ಕ್ಯಾಂಪಸ್‌

ನಾಳೆ ನರಿಮೊಗರು ಸಾಂದೀಪನಿಯಲ್ಲಿ ಕ್ರೀಡೋತ್ಸವ, ವಾರ್ಷಿಕೋತ್ಸವ

ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಶಿಶುಮಂದಿರ, ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಹೊನಲು ಬೆಳಕಿನ ಕ್ರೀಡೋತ್ಸವ, ವಾರ್ಷಿಕೋತ್ಸವ ಜ. 4ರಂದು ಸಂಜೆ 5.15ಕ್ಕೆ ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆಯಲಿದೆ. ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್. ಜಯರಾಮ ಕೆದಿಲಾಯ ಅಧ್ಯಕ್ಷತೆ ವಹಿಸುವರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಕೆ. ಸುಧಾಕರ ಪುತ್ತೂರಾಯ, ಕ್ಷೇತ್ರ ಶಿಕ್ಷಣಾಧಿಕಾರಿ ಲೊಕೇಶ್ ಎಸ್.ಆರ್., ಬಾಗಲಕೋಟೆ ಮುಧೋಳದ ಕೃಷಿಕ, ಹಿತಚಿಂತಕ ಬಾಬು ಗೌಡ ಪಾಟೀಲ್, ಬೆಳ್ಳಾರೆ ಪೊಲೀಸ್ […]

ನಾಳೆ ನರಿಮೊಗರು ಸಾಂದೀಪನಿಯಲ್ಲಿ ಕ್ರೀಡೋತ್ಸವ, ವಾರ್ಷಿಕೋತ್ಸವ Read More »

ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಥ್ಲೆಟಿಕ್ ಚಾಂಪಿಯನ್ಶಿಪ್ಗೆ ಆಯ್ಕೆ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ 6 ವಿದ್ಯಾರ್ಥಿಗಳು ನೈರುತ್ಯ ವಲಯ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ಶಿಪ್ಗೆ ಆಯ್ಕೆಯಾಗಿದ್ದಾರೆ.ಜನವರಿ 9ರಿಂದ 12ರ ವರೆಗೆ ಚೆನ್ನೈನ ತಮಿಳ್ನಾಡು ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಈ ಕ್ರೀಡಾಕೂಟ ನಡೆಯಲಿದೆ. ತೃತೀಯ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಅಭಿರಂಜನ್ ಎಚ್. 100 ಮೀಟರ್ ಓಟ ಹಾಗೂ 4100 ಮೀ. ರಿಲೇ ಮತ್ತು ಕೀರ್ತಿರಾಜ್ ಕೆ.ಎಸ್. ಜಾವೆಲಿನ್ ಎಸೆತದಲ್ಲಿ, ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್

ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಥ್ಲೆಟಿಕ್ ಚಾಂಪಿಯನ್ಶಿಪ್ಗೆ ಆಯ್ಕೆ Read More »

ಅಜ್ಜಿಕಲ್ಲು ಶಾಲೆಯಲ್ಲಿ ಶಾಸಕರ ಹಾಗೂ ಎಂ.ಆರ್.ಪಿ.ಎಲ್ ಕೊಡುಗೆಗಳ ಅನಾವರಣ

ಪುತ್ತೂರು: ಅಜ್ಜಿಕಲ್ಲು ಏಕತಡ್ಕ ಹಿ.ಪ್ರಾ. ಶಾಲೆಯಲ್ಲಿ ಝೇಂಕಾರ ಮಕ್ಕಳ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಶಾಸಕರ ಅನುದಾನದಿಂದ ನೀಡಿದ ಕೊಡುಗೆ ಹಾಗೂ ಎಂ.ಆರ್.ಪಿ.ಎಲ್.ನ ಕೊಡುಗೆಗಳನ್ನು ಅನಾವರಣ ಮಾಡಲಾಯಿತು. ಸ್ಮಾರ್ಟ್ ಕ್ಲಾಸ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಸಂಜೀವ ಮಠಂದೂರು, ಸಮಾಜ ಹಾಗೂ ಸರಕಾರ ಪರಸ್ಪರ ಕೈ ಜೋಡಿಸಿದಾಗ ಇಂತಹ ಸಂಭ್ರಮ ಮೂಡಿಬರಲು ಸಾಧ್ಯ. ಮಕ್ಕಳನ್ನು ಪೋಷಿಸುವ ಕೆಲಸವನ್ನು ಸರಕಾರ ಮಾಡುತ್ತಿದೆ. ಸರಕಾರದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳುವ ಕೆಲಸ ಪೋಷಕರಿಂದ ಆಗಬೇಕು ಎಂದರು. ಎಂ.ಆರ್.ಪಿ.ಎಲ್.ನಿಂದ

ಅಜ್ಜಿಕಲ್ಲು ಶಾಲೆಯಲ್ಲಿ ಶಾಸಕರ ಹಾಗೂ ಎಂ.ಆರ್.ಪಿ.ಎಲ್ ಕೊಡುಗೆಗಳ ಅನಾವರಣ Read More »

ಶಾಸಕರ ಅನುದಾನದಿಂದ ಬಹಳಷ್ಟು ಅಭಿವೃದ್ಧಿ | ವೀರಮಂಗಲ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಸಮಾರಂಭದಲ್ಲಿ ಗ್ರಾ.ಪಂ. ಅಧ್ಯಕ್ಷೆ

ವೀರಮಂಗಲ ಮಾದರಿ ಶಾಲೆ ಒಂದು ಶಾಲೆ ಹೇಗಿದೆ ಎಂದು ಆ ಊರನ್ನು ನೋಡಿ ತಿಳಿದುಕೊಳ್ಳಬಹುದು. ವೀರಮಂಗಲ ಶಾಲೆಯ ಅಭಿವೃದ್ಧಿ ನೋಡಿದಾಗ, ಊರಿನ ಜನರ ಹೃದಯ ಶ್ರೀಮಂತಿಕೆಯನ್ನು ಅರಿತುಕೊಳ್ಳಬಹುದು. ಶಾಸಕನಾಗಿ ನಾನು ಅನುದಾನ ನೀಡಿರಬಹುದು. ಅದರ ಜೊತೆಗೆ ಊರಿನ ಜನರ ಕೊಡುಗೆಯೂ ಇದೆ. ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರು ನೀಡಿರುವ ಅನುದಾನಗಳನ್ನು ಬಳಸಿಕೊಂಡು ಬಹಳಷ್ಟು ಅಭಿವೃದ್ಧಿ ಕಾರ್ಯಗಳು ಶಾಲೆಯಲ್ಲಿ ಆಗಿದೆ ಎಂದು ನರಿಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಹೇಳಿದರು. ವೀರಮಂಗಲ ಹಿ.ಪ್ರಾ. ಶಾಲೆಯಲ್ಲಿ ಶಾಸಕ ಸಂಜೀವ

ಶಾಸಕರ ಅನುದಾನದಿಂದ ಬಹಳಷ್ಟು ಅಭಿವೃದ್ಧಿ | ವೀರಮಂಗಲ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಸಮಾರಂಭದಲ್ಲಿ ಗ್ರಾ.ಪಂ. ಅಧ್ಯಕ್ಷೆ Read More »

ಸರಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ : ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಇಂದು ಉನ್ನತ ಹುದ್ದೆಗಳಲ್ಲಿ ಇರುವವರೆಲ್ಲರೂ ಕನ್ನಡ ಮಾಧ್ಯಮದಿಂದಲೇ ಬಂದವರು. ಆದ್ದರಿಂದ ಕನ್ನಡ ಮಾಧ್ಯಮದ ಬಗ್ಗೆ ಕೀಳರಿಮೆ ಬೇಡ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಕಬಕ ಹಿ.ಪ್ರಾ. ಶಾಲೆಯಲ್ಲಿ ಶನಿವಾರ ನಡೆದ ವಾರ್ಷಿಕೋತ್ಸವ ಸಂದರ್ಭ ಸ್ಮಾರ್ಟ್ ಕ್ಲಾಸ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರಿ ಕನ್ನಡ ಮಾಧ್ಯಮಗಳು ಈ ನಾಡಿಗೆ ನೀಡಿರುವ ಕೊಡುಗೆ ಅಗಣಿತ. ಇಷ್ಟು ಕೊಡುಗೆ ನೀಡಿರುವ ಕನ್ನಡ ಶಾಲೆಗಳ ಬಗ್ಗೆ ಇಂದು ಕೀಳರಿಮೆ ಹುಟ್ಟಿಕೊಂಡಿರುವುದು ಬೇಸರದ ಸಂಗತಿ.

ಸರಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ : ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು Read More »

ವಿದ್ಯಾರಶ್ಮಿಯಲ್ಲಿ ವಿಜ್ಞಾನ ರಶ್ಮಿ

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿಜ್ಞಾನ ರಶ್ಮಿ ಕಾರ್ಯಕ್ರಮ ಡಿ. 31ರಂದು ವಿದ್ಯಾಚೇತನ ಅಡಿಟೋರಿಯಂನಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ, ವಿಜ್ಞಾನ ಪ್ರಯೋಗದ ಆಧಾರದಲ್ಲಿ ಬೆಳೆದು ಬಂದಿದೆ. ಆದ್ದರಿಂದ ಪ್ರಾಯೋಗಿಕ ಅಭ್ಯಾಸ ಮಾಡಿದರೆ ಮಾತ್ರ ವಿಜ್ಞಾನದಲ್ಲಿ ಆಸಕ್ತಿ ಬೆಳೆಯುತ್ತದೆ ಎಂದರು. ದೋಲ್ಪಾಡಿ ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಶಶಿಧರ ಪಿ. ಮಾತನಾಡಿ, ವಿಶ್ವ ಬಹಳಷ್ಟು ಅಭಿವೃದ್ಧಿಯತ್ತ ಸಾಗುತ್ತಿದೆ. ಆದ್ದರಿಂದ ಆಧುನಿಕತೆಯಲ್ಲಿ ನಮ್ಮ ಜೀವನಕ್ಕೆ ವಿಜ್ಞಾನ ಬಹು ಅಗತ್ಯ ಎಂದರು. ಪ್ರಾಂಶುಪಾಲ ಸೀತಾರಾಮ ಕೇವಳ

ವಿದ್ಯಾರಶ್ಮಿಯಲ್ಲಿ ವಿಜ್ಞಾನ ರಶ್ಮಿ Read More »

ಸಾಂಸ್ಕೃತಿಕ ಚಟುವಟಿಕೆಗಳಿಂದ ಸಂಸ್ಕಾರ ಬೆಳೆಯುತ್ತದೆ: ಸತೀಶ್ ರಾವ್

ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಮೇಧಾನ್ವೇಷ- 2022′ ಉದ್ಘಾಟನೆ ಪುತ್ತೂರು: ,ಡಿ 28.ಸಾಂಸ್ಕೃತಿಕ ಚಟುವಟಿಕೆಗಳಿಂದ ಸಂಸ್ಕಾರ ಬೆಳೆಯುತ್ತದೆ. ಮೆದುಳಿಗೆ ಶಿಕ್ಷಣ, ಶರೀರಕ್ಕೆ ಪೋಷಣೆ, ಹೃದಯಕ್ಕೆ ಸಂಸ್ಕಾರ ಎನ್ನುವ ಮಾತಿಗೆ ಪೂರಕವಾಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳನ್ನು ಈ ಎಲ್ಲಾ ಆಯಾಮಗಳಲ್ಲೂ ಸಮರ್ಥರನ್ನಾಗಿಸಲು ಹಲವು ವೇದಿಕೆಗಳ ಮುಖೇನ ಪ್ರಯತ್ನಿಸುತ್ತದೆ. ಅದೇ ರೀತಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತಿ ವಹಿಸುತ್ತಿ ರುವುದು ಶ್ಲಾಘನೀಯ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್ ಹೇಳಿದರು. ಅವರು ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ

ಸಾಂಸ್ಕೃತಿಕ ಚಟುವಟಿಕೆಗಳಿಂದ ಸಂಸ್ಕಾರ ಬೆಳೆಯುತ್ತದೆ: ಸತೀಶ್ ರಾವ್ Read More »

ಡಾ. ಕುರುಂಜಿ ವೆಂಕಟರಮಣ ಗೌಡ ಅವರ ೯೪ನೇ ಹುಟ್ಟುಹಬ್ಬ ಆಚರಣೆ

ಸುಳ್ಯ: ಡಾ. ಕುರುಂಜಿ ವೆಂಕಟರಮಣ ಗೌಡ ಅವರ ೯೪ನೇ ಹುಟ್ಟುಹಬ್ಬ ಆಚರಣೆಯು ಡಿ. ೨೬ರಂದು ಸುಳ್ಯ ಕೆವಿಜಿ ಕ್ಯಾಂಪಸ್‌ನಲ್ಲಿ ನಡೆಯಿತು. ಸುಳ್ಯ ಕೆಜಿವಿ ಕ್ಯಾಂಪಸ್‌ನಲ್ಲಿರುವ ಡಾ. ಕುರುಂಜಿ ವೆಂಕಟರಮಣ ಗೌಡ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಅವರಿಗೆ ಗೌರವ ಸೂಚಿಸಲಾಯಿತು. ಬಳಿಕ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ಜರಗಿತು. ಸುಳ್ಯದ ಕರ್ಮ ಯೋಗಿ ಎಂದೇ ಕರೆಯಲ್ಪಡುವ ಡಾ. ಕುರುಂಜಿ ವೆಂಕಟರಮಣ ಗೌಡ ಅವರು, ನವ ಸುಳ್ಯದ ನಿರ್ಮಾತೃರೂ ಹೌದು. ವೈದ್ಯಕೀಯ ಕಾಲೇಜು, ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ವಿದ್ಯಾಲಯವನ್ನು

ಡಾ. ಕುರುಂಜಿ ವೆಂಕಟರಮಣ ಗೌಡ ಅವರ ೯೪ನೇ ಹುಟ್ಟುಹಬ್ಬ ಆಚರಣೆ Read More »

ಸಂತ ಫಿಲೋಮಿನಾದ ದತ್ತು ಗ್ರಾಮ ಕೆದಂಬಾಡಿಯಲ್ಲಿ, ರಸ್ತೆ ದುರಸ್ಥಿ ಸ್ವಚ್ಛತೆ

ಪುತ್ತೂರು: ಕೆದಂಬಾಡಿ ಗ್ರಾಮವನ್ನು ದತ್ತು ಸ್ವೀಕರಿಸಿರುವ ಸಂತ ಫಿಲೋಮಿನಾ ಕಾಲೇಜಿನ ವತಿಯಿಂದ ಗ್ರಾಮದ ವಿವಿಧೆಡೆಗಳಲ್ಲಿ ರಸ್ತೆ ದುರಸ್ಥಿ ಹಾಗೂ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ನೇತೃತ್ವದಲ್ಲಿ ಕೆದಂಬಾಡಿ ಗ್ರಾಮ ಪಂಚಾಯತ್ ನ ಸಹಕಾರದೊಂದಿಗೆ ದತ್ತು ಸ್ವೀಕಾರದ ಬಳಿಕ ಪ್ರಥಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕೆದಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರತನ್ ರೈ ಮಾತನಾಡಿ, ಸ್ವಚ್ಛ ರಸ್ತೆ ಯಾವತ್ತೂ ಸುರಕ್ಷಿತ. ಈ ಹಿನ್ನೆಲೆಯಲ್ಲಿ ಸಂತ ಫಿಲೋಮಿನಾ

ಸಂತ ಫಿಲೋಮಿನಾದ ದತ್ತು ಗ್ರಾಮ ಕೆದಂಬಾಡಿಯಲ್ಲಿ, ರಸ್ತೆ ದುರಸ್ಥಿ ಸ್ವಚ್ಛತೆ Read More »

ಕೊಂಬೆಟ್ಟು ಸರಕಾರಿ ಪ.ಪೂ. ಕಾಲೇಜು, ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವ

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲಾ ವಿಭಾಗದ ವಾರ್ಷಿಕೋತ್ಸವ ದಿ. 24ರಂದು ನಡೆಯಿತು. ಅಧ್ಯಕ್ಷತೆ ವಹಿಸಿದ್ಧ ಶಾಸಕ ಸಂಜೀವ ಮಠದೂರು ಮಾತನಾಡಿ,  364 ದಿನಗಳಲ್ಲಿ ಎಲ್ಲಾ ಸಿಗುವ ಒಂದು ದಿನವಂದರೆ ವಾರ್ಷಿಕೋತ್ಸವ. ಎಲ್ಲಾ ಮಕಳ ಪ್ರತಿಭೆ ಹಾಗೂ ಎಲ್ಲಾ ವಿದ್ಯಾರ್ಥಿಗಳು ವರ್ಷದಲ್ಲಿ ಮಾಡಿರುವ ಸಾಧನೆಯನ್ನು, ಪ್ರತಿಭೆಯನ್ನು ಪ್ರದರ್ಶಿಸುವ ಅವಕಾಶ ವಾರ್ಷಿಕೋತ್ಸವದಲ್ಲಿ ಆಗುತ್ತದೆ.  ಒಂದು ಪಾರಂಪರಿಕ ಕಾಲೇಜು, 100 ವರ್ಷ ಇತಿಹಾಸ ಇರುವ ಕಾಲೇಜು, ಶಿವರಾಮ ಕಾರಂತರು ಓಡಾಡಿದ ನೆಲ, ಮೊಳಹಳ್ಳಿ ಶಿವರಾಯರ

ಕೊಂಬೆಟ್ಟು ಸರಕಾರಿ ಪ.ಪೂ. ಕಾಲೇಜು, ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವ Read More »

error: Content is protected !!
Scroll to Top