ಕ್ಯಾಂಪಸ್‌

ರಾಷ್ಟ್ರಮಟ್ಟದ ಕಲೋತ್ಸವ : ಸನ್ಮಾನ ಕಾರ್ಯಕ್ರಮ “ಪ್ರತಿಭಾ ದೀಪ ಸಮ್ಮಾನನಮ್”

ಪುತ್ತೂರು : ರಾಷ್ಟ್ರಮಟ್ಟದ ಕಲೋತ್ಸವ ವಿಜೇತ ಹಾಗೂ ಪ್ರಧಾನಮಂತ್ರಿಗಳ ಪರೀಕ್ಷಾ ಪೇ ಚರ್ಚಾಕಾರ್ಯಕ್ರಮದಲ್ಲಿ ಭಾಗವಹಿಸಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ತೇಜ ಚಿನ್ಮಯ ಹೊಳ್ಳ ಅವರ ಸನ್ಮಾನ ಸಮಾರಂಭ ಪ್ರತಿಭಾ ಸಮ್ಮಾನನಮ್ ಶುಕ್ರವಾರ ಶಾಲಾ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಮ್.ಕೃಷ್ಣ ಭಟ್ ಮಾತನಾಡಿ, ಪ್ರತಿಭೆ ಒಂದು ದೀಪದಂತೆ. ದೀಪ ಪ್ರಜ್ವಲಿಸಿದಾಗ ಅದಕ್ಕೆ ಪ್ರಾಮುಖ್ಯತೆ ಬರುತ್ತದೆ. ಪ್ರತಿಭೆಯನ್ನು ಗುರುತಿಸಿ ಗೌರವಿಸುವುದು ಒಂದು ಅವಿಸ್ಮರಣೀಯ ಅಮೃತ ಘಳಿಗೆ […]

ರಾಷ್ಟ್ರಮಟ್ಟದ ಕಲೋತ್ಸವ : ಸನ್ಮಾನ ಕಾರ್ಯಕ್ರಮ “ಪ್ರತಿಭಾ ದೀಪ ಸಮ್ಮಾನನಮ್” Read More »

ಫೆ.4 ರಂದು ನಿಗದಿಯಾಗಿದ್ದ ಶಾಸಕರೊಂದಿಗಿನ ಜನತಾ ಅದಾಲತ್ ಫೆ.6 ಕ್ಕೆ ಮುಂದೂಡಿಕೆ

ಪುತ್ತೂರು : ಪುತ್ತೂರು ರೋಟರಿ ಕ್ಲಬ್ ವತಿಯಿಂದ ಫೆ.4 ಶನಿವಾರ ಆಯೋಜಿಸಲಾಗಿದ್ದ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರೊಂದಿಗಿನ ಮುಖಾಮುಖಿ ಕಾರ್ಯಕ್ರಮ ರೋಟರಿ ಜನತಾ ಅದಾಲತ್ ಕಾರ್ಯಕ್ರಮವನ್ನು ಫೆ.6 ಕ್ಕೆ ಮುಂದೂಡಲಾಗಿದೆ. ಕಾರ್ಯಕ್ರಮ ನಿಗದಿಯಾದಂತೆ ಜೈನಭವನದಲ್ಲಿ ಸಂಜೆ ನಡೆಯಲಿದೆ ಎಂದು ರೋಟರಿ ಪ್ರಕಟಣೆ ತಿಳಿಸಿದೆ.

ಫೆ.4 ರಂದು ನಿಗದಿಯಾಗಿದ್ದ ಶಾಸಕರೊಂದಿಗಿನ ಜನತಾ ಅದಾಲತ್ ಫೆ.6 ಕ್ಕೆ ಮುಂದೂಡಿಕೆ Read More »

ಫೆ.11 : ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆ : ತೆಂಕಿಲ ಶಾಲಾ ಮೈದಾನಕ್ಕೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ

ಪುತ್ತೂರು: ಸುವರ್ಣ ಮಹೋತ್ಸವ ಆಚರಿಸುತ್ತಿರುವ ಪ್ರತಿಷ್ಠಿತ ಅಂತರ್ರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಫೆ.11ರಂದು ಕೇಂದ್ರ ಗೃಹ ಸಚಿವರು, ಕೇಂದ್ರದ ಪ್ರಥಮ ಸಹಕಾರ ಸಚಿವ ಅಮಿತ್ ಶಾ ಆಗಮನ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ದ.ಕ ಎಸ್ಪಿ ಡಾ.ಅಮಟೆ ವಿಕ್ರಮ್‌ರವರು ಕಾರ್ಯಕ್ರಮ ನಡೆಯುವ ತೆಂಕಿಲ ವಿವೇಕಾನಂದ ಶಾಲಾ ಮೈದಾನಕ್ಕೆ ಶುಕ್ರವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಸಹಾಯಕ ಕಮೀಷನರ್ ಗಿರೀಶ್ ನಂದನ್, ಡಿವೈಎಸ್ಪಿ ವೀರಯ್ಯ ಹಿರೇಮಠ್, ಕ್ಯಾಂಪ್ಕೋ ಮಾಜಿ

ಫೆ.11 : ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆ : ತೆಂಕಿಲ ಶಾಲಾ ಮೈದಾನಕ್ಕೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ Read More »

ಗ್ರಾಮೀಣ ಅಂಚೆ ಸೇವಕರ ನೇಮಕಕ್ಕೆ ಅರ್ಜಿ ಆಹ್ವಾನ

ಪುತ್ತೂರು : ಮಂಗಳೂರು ಅಂಚೆ ಇಲಾಖೆಯಲ್ಲಿ ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಂದು ಮಂಗಳೂರು ವಲಯ ಅಂಚೆ ಅಧೀಕ್ಷಕ ಶ್ರೀಹರ್ಷ ತಿಳಿಸಿದ್ದಾರೆ. ಫೆ,.16 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನ. Indiapostgdsonline.gov.in  ವೆಬ್ಸೈಟ್ ಮೂಲಕವೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಎಲ್ಲಾ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ. ಗಣಿತ ಮತ್ತು

ಗ್ರಾಮೀಣ ಅಂಚೆ ಸೇವಕರ ನೇಮಕಕ್ಕೆ ಅರ್ಜಿ ಆಹ್ವಾನ Read More »

ಕುಂಬ್ರ ಕೆಪಿಎಸ್ ಶಾಲೆಯಲ್ಲಿ ಕಲಿಕಾ ಹಬ್ಬ, ಸ್ಮಾರ್ಟ್‍‍ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ

ಪುತ್ತೂರು : ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಕಲಿಕಾ ಹಬ್ಬ ಹಾಗೂ ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಬುಧವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಸ್ಟಾರ್ಟ್ ಕ್ಲಾಸ್ ಉದ್ಘಾಟಿಸಿ, ಮಕ್ಕಳು ಪ್ರಕೃತಿಯೊಂದಿಗೆ ಬೆರೆತು ಪ್ರಕೃತಿಯ ವಿಚಾರ ತಿಳಿದು ಕೊಳ್ಳಲು  ಕಲಿಕಾ ಹಬ್ಬ ಪೂಕರವಾಗಿದ್ದು, ಪ್ರಕೃತಿ ಮಡಿಲಲ್ಲಿ ಶಿಕ್ಷಕರ ಜೊತೆಗೂಡಿ ವಿದ್ಯಾರ್ಥಿಗಳಿಗೆ ಕಲಿಕೆ ಹಬ್ಬವಾಗಿ ಪರಿಣಮಿಸಿದೆ. ಇಂತಹಾ ಕಾರ್ಯಕ್ರಮ ಮಕ್ಕಳಲ್ಲಿ ಉತ್ಸಾಹ ಮೂಡಿಸುವ ಜತೆಗೆ ಶೈಕ್ಷಣಿಕವಾಗಿ ಬೆಳೆಯುವಲ್ಲಿ ಸಹಕಾರಿಯಾಗುತ್ತದೆ ಎಂದರು. ತಾಪಂ ಸ್ಥಾಯಿ ಸಮಿತಿ

ಕುಂಬ್ರ ಕೆಪಿಎಸ್ ಶಾಲೆಯಲ್ಲಿ ಕಲಿಕಾ ಹಬ್ಬ, ಸ್ಮಾರ್ಟ್‍‍ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ Read More »

ಸರ್ವೆ ಕಲ್ಪಣೆ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಪುತ್ತೂರು : ಸರ್ವೆ ಕಲ್ಪಣೆ ಸರಕಾರಿ ಪ್ರೌಢಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಸೋಮವಾರ ನಡೆಯಿತು.ಪುತ್ತೂರು ಶಾಸಕ ಸಂಜೀವ ಮಠದೂರು ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕರನ್ನು ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಅಶೋಕ್ ರೈ ಸೊರಕೆ, ಹಿರಿಯ ವಿದ್ಯಾರ್ಥಿ ವಿನೋದ್‌ಶಾಂತಿಗೋಡು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಪ್ರೌಢ ಶಾಲಾ ಮುಖ್ಯ ಶಿಕ್ಷಕ ಜಯರಾಮ್ ಶೆಟ್ಟಿ ಸ್ವಾಗತಿಸಿದರು.

ಸರ್ವೆ ಕಲ್ಪಣೆ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ Read More »

ಫೆ. 4: ಪುತ್ತೂರು ರೋಟರಿ ಕ್ಲಬ್ ನಿಂದ ಶಾಸಕರೊಂದಿಗೆ ಮುಖಾಮುಖಿ – ರೋಟರಿ ಜನತಾ ಅದಾಲತ್

ಪುತ್ತೂರು: ರೋಟರಿ ಜಿಲ್ಲೆ 3181, ವಲಯ 5ರ ಪ್ರತಿಷ್ಠಿತ ರೋಟರಿ ಕ್ಲಬ್ ಪುತ್ತೂರು ಇದರ ನೇತೃತ್ವದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ಜೊತೆ ಮುಖಾಮುಖಿ ಕಾರ್ಯಕ್ರಮ ರೋಟರಿ ಜನತಾ ಅದಾಲತ್ ಪುತ್ತೂರು ಜೈನಭವನದಲ್ಲಿ ಫೆ. 4ರಂದು ಸಂಜೆ ನಡೆಯಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಅಭಿವೃದ್ಧಿ ಕುರಿತಾದ ಯಾವುದೇ ಪ್ರಶ್ನೆ ಕೇಳಲು ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ. ಪ್ರಶ್ನೆಗಳನ್ನು ತಮ್ಮ ಹೆಸರು ಹಾಗೂ ವಿಳಾಸದೊಂದಿಗೆ ವಾಟ್ಸ್ ಆ್ಯಪ್ ಸಂಖ್ಯೆ 8660690391 ಅಥವಾ ರೋಟರಿ ಕ್ಲಬ್ ಪುತ್ತೂರು, ಕೋಂ.

ಫೆ. 4: ಪುತ್ತೂರು ರೋಟರಿ ಕ್ಲಬ್ ನಿಂದ ಶಾಸಕರೊಂದಿಗೆ ಮುಖಾಮುಖಿ – ರೋಟರಿ ಜನತಾ ಅದಾಲತ್ Read More »

ಡಾಕ್ಟರೇಟ್ ಪದವಿ ಪಡೆದ ಕುದ್ಮಾರಿನ ಕುವರಿ ಡಾ|| ಶರ್ಮಿಳಾ ನಟರಾಜ್

ಪುತ್ತೂರು : ಶ್ರೀಮತಿ ಶರ್ಮಿಳಾ ನಟರಾಜ್ ಅವರು ಡಾll ಆರ್. ಬಾಲಸುಬ್ರಮಣಿ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಯೂಸ್ ಆಂಡ್ ಇಂಪ್ಯಾಕ್ಟ್ ಆಫ್ ಆಕ್ಸೆಸ್ ಟು ಎನ್-ಲಿಸ್ಟ್ ಇ-ರಿಸೋರ್ಸಸ್ ಬೈ ದಿ ಫ್ಯಾಕಲ್ಟಿ ಮೆಂಬರ್ಸ್ ಆಂಡ್ ರಿಸರ್ಚ್ ಸ್ಕೊಲರ್ಸ್ ಆಫ್ ಹೈಯರ್ ಎಜುಕೇಶನ್ ಇನ್ಸ್ಟಿಟ್ಯೂಷನ್ಸ್ ಇನ್  ಬೆಂಗಳೂರು ರೀಜಿಯನ್ ” ಎಂಬ ಪ್ರಬಂಧಕ್ಕೆ ಭಾರತೀಯಾರ್ ಯೂನಿವರ್ಸಿಟಿಯು ಡಾಕ್ಟರೇಟ್ ಪದವಿ ನೀಡಿದೆ.  ಬಾಲ್ಯದಿಂದಲೇ  ನೃತ್ಯ, ಸಂಗೀತ ಹಾಗೂ ಸಾಹಿತ್ಯದಲ್ಲಿ ಪರಿಣತಿ ಹೊಂದಿರುವ ಇವರಿಗೆ ಬೆಳ್ಳಾರೆ ಜೆ.ಸಿ ಸಂಸ್ಥೆಯ ವತಿಯಿಂದ” ಉತ್ತಮ

ಡಾಕ್ಟರೇಟ್ ಪದವಿ ಪಡೆದ ಕುದ್ಮಾರಿನ ಕುವರಿ ಡಾ|| ಶರ್ಮಿಳಾ ನಟರಾಜ್ Read More »

ಉಚಿತ ಕಣ್ಣಿನ ತಪಾಸಣಾ ಶಿಬಿರ

ಪುತ್ತೂರು : ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ದ.ಕ.ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿ ಜಂಟಿ ಆಶ್ರಯದಲ್ಲಿ ಪುತ್ತೂರು ನಗರಸಭೆ ಹಾಗೂ ಸರಕಾರಿ ಆಸ್ಪತ್ರೆ ಸಹಕಾರದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಸೋಮವಾರ ನಗರಸಭೆ ಕಟ್ಟಡದಲ್ಲಿ ನಡೆಯಿತು. ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಕೋವಿಡ್ ಬಳಿಕ ಜನತೆ ತಮ್ಮ ಆರೋಗ್ಯದ ಕುರಿತು ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿದೆ. ದುಡ್ಡಿದ್ದರೂ ಆರೋಗ್ಯ ಕಾಪಾಡಿಕೊಳ್ಳದ ಸ್ಥಿತಿಯಲ್ಲಿದ್ದು, ಆಹಾರ ಪದ್ಧತಿಯನ್ನು ಉತ್ತಮಪಡಿಸಿಕೊಳ್ಳುವ ಅಗತ್ಯವಿದೆ . ಈ ನಿಟ್ಟಿನಲ್ಲಿ ನಗರಸಭೆ

ಉಚಿತ ಕಣ್ಣಿನ ತಪಾಸಣಾ ಶಿಬಿರ Read More »

ಜ. 31, ಫೆ. 1: ಕುದ್ಮಾರಿನಲ್ಲಿ ಕಲಿಕಾ ಹಬ್ಬ

ಪುತ್ತೂರು: ಸವಣೂರು ಸಮೂಹ ಸಂಪನ್ಮೂಲ ಕೇಂದ್ರದ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ತಿಗಳಿಗೆ ಜ. 31 ಹಾಗೂ ಫೆ. 1ರಂದು ಕುದ್ಮಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಲಿಕಾ ಹಬ್ಬ ನಡೆಯಲಿದೆ. ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿ.ಪಂ., ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ, ಸವಣೂರು ಸಮೂಹ ಸಂಪನ್ಮೂಲ ಕೇಂದ್ರ, ಕುದ್ಮಾರು ಸ.ಉ.ಹಿ.ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಎರಡು ದಿನಗಳ ಕಲಿಕಾ ಹಬ್ಬ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಜ. 31, ಫೆ. 1: ಕುದ್ಮಾರಿನಲ್ಲಿ ಕಲಿಕಾ ಹಬ್ಬ Read More »

error: Content is protected !!
Scroll to Top