ಕ್ಯಾಂಪಸ್‌

ಎನ್ ಎಸ್ ಎಸ್ ಬದುಕುವ ಶಿಕ್ಷಣವನ್ನು ನೀಡುತ್ತದೆ : ಸಂಜೀವ ಮಠಂದೂರು | ಬೆಟ್ಟಂಪಾಡಿ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರ

ಪುತ್ತೂರು: ವಿದ್ಯಾರ್ಥಿಗಳಿಗೆ ಬದುಕುವ ಶಿಕ್ಷಣವನ್ನು ಎನ್ಎಸ್ಎಸ್ ನೀಡುವುದರ ಜತೆಗೆ ಉತ್ತಮ ನಾಯಕರನ್ನು ಸೃಷ್ಟಿಸುವ ಕಾರ್ಯವನ್ನು ಮಾಡುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಇಂತಹ ಶಿಬಿರದ ಪ್ರಯೋಜನವನ್ನು ಪಡೆಯಬೇಕು ಎಂದು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ, ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ನಿಡ್ಪಳ್ಳಿ ಗ್ರಾಮದ ಮುಂಡೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು. ಶಿಬಿರಾಧಿಕಾರಿ ಹರಿಪ್ರಸಾದ್ ಎಸ್, ಪ್ರಾಸ್ತಾವಿಕವಾಗಿ ಮಾತನಾಡಿ, ಎನ್ಎಸ್ಎಸ್ […]

ಎನ್ ಎಸ್ ಎಸ್ ಬದುಕುವ ಶಿಕ್ಷಣವನ್ನು ನೀಡುತ್ತದೆ : ಸಂಜೀವ ಮಠಂದೂರು | ಬೆಟ್ಟಂಪಾಡಿ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರ Read More »

ಮಂಗಳೂರು ವಿ.ವಿ ಫ್ಯಾಶನ್ ಡಿಸೈನಿಂಗ್ ಪದವಿ ಫಲಿತಾಂಶ ಪ್ರಕಟ | ಅಕ್ಷಯ ಕಾಲೇಜಿಗೆ 2 ರ‍್ಯಾಂಕ್, ಶೇ. 100 ಫಲಿತಾಂಶ

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯದ 2022-23ನೇ ಸಾಲಿನ ಫ್ಯಾಶನ್ ಡಿಸೈನಿಂಗ್ ಪದವಿ ರ‍್ಯಾಂಕ್ ಪ್ರಕಟಗೊಂಡಿದ್ದು, ಸಂಪ್ಯದಲ್ಲಿ ಅಕ್ಷಯ ಎಜ್ಯುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಕಾರ್ಯಚರಿಸುತ್ತಿರುವ ಅಕ್ಷಯ ಕಾಲೇಜಿನ ಫ್ಯಾಶನ್ ಡಿಸೈನ್ ಪದವಿಯ ಪ್ರಥಮ ಬ್ಯಾಚ್ ನಲ್ಲೇ ಪ್ರಥಮ ಹಾಗೂ ದ್ವಿತೀಯ ಎರಡು ರ‍್ಯಾಂಕ್ ಲಭಿಸಿದೆ. ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 100 ಫಲಿತಾಂಶ ಲಭಿಸಿದೆ. ಕಾಲೇಜಿನ ಸ್ವರ್ಣಜ್ಯೋತ್ಸ್ನ ಎಂ. (ಬಂಟ್ವಾಳ ತಾಲೂಕಿನ ಮಾಣಿ ಜನತಾ ಕಾಲನಿ ದಿ.ಅಶೋಕ್ ಪೂಜಾರಿ ಹಾಗೂ ರಮಾ ದಂಪತಿ ಪುತ್ರಿ)

ಮಂಗಳೂರು ವಿ.ವಿ ಫ್ಯಾಶನ್ ಡಿಸೈನಿಂಗ್ ಪದವಿ ಫಲಿತಾಂಶ ಪ್ರಕಟ | ಅಕ್ಷಯ ಕಾಲೇಜಿಗೆ 2 ರ‍್ಯಾಂಕ್, ಶೇ. 100 ಫಲಿತಾಂಶ Read More »

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ | ದ.ಕ. ಜಿಲ್ಲೆಯಿಂದ 34,340 ವಿದ್ಯಾರ್ಥಿಗಳು 52 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ

ಪುತ್ತೂರು : ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ.ಈ ಹಿನ್ನಲೆಯಲ್ಲಿ ಜಿಲ್ಲೆ ಸೇರಿದಂತೆ ತಾಲೂಕಿನಲ್ಲಿ ಪ್ರತೀ ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆಗಳು ನಡೆದಿದೆ. ಮಾ.9 ರಿಂದ 29 ರ ತನಕ ಪರೀಕ್ಷೆ ನಡೆಯಲಿದ್ದು, ಮೌಲ್ಯ ನಿರ್ಣಯ ಮಂಡಳಿ ನಿರ್ದೇಶನದಂತೆ ಜಿಲ್ಲೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ದ.ಕ.ಜಿಲ್ಲೆಯಲ್ಲಿ ಹೊಸ ವಿದ್ಯಾರ್ಥಿಗಳು, ಖಾಸಗಿ ಹಾಗೂ ಪುನರಾವರ್ತಿ ಅಭ್ಯರ್ಥಿಗಳು ಸೇರಿದಂತೆ 34,340 ಮಂದಿ ಪರೀಕ್ಷೆಗೆ  ನೋಂದಾವಣೆ ಮಾಡಿಕೊಂಡಿದ್ದು, ಪರೀಕ್ಷೆ ಬರೆಯಲಿದ್ದಾರೆ. ದ.ಕ.ಜಿಲ್ಲೆಯಲ್ಲಿ ಒಟ್ಟು 52 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿ ಅಗತ್ಯ ಭದ್ರತೆ ಒದಗಿಸಲಾಗಿದೆ.

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ | ದ.ಕ. ಜಿಲ್ಲೆಯಿಂದ 34,340 ವಿದ್ಯಾರ್ಥಿಗಳು 52 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ Read More »

ಚಿಂತನೆಯ ವಿನ್ಯಾಸ ಮತ್ತು ಹೊಸತನದ ಪ್ರಾರಂಭ ಕುರಿತ ವಿಚಾರಗೋಷ್ಠಿ

ಪುತ್ತೂರು: ಪ್ರತಿಯೊಬ್ಬ ವಿದ್ಯಾರ್ಥಿಗೂ ವಿಭಿನ್ನವಾಗಿ ಆಲೋಚಿಸುವ ಶಕ್ತಿ ಇದೆ. ಈ ಚಿಂತನೆಗಳಿಗೆ ಮೂರ್ತ ರೂಪ ಕೊಡುವ ಮೂಲಕ ಅದನ್ನೊಂದು ವಿನ್ಯಾಸವನ್ನಾಗಿಸಿದರೆ ಹೊಸ ಹೊಸ ಉತ್ಪನ್ನಗಳು ಉದ್ಭವಿಸುವುದಕ್ಕೆ ಸಾಧ್ಯವಿದೆ ಎಂದು ಬೆಂಗಳೂರಿನ ವಿದ್ಯಾಕೋಶ ಫ್ರೈವೆಟ್ ಲಿಮಿಟೆಡ್ ಇದರ ಸ್ಥಾಪಕ ಹಾಗೂ ಐಐಎಸ್ಸಿ ಬೆಂಗಳೂರಿನ ಪ್ರಾಜೆಕ್ಟ್ ನೆಟ್‌ವರ್ಕ್ ವಿಭಾಗದ ಪೂರ್ವ ಮುಖ್ಯಸ್ಥ ಡಾ.ಅಶೋಕ್ ರಾವ್ ಹೇಳಿದರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲ ವಿಜ್ಞಾನ ವಿಭಾಗದ ಆಶ್ರಯದಲ್ಲಿ ನಡೆದ ಚಿಂತನೆ ಚಿಂತನೆಯ ವಿನ್ಯಾಸ ಮತ್ತು ಹೊಸತನದ ಪ್ರಾರಂಭ

ಚಿಂತನೆಯ ವಿನ್ಯಾಸ ಮತ್ತು ಹೊಸತನದ ಪ್ರಾರಂಭ ಕುರಿತ ವಿಚಾರಗೋಷ್ಠಿ Read More »

ಎನ್ಐಐಟಿ ಫೌಂಡೇಶನ್‍ನಿಂದ ಕೆಪಿಎಸ್ ಸಂಸ್ಥೆಗೆ ಟಿವಿ, ಪ್ರಿಂಟರ್, ಕ್ರೋಮ್ ಬುಕ್ ಕೊಡುಗೆ

ಪುತ್ತೂರು:  ಎಚ್‍ ಪಿ ಆಲ್ಫಾ ಆಕ್ಸಿಸಿಬಲ್ ಲರ್ನಿಂಗ್ ಫಾರ್ ಆಲ್ ಎಂಬ ಲಾಂಛನದಡಿ ಎನ್‍ಐಐಟಿ ಫೌಂಡೇಶನ್ ನವರಿಂದ ಕೆಪಿಎಸ್ ಸಂಸ್ಥೆಗೆ ಸುಮಾರು ಒಂದು ಲಕ್ಷ ಮೌಲ್ಯದ ಟಿವಿ , ಪ್ರಿಂಟರ್, ಕ್ರೋಮ್ ಬುಕ್ ಗಳನ್ನು ದಾನವಾಗಿ ನೀಡಿರುತ್ತಾರೆ. ಇದರ ಉದ್ಘಾಟನಾ ಸಮಾರಂಭವು ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು .ಎನ್‍ಐಐಟಿ ಫೌಂಡೇಶನ್ ಸೌತ್ ಜೋನ್ ಕಾರ್ಡಿನೇಟರ್ ವಿಕಾಸ್ ಮತ್ತು ಕ್ಲಸ್ಟರ್ ಕಾರ್ಡಿನೇಟರ್ ಕಿಶೋರ್ ಕುಮಾರ್ ಅತಿಥಿಗಳಾಗಿ ಭಾಗವಹಿಸಿದ್ದರು. ಹಿರಿಯ ಪದವೀಧರ ಸಹ ಶಿಕ್ಷಕಿ ಮಮತ ಕೆ ಎಸ್ ಸ್ವಾಗತಿಸಿ

ಎನ್ಐಐಟಿ ಫೌಂಡೇಶನ್‍ನಿಂದ ಕೆಪಿಎಸ್ ಸಂಸ್ಥೆಗೆ ಟಿವಿ, ಪ್ರಿಂಟರ್, ಕ್ರೋಮ್ ಬುಕ್ ಕೊಡುಗೆ Read More »

ಆನಡ್ಕ ಪ್ರಾಥಮಿಕ ಶಾಲೆಯಲ್ಲಿ ಸ್ಟಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ | ಉದ್ಘಾಟನೆ ನೆರವೇರಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಆನಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುದ್ಧ ಕುಡಿಯುವ ನೀತಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಮಂಗಳವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ ಮಾತನಾಡಿ, ಶಾಲೆಗಳನ್ನು ಆಧುನೀಕರಣಗೊಳಿಸುವ ನಿಟ್ಟಿನಲ್ಲಿ ಸ್ಟಾರ್ಟ್ ಕ್ಲಾಸ್, ಕುಡಿಯುವ ನೀರಿನ ಘಟಕ ನೀಡುವ ಕೆಲಸ ಆಗಿದೆ. ಜತೆಗೆ ಮಕ್ಕಳು ಮೊಬೈಲ್‍ ಫೋನ್‍ಗೆ ಬೇಗ ಹೊಂದಿಕೊಳ್ಳುತ್ತಾರೆ ಎಂಬ ಕಾರಣಕ್ಕೂ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಮಾಡಲಾಗಿದೆ ಎಂದ ಅವರು, ಮಕ್ಕಳ  ಬೆಳವಣಿಗೆಗೆ ಬೇಕಾದ ಮೊಟ್ಟೆ, ಚಿಕ್ಕಿ ಕೊಡುವ ಕೆಲಸ ಸರಕಾರ ಮಾಡುತ್ತಿದೆ

ಆನಡ್ಕ ಪ್ರಾಥಮಿಕ ಶಾಲೆಯಲ್ಲಿ ಸ್ಟಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ | ಉದ್ಘಾಟನೆ ನೆರವೇರಿಸಿದ ಶಾಸಕ ಸಂಜೀವ ಮಠಂದೂರು Read More »

ವಿವೇಕಾನಂದ ಕಾಲೇಜ್‍ ಆಫ್‍ ಇಂಜಿನಿಯರಿಂಗ್‍ ಎಂಡ್ ಟೆಕ್ನಾಲಜಿಯಲ್ಲಿ ಅಗ್ನಿ ಸುರಕ್ಷತಾ ಜಾಗೃತಿ ಕಾರ್ಯಕ್ರಮ

ಪುತ್ತೂರು: ಎಲ್ಲಾ ಬಗೆಯ ಬೆಂಕಿ ಅನಾಹುತಗಳಿಗೆ ನೀರು ಹಾಯಿಸುವುದೇ ಪರಿಹಾರವಲ್ಲ. ಬದಲಿಗೆ ವಿವಿಧ ರೀತಿಯ ನಿವಾರಕ ವಿಧಾನಗಳನ್ನು ಅನುಸರಿಸಬೇಕು ಎಂದು ಪುತ್ತೂರು ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಸುಂದರ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಏರ್ಪಡಿಸಲಾದ ಅಗ್ನಿ ಸುರಕ್ಷತೆಯ ಜಾಗೃತಿ ಕಾರ್ಯಕ್ರಮದಲ್ಲಿ ಮಾತಾಡಿದರು. ಹುಲ್ಲು ಕಟ್ಟಿಗೆ, ಎಣ್ಣೆ, ಅನಿಲ, ವಿದ್ಯುತ್ತಿನಿಂದ ಹಾಗೂ ಇನ್ನಿತರ ವಿಧಗಳಿಂದ ಬೆಂಕಿ ಸಂಭವಿಸಬಹುದು. ಸಂದರ್ಭಕ್ಕೆ ತಕ್ಕಂತೆ ಅದರ ನಿವಾರಣೆಗೆ ನೀರು, ಫೋಮ್ ಮಿಶ್ರಿತ ನೀರು ಹಾಗೂ ಇನ್ನಿತರ

ವಿವೇಕಾನಂದ ಕಾಲೇಜ್‍ ಆಫ್‍ ಇಂಜಿನಿಯರಿಂಗ್‍ ಎಂಡ್ ಟೆಕ್ನಾಲಜಿಯಲ್ಲಿ ಅಗ್ನಿ ಸುರಕ್ಷತಾ ಜಾಗೃತಿ ಕಾರ್ಯಕ್ರಮ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್ ನೋಂದಣಿ ಅಭಿಯಾನ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಆಯುಷ್ಮಾನ್ ಭಾರತ್ ಕಾರ್ಡ್ ನೋಂದಣಿ ಅಭಿಯಾನ ಕಾರ್ಯಕ್ರಮವು ನಡೆಯಿತು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ವಿಭಾಗದ ನಿರ್ದೇಶಕರಾದ ಡಾ. ಬಿ.ಕೆ. ರವೀಂದ್ರ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ  ಬನ್ನೂರು ಗ್ರಾಮ ಒನ್ ಕೇಂದ್ರದ ಅಶೋಕ್ ಮಾತನಾಡಿ,  ಆಯುಷ್ಮಾನ್ ಕಾರ್ಡ್ ಮಾಡುವ ವಿಧಾನ, ಅದರಿಂದಾಗುವ ಉಪಯೋಗಗಳೇನು ಎಂಬುದನ್ನು ವಿವರಿಸಿದ್ದಾರೆ. ಜೊತೆಗೆ ಬಡವರಿಗೆ ಆಧಾರ ಸ್ಥಂಭದಂತಿರುವ ಈ ಆಯುಷ್ಮಾನ್ ಭಾರತ್ ನ ಪ್ರಯೋಜನವನ್ನು ಪ್ರತಿಯೊಬ್ಬರೂ

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್ ನೋಂದಣಿ ಅಭಿಯಾನ Read More »

ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಳ್ಳುವ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ | ಬೊಳುವಾರಿನಲ್ಲಿ ಸರಕಾರಿ ಪ್ರಥಮದರ್ಜೆ ಕಾಲೇಜಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು : ಪುತ್ತೂರು: ಶಿಕ್ಷಣ ಪದ್ಧತಿಯಿಂದ ದೇಶದ ಚಿತ್ರಣ ಬದಲು ಮಾಡಲು ಸಾಧ್ಯವಿದ್ದು, ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಳ್ಳಬೇಕೆಂಬ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳಿಗೆ ಆಸಕ್ತಿ ಇರುವ ಕ್ಷೇತ್ರದಲ್ಲೇ ಅಭ್ಯಾಸ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ. ಐದು ಸರ್ಕಾರಿ ಪದವಿ ಕಾಲೇಜು ಹೊಂದಿರುವ ಏಕೈಕ ವಿಧಾನ ಸಭಾಕ್ಷೇತ್ರ ಪುತ್ತೂರು. ಅದರಲ್ಲೂ ಒಂದು ಮಹಿಳಾ ಕಾಲೇಜು ಇರುವುದು ವಿಶೇಷವಾಗಿದೆ. ಇಲ್ಲಿರುವ ಪ್ರಾಥಮಿಕ ಶಾಲೆಯನ್ನು ಉಳಿಸುವ ಜತೆಗೆ, ಜಾಗದ ಕಾನೂನು ಹೋರಾಟ ಮಾಡಿಯೇ ಸಿದ್ದ ಎಂದು ಪುತ್ತೂರು ಶಾಸಕ ಸಂಜೀವ

ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಳ್ಳುವ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ | ಬೊಳುವಾರಿನಲ್ಲಿ ಸರಕಾರಿ ಪ್ರಥಮದರ್ಜೆ ಕಾಲೇಜಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು Read More »

ಪ್ರೇರಣಾದಲ್ಲಿ ಐಎಎಸ್ ಉಚಿತ ಓರಿಯಂಟೇಷನ್ ಕೋರ್ಸ್

ಪುತ್ತೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಗೊಳಿಸಬೇಕು ಎನ್ನುವ ಉದ್ದೇಶದಿಂದ ಪುತ್ತೂರಿನ ಪ್ರೇರಣಾ ಸಂಸ್ಥೆಯಲ್ಲಿ ಮಾರ್ಚ್ 4ರಂದು ಐಎಎಸ್ ಉಚಿತ ಓರಿಯಂಟೇಷನ್ ತರಗತಿ ನಡೆಯಿತು. ಇಂಡಿಯನ್ ಕಾರ್ಪೋರೇಟ್ ಲಾ ಸರ್ವೀಸಿನ 2019ರ ಬ್ಯಾಚಿನ ಅಧಿಕಾರಿ ವೆಂಕಟ್ರಮಣ್ ಕಾವಾಡಿಕೇರಿ, ಐ.ಸಿ.ಎಲ್.ಎಸ್. ಅವರು ಸಂಪನ್ಮೂಲ ವ್ಯಕ್ತಿಯಾಗಿ, ಓರಿಯಂಟೇಷನ್ ತರಗತಿ ನಡೆಸಿಕೊಟ್ಟರು. ಪ್ರೇರಣಾದೊಂದಿಗೆ ಜೊತೆಯಾಗಿರುವ ಇಂಡಿಯಾ ಫೋರ್ ಐಎಎಸ್ ಸಂಸ್ಥೆ, ಐಎಎಸ್ ಆಕಾಂಕ್ಷಿಗಳಿಗೆ ತರಬೇತಿ ನೀಡಲಿದೆ. 140ಕ್ಕೂ ಅಧಿಕ ಐಎಎಸ್, ಕೆಎಎಸ್ ಅಧಿಕಾರಿಗಳನ್ನು ನೀಡಿರುವ ಪ್ರತಿಷ್ಠಿತ ಇಂಡಿಯ ಫೋರ್ ಐಎಎಸ್

ಪ್ರೇರಣಾದಲ್ಲಿ ಐಎಎಸ್ ಉಚಿತ ಓರಿಯಂಟೇಷನ್ ಕೋರ್ಸ್ Read More »

error: Content is protected !!
Scroll to Top