ಕ್ಯಾಂಪಸ್‌

ವಿವೇಕಾನಂದ ಕಾಲೇಜಿನ ಎನ್‌ ಸಿಸಿ ಕೆಡೆಟ್ ಗಳ ಅಗ್ರಮಾನ್ಯ ಸಾಧನೆ | ದೆಹಲಿಯ ಆರ್‌ ಡಿಸಿ ಪರೇಡ್ ನಲ್ಲಿ ಭಾಗವಹಿದ ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ

ಪುತ್ತೂರು: ವಿವೇಕಾನಂದ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ನಮ್ಮ ಕಾಲೇಜಿನ ಹೆಸರನ್ನು ದೇಶದಾದ್ಯಂತ  ಪಸರಿಸಿದ್ದಾರೆ. ಬದುಕಿನ ಈ ಹಂತದಲ್ಲಿ ಆರ್‌ಡಿಸಿ ಪರೇಡ್ ನಲ್ಲಿ ಭಾಗವಹಿಸಿ ಮಹತ್ತರ ಸಾಧನೆ ಮಾಡಿದ್ದಾರೆ. ಇವರ ಸಾಧನೆ ಮತ್ತಷ್ಟು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಹೇಳಿದರು. ಅವರು  ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ಇಲ್ಲಿ ಎನ್‌ಸಿಸಿ ಘಟಕ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಆಯೋಜಿಸಿದ  ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ […]

ವಿವೇಕಾನಂದ ಕಾಲೇಜಿನ ಎನ್‌ ಸಿಸಿ ಕೆಡೆಟ್ ಗಳ ಅಗ್ರಮಾನ್ಯ ಸಾಧನೆ | ದೆಹಲಿಯ ಆರ್‌ ಡಿಸಿ ಪರೇಡ್ ನಲ್ಲಿ ಭಾಗವಹಿದ ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ Read More »

ವೀರಮಂಗಲ ಶಾಲೆಯಲ್ಲಿ ಮೇಳೈಸಿದ 27ನೇ ವರ್ಷದ 58 ಕೆ.ಜಿ.ವಿಭಾಗದ ಮುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ | ಹಿರಿಯ ವಿದ್ಯಾರ್ಥಿ ಸಂಘದ ಪದಗ್ರಹಣ | ನಾನಾ ಕ್ಷೇತ್ರದ ಸಾಧಕರಿಗೆ ಸನ್ಮಾನ

ಪುತ್ತೂರು: ದ.ಕ.ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್‍ ಸಹಕಾರದಲ್ಲಿ ವೀರಮಂಗಲ ರೈಸಿಂಗ್‍ ಸ್ಟಾರ್ ಸ್ಪೋರ್ಟ್ಸ್‍ ಕ್ಲಬ್‍ ಆಶ್ರಯದಲ್ಲಿ 27ನೇ ವರ್ಷದ 58 ಕೆ.ಜಿ.ವಿಭಾಗದ ಮುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭ ಭಾನುವಾರ ರಾತ್ರಿ ವೀರಮಂಗಲ ಶಾಲಾ ಮೈದಾನದಲ್ಲಿ ನಡೆಯಿತು. ನರಿಮೊಗರು ಗ್ರಾಮ ಪಂಚಾಯತ್  ಸದಸ್ಯೆ ವಸಂತಿ ವಿ. ಗಂಡಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಮ್ಯಾಟ್ ಕಬಡ್ಡಿ ವೀರಮಂಗಲದ ಹಳ್ಳಿಯಲ್ಲಿ ನಡೆದಿರುವುದು ಕಲ್ಪನೆಗೆ ಮೀರಿದ ಸಂಗತಿಯಾಗಿದೆ : ಸೀತಾರಾಮ ಕೇವಳ

ವೀರಮಂಗಲ ಶಾಲೆಯಲ್ಲಿ ಮೇಳೈಸಿದ 27ನೇ ವರ್ಷದ 58 ಕೆ.ಜಿ.ವಿಭಾಗದ ಮುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ | ಹಿರಿಯ ವಿದ್ಯಾರ್ಥಿ ಸಂಘದ ಪದಗ್ರಹಣ | ನಾನಾ ಕ್ಷೇತ್ರದ ಸಾಧಕರಿಗೆ ಸನ್ಮಾನ Read More »

‘ವಿ ಗ್ರೂಪ್’ ಅಸೋಸಿಯೇಟ್ ಮಿತದರದಲ್ಲಿ ಕನಸಿನ ಮನೆಯನ್ನು ಪಡೆಯಲು ಸುವರ್ಣವಕಾಶ

ಕಾವೂರು, ಫೆ. 9: ಸಂತೃಪ್ತ ಗ್ರಾಹಕರನ್ನು ಹೊಂದಿರುವ ಮಂಗಳೂರಿನ ಕೊಟ್ಟಾರ ಚೌಕಿಯ ‘ವಿ ಗ್ರೂಪ್’ ಅಸೋಸಿಯೇಟ್ ಕಾವೂರಿನ ಗೊಲ್ಲರಬೆಟ್ಟು ಪ್ರಕೃತಿ ರಮಣೀಯ ಪರಿಸರದಲ್ಲಿ 2 ಬಿಎಚ್‌ಕೆ ಮತ್ತು 3 ಬಿಎಚ್‌ಕೆಯ 15 ಮನೆಗಳನ್ನು ನಿರ್ಮಿಸಿದ್ದು, ಕೇವಲ 60ರಿಂದ 80 ಲಕ್ಷ ರೂ.ಗಳಿಗೆ ಲಭ್ಯವಿವೆ. ನಗರದ ಎಲ್ಲ ಅನುಕೂಲಗಳು ಇರುವ ಈ ವಸತಿ ಪ್ರದೇಶಕ್ಕೆ ಬಹು ಹತ್ತಿರದಲ್ಲಿಯೇ ಹೆಸರಾಂತ ಶಾಲಾ ಕಾಲೇಜುಗಳು, ಮೆಡಿಕಲ್ ಕಾಲೇಜು ಆಸ್ಪತ್ರೆ ಇರುವುದರಿಂದ ಗ್ರಾಹಕರು ಇಲ್ಲಿ ನಿರ್ಮಾಣಗೊಂಡಿರುವ ಮನೆಗಳನ್ನು ಖರೀದಿಸಲು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ.

‘ವಿ ಗ್ರೂಪ್’ ಅಸೋಸಿಯೇಟ್ ಮಿತದರದಲ್ಲಿ ಕನಸಿನ ಮನೆಯನ್ನು ಪಡೆಯಲು ಸುವರ್ಣವಕಾಶ Read More »

ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನೂತನ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಕಿಶೋರ್ ಕೊಳತ್ತಾಯ ಪುನರಾಯ್ಕೆ, ಉಪಾಧ್ಯಕ್ಷರಾಗಿ ಶ್ರೀಧರ್ ಗೌಡ ಕಣಜಾಲು ಆಯ್ಕೆ

ಪುತ್ತೂರು : ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನೂತನ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಕಿಶೋರ್ ಕೊಳತ್ತಾಯ ಪುನರಾಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಶ್ರೀಧರ್ ಗೌಡ ಕಣಜಾಲು ಆಯ್ಕೆಯಾಗಿದ್ದಾರೆ. ನೂತನ ಆಡಳಿತ ಮಂಡಳಿಗೆ ನಿರ್ದೇಶಕರ ಆಯ್ಕೆಗೆ ಜ.25ರಂದು ಚುನಾವಣೆ ನಡೆದಿತ್ತು. ಸಾಮಾನ್ಯ ಮೀಸಲು ಸ್ಥಾನದಿಂದ ಬ್ಯಾಂಕಿನ ಹಾಲಿ ಅಧ್ಯಕ್ಷ ಕಿಶೋರ್ ಕೊಳತ್ತಾಯ, ಚಂದ್ರಶೇಖರ ರಾವ್ ಬಪ್ಪಳಿಗೆ, ಸುದೇಂದ್ರ ಪ್ರಭು, ರಾಜು ಶೆಟ್ಟಿ, ಶ್ರೀಧರ ಗೌಡ ರಣಜಾಲು, ಶ್ರೀಧರ ಪಟ್ಲ, ರಾಮಚಂದ್ರ ಕಾಮತ್, ಮಹಿಳಾ ಮೀಸಲು ಸ್ಥಾನದಿಂದ ವೀಣಾ, ಸೀಮಾ,

ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನೂತನ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಕಿಶೋರ್ ಕೊಳತ್ತಾಯ ಪುನರಾಯ್ಕೆ, ಉಪಾಧ್ಯಕ್ಷರಾಗಿ ಶ್ರೀಧರ್ ಗೌಡ ಕಣಜಾಲು ಆಯ್ಕೆ Read More »

ಪುತ್ತೂರಿನ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ‘ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿ’ಗೆ ಆಯ್ಕೆ

ಪುತ್ತೂರು: ನಗರದ ಏಳ್ಮುಡಿಯಲ್ಲಿರುವ ಪ್ರಭು ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ನೀಡುವ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರತೀ ವರ್ಷದಂತೆ ಈ ವರ್ಷವೂ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ವಿಜಯಪುರ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದ ಗವಿಸಿದ್ದೇಶ್ವರ ವೇದಿಕೆಯಲ್ಲಿ ಫೆ.5 ರಂದು ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಹಾಗೂ ಸ್ವಾಮಿ ವಿವೇಕಾನಂದ ರಾಷ್ಟ್ರೀಯ, ರಾಜ್ಯ ಸದ್ಭಾವನಾ

ಪುತ್ತೂರಿನ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ‘ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿ’ಗೆ ಆಯ್ಕೆ Read More »

ಫೆ.5-7 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಿಂದ ಕೌಶಲಾಭಿವೃದ್ಧಿ ಕಾರ್ಯಾಗಾರ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ಮತ್ತು ಮಾನವಿಕ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಅಧ್ಯಾಪಕ ಮಾರ್ಗದರ್ಶಕರಿಗೆ ಉತ್ತಮ ಬೋಧನಾ ಮತ್ತು ಕಲಿಕಾ ಅಭ್ಯಾಸಗಳು ಎನ್ನುವ ವಿಷಯದ ಬಗ್ಗೆ ಫೆ.5 ರಿಂದ 7ರ ವರೆಗೆ ಅಧ್ಯಾಪಕರ ಕೌಶಲಾಭಿವೃದ್ಧಿ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಬೋಧಕರಲ್ಲಿ ನವೀನ ಶಿಕ್ಷಣ ಕೌಶಲ್ಯಗಳನ್ನು ಹೆಚ್ಚಿಸುವುದು, ಉತ್ತಮ ಬೋಧನಾ ಪದ್ದತಿಗಳನ್ನು ಅಳವಡಿಸುವ ಮೂಲಕ ಫಲಿತಾಂಶ ಅಧಾರಿತ ಶಿಕ್ಷಣದ ಪರಿಷ್ಕರಣೆ, ಪರಿಣಾಮಕಾರಿ ಮಾರ್ಗದರ್ಶನ ಕೌಶಲಗಳನ್ನು ಅಳವಡಿಸುವುದು, ಸಂವಾದಾತ್ಮಕ ಬೋಧನೆಗಾಗಿ ಡಿಜಿಟಲ್ ಉಪಕರಣಗಳು ಮತ್ತು

ಫೆ.5-7 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಿಂದ ಕೌಶಲಾಭಿವೃದ್ಧಿ ಕಾರ್ಯಾಗಾರ Read More »

ಹಿರಿಯರ ಸೇವಾ ಪ್ರತಿಷ್ಠಾನದ ಪುತ್ತೂರು ಘಟಕದ ಸಭೆ

ಪುತ್ತೂರು  : ಅಖಿಲ ಕರ್ನಾಟಕ ಹಿರಿಯರ ಸೇವಾಪ್ರತಿಷ್ಠಾನ( ರಿ ) ಮೆಲ್ಕಾರ್ ಬಂಟ್ವಾಳ ಇದರ ಪುತ್ತೂರು ಘಟಕದ ಸಭೆಯು ಪುತ್ತೂರು ಸ್ವಾಗತ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಘಟಕದ ಅಧ್ಯಕ್ಷ ಚಂದ್ರಶೇಖರ ಆಳ್ವ ಪಡುಮಲೆ ಹಿರಿಯರ ಸೇವಾ ಸಂಘಟನೆಯನ್ನು ಸದಸ್ಯರ ಸೇರ್ಪಡೆ ಮಾಡುವ ಮೂಲಕ ಬಲಪಡಿಸಬೇಕೆಂದು  ತಿಳಿಸಿದರು. ಪ್ರತೀ ತಿಂಗಳ ಕೊನೆಯ  ಗುರುವಾರ ಸಭೆ ನಡೆಸುವ  ಮತ್ತು ಸಮಾಜದ ವಿವಿದ ರಂಗಗಳಲ್ಲಿ ಸೇವೆ ಸಲ್ಲಿಸಿದ ಹಿರಿಯರನ್ನು ಗುರುತಿಸಿ ಗೌರವಿಸಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಕೇಂದ್ರ

ಹಿರಿಯರ ಸೇವಾ ಪ್ರತಿಷ್ಠಾನದ ಪುತ್ತೂರು ಘಟಕದ ಸಭೆ Read More »

ಕರ್ನಾಟಕ ಖೋಖೋ ತಂಡದ ಸಹಾಯಕ ತರಬೇತುದಾರರಾಗಿ ಪುತ್ತೂರಿನ ಕಾರ್ತಿಕ್ ಎನ್. ಆಯ್ಕೆ

ಪುತ್ತೂರು: ಜ.28 ರಿಂದ ಫೆ.1 ತನಕ ಉತ್ತರಾಖಂಡ್ ರಾಜ್ಯದಲ್ಲಿ ನಡೆಯಲಿರುವ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸುವ ಕರ್ನಾಟಕ ರಾಜ್ಯ ಪುರುಷರ ಖೋಖೋ ತಂಡದ ಸಹಾಯಕ ತರಬೇತುದಾರರಾಗಿ ಪುತ್ತೂರಿನ ಕಾರ್ತಿಕ್ ಎನ್. ಆಯ್ಕೆಯಾಗಿದ್ದಾರೆ. ಖೋಖೋ ಕೋಚಿಂಗ್‌ನಲ್ಲಿ ಎನ್.ಐ.ಎಸ್ ಅರ್ಹತೆ ಇರುವ ತರಬೇತುದಾರರಾಗಿರುವ ಅವರು ಪ್ರಸ್ತುತ ಮಂಗಳೂರಿನ ಕೆನರಾ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯನಿರ್ವಹಿಸುತಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಬಿ.ಇ.ಎಂ ಶಾಲೆ, ಪ್ರೌಢ ಶಿಕ್ಷಣವನ್ನು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ಪಿಯು ಶಿಕ್ಷಣವನ್ನು ಕೊಂಬೆಟ್ಟು ಸರಕಾರಿ ಪ.ಪೂ ಕಾಲೇಜು ಹಾಗೂ ಪದವಿಯನ್ನು

ಕರ್ನಾಟಕ ಖೋಖೋ ತಂಡದ ಸಹಾಯಕ ತರಬೇತುದಾರರಾಗಿ ಪುತ್ತೂರಿನ ಕಾರ್ತಿಕ್ ಎನ್. ಆಯ್ಕೆ Read More »

ಶಿಕ್ಷಣ ವ್ಯವಸ್ಥೆಯೊಳಗಿನ ಪರೀಕ್ಷೆಗಳು ಜೀವನದ ಅವಿಭಾಜ್ಯ ಅಂಗವೆಂದರಿಯಿರಿ : ಡಾ. ಅನುರಾಧಾ ಕುರುಂಜಿ

ಎಡಮಂಗಲ : ಶಿಕ್ಷಣ ವ್ಯಕ್ತಿಯ ಬದುಕನ್ನು ರೂಪಿಸುವುದರೊಂದಿಗೆ ಮೌಲ್ಯಯುತ ಜೀವನವನ್ನು ನಿರ್ವಹಿಸಲು ಸಾಧ್ಯವಾಗಬೇಕು. ಆ ನಿಟ್ಟಿನಲ್ಲಿ  ಶಿಕ್ಷಣ ವ್ಯವಸ್ಥೆಯ ಪರೀಕ್ಷೆ ನಿಮ್ಮ ಜೀವನದ ಅವಿಭಾಜ್ಯ ಅಂಗವೆಂದರಿಯಿರಿ. ಆ ಮೂಲಕ ನೀವು ಪಡೆದ ಶಿಕ್ಷಣ ಸಾರ್ಥಕವಾಗಲಿ. ಎಂದು ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ. ಅನುರಾಧಾ ಕುರುಂಜಿಯವರು ಅಭಿಪ್ರಾಯ ಪಟ್ಟರು. ಅವರು ಸರ್ಕಾರಿ ಪ್ರೌಢಶಾಲೆ ಎಡಮಂಗಲ ಶಾಲೆಯ ಮುಖ್ಯೋಪಾಧ್ಯಾಯರಾದ ಅಬ್ದುಲ್ ಖಾದರ್ ಅವರ ನೇತೃತ್ವದಲ್ಲಿ  8, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಪರೀಕ್ಷಾ ತಯಾರಿ ಹಾಗೂ ವೃತ್ತಿ

ಶಿಕ್ಷಣ ವ್ಯವಸ್ಥೆಯೊಳಗಿನ ಪರೀಕ್ಷೆಗಳು ಜೀವನದ ಅವಿಭಾಜ್ಯ ಅಂಗವೆಂದರಿಯಿರಿ : ಡಾ. ಅನುರಾಧಾ ಕುರುಂಜಿ Read More »

ವಿವೇಕಾನಂದ ಕಾಲೇಜಿನಲ್ಲಿ ಶ್ರೀರಾಮೋತ್ಸವ

ಪುತ್ತೂರು: ರಾಮಾಯಣದಲ್ಲಿರುವ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪ್ರಭುದ್ಧರಾಗಬೇಕು. ಹಾಗೆಯೇ ಸಂವಿಧಾನವನ್ನು ಹೇಗೆ ಪಾಲಿಸಬೇಕೆಂದು ರಾಮನ ಆಡಳಿತದಲ್ಲಿ ಕಾಣಬಹುದು. ರಾಮನ ಆದರ್ಶಗಳನ್ನು ನಾವು ಬದುಕಿನಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಉತ್ತಮ ಬದುಕನ್ನು ನಡೆಸಬಹುದು ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ( ಸ್ವಾಯತ್ತ ), ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನ ಕೇಂದ್ರ, ಭಾರತೀಯ ಸಂಸ್ಕೃತಿ ಮತ್ತು ಲಲಿತಕಲೆಗಳ ಅಧ್ಯಯನ ಕೇಂದ್ರ, ವಿದ್ಯಾರ್ಥಿ

ವಿವೇಕಾನಂದ ಕಾಲೇಜಿನಲ್ಲಿ ಶ್ರೀರಾಮೋತ್ಸವ Read More »

error: Content is protected !!
Scroll to Top