ದೇಸೀಯ ಉತ್ಪನ್ನಗಳಿಗೆ ಬೆಂಬಲ ನೀಡಿದಾಗ ದೇಶ ಅಭಿವೃದ್ಧಿ | ಅಂಬಿಕಾ ಮಹಾವಿದ್ಯಾಲಯದಲ್ಲಿ ವೆಂಚುರಾ – ವಾಣಿಜ್ಯ ಸ್ಪರ್ಧೆ ಸಮಾರೋಪದಲ್ಲಿ ಸುಬ್ರಹ್ಮಣ್ಯ ನಟ್ಟೋಜ
ಪುತ್ತೂರು: ದೇಶದ ಬಗೆಗೆ ಅಭಿಮಾನವನ್ನು ಬೆಳೆಸುವಂತಹ ಕಾರ್ಯಚಟುವಟಿಕೆಗಳೊಂದಿಗೆ ವಿದ್ಯಾರ್ಥಿಗಳು ಬೆಳೆಯಬೇಕು. ದೇಸೀಯ ಸಾಧಕರು, ಅವರ ಸಾಧನೆಗಳು ನಮ್ಮ ಆದರ್ಶವಾಗಬೇಕು. ನಮ್ಮನ್ನು ಆಕರ್ಷಿಸುವ ಅನೇಕ ವಿದೇಶೀ ಮೂಲದ ವಸ್ತುಗಳಿದ್ದರೂ ನಮ್ಮ ನೆಲದ ಉತ್ಪನ್ನಗಳಿಗೆ ನಾವು ಬೆಂಬಲ ನೀಡಬೇಕು. ದೇಶಕ್ಕೆ ಸಂಕಷ್ಟ ಒದಗಿದಾಗ ನೆರವಾಗುವವರು ನಮ್ಮವರೇ ಹೊರತು ಅನ್ಯರಲ್ಲ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಆಶ್ರಯದಲ್ಲಿ […]










