ಕ್ಯಾಂಪಸ್‌

ರಾಷ್ಟ್ರಮಟ್ಟದ ಗಣಿತ ಜ್ಞಾನ-ವಿಜ್ಞಾನ ಮೇಳ | ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ನಿಖಿಲ್‍ ದ್ವಿತೀಯ

ಪುತ್ತೂರು:: ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಕೃತಿ ಮಹೋತ್ಸವ ವತಿಯಿಂದ ನಡೆದ ರಾಷ್ಟ್ರಮಟ್ಟದ  ಗಣಿತ ವಿಜ್ಞಾನ ಮೇಳದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ನಿಖಿಲ್‍ ಕ್ಲೇ ಮಾಡೆಲಿಂಗ್‍ ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಮಧ್ಯಪ್ರದೇಶದ ಉಜ್ಜೈನಿಯ ಸರಸ್ವತಿ ವಿದ್ಯಾ ಮಂದಿರದ ಸಂಸ್ಕೃತಿ ಭವನದಲ್ಲಿ ನಡೆದ ರಾಷ್ಟ್ರಮಟ್ಟದ ಗಣಿತ-ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವ ಸ್ಪರ್ಧೆ ನಡೆದಿತ್ತು. ನಿಖಿಲ್‍ ಕೋಡಿಂಬಾಡಿ ನಿವಾಸಿ ಕೃಷ್ಣಪ್ಪ ಮತ್ತು ಧನವತಿ ದಂಪತಿ ಪುತ್ರ. ಶಾಲಾ ಚಿತ್ರಕಲಾ ಶಿಕ್ಷಕ ರುಕ್ಮಯ ತರಬೇತಿ ಮಾರ್ಗದರ್ಶನ ನೀಡಿದ್ದರು.

ರಾಷ್ಟ್ರಮಟ್ಟದ ಗಣಿತ ಜ್ಞಾನ-ವಿಜ್ಞಾನ ಮೇಳ | ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ನಿಖಿಲ್‍ ದ್ವಿತೀಯ Read More »

ಸಂತಫಿಲೋಮಿನ(ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿನಿಯರು ಅಂತರ್ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ವಿದ್ಯಾರ್ಥಿನಿಯರು 64 ಕೆಜಿ ವಿಭಾಗದ ಸೌತ್ ವೆಸ್ಟ್ ಝೋನ್ ವೇಟ್ ಲಿಫ್ಟಿಂಗ್ ಸ್ಪರ್ಧೆಗೆ ಅಂತರ್ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಆಯ್ಕೆ ಟ್ರಯಲ್ ನಡೆಯಿತು. ಬ್ಯೂಲಾ ಪಿ. ಟಿ. 64 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್ ಸ್ಪರ್ಧೆಗೆ ಆಯ್ಕೆಯಾದರು. ದ್ವಿತೀಯ ಬಿಎಸ್ಸಿ ಯ. ಸ್ಪಂದನಾ 45 ಕೆಜಿ ವಿಭಾಗದಲ್ಲಿ ಆಯ್ಕೆಯಾದರು. ಅಂತರ್ ವಿಶ್ವವಿದ್ಯಾಲಯದ ಸ್ಪರ್ಧೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆಯಲಿದೆ.

ಸಂತಫಿಲೋಮಿನ(ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿನಿಯರು ಅಂತರ್ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ “ಅಮೇರಿಕಾ ಚುನಾವಣಾ ಫಲಿತಾಂಶದ ವಿಶ್ಲೇಷಣಾ ಕಾರ್ಯಕ್ರಮ” | ಅಮೇರಿಕಾ ವಿಭಿನ್ನ ಮನಸ್ಥಿತಿಯ ದೇಶವಾಗಿದೆ: ವಿಶ್ವೇಶ್ವರ ಭಟ್ ಬಂಗಾರಡ್ಕ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಚರ್ಚಾ ಕೂಟದ ಆಶ್ರಯದಲ್ಲಿ ‘ಅಮೇರಿಕಾ ಚುನಾವಣಾ ಫಲಿತಾಂಶದ ವಿಶ್ಲೇಷಣಾ’ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ರಾಜಕೀಯ ವಿಶ್ಲೇಷಕ, ವಿವೇಕಾನಂದ ಪಾಲಿಟೆಕ್ಣಿಕ್ ನ ಆಡಳಿತ ಮಂಡಳಿ ಅಧ್ಯಕ್ಷ ವಿಶ್ವೇಶ್ವರ ಭಟ್ ಬಂಗಾರಡ್ಕ ಅವರು, ಅಮೇರಿಕಾವು ವಿಭಿನ್ನ ಮನಸ್ಥಿತಿಯ ದೇಶವಾಗಿದೆ. ಅಲ್ಲಿಯೂ ಭಾರತದಲ್ಲಿ ಇರುವಂತಹ ಹಲವಾರು ಸಾಮಾಜಿಕ ಸಮಸ್ಯೆಗಳಿವೆ. ಅಮೇರಿಕಾದ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಸ್ಥಿತಿಗತಿಗಳನ್ನು ವಿವರಿಸಿ, ಅಲ್ಲಿನ ಸಮಸ್ಯೆಗಳನ್ನು ಭಾರತಿಯ ಸಮಾಜದ ಜೊತೆಗೆ ಹೋಲಿಕೆ

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ “ಅಮೇರಿಕಾ ಚುನಾವಣಾ ಫಲಿತಾಂಶದ ವಿಶ್ಲೇಷಣಾ ಕಾರ್ಯಕ್ರಮ” | ಅಮೇರಿಕಾ ವಿಭಿನ್ನ ಮನಸ್ಥಿತಿಯ ದೇಶವಾಗಿದೆ: ವಿಶ್ವೇಶ್ವರ ಭಟ್ ಬಂಗಾರಡ್ಕ Read More »

ವಿವೇಕಾನಂದ ಕಾಲೇಜಿನಲ್ಲಿ  ರಾಷ್ಟ್ರೀಯ ವಿಚಾರ ಸಂಕಿರಣ | ಮಾನವಿಕ ವಿಭಾಗಗಳ ಅಸ್ಮಿತೆಯನ್ನು ಉಳಿಸಬೇಕಾಗಿದೆ : ಡಾ.ತಾಳ್ತಜೆ ವಸಂತ ಕುಮಾರ್

ಪುತ್ತೂರು: ನಾವು ಆಯ್ದುಕೊಳ್ಳುವ ಜ್ಞಾನದ ಶಾಖೆ ಯಾವುದೇ ಆಗಿದ್ದರು ಕೂಡ ಅದರಲ್ಲಿ ಮುಖ್ಯವಾಗಿ ನಮಗೆ ತೃಪ್ತಿ ಇರಬೇಕು, ಹಾಗೆಯೇ ಮಾನವಿಕ ವಿಯಷಯಗಳಲ್ಲಿ ಪ್ರತಿಯೊಂದು ವಿxಯ ತನ್ನದೇ ಆದ ಮಹತ್ವವನ್ನು ಹೊಂದಿದೆ. ಹಾಗೆಯೇ ಈ ತಂತ್ರಜ್ಞಾನ ಯುಗದಲ್ಲಿ ಮಾನವಿಕ ವಿಷಯಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಿ ಉಳಿಸಿಕೊಳ್ಳಬೇಕಾದ ಅನಿವಾರ್ಯತೆಯಿದೆ ಎಂದು ಮುಂಬೈ ವಿಶ್ವವಿದ್ಯಾಲಯದ, ಕನ್ನಡ ವಿಭಾಗದ ವಿಶ್ರಾಂತ ಪ್ರಾದ್ಯಾಪಕ ಡಾ. ತಾಳ್ತಜೆ  ವಸಂತ ಕುಮಾರ್  ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ ) ಇಲ್ಲಿ ಐಕ್ಯೂಎಸಿ

ವಿವೇಕಾನಂದ ಕಾಲೇಜಿನಲ್ಲಿ  ರಾಷ್ಟ್ರೀಯ ವಿಚಾರ ಸಂಕಿರಣ | ಮಾನವಿಕ ವಿಭಾಗಗಳ ಅಸ್ಮಿತೆಯನ್ನು ಉಳಿಸಬೇಕಾಗಿದೆ : ಡಾ.ತಾಳ್ತಜೆ ವಸಂತ ಕುಮಾರ್ Read More »

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯಗಳ ಅಂತರ್ ಕಾಲೇಜು ಮಟ್ಟದ ಗುಡ್ಡಗಾಡು ಓಟ | ವಿವೇಕಾನಂದ ಕಾನೂನು ಮಹಾವಿದ್ಯಾಲಯ ಸತತ ನಾಲ್ಕನೇ ಬಾರಿಗೆ ಚಾಂಪಿಯನ್

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಮತ್ತೊಂದು ಸಾಧನೆ ಮಾಡುವ ಮಹಾವಿದ್ಯಾಲಯದ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿಯನ್ನು ಸೇರಿಸಿದ್ದಾರೆ. ಚಿಕ್ಕೋಡಿಯ ಕೆ.ಎಲ್.ಇ. ಸೊಸೈಟಿ ಕಾನೂನು ಮಹಾವಿದ್ಯಾಲಯದಲ್ಲಿ,  ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯ ಆಯೋಜಿಸಿದ ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯಗಳ ಅಂತರ್ ಕಾಲೇಜು ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪುರುಷರ ಮತ್ತು ಮಹಿಳೆಯರ ವಿಭಾಗದಲ್ಲಿ ಸತತ ನಾಲ್ಕನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ಅಮೋಘ ಪ್ರದರ್ಶನ ನೀಡಿದ್ದಾರೆ. ಜೊತೆಗೆ ಚತುರ್ಥ ಬಿ.ಎ.ಎಲ್.ಎಲ್.ಬಿ.ಯ ವಿದ್ಯಾರ್ಥಿ ವಿಜಯ್

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯಗಳ ಅಂತರ್ ಕಾಲೇಜು ಮಟ್ಟದ ಗುಡ್ಡಗಾಡು ಓಟ | ವಿವೇಕಾನಂದ ಕಾನೂನು ಮಹಾವಿದ್ಯಾಲಯ ಸತತ ನಾಲ್ಕನೇ ಬಾರಿಗೆ ಚಾಂಪಿಯನ್ Read More »

ಎವಿಜಿ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಪುತ್ತೂರು :ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಗುರುವಾರ ಆಚರಿಸಲಾಯಿತು. ಬೆಳಿಗ್ಗೆ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ದೊಂದಿಗೆ ಪ್ರಾರಂಭಿಸಿ ಆ ಬಳಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು    ಶಾಲಾ ವಿದ್ಯಾರ್ಥಿ ನಾಯಕ ಮಾಸ್ಟರ್ ಅದ್ವಿಕ್  ಬಂಜನ್ ವಹಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಕುಮಾರಿ ಜ್ಞಾನ  ರೈ ಮಾತನಾಡಿ, ಮಕ್ಕಳ ಪ್ರತಿಭೆಯನ್ನು ಹೊರಹಮ್ಮಿಸಲು ಶಾಲೆಯು ಪ್ರಧಾನ ಪಾತ್ರ ವಹಿಸುತ್ತದೆ, ಮಕ್ಕಳಿಗೆ ಪ್ರೋತ್ಸಾಹ ನೀಡುವಂತೆ ಮಾತನಾಡಿ ಹೆಣ್ಣು ಮಕ್ಕಳ ಸುರಕ್ಷತೆಯ

ಎವಿಜಿ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ Read More »

ಪುಣ್ಚಪ್ಪಾಡಿ ಹಿ.ಪ್ರಾ. ಶಾಲೆಯ ವಾರ್ಷಿಕ ಕ್ರೀಡಾಕೂಟ | ವಿದ್ಯಾರ್ಥಿಗಳು, ಪೋಷಕರು, ಹಿರಿಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಗೆ ವಿವಿಧ ಸ್ಪರ್ಧೆಗಳು

ಸವಣೂರು: ಪುಣ್ಚಪ್ಪಾಡಿ  ಸ. ಹಿ. ಪ್ರಾ. ಶಾಲೆಯ ವಾರ್ಷಿಕ ಕ್ರೀಡಾಕೂಟ ನಡೆಯಿತು. ಸವಣೂರು ಗ್ರಾಮ ಪಂಚಾಯತ್ ಸದಸ್ಯ ಗಿರಿಶಂಕರ ಸುಲಾಯ ಪ್ರಜ್ವಲನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸರಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣದ ಜೊತೆಗೆ ಕ್ರೀಡೆಗೂ ಪ್ರಾಶಸ್ತ್ಯವನ್ನು ನೀಡುತ್ತಿದ್ದು ದೇಹ ಸಧೃಡವಾಗಿ ಬೆಳೆಯಲು ವ್ಯಾಯಾಮ, ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದು ಮುಖ್ಯ ಎಂದರು. ಸವಣೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷೆ ಜಯಶ್ರೀ ಕುಚ್ಚೆಜಾಲು, ಸದಸ್ಯ ಬಾಬು ಜರಿನಾರು ಕ್ರೀಡಾ ಜ್ಯೋತಿ ಬೆಳಗಿಸಿ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು. ವಿದ್ಯಾರ್ಥಿಗಳು ತಮ್ಮ

ಪುಣ್ಚಪ್ಪಾಡಿ ಹಿ.ಪ್ರಾ. ಶಾಲೆಯ ವಾರ್ಷಿಕ ಕ್ರೀಡಾಕೂಟ | ವಿದ್ಯಾರ್ಥಿಗಳು, ಪೋಷಕರು, ಹಿರಿಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಗೆ ವಿವಿಧ ಸ್ಪರ್ಧೆಗಳು Read More »

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಿಂದ “ಹೂಡಿಕೆ ಜಾಗೃತಿ” ಕಾರ್ಯಗಾರ

ಸವಣೂರು : ಇಲ್ಲಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ “ಹೂಡಿಕೆ ಜಾಗೃತಿ” ಕಾರ್ಯಗಾರ ನಡೆಯಿತು. ಕಾರ್ಯಗಾರವನ್ನು ಸಂಸ್ಥೆಯ ಉಪ ಪ್ರಾಂಶುಪಾಲ  ಶೇಷಗಿರಿ ಎಂ. ಉದ್ಘಾಟಿಸಿದರು. ಕಾರ್ಯಗಾರ 2 ಅವಧಿಯನ್ನು ಒಳಗೊಂಡಿದ್ದು ಸಂಪನ್ಮೂಲ ವ್ಯಕ್ತಿಯಾಗಿ ಎಮ್. ಎಫ್. ಐ ರಿಜ್ ಮ್ಯುಚ್ಯೂವಲ್ ಫಂಡ್ ಡಿಸ್ಟ್ರಿಬ್ಯೂಟರ್ ಮತ್ತು ಫಿನಾನ್ಶಿಯಲ್ ಎಡ್ವೈಸರ್ ನಿರಂಜನ್ ರೈ ಇಲಾವರು ಸ್ಟಾಕ್ ಮಾರ್ಕೆಟ್ ಮತ್ತು ಮ್ಯುಚ್ಚಲ್ ಫಂಡ್ ಎಂಬ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.  ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ. ನಾರಾಯಣ ಮೂರ್ತಿ

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಿಂದ “ಹೂಡಿಕೆ ಜಾಗೃತಿ” ಕಾರ್ಯಗಾರ Read More »

ವಿಟಿಯು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಚಿನ್ನ ಹಾಗೂ ಬೆಳ್ಳಿಯ ಪದಕದ ಸಾಧನೆ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಅಂತರ್ಕಾಲೇಜು ಭಾರ ಎತ್ತುವ ಸ್ಪರ್ಧೆಯಲ್ಲಿ ಒಂದು ಚಿನ್ನ ಹಾಗೂ ಒಂದು ಬೆಳ್ಳಿ ಪದಕವನ್ನು ಗಳಿಸಿಕೊಂಡಿದ್ದಾರೆ. ಮೂಡಬಿದ್ರೆಯ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ದ್ವಿತೀಯ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಭುವನ್‌ರಾಮ್ ಜಗದೀಶ್ ಭಂಡಾರಿ 73 ಕೆಜಿ ವಿಭಾಗದಲ್ಲಿ ಒಟ್ಟು 190 ಕೆಜಿ ಭಾರ ಎತ್ತುವುದರ ಮೂಲಕ ಚಿನ್ನದ ಪದಕದ ಸಾಧನೆ ಮಾಡಿದ್ದಾರೆ. ಇದೇ

ವಿಟಿಯು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಚಿನ್ನ ಹಾಗೂ ಬೆಳ್ಳಿಯ ಪದಕದ ಸಾಧನೆ Read More »

ವಿವೇಕಾನಂದ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ | ಭಾಷೆಯ ಬಾಂಧವ್ಯ ಬೆಳೆಯಲಿ : ಡಾ. ಜಿ. ಎನ್. ಭಟ್

ಪುತ್ತೂರು: ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ತಾಂತ್ರಿಕ ಯುಗದಲ್ಲಿ ಭಾಷೆಯ ಕುರಿತಾಗಿ ಅಸ್ಥಿರತೆ ಬಂದು ಮಕ್ಕಳ ಮನಸ್ಥಿತಿ ಹದಗೆಟ್ಟಿದೆ. ಇದರಿಂದ ಭಾಷೆ ಮೂಲೆ ಗುಂಪಾಗುವ ಸಾಧ್ಯತೆ ಇದೆ. ನಮ್ಮ ಭಾಷೆಯ ಮೇಲೆ ಅಭಿಮಾನದ ಜೊತೆಗೆ  ಭಾಷೆಯ ಬಾಂಧವ್ಯವೂ ಕೂಡಾ ಬೆಳೆಯಲಿ ಎಂದು ಮಂಗಳೂರು ಕೆನರಾ ಕಾಲೇಜಿನ ನಿವೃತ್ತ ಪ್ರಿನ್ಸಿಪಾಲ್‍ ಡಾ. ಜಿ. ಎನ್. ಭಟ್ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಐಕ್ಯೂಎಸಿ ಘಟಕ ಮತ್ತು  ಭಾಷಾ ವಿಭಾಗದ ಜಂಟಿ

ವಿವೇಕಾನಂದ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ | ಭಾಷೆಯ ಬಾಂಧವ್ಯ ಬೆಳೆಯಲಿ : ಡಾ. ಜಿ. ಎನ್. ಭಟ್ Read More »

error: Content is protected !!
Scroll to Top