ಕ್ಯಾಂಪಸ್‌

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಡಿ. 23ರಂದು ವಿದ್ಯಾಚೇತನ ಆಡಿಟೋರಿಯಂನಲ್ಲಿನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಸಂಸ್ಥೆಯ ಸಂಚಾಲಕ ಸೀತಾರಾಮ ರೈ ಸವಣೂರು ಮಾತನಾಡಿ, ಕಲಿತ ಶಾಲೆಗೆ ಕೊಡುಗೆ ನೀಡುವುದರಿಂದ ಸಮಾಜಕ್ಕೆ ಉತ್ತಮ ಸಂದೇಶ ರವಾನಿಸಿದಂತಾಗುತ್ತದೆ. ಅಲ್ಲದೇ, ಹಿರಿಯ ವಿದ್ಯಾರ್ಥಿಗಳು ಶಾಲೆಗೆ ಮತ್ತೊಮ್ಮೆ ಬಂದು, ಕಾರ್ಯಕ್ರಮ ಆಯೋಜಿಸುವುದರಿಂದ ವಿದ್ಯಾರ್ಥಿಗಳಿಗೆ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಿದಂತಾಗುತ್ತದೆ ಎಂದರು.ಇದೇ ಸಂದರ್ಭ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಧ್ರುವ ಮುಂದೋಡಿ, ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್ […]

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಆಪ್ಟಮ್‌ ಕಂಪನಿಯ ಕ್ಯಾಂಪಸ್‌ ನೇಮಕಾತಿ ತರಬೇತಿ ಸಮಾರೋಪ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವೃತ್ತಿ ಮಾರ್ಗದರ್ಶನ ಹಾಗೂ ನೇಮಕಾತಿ ಕೋಶ ಮತ್ತುಆಂತರಿಕ ಗುಣಮಟ್ಟ ಭರವಸೆ ಕೋಶಗಳ ಆಶ್ರಯದಲ್ಲಿ ಯುನೈಟೆಡ್‌ ಸ್ಟೇಟ್ಸ್‌ ಮೂಲದ ಬಹುರಾಷ್ಟ್ರೀಯ ಹೆಲ್ತ್‌ ಕೇರ್‌ ಮತ್ತು ಇನ್ಶೂರೆನ್ಸ್ ಕಂಪನಿ ಆಪ್ಟಮ್‌ನ ಮೆಡಿಕಲ್‌ ಕೋಡರ್‌ ಹುದ್ದೆಗಳಿಗಾಗಿ ನಡೆದ ನೇಮಕಾತಿ ತರಬೇತಿಯ ಸಮಾರೋಪ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆ್ಯಂಟನಿ ಪ್ರಕಾಶ್‌ ಮೊಂತೆರೊ ಮಾತನಾಡಿ, ಯಾವುದೇ ಕಾರ್ಯದಲ್ಲಿ ನಾವು ಪ್ರಾಮಾಣಿಕ ಪ್ರಯತ್ನಪಟ್ಟರೆ ಯಶಸ್ಸು ನಿಶ್ಚಿತ. ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸುವುದು ಮಾತ್ರವಲ್ಲದೆ, ಉದ್ಯೋಗಕ್ಕಾಗಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಆಪ್ಟಮ್‌ ಕಂಪನಿಯ ಕ್ಯಾಂಪಸ್‌ ನೇಮಕಾತಿ ತರಬೇತಿ ಸಮಾರೋಪ Read More »

ಡಿ. 24: ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಸಂವಾದ, ಡಾ.ಗುರುರಾಜ ಕರಜಗಿ ಉಪನ್ಯಾಸ

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಡಿ. ೨೪ರಂದು ಫ್ಯಾಕಲ್ಟಿ ಡೆವಲಪ್‌ಮೆಂಟ್ ಕಾರ್ಯಕ್ರಮ ಹಾಗೂ ಹೆತ್ತವರೊಂದಿಗೆ ಸಂವಾದ ನಡೆಯಲಿದೆ. ಅಂತಾರಾಷ್ಟ್ರೀಯ ತರಬೇತುದಾರ, ಶಿಕ್ಷಣ ತಜ್ಞ ಡಾ. ಗುರುರಾಜ ಕರಜಗಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಬೆಳಗ್ಗೆ 9ಕ್ಕೆ ಡಾ.ಕರಜಗಿ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸುವರು. ತದನಂತರ 10.30ರಿಂದ 12.30ರ ವರೆಗೆ ಶಿಕ್ಷಕರೊಂದಿಗೆ ಸಂವಾದ ನಡೆಸಲಿದ್ದಾರೆ. ಅಪರಾಹ್ನ 1.30ರಿಂದ ಹೆತ್ತವರೊಂದಿಗೆ ಡಾ. ಗುರುರಾಜ ಕರಜಗಿ ಸಂವಾದ ನಡೆಸಲಿದ್ದು, ಸಾರ್ವಜನಿಕರಿಗೂ ಮುಕ್ತ ಅವಕಾಶ ಕಲ್ಪಿಸಿಕೊಡಲಾಗಿದೆ.

ಡಿ. 24: ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಸಂವಾದ, ಡಾ.ಗುರುರಾಜ ಕರಜಗಿ ಉಪನ್ಯಾಸ Read More »

ನೀವು ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆಯುಳ್ಳವರೇ? ಹಾಗಾದರೆ ಮ್ಯಾನೇಜರ್, ಸೇಲ್ಸ್‍ ಎಕ್ಸಿಕ್ಯೂಟಿವ್, ಅಕೌಂಟೆಂಟ್ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ಪುತ್ತೂರು: ರಾಜ್ಯದ ಪ್ರತಿಷ್ಠಿತ ಕಂಪೆನಿಯೊಂದರಲ್ಲಿ ಮ್ಯಾನೇಜರ್, ಸೇಲ್ಸ್ ಎಕ್ಸಿಕ್ಯೂಟಿವ್, ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕದಾದ್ಯಂತ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಕೆಲಸ ನಿರೀಕ್ಷೆಯಲ್ಲಿರುವ ಯುವಕರಿಗೆ ಇದು ಸುವರ್ಣಾವಕಾಶ. 21ರಿಂದ 27 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. 15 ಸಾವಿರ ರೂ. ಮೇಲ್ಪಟ್ಟ ವೇತನದೊಂದಿಗೆ ಆಹಾರ, ವಸತಿ ವ್ಯವಸ್ಥೆ ನೀಡಲಾಗುವುದು. ಮಾಹಿತಿಗಾಗಿ ಸಂಪರ್ಕಿಸಿ: 8904877721,7204977721

ನೀವು ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆಯುಳ್ಳವರೇ? ಹಾಗಾದರೆ ಮ್ಯಾನೇಜರ್, ಸೇಲ್ಸ್‍ ಎಕ್ಸಿಕ್ಯೂಟಿವ್, ಅಕೌಂಟೆಂಟ್ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ Read More »

ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ಅಕ್ಷಯ ಎಜುಕೇಷನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟಿನ ಸಂಪ್ಯ ಅಕ್ಷಯ ಕಾಲೇಜಿನ ತೃತೀಯ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಡಿ. 11ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಬೆಳ್ಳಾರೆ ಸ.ಪ.ಪೂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ.ವಿ. ಸೂರ್ಯನಾರಾಯಣ ಅವರು ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು ಮಾತನಾಡಿ, ಕಾಲೇಜಿನಿಂದ ತೇರ್ಗಡೆ ಹೊಂದಿ ಹೊರಹೋಗುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಕೆಲಸ ಪಡೆದುಕೊಂಡಿರುವುದು ಸಂತಸದ ವಿಷಯ. ಇದು ವೃತ್ತಿಪರ ಪದವಿಯ ಮೌಲ್ಯವನ್ನು ಮತ್ತಷ್ಟು ಹೆಚ್ಚಿಸಿದೆ

ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ Read More »

ಅಂಬಿಕಾ ಪದವಿಪೂರ್ವ ವಿದ್ಯಾಲಯ ವಾಣಿಜ್ಯ ವಿದ್ಯಾರ್ಥಿಗಳಿಂದ ಕ್ಯಾಂಪ್ಕೋ ಭೇಟಿ

ಚಾಕಲೇಟ್ ಉತ್ಪಾದನೆ ಹಾಗೂ ಪ್ಯಾಕೇಜಿಂಗ್ ಬಗೆಗೆ ಸವಿವರ ವೀಕ್ಷಣೆ ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ವಿದ್ಯಾಲಯದ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ‘ಕೈಗಾರಿಕಾ ಭೇಟಿ’ ಕಾರ್ಯಕ್ರಮ ನಡೆಯಿತು. ಪದವಿ ಪೂರ್ವ ವಾಣಿಜ್ಯ ವಿದ್ಯಾರ್ಥಿಗಳು ಕೆಮ್ಮಿಂಜೆಯ ಕ್ಯಾಂಪ್ಕೋ ಚಾಕಲೇಟು ತಯಾರಿಕಾ ಘಟಕಕ್ಕೆ ಭೇಟಿ ನೀಡಿದರು. ಕ್ಯಾಂಪ್ಕೋ ಚಾಕಲೇಟು ತಯಾರಿಕಾ ಘಟಕದ ಆಡಳಿತ ವಿಭಾಗದ ರಾಧೇಶ್ ಮಾಹಿತಿ ನೀಡಿ, ಕ್ಯಾಂಪ್ಕೋ ಮೂಲಕ ಕೃಷಿಕರಿಂದ ಕೋಕೋ ಖರೀದಿಸಿ ಅದನ್ನು ಸಂಸ್ಕರಣೆ ಮಾಡಿ ಕೋಕೋ ಪೌಡರ್ ಹಾಗೂ ಕೋಕೋ ಬಟರ್

ಅಂಬಿಕಾ ಪದವಿಪೂರ್ವ ವಿದ್ಯಾಲಯ ವಾಣಿಜ್ಯ ವಿದ್ಯಾರ್ಥಿಗಳಿಂದ ಕ್ಯಾಂಪ್ಕೋ ಭೇಟಿ Read More »

error: Content is protected !!
Scroll to Top