಸ್ಕೃತಿ ಸಂಸ್ಕಾರಗಳನ್ನು ಮಕ್ಕಳಿಗೆ ತಿಳಿಸುವ ತರಗತಿಗಳನ್ನು ಅಂಬಿಕಾ ಸಂಸ್ಥೆಯಲ್ಲಿ ನಡೆಸಲಾಗುತ್ತದೆ ಎಂದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ

ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಹೆತ್ತವರ ಸಭೆ | ವಿದ್ಯಾರ್ಥಿಗಳು ದೇಶದ ಸಾಂಸ್ಕೃತಿಕ ರಾಯಭಾರಿಗಳಾಗಬೇಕು : ಸುಬ್ರಹ್ಮಣ್ಯ ನಟ್ಟೋಜ Read More »

ಮಕ್ಕಳ ಮನಸ್ಸಲ್ಲಿ ‘ಸಾತ್ವಿಕ ದೀಪ’ ಹಚ್ಚಿ : ಪೋಷಕರಿಗೆ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಕರೆ | ಪೆರಿಯಡ್ಕ ಬಿಜಿಎಸ್ ಸರ್ವೋದಯ ಪ್ರೌಢಶಾಲೆಯಲ್ಲಿ ನಡೆದ ಪ್ರತಿಭಾ ಪುರಸ್ಕಾರ-ಸಾಂಸ್ಕೃತಿಕ ಕಾರ್ಯಕ್ರಮ

ಉಪ್ಪಿನಂಗಡಿ: ಮಕ್ಕಳ ಮನಸ್ಸನ್ನು ಅರ್ಥ ಮಾಡಿಕೊಳ್ಳುವಲ್ಲಿ ಪೋಷಕರು ಮುಂದಾಗುತ್ತಿಲ್ಲ. ಮಕ್ಕಳ ಮನಸ್ಸನ್ನು ಅಸ್ಥಿರಗೊಳಿಸುವ ಕೆಲಸ ತಂದೆ ತಾಯಿಯಿಂದ ನಡೆಯುತ್ತಿರುವ ಕಾರಣವೇ ಸಮಾಜದಲ್ಲಿ ಶಕ್ತಿವಂತ ಮತ್ತು ಶಕ್ತಿಹೀನ ಮನಸ್ಥಿತಿಗಳು ಹುಟ್ಟಿಕೊಳ್ಳುತ್ತಿವೆ. ಮಕ್ಕಳ ಅಂತ;ಕರಣದ ಶಕ್ತಿಯನ್ನು ಉದ್ದೀಪನ ಮಾಡುವ ಮೂಲಕ ಅವರ ಮನಸ್ಸಲ್ಲಿ ಸಾತ್ವಿಕ ದೀಪ ಹಚ್ಚುವ ಕೆಲಸ ಪೋಷಕರಿಂದ ನಡೆಯಬೇಕಾಗಿರುವುದು ಅತೀ ಅಗತ್ಯವಾಗಿದೆ ಎಂದು ಮಂಗಳೂರು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ನುಡಿದರು. ಪೆರಿಯಡ್ಕ ಬಿಜಿಎಸ್ ಸರ್ವೋದಯ ಪ್ರೌಢಶಾಲೆಯಲ್ಲಿ ನಡೆದ ಪ್ರತಿಭಾ ಪುರಸ್ಕಾರ-ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನಾ

ಮಕ್ಕಳ ಮನಸ್ಸಲ್ಲಿ ‘ಸಾತ್ವಿಕ ದೀಪ’ ಹಚ್ಚಿ : ಪೋಷಕರಿಗೆ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಕರೆ | ಪೆರಿಯಡ್ಕ ಬಿಜಿಎಸ್ ಸರ್ವೋದಯ ಪ್ರೌಢಶಾಲೆಯಲ್ಲಿ ನಡೆದ ಪ್ರತಿಭಾ ಪುರಸ್ಕಾರ-ಸಾಂಸ್ಕೃತಿಕ ಕಾರ್ಯಕ್ರಮ Read More »

ಕಬಕ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಮಾಸೋತ್ಸವ | ಮಾಹಿತಿ ಮತ್ತು ಜಾಥಾ ಕಾರ್ಯಕ್ರಮ

ಪುತ್ತೂರು: ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ದ.ಕ ಮತ್ತು ಪುತ್ತೂರು ಶಿಕ್ಷಣ ಸಂಪನ್ಮೂಲ ಕೇಂದ್ರದ ಸಹಯೋಗದೊಂದಿಗೆ ಮಕ್ಕಳ ಮಾಸೋತ್ಸವ ಅಂಗವಾಗಿ  ಫ಼ೋಕ್ಸೋ ಮತ್ತು ಮೊಬೈಲ್ ಬಳಕೆ ದುಷ್ಪರಿಣಾಮದ ಬಗ್ಗೆ ಮಾಹಿತಿ ಕಾರ್ಯಕ್ರಮ ಕಬಕ ಸರಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆಯಿತು. ಪತ್ರಕರ್ತ ಸಂಶುದ್ದೀನ್ ಸಂಪ್ಯ ವಿದ್ಯಾರ್ಥಿಗಳೊಂದಿಗೆ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ,  ಫ಼ೋಕ್ಸೋ ಕಾಯಿದೆ ಬಗ್ಗೆ ಮಾಹಿತಿ ನೀಡಿ 18ವರ್ಷದ ಒಳಗಿನ ಯಾವುದೇ ಮಕ್ಕಳಿಗೆ ದೈಹಿಕ, ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡುವುದು ಅಪರಾಧವಾಗಿದೆ ಎಂದರು, ಪುತ್ತೂರು

ಕಬಕ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಮಾಸೋತ್ಸವ | ಮಾಹಿತಿ ಮತ್ತು ಜಾಥಾ ಕಾರ್ಯಕ್ರಮ Read More »

ಅಂತರ್ ವಿಶ್ವವಿದ್ಯಾಲಯ ವೈಟ್‌ ಲಿಫ್ಟಿಂಗ್‌ ಸ್ಪರ್ಧೆ : ಫಿಲೋಮಿನಾ ಕಾಲೇಜಿನ ಸ್ಪಂದನ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನ ದ್ವಿತೀಯ ಬಿಎಸ್ಸಿ ಯ ಸ್ಪಂದನ 2024-25ನೇ ಸಾಲಿನ ದಕ್ಷಿಣ ವಲಯ ಅಂತರ ವಿಶ್ವವಿದ್ಯಾನಿಲಯ ವೈಟ್‌ ಲಿಫ್ಟಿಂಗ್ ಚಾಂಪಿಯನ್‌ ಶಿಪ್‌ನಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. ಆಂಧ್ರಪ್ರದೇಶದ ಗುಂಟೂರಿನ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದಲ್ಲಿ ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ಆಶ್ರಯದಲ್ಲಿ ಎರಡು ದಿನಗಳ ಕಾಲ ನಡೆದ ಸ್ಪರ್ಧೆಯ 45 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿರುವ ಸ್ಪಂದನಾ ಸಂತ ಫಿಲೋಮಿನಾದ ಮಹಿಳಾ ವೈಟ್  ಲಿಫ್ಟರ್ ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಮೊದಲ ಬಾರಿಗೆ ಪದಕವನ್ನು ಪಡೆದುಕೊಂಡಿದ್ದಾರೆ. ಕಾಲೇಜಿನ ಸಂಚಾಲಕ ರೆ.ಫಾ.ಲಾರೆನ್ಸ್ ಮಸ್ಕರೇನ್ಹಸ್, ಪ್ರಾಂಶುಪಾಲ  ರೆ. ಡಾ.ಆಂಟನಿ ಪ್ರಕಾಶ್ ಮೊಂತೇರೊ ಸೇರಿದಂತೆ ಕಾಲೇಜು ಅಧ್ಯಾಪಕ ವೃಂದ, ಅಧ್ಯಾಪಕೇತರ ವೃಂದ ಹಾಗೂ ವಿದ್ಯಾರ್ಥಿ ಅಭಿನಂದನೆ ಸಲ್ಲಿಸಿದ್ದಾರೆ.

ಅಂತರ್ ವಿಶ್ವವಿದ್ಯಾಲಯ ವೈಟ್‌ ಲಿಫ್ಟಿಂಗ್‌ ಸ್ಪರ್ಧೆ : ಫಿಲೋಮಿನಾ ಕಾಲೇಜಿನ ಸ್ಪಂದನ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಚಟುವಟಿಕೆಗಳ ಉದ್ಘಾಟನೆ

ಪುತ್ತೂರು: ವಿದ್ಯಾರ್ಥಿ ಜೀವನ ಬಂಗಾರವಾಗಲು ವಿದ್ಯಾರ್ಥಿಯಾಗಿ ಕಠಿಣ ಪರಿಶ್ರಮ ಅಗತ್ಯ.  ವೈಫಲ್ಯಗಳು ಯಶಸ್ಸಿನ ಭಾಗವೇ ಆಗಿರುವುದರಿಂದ ವೈಫಲ್ಯಗಳಿಗೆ ಸಿದ್ಧರಾಗಿರಿ ಮತ್ತು ಅದು ಯಶಸ್ಸನ್ನು ಸಾಧಿಸಲು ಸಹಕಾರಿ’ ಎಂದು ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ನಳಿನಾಕ್ಷಿ ಎ. ಎಸ್ ಹೇಳಿದರು. ಅವರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 2024-25ನೇ ಸಾಲಿನ ವಾಣಿಜ್ಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ರೆ. ಡಾl ಆ್ಯಂಟನಿ ಪ್ರಕಾಶ್ ಮೊಂತೇರೊ, ವಿದ್ಯಾರ್ಥಿಗಳು

ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಚಟುವಟಿಕೆಗಳ ಉದ್ಘಾಟನೆ Read More »

ಸಶಕ್ತ ರಾಷ್ಟ್ರ ನಿರ್ಮಾಣಕ್ಕೆ ಯುವ ಮನಸ್ಸುಗಳು ಒಂದಾಗಲಿ | ವಿವೇಕಾನಂದ ಕಾಲೇಜಿನ ನವಯುಗ -2024 ಕಾರ್ಯಕ್ರಮದಲ್ಲಿ ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ನನ್ನ ಇಂದಿನ ಬೆಳವಣಿಗೆಯ ಬಹುಪಾಲು ಯಶಸ್ಸು ಪುತ್ತೂರು ವಿವೇಕಾನಂದ ಕಾಲೇಜಿಗೆ ಸಲ್ಲಬೇಕು. ವ್ಯಕ್ತಿತ್ವ‌ ವಿಕಸನದ ಮೂಲಕ ಕಾಲೇಜು ಉತ್ತಮ ನಾಗರಿಕರನ್ನು ನೀಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹೇಳಿದರು. ಪುತ್ತೂರು ವಿವೇಕಾನಂದ ಕಾಲೇಜಿನ ನವಯುಗ 2024 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ವಿಧ್ಯಾಭ್ಯಾಸದ‌ ಜೊತೆ ಜೀವನದ ಗುರಿಯನ್ನು ಸಾಧಿಸಲು ಬೇಕಾದ ಮಾನಸಿಕ ದೃಢತೆಯನ್ನು ಬೆಳೆಸಿಕೊಳ್ಳಿ. ದೇಶದ ಭವಿಷ್ಯದ ಶಕ್ತಿ ನೀವು. ಹೊಸತನದ ಚಿಂತನೆಗಳು ನಿಮ್ಮ ಮೂಲಕ ದೇಶಕ್ಕೆ ದೊರೆಯುವಂತಾಗಲಿ

ಸಶಕ್ತ ರಾಷ್ಟ್ರ ನಿರ್ಮಾಣಕ್ಕೆ ಯುವ ಮನಸ್ಸುಗಳು ಒಂದಾಗಲಿ | ವಿವೇಕಾನಂದ ಕಾಲೇಜಿನ ನವಯುಗ -2024 ಕಾರ್ಯಕ್ರಮದಲ್ಲಿ ಕಿಶೋರ್ ಕುಮಾರ್ ಪುತ್ತೂರು Read More »

ಕ್ಯಾಂಪ್ಕೋ ಪುತ್ತೂರು ಶಾಖೆಯ ನವೀಕೃತ ಕಚೇರಿ ಉದ್ಘಾಟನೆ, ಸದಸ್ಯ ಬೆಳೆಗಾರರ ಸಭೆ

ಪುತ್ತೂರು: ಕ್ಯಾಂಪ್ಕೋ ಪುತ್ತೂರು ಶಾಖೆಯ ನವೀಕೃತ ಕಚೇರಿ ಉದ್ಘಾಟನೆ ಶ್ರೀ ಮಹಾಮಾಯಿ ದೇವಸ್ಥಾನದ ಬಳಿಯ ಕಟ್ಟಡದಲ್ಲಿ ನಡೆಯಿತು. ಶಾಖೆಯನ್ನು ಹಿರಿಯ ಸದಸ್ಯ ಬೆಳೆಗಾರರಾದ ಎನ್. ಎಸ್. ಹರಿಹರ್ ರಾವ್ ಕೊಡಿಪ್ಪಾಡಿ, ಸುರೇಶ್ ಬಲ್ನಾಡು, ಬಿ. ಟಿ. ನಾರಾಯಣ ಭಟ್, ಕೆ. ಟಿ. ಭಟ್ ಉದ್ಘಾಟಿಸಿದರು. ಸದಸ್ಯರ ಬೇಡಿಕೆಯಂತೆ ಸಣ್ಣ ಮಟ್ಟದ ಮಣ್ಣು ತಪಾಸಣೆ ಯಂತ್ರವನ್ನು ಕ್ಯಾಂಪ್ಕೊ ಖರೀದಿಸಿದ್ದು, ಈ ಮೊಬೈಲ್ ಸಾಯಿಲ್ ಟೆಸ್ಟ್ ಯಂತ್ರವನ್ನು ಪುತ್ತೂರಿನಲ್ಲಿ ಇರಿಸಿ ಬೆಳೆಗಾರರ ಬಳಕೆಗೆ ಲಭ್ಯವಾಗುವಂತೆ ಮಾಡಲಾಗುವುದು. 1.45 ಲಕ್ಷ ಸದಸ್ಯರಿದ್ದು,

ಕ್ಯಾಂಪ್ಕೋ ಪುತ್ತೂರು ಶಾಖೆಯ ನವೀಕೃತ ಕಚೇರಿ ಉದ್ಘಾಟನೆ, ಸದಸ್ಯ ಬೆಳೆಗಾರರ ಸಭೆ Read More »

error: Content is protected !!
Scroll to Top