ಕ್ಯಾಂಪಸ್‌

ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದೇ ನಮ್ಮ ಗುರಿಯಾಗಲಿ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪದವಿ ಪ್ರಧಾನ ಸಮಾರಂಭದಲ್ಲಿ ಡಾ. ವಿಶ್ವೇಶ್ವರಯ್ಯ ಪ್ರಕಾಶ್

ಪುತ್ತೂರು: ಭಾರತದಲ್ಲಿ ವಿದ್ಯಾಭ್ಯಾಸ ಪಡೆದು ವಿದೇಶಕ್ಕೆ ಹೋಗಿ ವೃತ್ತಿ ಜೀವನ ಸಾಗಿಸುವುದಕ್ಕಿಂತ ನಮ್ಮ ದೇಶದಲ್ಲೇ ಇದ್ದು ಉದ್ಯೋಗ ಪಡೆಯುವುದು ಉತ್ತಮ. ನಮ್ಮ ದೇಶವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯುವುದರಲ್ಲಿ ನಮ್ಮ ಪಾತ್ರವು ಮುಖ್ಯ ಎಂದು ಮೈಸೂರಿನ ಸಿ.ಎಫ್.ಟಿ.ಆರ್.ಐ.ನ ಪೂರ್ವ ನಿರ್ದೇಶಕ ಹಾಗೂ ಹೆಸರಾಂತ ವಿಜ್ಞಾನಿ ಪದ್ಮಶ್ರೀ ಡಾ.ವಿಶ್ವೇಶ್ವರಯ್ಯ ಪ್ರಕಾಶ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ 2021-22ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಇಂಜಿನಿಯರಿಂಗ್ ಮತ್ತು ಎಂಬಿಎ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ […]

ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದೇ ನಮ್ಮ ಗುರಿಯಾಗಲಿ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪದವಿ ಪ್ರಧಾನ ಸಮಾರಂಭದಲ್ಲಿ ಡಾ. ವಿಶ್ವೇಶ್ವರಯ್ಯ ಪ್ರಕಾಶ್ Read More »

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ’ಬಾಲಸ್ತುತಿ – 2023 ಉದ್ಘಾಟನೆ

ಪುತ್ತೂರು: ದೇಶ ತನ್ನ ಅಸ್ಮಿತೆಯನ್ನು ಉಳಿಸಿಕೊಂಡಿರುವುದು ಇಲ್ಲಿನ ಸಂಸ್ಕೃತಿ ಸಂಸ್ಕಾರಗಳಿಂದ. ಆದರೆ ಅಂತಹ ಸಂಸ್ಕೃತಿಯಿಂದ ನಾವು ನಿಧಾನವಾಗಿ ದೂರ ಸರಿಯುತ್ತಿರುವುದು ಆತಂಕಕಾರಿ ವಿಚಾರ. ಮನೆಯಲ್ಲಿ, ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಕೃತಿಯನ್ನು ಪರಿಚಯಿಸುವ ಕಾರ್ಯ ನಿರಂತರವಾಗಿ ನಡೆಯಬೇಕಿದೆ. ಹಿಂದೂ ಧಾರ್ಮಿಕ ಶ್ಲೋಕಗಳನ್ನು ಮಕ್ಕಳು ನಿತ್ಯವೂ ಉಚ್ಚರಿಸುವಂತೆ ಮಾಡಬೇಕಿದೆ ಎಂದು ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತದ ಮಾತೃ ಸುರಕ್ಷಾ ಪ್ರಮುಖ್ ಬಡೆಕ್ಕಿಲ ಗಣರಾಜ ಭಟ್ ಹೇಳಿದರು. ಅವರು ನಗರದ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ ಇ ವಿದ್ಯಾಲಯದ ವತಿಯಿಂದ ಆಯೋಜಿಸಲಾದ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ’ಬಾಲಸ್ತುತಿ – 2023 ಉದ್ಘಾಟನೆ Read More »

ಸಂತ ಫಿಲೋಮಿನಾ ಕಾಲೇಜಿಗೆ ಮ್ಯಾನೇಜ್‌ಮೆಂಟ್‌  ಫೆಸ್ಟ್ ನಲ್ಲಿ ಸಮಗ್ರ ಪ್ರಶಸ್ತಿ

ಪುತ್ತೂರು: ಮಂಗಳೂರಿನ ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ಆಯೋಜಿಸಲಾದ ರಾಷ್ಟ್ರಮಟ್ಟದ ಮ್ಯಾನೇಜ್‌ಮೆಂಟ್‌ ಫೆಸ್ಟ್ʼ ಸ್ಪಿನೌಟ್-2023ʼ ನಲ್ಲಿ ಸಂತ ಫಿಲೋಮಿನಾ ಕಾಲೇಜಿನ ಬಿಬಿಎ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ತೃತೀಯ ಬಿಬಿಎಯ ಕೃಪಾಲಿ ರೈ ಹಾಗೂ ದ್ವಿತೀಯ ಬಿಬಿಎ ಯ ಭವಿಷ್ಯ ರೈ ಮಾರ್ಕೆಟಿಂಗ್‌ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದಾರೆ. ತೃತೀಯ ಬಿಬಿಎಯ ಆದಿತ್ಯ ಡೋಂಗ್ರೆ ಸ್ಪರ್ಧೆಯ ಬೆಸ್ಟ್‌ ಮ್ಯಾನೇಜರ್‌ ಆಗಿ ಹೊರಹೊಮ್ಮಿದ್ದಾರೆ.  ಇದರೊಂದಿಗೆ ತಂಡವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿದೆ. ಪ್ರಶಸ್ತಿ ವಿಜೇತ ತಂಡದಲ್ಲಿ ತೃತೀಯ ಬಿಬಿಎಯ ಲೋಕೇಂದರ್‌

ಸಂತ ಫಿಲೋಮಿನಾ ಕಾಲೇಜಿಗೆ ಮ್ಯಾನೇಜ್‌ಮೆಂಟ್‌  ಫೆಸ್ಟ್ ನಲ್ಲಿ ಸಮಗ್ರ ಪ್ರಶಸ್ತಿ Read More »

ಮಂಗಳೂರು ವಿಶ್ವವಿದ್ಯಾನಿಲಯ ಎಂ.ಎ ಪರೀಕ್ಷೆಯಲ್ಲಿ ಪವನ.ಕೆ ತೃತೀಯ ರ್ಯಾಂಕ್

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯದ 2021-22ನೇ ಸಾಲಿನ ಹಿಂದಿ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಬೆಳ್ಳಾರೆಯ ಪವನ.ಕೆ 8.25 ಸಿಜಿಪಿಎಯೊಂದಿಗೆ ತೃತೀಯ ರ್ಯಾಂಕ್ ಗಳಿಸಿದ್ದಾರೆ. ಪ್ರಸ್ತುತ ವಿವೇಕಾನಂದ ಪದವಿ (ಸ್ವಾಯುತ್ತ) ಕಾಲೇಜಿನಲ್ಲಿ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾಗಿಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಪದ್ಮನಾಭ ನಾಯಕ್ ಮತ್ತು ಶ್ರೀಮತಿಯವರ ಪುತ್ರಿಯಾಗಿದ್ದು, ಗಣೇಶ್ ಪ್ರಸಾದ್ ನಾಯಕ್‌ರವರ ಪತ್ನಿ.

ಮಂಗಳೂರು ವಿಶ್ವವಿದ್ಯಾನಿಲಯ ಎಂ.ಎ ಪರೀಕ್ಷೆಯಲ್ಲಿ ಪವನ.ಕೆ ತೃತೀಯ ರ್ಯಾಂಕ್ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಜ್ಞಾನ ವೇದಿಕೆ ಕಾರ್ಯಕ್ರಮಗಳ ಉದ್ಘಾಟನೆ, ಅತಿಥಿ ಉಪನ್ಯಾಸ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವಿಜ್ಞಾನ ವೇದಿಕೆ ಆಶ್ರಯದಲ್ಲಿ ವಿಜ್ಞಾನ ವೇದಿಕ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಅತಿಥಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಪುತ್ತೂರಿನ ದಂತ ವೈದ್ಯ ಡಾ| ಎಲ್‌. ಕೃಷ್ಣಪ್ರಸಾದ್‌ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ವಂ|ಡಾ| ಆಂಟನಿ ಪ್ರಕಾಶ್‌ ಮೊಂತೆರೊ ಅಧ್ಯಕ್ಷತೆ ವಹಿಸಿ ಮಾತನಾಡಿ, ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕ್ಯಾಂಪಸ್‌ ನಿರ್ದೇಶಕ ವಂ| ಸ್ಟ್ಯಾನಿ ಪಿಂಟೋ ಶುಭ ಹಾರೈಸಿದರು. ಬಳಿಕ ಡಾ.ಎಲ್‌ ಕೃಷ್ಣಪ್ರಸಾದ್‌ʼದಂತ ವೈದ್ಯಕೀಯ ಮತ್ತು ರಸಾಯನ ಶಾಸ್ತ್ರ

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಜ್ಞಾನ ವೇದಿಕೆ ಕಾರ್ಯಕ್ರಮಗಳ ಉದ್ಘಾಟನೆ, ಅತಿಥಿ ಉಪನ್ಯಾಸ Read More »

ಪುಣ್ಚಪ್ಪಾಡಿ ಶಾಲೆಯಲ್ಲಿ ಬಣ್ಣದ ಬಣ್ಣ ಮಕ್ಕಳ ರಂಗ ಶಿಬಿರಕ್ಕೆ ಚಾಲನೆ | ಹೊಸತನದ ಹುಡುಕಾಟದ ಕಲಿಕೆಯೇ ಇಂದಿನ ಅಗತ್ಯ : ಕಲಾನಿಧಿ ಗೋಪಾಡ್ಕರ್

ಪುತ್ತೂರು: ಹೊಸತನದ ಹುಡುಕಾಟದ ಕಲಿಕೆಯೇ ಇಂದಿನ ಅಗತ್ಯ ಎಂದು ಕರ್ನಾಟಕದ ಹಿರಿಯ ಶೈಕ್ಷಣಿಕ ಚಿಂತಕ ಕಲಾ ನಿಧಿ ಗೋಪಾಡ್ಕರ್ ಮಂಗಳೂರು ಹೇಳಿದರು. ಅವರು ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ,  ಪುತ್ತೂರು ಕ್ಷೇತ್ರ ಸಂಪನ್ಮೂಲ ಕೇಂದ್ರ, ಸಂಯುಕ್ತ ಆಶ್ರಯದಲ್ಲಿ ಪುಣ್ಚಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ  ಪುಣ್ಚಪ್ಫಾಡಿ ಇಲ್ಲಿ ನಡೆದ ಮೂರು ದಿನಗಳ ಮಕ್ಕಳರಂಗ ಶಿಬಿರ ಬಣ್ಣದ ಬಣ್ಣವನ್ನು ಉದ್ಘಾಟಿಸಿ ಮಾತನಾಡಿದರು. ಕಲಿಕೆ

ಪುಣ್ಚಪ್ಪಾಡಿ ಶಾಲೆಯಲ್ಲಿ ಬಣ್ಣದ ಬಣ್ಣ ಮಕ್ಕಳ ರಂಗ ಶಿಬಿರಕ್ಕೆ ಚಾಲನೆ | ಹೊಸತನದ ಹುಡುಕಾಟದ ಕಲಿಕೆಯೇ ಇಂದಿನ ಅಗತ್ಯ : ಕಲಾನಿಧಿ ಗೋಪಾಡ್ಕರ್ Read More »

ಏ.8 : ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರದಾನ ಸಮಾರಂಭ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರಧಾನ ಕಾರ್ಯಕ್ರಮ ಸಮಾವರ್ತನ ಸಮಾರಂಭ ಏ.8 ರಂದು ಕಾಲೇಜಿನ ಕೇಶವ ಸಂಕಲ್ಪ ಸಭಾ ಭವನದಲ್ಲಿ ನಡೆಯಲಿದೆ. 2021-22ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್ ಮತ್ತು ಎಂಬಿಎ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದವೀಧರರಾದ ಅರ್ಹ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಗುತ್ತದೆ. ಪ್ರತಿ ವಿಭಾಗದಲ್ಲಿ ಶೈಕ್ಷಣಿಕವಾಗಿ ಉನ್ನತ ಸಾಧನೆಯನ್ನು ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಗುವುದು. ಬೆಳಿಗ್ಗೆ 9.30

ಏ.8 : ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರದಾನ ಸಮಾರಂಭ Read More »

ಏ.6 ರಿಂದ 8 : ಪುಣ್ಚಪ್ಪಾಡಿ  ಶಾಲೆಯಲ್ಲಿ ಬಣ್ಣದ ಬಣ್ಣ ಮಕ್ಕಳ ಶಿಬಿರ | ಹಿರಿಯ ಶಿಕ್ಷಣ ಚಿಂತಕ ಕಲಾನಿಧಿ ಗೋಪಾಡ್ಕರ್ ಅವರಿಂದ ಉದ್ಘಾಟನೆ

ಪುತ್ತೂರು : ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದ.ಕ ಜ.ಪಂ ಕ್ಷೇತ್ರ ಶಿಕ್ಷಣಾಧಿಕಾರಿ ಯವರ ಕಚೇರಿ ಪುತ್ತೂರು ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪುಣ್ಚಪ್ಪಾಡಿ ಸಂಯುಕ್ತ ಆಶ್ರಯದಲ್ಲಿ ಬಣ್ಣದ ಬಣ್ಣ ಎಂಬ ವಿಶಿಷ್ಟ ಮಕ್ಕಳ ಶಿಬಿರ ಏ.6 ರಿಂದ 8ರ ತನಕ ಪುಣ್ಚಪ್ಪಾಡಿ  ಶಾಲೆಯಲ್ಲಿ ನಡೆಯಲಿದೆ. ಕರ್ನಾಟಕದ ಹಿರಿಯ ಶಿಕ್ಷಣ ಚಿಂತಕ, ಮಂಗಳೂರು ಸ್ವರೂಪ ಅಧ್ಯಯನ ಕೇಂದ್ರದ ಸಂಚಾಲಕ ಕಲಾನಿಧಿ ಗೋಪಾಡ್ಕರ್ ಉದ್ಘಾಟಿಸಲಿದ್ದು ಹಿರಿಯ ರಂಗ ಲೇಖಕ,

ಏ.6 ರಿಂದ 8 : ಪುಣ್ಚಪ್ಪಾಡಿ  ಶಾಲೆಯಲ್ಲಿ ಬಣ್ಣದ ಬಣ್ಣ ಮಕ್ಕಳ ಶಿಬಿರ | ಹಿರಿಯ ಶಿಕ್ಷಣ ಚಿಂತಕ ಕಲಾನಿಧಿ ಗೋಪಾಡ್ಕರ್ ಅವರಿಂದ ಉದ್ಘಾಟನೆ Read More »

ಶೇ. 80ರಷ್ಟು ಜನರಿಗೆ ಹಲ್ಲಿನ ಸಮಸ್ಯೆ | ದಂತ ಚಿಕಿತ್ಸಾ ಶಿಬಿರದಲ್ಲಿ ಡಾ. ಅರವಿಂದ್

ಪುತ್ತೂರು: ಸಮಾಜದಲ್ಲಿ ಶೇಕಡಾ 80ರಷ್ಟು ಜನ ಒಂದಲ್ಲ ಒಂದು ರೀತಿಯ ಹಲ್ಲಿನ ಸಮಸ್ಯೆಯಿಂದ ಬಳಲುತ್ತಾರೆ. ಆದರೆ ಅದು ತೀವ್ರತೆಯ ಮಟ್ಟಕ್ಕೆ ತಲಪುವವರೆಗೆ ಸುಮ್ಮನಿರುತ್ತಾರೆ ಎಂದು ಸುಳ್ಯದ ಕೆವಿಜಿ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ಡಾ.ಅರವಿಂದ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎನ್‌ಎಸ್‌ಎಸ್ ಹಾಗೂ ಯೂತ್ ರೆಡ್ ಕ್ರಾಸ್ ಘಟಕ, ರೋಟರಿ ಕ್ಲಬ್ ಪುತ್ತೂರು ಪೂರ್ವ ಮತ್ತು ಸುಳ್ಯದ ಕೆವಿಜಿ ದಂತ ವೈದ್ಯಕೀಯ ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ

ಶೇ. 80ರಷ್ಟು ಜನರಿಗೆ ಹಲ್ಲಿನ ಸಮಸ್ಯೆ | ದಂತ ಚಿಕಿತ್ಸಾ ಶಿಬಿರದಲ್ಲಿ ಡಾ. ಅರವಿಂದ್ Read More »

ಪ್ರೊ. ಶ್ರೀಕೃಷ್ಣ ಭಟ್ ಅರ್ತಿಕಜೆಯವರೊಂದಿಗೆ ಶಿಷ್ಯಮಿಲನ

ಪುತ್ತೂರು: ಪುತ್ತೂರಿಗೆ ಆಗಮಿಸಿದ ಪ್ರೊ. ಶ್ರೀಕೃಷ್ಣ ಭಟ್ ಅರ್ತಿಕಜೆಯವರೊಂದಿಗೆ ಪುತ್ತೂರಿನ ಭಾಗದ ಅವರ ಶಿಷ್ಯಂದಿರ ಸುಮಧುರ ನೆನಪುಗಳ ಶಿಷ್ಯ ಮಿಲನ ಕಾರ್ಯಕ್ರಮ ಅನುರಾಗ ವಠಾರದಲ್ಲಿ ನಡೆಯಿತು. ಮದರಾಸು ವಿಶ್ವವಿದ್ಯಾಲಯದ ಕನ್ನಡ ವಿಭಾಗ ಎನ್ನುವಾಗ ಕನ್ನಡಿಗರಿಗೆ ಪ್ರೊ. ಮರಿಯಪ್ಪ ಭಟ್ಟ, ಪ್ರೊ. ಕುಶಾಲಪ್ಪ ಗೌಡ, ಪ್ರೊ. ಶ್ರೀಕೃಷ್ಣ ಭಟ್ ಅರ್ತಿಕಜೆ ಈ ಹೆಸರುಗಳು ಸ್ಮರಣೆಗೆ ಬಂದು ಹೋಗುತ್ತವೆ. ಯಾಕೆಂದರೆ ಅವರುಗಳು ಬರೀ ಪಾಠ ಮಾಡಿದವರಲ್ಲ. ಆದರಾಚೆಗೆ ನಿಂತು ವಿದ್ಯಾರ್ಥಿಗಳನ್ನು ಮದರಾಸಿನಲ್ಲಿ ನೋಡಿ ಕೊಂಡವರು, ಸಾಕಿದವರು, ಬೆಳೆಸಿದವರು. ವಿದ್ಯಾರ್ಥಿಗಳ ಜೊತೆಗೆ

ಪ್ರೊ. ಶ್ರೀಕೃಷ್ಣ ಭಟ್ ಅರ್ತಿಕಜೆಯವರೊಂದಿಗೆ ಶಿಷ್ಯಮಿಲನ Read More »

error: Content is protected !!
Scroll to Top