ಎನ್ ಎಸ್ ಎಸ್ ಬದುಕುವ ಶಿಕ್ಷಣವನ್ನು ನೀಡುತ್ತದೆ : ಸಂಜೀವ ಮಠಂದೂರು | ಬೆಟ್ಟಂಪಾಡಿ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರ
ಪುತ್ತೂರು: ವಿದ್ಯಾರ್ಥಿಗಳಿಗೆ ಬದುಕುವ ಶಿಕ್ಷಣವನ್ನು ಎನ್ಎಸ್ಎಸ್ ನೀಡುವುದರ ಜತೆಗೆ ಉತ್ತಮ ನಾಯಕರನ್ನು ಸೃಷ್ಟಿಸುವ ಕಾರ್ಯವನ್ನು ಮಾಡುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಇಂತಹ ಶಿಬಿರದ ಪ್ರಯೋಜನವನ್ನು ಪಡೆಯಬೇಕು ಎಂದು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ, ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ನಿಡ್ಪಳ್ಳಿ ಗ್ರಾಮದ ಮುಂಡೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು. ಶಿಬಿರಾಧಿಕಾರಿ ಹರಿಪ್ರಸಾದ್ ಎಸ್, ಪ್ರಾಸ್ತಾವಿಕವಾಗಿ ಮಾತನಾಡಿ, ಎನ್ಎಸ್ಎಸ್ […]










