ಕ್ಯಾಂಪಸ್‌

ವ್ಯಕ್ತಿ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವುದು ಸ್ನಾತಕೋತ್ತರ ವಿದ್ಯಾರ್ಥಿಗಳ ಮುಖ್ಯಗುರಿ:ವಂ|ಡಾ|ಆ್ಯಂಟನಿ ಪ್ರಕಾಶ್ಮೊಂತೆರೋ

ಪುತ್ತೂರು: ಸಂತಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನುವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ವಂ| ಡಾ| ಆಂಟನಿಪ್ರಕಾಶ್ ಮೊಂತೆರೊರವರು“ವಿದ್ಯಾರ್ಥಿಗಳು ತಮ್ಮ ವರ್ತನೆ, ವ್ಯಕ್ತಿತ್ವ ಮತ್ತು ಭಾಷೆಯ ಮೇಲೆ ಮುಖ್ಯವಾಗಿ ಗಮನ ಹರಿಸಬೇಕು. ವಿದ್ಯಾರ್ಥಿಗಳು ಮಾನಸಿಕ, ದೈಹಿಕ ಮತ್ತು ಆಧ್ಯಾತ್ಮಿಕ ದೃಷ್ಟಿಕೋನಗಳನ್ನು ಅರ್ಥಪೂರ್ಣವಾಗಿ ಅಳವಡಿಸಿಕೊಳ್ಳಲು ಸಾಧ್ಯವಾಗುತ್ತದೆ, ವಿದ್ಯಾರ್ಥಿಗಳು ಪಠ್ಯ,ಸಹಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ತಮ್ಮ ಹೃದಯ, ಬುದ್ಧಿ ಮತ್ತು ದೇಹಕ್ಕೆ ತರಬೇತಿ ನೀಡುವತ್ತ ಗಮನ ಹರಿಸಬೇಕು” ಎಂದು ಹೇಳಿದರು. ಈ ಸಂರ್ಭದಲ್ಲಿ ಕಾಲೇಜಿನ […]

ವ್ಯಕ್ತಿ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವುದು ಸ್ನಾತಕೋತ್ತರ ವಿದ್ಯಾರ್ಥಿಗಳ ಮುಖ್ಯಗುರಿ:ವಂ|ಡಾ|ಆ್ಯಂಟನಿ ಪ್ರಕಾಶ್ಮೊಂತೆರೋ Read More »

ಸಂತ ಫಿಲೋಮಿನಾ ಕಾಲೇಜಿನ ಬಿಬಿಎ ವಿದ್ಯಾರ್ಥಿಗಳಿಂದ ಕೈಗಾರಿಕಾ ಸಂದರ್ಶನ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಬಿಬಿಎ ವಿಭಾಗದ ವಿದ್ಯಾರ್ಥಿಗಳು ನರಿಮೊಗರು ಶಂಕರ್ ಗ್ರೂಪ್ ಆಫ್ ಕಂಪನಿಯಲ್ಲಿ ಕೈಗಾರಿಕಾ ಸಂದರ್ಶನ ನಡೆಸಿದರು.ಪಠ್ಯ ವಿಷಯಗಳ ಜೊತೆಗೆ ಪ್ರಾಯೋಗಿಕ ಅನುಭವವನ್ನು ಪಡೆಯುವ ಉದ್ದೇಶದಿಂದ ವಿದ್ಯಾರ್ಥಿಗಳು ಕಂಪನಿಯ ವಿವಿಧ ಉತ್ಪಾದನಾ ಘಟಕಗಳಿಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಂಡರು. ಬಿಂದು ಉತ್ಪಾದನಾ ಘಟಕದ ಪ್ರಬಂಧಕರಾದ ಸುರೇಶ್ ಎಸ್.ಬಿ. ಹಾಗೂ ಧನ್ಯರಾಜ್ ಇವರು ವಿದ್ಯಾರ್ಥಿಗಳಿಗೆ ಅವಶ್ಯಕ ಮಾಹಿತಿ ನೀಡಿದರು. ಸಂತ ಫಿಲೋಮಿನಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರಶಾಂತ್ ರೈ, ಪುಷ್ಪಾಎನ್. ಹಾಗೂ

ಸಂತ ಫಿಲೋಮಿನಾ ಕಾಲೇಜಿನ ಬಿಬಿಎ ವಿದ್ಯಾರ್ಥಿಗಳಿಂದ ಕೈಗಾರಿಕಾ ಸಂದರ್ಶನ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ

ರಕ್ತದಾನ ಮಾಡುವುದು ಆರೋಗ್ಯ ಸಹಕಾರಿ; ಡಾ. ರಾಮಚಂದ್ರ ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಯೂತ್ ರೆಡ್ ಕ್ರಾಸ್ ಘಟಕದ ನೇತೃತ್ವದಲ್ಲಿ ರೆಡ್ ಕ್ರಾಸ್ ಪುತ್ತೂರು ಘಟಕ, ರೋಟರಿ ಕ್ಲಬ್ ಪುತ್ತೂರು ಹಾಗೂ ಪುತ್ತೂರಿನ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ರಕ್ತದಾನ ಶಿಬಿರವು ಮಂಗಳವಾರ ನಡೆಯಿತು. ಕಾರ್ಯಕ್ರಮದಲ್ಲಿ ರಕ್ತದಾನದ ಕುರಿತು ವಿಶೇಷ ಉಪನ್ಯಾಸ ನೀಡಿದ ಪುತ್ತೂರಿನ ಬ್ಲಡ್ ಬ್ಯಾಂಕ್ ನ ವೈದ್ಯಾಧಿಕಾರಿ ಡಾ. ರಾಮಚಂದ್ರ ಭಟ್ ಮಾತನಾಡಿ, ಸರಿಯಾದ ಕಾಲಕ್ಕೆ ರಕ್ತ ಸಿಗದೇ ಸಾಕಷ್ಟು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ವಿಶೇಷ

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ Read More »

ಮೇದಿನಿ ಎಂ. ಮರಾಠೆ ಅಂತರ್ ವಿವಿ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ಗೆ ಆಯ್ಕೆ

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಮೇದಿನಿ ಎಂ. ಮರಾಠೆ ಅವರು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ಗೆ ಆಯ್ಕೆಯಾಗಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನ ನೀಡಿದ್ದಾರೆ. ಜನವರಿ 27ರಿಂದ 30ರವರೆಗೆ ಚೆನೈನ ಬಿ.ಎಸ್.ಅಬ್ದುರ್ ರೆಹಮಾನ್ ಕ್ರೆಸೆಂಟ್ ಇನ್ಸಿಟಿಟ್ಯೂಟ್ ಆಫ್ ಸೈನ್ಸ್ ಎಂಡ್ ಟೆಕ್ನಾಲಜಿ ವಿಶ್ವವಿದ್ಯಾಲಯದ ಆಶ್ರಯದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಇವರು ವಿಶ್ವೇಶ್ವರಯ್ಯ

ಮೇದಿನಿ ಎಂ. ಮರಾಠೆ ಅಂತರ್ ವಿವಿ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ಗೆ ಆಯ್ಕೆ Read More »

ದೇಶಕ್ಕೆ ಸ್ವಾತಂತ್ರ್ಯ ದೊರೆಯುವಲ್ಲಿ ನೇತಾಜಿ ಪ್ರಯತ್ನ ಪ್ರಧಾನ ಭೂಮಿಕೆ | ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಪರಾಕ್ರಮ ದಿವಸ್ ಆಚರಣೆಯಲ್ಲಿ ಆದರ್ಶ ಗೋಖಲೆ

ಪುತ್ತೂರು: ನೇತಾಜಿ ಸುಭಾಷ್ ಚಂದ್ರ ಭೋಸ್ ಪ್ರತಿಯೊಬ್ಬ ಭಾರತೀಯನಿಗೂ ಸ್ಪೂರ್ತಿಯ ಚಿಲುಮೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಅವರ ಪ್ರಯತ್ನವೇ ಪ್ರಧಾನ ಭೂಮಿಕೆ ಎಂಬುದನ್ನು ಮರೆಮಾಚಬಾರದು. ಅವರು ದೇಶಕ್ಕಾಗಿ ಸರ್ವಸ್ವವನ್ನೂ ಸಮರ್ಪಿಸಿ, ದೇಶವಾಸಿಗಳ ಹೃದಯದಲ್ಲಿ ರಾರಾಜಿಸಿದವರು ಎಂದು ಅಂಬಿಕಾ ಪದವಿಪೂರ್ವ ವಿದ್ಯಾಲಯದ ಉಪನ್ಯಾಸಕ ಆದರ್ಶ ಗೋಖಲೆ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಆವರಣದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಯೋಜಿಸಲಾದ ’ಸುಭಾಷ್ ಚಂದ್ರ ಭೋಸ್ ಅವರ ಜನ್ಮಜಯಂತಿ

ದೇಶಕ್ಕೆ ಸ್ವಾತಂತ್ರ್ಯ ದೊರೆಯುವಲ್ಲಿ ನೇತಾಜಿ ಪ್ರಯತ್ನ ಪ್ರಧಾನ ಭೂಮಿಕೆ | ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಪರಾಕ್ರಮ ದಿವಸ್ ಆಚರಣೆಯಲ್ಲಿ ಆದರ್ಶ ಗೋಖಲೆ Read More »

ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವನೆ ಬೆಳೆಸಿಕೊಳ್ಳಬೇಕು | ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲಿ ವಿವಿಧ ಸ್ಪರ್ಧಾ ಕಾರ್ಯಕ್ರಮದಲ್ಲಿ ಗಿರೀಶ್ ನಂದನ್

ಪುತ್ತೂರು: ಸ್ಪರ್ಧಾ ಮನೋಭಾವನೆ ಬೆಳೆಸಿಕೊಂಡು ಎಲ್ಲಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕು. ಜತೆಗೆ ರಾಷ್ಟ್ರಭಕ್ತಿಯನ್ನು ಹೆಚ್ಚಿಸಿಕೊಂಡು ಬೆಳೆಯಬೇಕು ಎಂದು ಪುತ್ತೂರು ವಿಭಾಗದ ಸಹಾಯಕ ಆಯುಕ್ತ ಗಿರೀಶ್ ನಂದನ್ ಹೇಳಿದರು. ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ಜಂಟಿ ಆಶ್ರಯದೊಂದಿಗೆ 74ನೇ ಗಣರಾಜ್ಯೋತ್ಸವದ ಪ್ರಯುಕ್ತ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.ಅತಿಥಿಯಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ಮಾತನಾಡಿ ಎಲ್ಲಾ ಸ್ಪರ್ಧೆಗಳು ಮಕ್ಕಳ ಬೆಳವಣಿಗೆಗೆ

ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವನೆ ಬೆಳೆಸಿಕೊಳ್ಳಬೇಕು | ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲಿ ವಿವಿಧ ಸ್ಪರ್ಧಾ ಕಾರ್ಯಕ್ರಮದಲ್ಲಿ ಗಿರೀಶ್ ನಂದನ್ Read More »

19 ಕರ್ನಾಟಕ ಬೆಟಾಲಿಯನ್ ಎನ್ ಸಿ.ಸಿ. ಸಂಯೋಜಿತ ವಾರ್ಷಿಕ ತರಬೇತಿ ಶಿಬಿರ ಸಮಾರೋಪ| ಸಂತಫಿಲೋಮಿನಾ ಕಾಲೇಜಿನಲ್ಲಿ ಸಮಾರಂಭ

ಪುತ್ತೂರು: ಇಲ್ಲಿನ ಸಂತಫಿಲೋಮಿನಾ ಕಾಲೇಜು ಆವರಣದಲ್ಲಿ 19 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಸಂಯೋಜಿತ ವಾರ್ಷಿಕ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಸಂತ ಫಿಲೋಮಿನಾ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಿತು. ಸಮಾರೋಪ ಭಾಷಣ ಮಾಡಿದ ಶಿಬಿರದ ಕಮಾಂಡೆಂಟ್ ಕರ್ನಲ್ ಜೆಫ್ರಿನ್ ಜೆ. ಅರಾನ್ಹಾ, ಸಂಯೋಜಿತ ವಾರ್ಷಿಕ ತರಬೇತಿ ಶಿಬಿರದಲ್ಲಿ ಕೆಡೆಟ್ ತುರ್ತುಪರಿಸ್ಥಿತಿಯನ್ನು ಎದುರಿಸುವಲ್ಲಿ ಸಹಕಾರಿಯಾಗುವ ರೀತಿಯ ಪ್ರಾಥಮಿಕ ತರಬೇತಿಯನ್ನು ನೀಡಲಾಗುತ್ತದೆ. ಈ ಶಿಬಿರವು ಕೇವಲ 7 ದಿನಗಳದ್ಧಾಗಿದ್ದ ರೂ 3 ಜಿಲ್ಲೆಗಳ ಕೆಡೆಟ್ ಗಳನ್ನುಒಗ್ಗೂಡಿಸುತ್ತದೆ. ಪ್ರತಿಯೊಬ್ಬನ

19 ಕರ್ನಾಟಕ ಬೆಟಾಲಿಯನ್ ಎನ್ ಸಿ.ಸಿ. ಸಂಯೋಜಿತ ವಾರ್ಷಿಕ ತರಬೇತಿ ಶಿಬಿರ ಸಮಾರೋಪ| ಸಂತಫಿಲೋಮಿನಾ ಕಾಲೇಜಿನಲ್ಲಿ ಸಮಾರಂಭ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಪರಿಷತ್ 2022-23 ಉದ್ಘಾಟನೆ

ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣ ಬೆಳಿಸಿಕೊಳ್ಳಿ: ಮಿತ್ತಳಿಕೆ ಗಂಗಾಧರ್ ಶೆಟ್ಟಿ ಪುತ್ತೂರು: ವಿದ್ಯಾರ್ಥಿಗಳು ಉತ್ತಮ ಅಭ್ಯಾಸದ ಜೊತೆಗೆ ನಾಯಕತ್ವ ಗುಣ ಅಳವಡಿಸಿಕೊಂಡಾಗ ಮಾತ್ರ ಸಮರ್ಥ ವ್ಯಕ್ತಿಯಾಗಿ ನಿರ್ಮಾಣವಾಗಲು ಸಾಧ್ಯ. ಅಂತಹ ಭವಿಷ್ಯವನ್ನು ರೂಪಿಸಿಕೊಳ್ಳುವ ಕಾರ್ಯವನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಗುರಿಯಾಗಿಟ್ಟುಕೊಳ್ಳಿ ಎಂದು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿ, ಪ್ರಸ್ತುತ ಬೆಂಗಳೂರಿನ ಹಿರಿಯ ನ್ಯಾಯವಾದಿ, ಸಿ.ಬಿ.ಐ.ನ ವಿಶೇಷ ಅಭಿಯೋಜಕರಾಗಿರುವ ಶ್ರೀ ಮಿತ್ತಳಿಕೆ ಗಂಗಾಧರ್ ಶೆಟ್ಟಿ ಹೇಳಿದರು. ಅವರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಪರಿಷತ್ 2022-23ಕ್ಕೆ ದೀಪ ಬೆಳಗುವ

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಪರಿಷತ್ 2022-23 ಉದ್ಘಾಟನೆ Read More »

ಪೆರಿಯಡ್ಕದಲ್ಲಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಂದ ಆಂಗ್ಲ ಮಾಧ್ಯಮ ಶಾಲೆಗೆ ಶಿಲಾನ್ಯಾಸ

ಪುತ್ತೂರು: ಜಯಂತ್ಯೋತ್ಸವ ಸಂಸ್ಮರಣೆ ಕಾರ್ಯಕ್ರಮದ ಅಂಗವಾಗಿ ಜ. 22ರಂದು ಬೆಳಿಗ್ಗೆ ಉಪ್ಪಿನಂಗಡಿಯ ಪೆರಿಯಡ್ಕ ಬಿಜಿಎಸ್ ಶಾಲಾ ಆವರಣದಲ್ಲಿ ಆಂಗ್ಲ ಮಾಧ್ಯಮ ಶಾಲೆಗೆ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ, ಮೀನುಗಾರಿಕಾ ಇಲಾಖೆಯ ಸಚಿವ ಎಸ್. ಅಂಗಾರ, ಶಾಸಕ ಸಂಜೀವ ಮಠಂದೂರು ಮೊದಲಾದವರು ಉಪಸ್ಥಿತರಿದ್ದರು.

ಪೆರಿಯಡ್ಕದಲ್ಲಿ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಂದ ಆಂಗ್ಲ ಮಾಧ್ಯಮ ಶಾಲೆಗೆ ಶಿಲಾನ್ಯಾಸ Read More »

ರಾಜ್ಯ ಕಾನೂನು ವಿ.ವಿ ಮಟ್ಟದ ಮಹಿಳಾ ಮತ್ತು ಪುರುಷರ ಗುಡ್ಡಗಾಡು ಓಟ ಸ್ಪರ್ಧೆ: ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪ್ರಥಮ

ಪುತ್ತೂರು: ಸರಕಾರಿ ಕಾನೂನು ಮಹಾವಿದ್ಯಾಲಯದಲ್ಲಿ ಜ. 21ರಂದು ನಡೆದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಂತರ್ ಕಾಲೇಜು ಪುರುಷರ ಹಾಗೂ ಮಹಿಳಾ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯ ತಂಡ ಭಾಗವಹಿಸಿದ್ದು, ಎರಡು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಜೊತೆಗೆ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆರು ವಿದ್ಯಾರ್ಥಿಗಳು ಮುಂದೆ ನಡೆಯಲಿರುವ ಅಖಿಲ ಭಾರತೀಯ ದಕ್ಷಿಣ ಪ್ರಾಂತ ಅಂತರ್ ವಿಶ್ವವಿದ್ಯಾಲಯ ಕ್ರಾಸ್ ಕಂಟ್ರಿ ಸ್ಪರ್ಧೆಗೆ ಅರ್ಹತೆ ಪಡೆದಿದ್ದು, ಕರ್ನಾಟಕ ರಾಜ್ಯ ಕಾನೂನು ಮಹಾವಿದ್ಯಾಲಯದ ತಂಡವನ್ನು ಪ್ರತಿನಿಧಿಸಲಿದ್ದಾರೆ. ಪುರುಷರ

ರಾಜ್ಯ ಕಾನೂನು ವಿ.ವಿ ಮಟ್ಟದ ಮಹಿಳಾ ಮತ್ತು ಪುರುಷರ ಗುಡ್ಡಗಾಡು ಓಟ ಸ್ಪರ್ಧೆ: ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪ್ರಥಮ Read More »

error: Content is protected !!
Scroll to Top