ಕ್ಯಾಂಪಸ್‌

ಕೈಕಾರ ಶಾಲಾ ಶತಮಾನೋತ್ಸವ | ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ | ಸ್ಮಾರ್ಟ್ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ

ಪುತ್ತೂರು : ಕೈಕಾರ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಅಂಗವಾಗಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಹಾಗೂ ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನಾ ಕಾರ್ಯಕ್ರಮ ಶನಿವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ, ಶತಮಾನ ಕಂಡ ಶಾಲೆಗೆ ನಾವೇನು ಕೊಡಬಹುದು ಎಂಬ ಯೋಚನೆ ಮಾಡಿ ಇಂದು ಶತಮಾನೋತ್ಸವ  ಕಾರ್ಯಕ್ರಮ ಆಗುತ್ತಿದೆ. ಹಿರಿಯ ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ಏನೆಲ್ಲ ಮಾಡಬಹುದು ಅಂಥ ತೋರಿಸುವ ಕೆಲಸ ಇಲ್ಲಿ ಆಗಿದೆ. ಪ್ರಾಥಮಿಕ ಶಾಲೆಗಳಿಗೆ  ವೈಜ್ಞಾನಿಕ ರೀತಿಯಲ್ಲಿ […]

ಕೈಕಾರ ಶಾಲಾ ಶತಮಾನೋತ್ಸವ | ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ | ಸ್ಮಾರ್ಟ್ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ Read More »

ಕುರಿಯ: ದತ್ತು ಶಾಲೆಗೆ ಹೊಸ ಗತ್ತು

ನೂತನ ಕೊಠಡಿಗೆ ಶಿಲಾನ್ಯಾಸ, ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ಮಠಂದೂರು ಕುರಿಯ ಶಾಲೆಯನ್ನು ದತ್ತು ತೆಗೆದುಕೊಂಡ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಪುತ್ತೂರು: ಕುರಿಯ ಉನ್ನತ ಹಿರಿಯ ಪ್ರಾಥಮಿಕ ಶಾಲೆಯನ್ನು ಬೂಡಿಯಾರ್ ರಾಧಾಕೃಷ್ಣ ರೈ ಅವರು ದತ್ತು ತೆಗೆದುಕೊಂಡಿದ್ದಾರೆ. ಶಾಲೆಯ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಹಾಕಿಕೊಂಡಿದ್ದು, ಯೋಜನೆಯ ಮೊದಲ ಕಾರ್ಯಕ್ರಮವಾಗಿ ನೂತನ ಕೊಠಡಿಗೆ ಶಿಲಾನ್ಯಾಸ ಕಾರ್ಯಕ್ರಮ ಶನಿವಾರ ಮೂಡಿಬಂದಿತು. ಇದರೊಂದಿಗೆ ಶಾಸಕ ಸಂಜೀವ ಮಠಂದೂರು ಅವರು ನೀಡಿರುವ ಸ್ಮಾರ್ಟ್

ಕುರಿಯ: ದತ್ತು ಶಾಲೆಗೆ ಹೊಸ ಗತ್ತು Read More »

ಪ್ರೇರಣಾದಲ್ಲಿ ಸಿಎ ಓರಿಯಂಟೇಷನ್ ತರಗತಿ

ಏಪ್ರಿಲ್ 1ರಿಂದ ಸಿಎ ತರಗತಿ ಆರಂಭ ಪುತ್ತೂರು: ಇಲ್ಲಿನ ಪ್ರೇರಣಾ ಸಂಸ್ಥೆಯಲ್ಲಿ ಸಿಎ ಓರಿಯಂಟೇಷನ್ ತರಗತಿ ಮಾರ್ಚ್ 4ರಂದು ನಡೆಯಿತು. ಭಾರತದ ಅತ್ಯುನ್ನತ ಪರೀಕ್ಷೆಗಳಲ್ಲಿ ಒಂದಾದ ಸಿಎ ಪರೀಕ್ಷೆಗೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ತರಬೇತುಗೊಳಿಸುವ ಹಿನ್ನೆಲೆಯಲ್ಲಿ ಪ್ರೇರಣಾ ಸಂಸ್ಥೆ ಸಿಎ ಓರಿಯಂಟೇಷನ್ ತರಗತಿಯನ್ನು ಹಮ್ಮಿಕೊಂಡಿತ್ತು. ನುರಿತ ಉಪನ್ಯಾಸಕರಿಂದ ಸಿಎ ಫೌಂಡೇಷನ್ ಕೋರ್ಸಿನ ಬಗ್ಗೆ ತರಬೇತಿ ನೀಡಲಾಯಿತು. ಏಪ್ರಿಲ್ 1ರಿಂದ ಸಿಎ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸುವ ನಿಟ್ಟಿನಲ್ಲಿ ತರಬೇತಿ ನಡೆಯಲಿದೆ. ಪ್ರೇರಣಾ ಸಂಸ್ಥೆಯ ನಿರ್ದೇಶಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ

ಪ್ರೇರಣಾದಲ್ಲಿ ಸಿಎ ಓರಿಯಂಟೇಷನ್ ತರಗತಿ Read More »

ಪುತ್ತೂರು ಶಾಲೆಗಳಿಗೆ ಉಕ್ರೇನ್‍ನ ಸ್ಮಾರ್ಟ್ ಬೋರ್ಡ್ | ಕುರಿಯ ಉ.ಹಿ.ಪ್ರಾ. ಶಾಲೆಯಲ್ಲಿ ಶಾಸಕ ಸಂಜೀವ ಮಠಂದೂರು | ನೂತನ ಕೊಠಡಿಗೆ ಶಿಲಾನ್ಯಾಸ, ಸ್ಮಾರ್ಟ್ ಬೋರ್ಡ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಪುತ್ತೂರು: ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ಸ್ಮಾರ್ಟ್ ಬೋರ್ಡ್ ಮೂಲಕ ಶಿಕ್ಷಣ ನೀಡುವ ಕೆಲಸ ಆಗುತ್ತಿದೆ. ಇದನ್ನು ನಮ್ಮೂರಿನ ಸರಕಾರಿ ಶಾಲೆಗಳಿಗೆ ನೀಡಿ ಯಾಕೆ ಪರಿಚಯಿಸಬಾರದು ಎನ್ನುವ ಆಲೋಚನೆ ಬಂದಿತು. ಈ ಹಿನ್ನೆಲೆಯಲ್ಲಿ ಉಕ್ರೇನ್‍ನಿಂದ ಸ್ಮಾರ್ಟ್ ಬೋರ್ಡ್‍ಗಳನ್ನು ತರಿಸಿಕೊಂಡು ಸರಕಾರಿ ಶಾಲೆಗಳಲ್ಲಿ ನೀಡಿ, ಆಧುನಿಕ ಶಿಕ್ಷಣವನ್ನು ಪರಿಚಯಿಸುವ ಕೆಲಸ ನಡೆಸಲಾಗುತ್ತಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಕುರಿಯ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾ. 4ರಂದು ನಡೆದ ನೂತನ ಕೊಠಡಿಗೆ ಶಿಲಾನ್ಯಾಸ, ಸ್ಮಾರ್ಟ್ ಕ್ಲಾಸ್ ಹಾಗೂ ಶುದ್ಧ

ಪುತ್ತೂರು ಶಾಲೆಗಳಿಗೆ ಉಕ್ರೇನ್‍ನ ಸ್ಮಾರ್ಟ್ ಬೋರ್ಡ್ | ಕುರಿಯ ಉ.ಹಿ.ಪ್ರಾ. ಶಾಲೆಯಲ್ಲಿ ಶಾಸಕ ಸಂಜೀವ ಮಠಂದೂರು | ನೂತನ ಕೊಠಡಿಗೆ ಶಿಲಾನ್ಯಾಸ, ಸ್ಮಾರ್ಟ್ ಬೋರ್ಡ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ Read More »

ನಾಳೆ (ಮಾ. 4) ಪ್ರೇರಣಾದಲ್ಲಿ ಐಎಎಸ್ ಉಚಿತ ಓರಿಯಂಟೇಷನ್ ಕೋರ್ಸ್

ಪುತ್ತೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಗೊಳಿಸಬೇಕು ಎನ್ನುವ ಉದ್ದೇಶದಿಂದ ಪುತ್ತೂರಿನ ಪ್ರೇರಣಾ ಸಂಸ್ಥೆಯಲ್ಲಿ ಮಾರ್ಚ್ 4ರಂದು ಸಂಜೆ 4 ಗಂಟೆಗೆ ಐಎಎಸ್ ಉಚಿತ ಓರಿಯಂಟೇಷನ್ ಕೋರ್ಸ್ ಹಮ್ಮಿಕೊಳ್ಳಲಾಗಿದೆ. ಎನ್.ಸಿ.ಇ.ಆರ್.ಟಿ. ಕ್ಲಾಸ್, ಪ್ರಚಲಿತ ವಿದ್ಯಮಾನಗಳ ತರಗತಿಗಳು, ಆಪ್ಟಿಟ್ಯೂಡ್ ಕ್ಲಾಸ್ ಮೊದಲಾದ ವಿಷಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆ ನೀಡಿದ್ದು, ಇಂಗ್ಲೀಷ್ ಭಾಷೆಯ ಬ್ರಿಡ್ಜ್ ಕೋರ್ಸ್ ಮತ್ತು ಬರವಣಿಗೆಯ ಕೌಶಲ್ಯದ ಬಗ್ಗೆಯೂ ಮಾಹಿತಿ ನೀಡಲಾಗುವುದು. ಪ್ರಥಮ, ದ್ವಿತೀಯ ಪಿಯುಸಿ, ಪದವಿ ವಿದ್ಯಾರ್ಥಿಗಳು

ನಾಳೆ (ಮಾ. 4) ಪ್ರೇರಣಾದಲ್ಲಿ ಐಎಎಸ್ ಉಚಿತ ಓರಿಯಂಟೇಷನ್ ಕೋರ್ಸ್ Read More »

ಅಂತರ್ ಜಿಲ್ಲಾ ಮಟ್ಟದ ರ್ಯಾಪಿಡ್ ಚೆಸ್ ಪಂದ್ಯಾಟ “ಉಬಾರ್ ಚೆಸ್ ಟ್ರೋಫಿ”

ಪುತ್ತೂರು : ಉಬರ್ ಚೆಸ್ ಅಕಾಡೆಮಿ ಹಾಗೂ ತೆಂಕಿಲ ವಿವೇಕಾನಂದ  ಆಂಗ್ಲ ಮಾಧ್ಯಮ ಶಾಲೆ ವತಿಯಿಂದ ಅಂತರ್ ಜಿಲ್ಲಾ ಮಟ್ಟದ ರ್ಯಾಪಿಡ್ ಚೆಸ್ ಪಂದ್ಯಾಟ ಇತ್ತೀಚೆಗೆ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ಸಂಚಾಲಕ ಚಂದ್ರಶೇಖರ್ ನಾಯರ್ ಚೆಸ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ, ಚೆಸ್ ಪಂದ್ಯಾಟದಲ್ಲಿ ಗ್ರಾಮೀಣ ಪ್ರತಿಭೆಗಳೂ ಬಹಳ ಆಸಕ್ತಿಯಿಂದ ಪಾಲ್ಗೊಳ್ಳುತ್ತಿದ್ದು, ಅವರಿಗೂ ಅವಕಾಶ ನೀಡುತ್ತಿರುವ ಸಂಸ್ಥೆಯ ಕಾರ್ಯ ಶ್ಲಾಘನೀಯ. ಪಂದ್ಯಾಟದಲ್ಲಿ ಸೋತರೂ, ಗೆದ್ದರೂ ಈ ಆಟದಲ್ಲಿ ಪಾಲ್ಗೊಳ್ಳುವುದನ್ನು ಮುಂದುವರಿಸಿಕೊಂಡು ಹೋಗಿ.

ಅಂತರ್ ಜಿಲ್ಲಾ ಮಟ್ಟದ ರ್ಯಾಪಿಡ್ ಚೆಸ್ ಪಂದ್ಯಾಟ “ಉಬಾರ್ ಚೆಸ್ ಟ್ರೋಫಿ” Read More »

ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ ಸ್ಥಾಪನೆಗೆ ಸರಕಾರದಿಂದ ಅನುಮೋದನೆ | ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ. ಸಹಿತ 15 ಜನರ ಸದಸ್ಯರನ್ನೊಳಗೊಂಡ ಸಮಿತಿಯಿಂದ ಸರಕಾರಕ್ಕೆ ಪ್ರಸ್ತಾವನೆ

ಪುತ್ತೂರು : ರಾಜ್ಯ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಆರಂಭಿಸಲು ಉದ್ದೇಶಿಸಿರುವ ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ (ಆರ್.ವಿಎಸ್.ಯು) ಸ್ಥಾಪನೆಗೆ ಸರಕಾರದಿಂದ ಅನುಮೋದನೆ ದೊರೆತಿದೆ. ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ. ಅವರ ಅಧ್ಯಕ್ಷತೆಯಲ್ಲಿ 15 ಜನರ ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿ ವಿಶ್ವವಿದ್ಯಾಲಯ ಸ್ಥಾಪನೆಗೆ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿತ್ತು. ಈ ಪ್ರಸ್ತಾವನೆಯನ್ನು ಡಾ.ರೇಣುಕಾ ಪ್ರಸಾದ್ ಕೆ.ವಿ. ಅವರ ಪ್ರಯತ್ನದಿಂದ ಸರಕಾರಕ್ಕೆ ಬೇಕಾದ ಎಲ್ಲಾ ದಾಖಲೆಗಳನ್ನು ಸಿದ್ಧಪಡಿಸಿ ತಪಾಸಣಾ ತಂಡಕ್ಕೆ ನೀಡಲಾಗಿತ್ತು. ಈ ವಿಶ್ವವಿದ್ಯಾಲಯ ಸ್ಥಾಪನಾ ಸಮಿತಿಯಲ್ಲಿ

ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ ಸ್ಥಾಪನೆಗೆ ಸರಕಾರದಿಂದ ಅನುಮೋದನೆ | ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ. ಸಹಿತ 15 ಜನರ ಸದಸ್ಯರನ್ನೊಳಗೊಂಡ ಸಮಿತಿಯಿಂದ ಸರಕಾರಕ್ಕೆ ಪ್ರಸ್ತಾವನೆ Read More »

ಮಾನಸಿಕ, ದೈಹಿಕ ದೃಢತೆಗೆ ಈಜು, ಕ್ರೀಡೆ ಸಹಕಾರಿ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಪಾರ್ಥ ವಾರಣಾಸಿ

ಪುತ್ತೂರು: ಜೀವನದಲ್ಲಿ ಮಾನಸಿಕ ಹಾಗೂ ದೈಹಿಕ ದೃಢತೆಯನ್ನು ಸಾಧಿಸಲು ಈಜು ಅಥವಾ ಇನ್ನಿತರ ಕ್ರೀಡಾ ಚಟುವಟಿಕೆಗಳು ತುಂಬಾ ಸಹಕಾರಿಯಾಗುತ್ತವೆ ಎಂದು ಈಜು ತರಬೇತುದಾರ, ಸರ್ಫ್ ಲೈವ್ ಸೇವಿಂಗ್ ಇಂಡಿಯಾದ ನಿರ್ದೇಶಕ ಪಾರ್ಥ ವಾರಣಾಸಿ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲ ವಿಜ್ಞಾನ ವಿಭಾಗದ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನರಗಳ ಪುನಶ್ಚೇತನದ ಮೂಲಕ ಜೀವ ಉಳಿಸುವ ಕೌಶಲ್ಯ ಎನ್ನುವ ವಿಷಯದ ಬಗ್ಗೆ ಮಾತನಾಡಿದ ಇವರು

ಮಾನಸಿಕ, ದೈಹಿಕ ದೃಢತೆಗೆ ಈಜು, ಕ್ರೀಡೆ ಸಹಕಾರಿ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಪಾರ್ಥ ವಾರಣಾಸಿ Read More »

ವಿಜ್ಞಾನ ಆಸಕ್ತಿಯ ಕ್ಷೇತ್ರವಾದಾಗ ಸಾಧನೆಗಳು ಸಾಧ್ಯ | ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಸತ್ಯಜಿತ್ ಉಪಾಧ್ಯಾಯ

ಪುತ್ತೂರು : ವಿಜ್ಞಾನವನ್ನು ಕೇವಲ ಒಂದು ವಿಷಯವಾಗಿ ನೋಡುವುದರ ಬದಲು ಅದನ್ನು ಆಸಕ್ತಿಯ ಕ್ಷೇತ್ರವನ್ನಾಗಿ ಪರಿವರ್ತಿಸಿಕೊಳ್ಳಬೇಕು. ಮಾತ್ರವಲ್ಲದೆ ಸಂಶೋಧನೆ ಕೈಗೊಳ್ಳಬೇಕು. ತನ್ಮೂಲಕ ನಮ್ಮ ದೇಶವನ್ನು ಯಶಸ್ಸಿನ ಕಡೆ ಕೊಂಡೊಯ್ಯುಬೇಕು ಎಂದು ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ಆಚರಿಸಲಾದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಂಗಳವಾರ ಮಾತನಾಡಿದರು. ಸಿವಿ ರಾಮನ್‌ರವರ ಅಪೂರ್ವ ಸಾಧನೆಯ

ವಿಜ್ಞಾನ ಆಸಕ್ತಿಯ ಕ್ಷೇತ್ರವಾದಾಗ ಸಾಧನೆಗಳು ಸಾಧ್ಯ | ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಸತ್ಯಜಿತ್ ಉಪಾಧ್ಯಾಯ Read More »

ಸಾವರ್ಕರ್, ಆಝಾದ್ ಯುವಪೀಳಿಗೆಗೆ ಮಾದರಿ :  ಆದರ್ಶ ಗೋಖಲೆ | ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ದೇಶಭಕ್ತರ ಪುಣ್ಯಸ್ಮರಣೆ

ಪುತ್ತೂರು : ಬಾಲ್ಯದಲ್ಲಿರುವಾಗಲೇ ವೀರ ಸಾವರ್ಕರ್ ದೇಶದ ಪರ ಹೋರಾಡಿದ ನಾಯಕ. ಅವರು ಝಾನ್ಸಿ ರಾಣಿಯ ಸಾಹಸದಿಂದ ಪ್ರೇರಿತರಾಗಿ ಸ್ವಾತಂತ್ರ್ಯ ಹೋರಾಟಕ್ಕೆ ದುಮುಕಿದರು. ಜನರಲ್ಲಿ ದೇಶಪ್ರೇಮ, ದೇಶ ಭಕ್ತಿ ಬಿತ್ತಿದವರು.  ಮಹಾರಾಷ್ಟ್ರದಲ್ಲಿ ಪತಿತ ಪಾವನ ಎಂಬ ಮಂದಿರವನ್ನು ಸ್ಥಾಪಿಸಿ ದೇಶದಲ್ಲಿ ಎಲ್ಲರೂ ಒಂದೇ ಎಂಬ ಘೋಷಣೆಯನ್ನು ಸಾರಿದ ದೇಶದ ಹೆಮ್ಮೆಯ ಪುತ್ರ ಎಂದು ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಉಪನ್ಯಾಸಕ ಆದರ್ಶ ಗೋಖಲೆ ಹೇಳಿದರು. ಅವರು ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ಏರ್ಪಡಿಸಿದ್ದ ವೀರ ಸಾವರ್ಕರ್ ಹಾಗೂ ಚಂದ್ರಶೇಖರ್

ಸಾವರ್ಕರ್, ಆಝಾದ್ ಯುವಪೀಳಿಗೆಗೆ ಮಾದರಿ :  ಆದರ್ಶ ಗೋಖಲೆ | ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ದೇಶಭಕ್ತರ ಪುಣ್ಯಸ್ಮರಣೆ Read More »

error: Content is protected !!
Scroll to Top