ಕ್ಯಾಂಪಸ್‌

ಸಾಂಸ್ಕೃತಿಕ ಚಟುವಟಿಕೆಗಳಿಂದ ಸಂಸ್ಕಾರ ಬೆಳೆಯುತ್ತದೆ: ಸತೀಶ್ ರಾವ್

ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಮೇಧಾನ್ವೇಷ- 2022′ ಉದ್ಘಾಟನೆ ಪುತ್ತೂರು: ,ಡಿ 28.ಸಾಂಸ್ಕೃತಿಕ ಚಟುವಟಿಕೆಗಳಿಂದ ಸಂಸ್ಕಾರ ಬೆಳೆಯುತ್ತದೆ. ಮೆದುಳಿಗೆ ಶಿಕ್ಷಣ, ಶರೀರಕ್ಕೆ ಪೋಷಣೆ, ಹೃದಯಕ್ಕೆ ಸಂಸ್ಕಾರ ಎನ್ನುವ ಮಾತಿಗೆ ಪೂರಕವಾಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳನ್ನು ಈ ಎಲ್ಲಾ ಆಯಾಮಗಳಲ್ಲೂ ಸಮರ್ಥರನ್ನಾಗಿಸಲು ಹಲವು ವೇದಿಕೆಗಳ ಮುಖೇನ ಪ್ರಯತ್ನಿಸುತ್ತದೆ. ಅದೇ ರೀತಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತಿ ವಹಿಸುತ್ತಿ ರುವುದು ಶ್ಲಾಘನೀಯ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್ ಹೇಳಿದರು. ಅವರು ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ […]

ಸಾಂಸ್ಕೃತಿಕ ಚಟುವಟಿಕೆಗಳಿಂದ ಸಂಸ್ಕಾರ ಬೆಳೆಯುತ್ತದೆ: ಸತೀಶ್ ರಾವ್ Read More »

ಡಾ. ಕುರುಂಜಿ ವೆಂಕಟರಮಣ ಗೌಡ ಅವರ ೯೪ನೇ ಹುಟ್ಟುಹಬ್ಬ ಆಚರಣೆ

ಸುಳ್ಯ: ಡಾ. ಕುರುಂಜಿ ವೆಂಕಟರಮಣ ಗೌಡ ಅವರ ೯೪ನೇ ಹುಟ್ಟುಹಬ್ಬ ಆಚರಣೆಯು ಡಿ. ೨೬ರಂದು ಸುಳ್ಯ ಕೆವಿಜಿ ಕ್ಯಾಂಪಸ್‌ನಲ್ಲಿ ನಡೆಯಿತು. ಸುಳ್ಯ ಕೆಜಿವಿ ಕ್ಯಾಂಪಸ್‌ನಲ್ಲಿರುವ ಡಾ. ಕುರುಂಜಿ ವೆಂಕಟರಮಣ ಗೌಡ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಅವರಿಗೆ ಗೌರವ ಸೂಚಿಸಲಾಯಿತು. ಬಳಿಕ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ಜರಗಿತು. ಸುಳ್ಯದ ಕರ್ಮ ಯೋಗಿ ಎಂದೇ ಕರೆಯಲ್ಪಡುವ ಡಾ. ಕುರುಂಜಿ ವೆಂಕಟರಮಣ ಗೌಡ ಅವರು, ನವ ಸುಳ್ಯದ ನಿರ್ಮಾತೃರೂ ಹೌದು. ವೈದ್ಯಕೀಯ ಕಾಲೇಜು, ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ವಿದ್ಯಾಲಯವನ್ನು

ಡಾ. ಕುರುಂಜಿ ವೆಂಕಟರಮಣ ಗೌಡ ಅವರ ೯೪ನೇ ಹುಟ್ಟುಹಬ್ಬ ಆಚರಣೆ Read More »

ಸಂತ ಫಿಲೋಮಿನಾದ ದತ್ತು ಗ್ರಾಮ ಕೆದಂಬಾಡಿಯಲ್ಲಿ, ರಸ್ತೆ ದುರಸ್ಥಿ ಸ್ವಚ್ಛತೆ

ಪುತ್ತೂರು: ಕೆದಂಬಾಡಿ ಗ್ರಾಮವನ್ನು ದತ್ತು ಸ್ವೀಕರಿಸಿರುವ ಸಂತ ಫಿಲೋಮಿನಾ ಕಾಲೇಜಿನ ವತಿಯಿಂದ ಗ್ರಾಮದ ವಿವಿಧೆಡೆಗಳಲ್ಲಿ ರಸ್ತೆ ದುರಸ್ಥಿ ಹಾಗೂ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ನೇತೃತ್ವದಲ್ಲಿ ಕೆದಂಬಾಡಿ ಗ್ರಾಮ ಪಂಚಾಯತ್ ನ ಸಹಕಾರದೊಂದಿಗೆ ದತ್ತು ಸ್ವೀಕಾರದ ಬಳಿಕ ಪ್ರಥಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕೆದಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರತನ್ ರೈ ಮಾತನಾಡಿ, ಸ್ವಚ್ಛ ರಸ್ತೆ ಯಾವತ್ತೂ ಸುರಕ್ಷಿತ. ಈ ಹಿನ್ನೆಲೆಯಲ್ಲಿ ಸಂತ ಫಿಲೋಮಿನಾ

ಸಂತ ಫಿಲೋಮಿನಾದ ದತ್ತು ಗ್ರಾಮ ಕೆದಂಬಾಡಿಯಲ್ಲಿ, ರಸ್ತೆ ದುರಸ್ಥಿ ಸ್ವಚ್ಛತೆ Read More »

ಕೊಂಬೆಟ್ಟು ಸರಕಾರಿ ಪ.ಪೂ. ಕಾಲೇಜು, ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವ

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲಾ ವಿಭಾಗದ ವಾರ್ಷಿಕೋತ್ಸವ ದಿ. 24ರಂದು ನಡೆಯಿತು. ಅಧ್ಯಕ್ಷತೆ ವಹಿಸಿದ್ಧ ಶಾಸಕ ಸಂಜೀವ ಮಠದೂರು ಮಾತನಾಡಿ,  364 ದಿನಗಳಲ್ಲಿ ಎಲ್ಲಾ ಸಿಗುವ ಒಂದು ದಿನವಂದರೆ ವಾರ್ಷಿಕೋತ್ಸವ. ಎಲ್ಲಾ ಮಕಳ ಪ್ರತಿಭೆ ಹಾಗೂ ಎಲ್ಲಾ ವಿದ್ಯಾರ್ಥಿಗಳು ವರ್ಷದಲ್ಲಿ ಮಾಡಿರುವ ಸಾಧನೆಯನ್ನು, ಪ್ರತಿಭೆಯನ್ನು ಪ್ರದರ್ಶಿಸುವ ಅವಕಾಶ ವಾರ್ಷಿಕೋತ್ಸವದಲ್ಲಿ ಆಗುತ್ತದೆ.  ಒಂದು ಪಾರಂಪರಿಕ ಕಾಲೇಜು, 100 ವರ್ಷ ಇತಿಹಾಸ ಇರುವ ಕಾಲೇಜು, ಶಿವರಾಮ ಕಾರಂತರು ಓಡಾಡಿದ ನೆಲ, ಮೊಳಹಳ್ಳಿ ಶಿವರಾಯರ

ಕೊಂಬೆಟ್ಟು ಸರಕಾರಿ ಪ.ಪೂ. ಕಾಲೇಜು, ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವ Read More »

ಮೌಲ್ಯಗಳು ಪ್ರತಿಯೊಬ್ಬನ ಬದುಕಿಗೂ ಆಧಾರ ಸ್ತಂಭ | ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಫ್ಯಾಕಲ್ಟಿ ಡೆವಲಪ್ಮೆಂಟ್ ಕಾರ್ಯಕ್ರಮದಲ್ಲಿ ಡಾ. ಗುರುರಾಜ ಕರಜಗಿ

ಪುತ್ತೂರು: ಬುದ್ಧಿಗೆ ಬೋಧಕವಾದ ವಿಚಾರಗಳು ಅಲ್ಪ ಸಮಯ ಮಾತ್ರ ಉಳಿದುಕೊಳ್ಳುತ್ತವೆ. ಆದರೆ ಮನಸ್ಸಿಗೆ ಬೋಧಕವಾದ ವಿಚಾರ ಶಾಶ್ವತವಾಗಿ ಉಳಿದುಕೊಳ್ಳುತ್ತವೆ. ಆದ್ದರಿಂದ ಮನಸ್ಸಿನಲ್ಲಿ ಅಚ್ಚೊತ್ತಬಹುದಾದ ಜೀವನ ಮೌಲ್ಯಗಳು ಪ್ರತಿಯೊಬ್ಬನಿಗೂ ಅತ್ಯಂತ ಅಗತ್ಯ. ಎಲ್ಲರ ಜೀವನದಲ್ಲೂ ಮೌಲ್ಯಗಳು ಮಹತ್ವದ ಪಾತ್ರ ವಹಿಸುತ್ತದೆ. ಅವುಗಳೇ ಬದುಕಿಗೆ ಆಧಾರ ಸ್ತಂಭಗಳಾಗಿವೆ. ನುಡಿದಂತೆ ನಡೆಯುವ, ನಡೆವಂತೆ ನುಡಿಯುವ ವ್ಯಕ್ತಿತ್ವ ಎಲ್ಲರಿಂದಲೂ ಗೌರವಕ್ಕೆ ಪಾತ್ರವಾಗುತ್ತದೆ ಎಂದು ಶಿಕ್ಷಣ ತಜ್ಞ, ಹಿರಿಯ ಪ್ರಾಧ್ಯಾಪಕ ಡಾ. ಗುರುರಾಜ ಕರಜಗಿ ಹೇಳಿದರು. ನಟ್ಟೋಜ ಫೌಂಡೇಶನ್ ಟ್ರಸ್ಟಿನ ಬಪ್ಪಳಿಗೆ ಅಂಬಿಕಾ ಸಿ.ಬಿ.ಎಸ್.ಇ

ಮೌಲ್ಯಗಳು ಪ್ರತಿಯೊಬ್ಬನ ಬದುಕಿಗೂ ಆಧಾರ ಸ್ತಂಭ | ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಫ್ಯಾಕಲ್ಟಿ ಡೆವಲಪ್ಮೆಂಟ್ ಕಾರ್ಯಕ್ರಮದಲ್ಲಿ ಡಾ. ಗುರುರಾಜ ಕರಜಗಿ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ

ಪುತ್ತೂರು: ಭಾರತದ ಗಣಿತ ಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್‌ ಅವರ ಜನ್ಮದಿನವನ್ನು ಡಿ. 22ರಂದು ರಾಷ್ಟ್ರೀಯ ಗಣಿತ ಶಾಸ್ತ್ರ ದಿನವಾಗಿ ಆಚರಿಸುತ್ತಿದ್ದು, ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಗಣಿತ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ರಾಮಾನುಜನ್‌ ರವರ ವ್ಯಕ್ತಿತ್ವ ಹಾಗೂ ಸಾಧನೆಗಳ ಬಗ್ಗೆ ಉಪನ್ಯಾಸ, ವಿದ್ಯಾರ್ಥಿಗಳಿಗಾಗಿ ಸೆಮಿನಾರ್‌, ರಸಪ್ರಶ್ನೆ ಸ್ಪರ್ಧೆ ಕಾಲೇಜಿನಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ ವಂ| ಲಾರೆನ್ಸ್‌ ಮಸ್ಕರೇಞಸ್‌ ಮಾತನಾಡಿ, ವಿದ್ಯಾರ್ಥಿಗಳು ಗಣಿತದಲ್ಲಿ ಮಹತ್ವದ ಸಾಧನೆಯನ್ನು ಮಾಡುವಂತೆ ಪ್ರೇರೇಪಿಸಿದರು. ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆ್ಯಂಟನಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ Read More »

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಡಿ. 23ರಂದು ವಿದ್ಯಾಚೇತನ ಆಡಿಟೋರಿಯಂನಲ್ಲಿನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಸಂಸ್ಥೆಯ ಸಂಚಾಲಕ ಸೀತಾರಾಮ ರೈ ಸವಣೂರು ಮಾತನಾಡಿ, ಕಲಿತ ಶಾಲೆಗೆ ಕೊಡುಗೆ ನೀಡುವುದರಿಂದ ಸಮಾಜಕ್ಕೆ ಉತ್ತಮ ಸಂದೇಶ ರವಾನಿಸಿದಂತಾಗುತ್ತದೆ. ಅಲ್ಲದೇ, ಹಿರಿಯ ವಿದ್ಯಾರ್ಥಿಗಳು ಶಾಲೆಗೆ ಮತ್ತೊಮ್ಮೆ ಬಂದು, ಕಾರ್ಯಕ್ರಮ ಆಯೋಜಿಸುವುದರಿಂದ ವಿದ್ಯಾರ್ಥಿಗಳಿಗೆ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಿದಂತಾಗುತ್ತದೆ ಎಂದರು.ಇದೇ ಸಂದರ್ಭ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಧ್ರುವ ಮುಂದೋಡಿ, ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಆಪ್ಟಮ್‌ ಕಂಪನಿಯ ಕ್ಯಾಂಪಸ್‌ ನೇಮಕಾತಿ ತರಬೇತಿ ಸಮಾರೋಪ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವೃತ್ತಿ ಮಾರ್ಗದರ್ಶನ ಹಾಗೂ ನೇಮಕಾತಿ ಕೋಶ ಮತ್ತುಆಂತರಿಕ ಗುಣಮಟ್ಟ ಭರವಸೆ ಕೋಶಗಳ ಆಶ್ರಯದಲ್ಲಿ ಯುನೈಟೆಡ್‌ ಸ್ಟೇಟ್ಸ್‌ ಮೂಲದ ಬಹುರಾಷ್ಟ್ರೀಯ ಹೆಲ್ತ್‌ ಕೇರ್‌ ಮತ್ತು ಇನ್ಶೂರೆನ್ಸ್ ಕಂಪನಿ ಆಪ್ಟಮ್‌ನ ಮೆಡಿಕಲ್‌ ಕೋಡರ್‌ ಹುದ್ದೆಗಳಿಗಾಗಿ ನಡೆದ ನೇಮಕಾತಿ ತರಬೇತಿಯ ಸಮಾರೋಪ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆ್ಯಂಟನಿ ಪ್ರಕಾಶ್‌ ಮೊಂತೆರೊ ಮಾತನಾಡಿ, ಯಾವುದೇ ಕಾರ್ಯದಲ್ಲಿ ನಾವು ಪ್ರಾಮಾಣಿಕ ಪ್ರಯತ್ನಪಟ್ಟರೆ ಯಶಸ್ಸು ನಿಶ್ಚಿತ. ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸುವುದು ಮಾತ್ರವಲ್ಲದೆ, ಉದ್ಯೋಗಕ್ಕಾಗಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಆಪ್ಟಮ್‌ ಕಂಪನಿಯ ಕ್ಯಾಂಪಸ್‌ ನೇಮಕಾತಿ ತರಬೇತಿ ಸಮಾರೋಪ Read More »

ಡಿ. 24: ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಸಂವಾದ, ಡಾ.ಗುರುರಾಜ ಕರಜಗಿ ಉಪನ್ಯಾಸ

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಡಿ. ೨೪ರಂದು ಫ್ಯಾಕಲ್ಟಿ ಡೆವಲಪ್‌ಮೆಂಟ್ ಕಾರ್ಯಕ್ರಮ ಹಾಗೂ ಹೆತ್ತವರೊಂದಿಗೆ ಸಂವಾದ ನಡೆಯಲಿದೆ. ಅಂತಾರಾಷ್ಟ್ರೀಯ ತರಬೇತುದಾರ, ಶಿಕ್ಷಣ ತಜ್ಞ ಡಾ. ಗುರುರಾಜ ಕರಜಗಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಬೆಳಗ್ಗೆ 9ಕ್ಕೆ ಡಾ.ಕರಜಗಿ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸುವರು. ತದನಂತರ 10.30ರಿಂದ 12.30ರ ವರೆಗೆ ಶಿಕ್ಷಕರೊಂದಿಗೆ ಸಂವಾದ ನಡೆಸಲಿದ್ದಾರೆ. ಅಪರಾಹ್ನ 1.30ರಿಂದ ಹೆತ್ತವರೊಂದಿಗೆ ಡಾ. ಗುರುರಾಜ ಕರಜಗಿ ಸಂವಾದ ನಡೆಸಲಿದ್ದು, ಸಾರ್ವಜನಿಕರಿಗೂ ಮುಕ್ತ ಅವಕಾಶ ಕಲ್ಪಿಸಿಕೊಡಲಾಗಿದೆ.

ಡಿ. 24: ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಸಂವಾದ, ಡಾ.ಗುರುರಾಜ ಕರಜಗಿ ಉಪನ್ಯಾಸ Read More »

ನೀವು ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆಯುಳ್ಳವರೇ? ಹಾಗಾದರೆ ಮ್ಯಾನೇಜರ್, ಸೇಲ್ಸ್‍ ಎಕ್ಸಿಕ್ಯೂಟಿವ್, ಅಕೌಂಟೆಂಟ್ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ಪುತ್ತೂರು: ರಾಜ್ಯದ ಪ್ರತಿಷ್ಠಿತ ಕಂಪೆನಿಯೊಂದರಲ್ಲಿ ಮ್ಯಾನೇಜರ್, ಸೇಲ್ಸ್ ಎಕ್ಸಿಕ್ಯೂಟಿವ್, ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕದಾದ್ಯಂತ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಕೆಲಸ ನಿರೀಕ್ಷೆಯಲ್ಲಿರುವ ಯುವಕರಿಗೆ ಇದು ಸುವರ್ಣಾವಕಾಶ. 21ರಿಂದ 27 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. 15 ಸಾವಿರ ರೂ. ಮೇಲ್ಪಟ್ಟ ವೇತನದೊಂದಿಗೆ ಆಹಾರ, ವಸತಿ ವ್ಯವಸ್ಥೆ ನೀಡಲಾಗುವುದು. ಮಾಹಿತಿಗಾಗಿ ಸಂಪರ್ಕಿಸಿ: 8904877721,7204977721

ನೀವು ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆಯುಳ್ಳವರೇ? ಹಾಗಾದರೆ ಮ್ಯಾನೇಜರ್, ಸೇಲ್ಸ್‍ ಎಕ್ಸಿಕ್ಯೂಟಿವ್, ಅಕೌಂಟೆಂಟ್ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ Read More »

error: Content is protected !!
Scroll to Top