ಕ್ಯಾಂಪಸ್‌

ಅಕ್ಷಯ ಕಾಲೇಜಿನಲ್ಲಿ ಬಿಸಿಎ ವಿಭಾಗದ ಐಟಿ ಕ್ಲಬ್‍ ನಿಂದ ಕಾರ್ಯಾಗಾರ

ಪುತ್ತೂರು:  ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಬಿ.ಸಿ.ಎ ವಿಭಾಗ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಮಾಹಿತಿ ತಂತ್ರಜ್ಞಾನ ಸಂಘದ ವತಿಯಿಂದ  ಸಾಫ್ಟವೇರ್ ಡೆವಲಪ್‍ ಮೆಂಟ್‍ ವಿಷಯದಲ್ಲಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಕಾರ್ಯಾಗಾರದಲ್ಲಿಸಂಪನ್ಮೂಲ ವ್ಯಕ್ತಿಯಾಗಿ ಸಾಫ್ಟ್ ವೇರ್ ಇಂಜಿನಿಯರ್‍  ಗೌತಮಿ ಬಿಸಿಎ ವಿಭಾಗದ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿ, ಸಾಫ್ಟವೇರ್ ಡೆವಲಪ್‍ ಮೆಂಟ್‍ ಗೆ ಸಂಬಂಧಿಸಿದಂತೆ ಉನ್ನತ ಗುಣಮಟ್ಟದ ಸಾಫ್ಟ್‌ ವೇರ್ ನ್ನು ವಿನ್ಯಾಸಗೊಳಿಸಲು, ಅಭಿವೃದ್ಧಿಪಡಿಸಲು ಮತ್ತು ಪರೀಕ್ಷಿಸಲು ಸಂಬಂಧಿಸಿದ ಪ್ರಕ್ರಿಯೆಗಳ […]

ಅಕ್ಷಯ ಕಾಲೇಜಿನಲ್ಲಿ ಬಿಸಿಎ ವಿಭಾಗದ ಐಟಿ ಕ್ಲಬ್‍ ನಿಂದ ಕಾರ್ಯಾಗಾರ Read More »

ವಿವಿ ಮಟ್ಟದ ಭಾಷಣ ಸ್ಪರ್ಧೆ : ಸಂತ ಫಿಲೋಮಿನಾ ಕಾಲೇಜಿನ ಶ್ರೀದೇವಿ ಎನ್. ಪ್ರಥಮ

ಪುತ್ತೂರು: ಮೂಡುಬಿದಿರೆ ಶ್ರೀ ಧವಲಾ ಮಹಾವಿದ್ಯಾಲಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಶ್ರೀದೇವಿ ಎನ್. ಇವರು ಪ್ರಥಮ ಬಹುಮಾನ ಪಡೆದಿದ್ದಾರೆ. ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಒಟ್ಟು 38 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿನಿಯನ್ನು ಕಾಲೇಜಿನ ಪ್ರಾಂಶುಪಾಲ ರೆ.ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಅಭಿನಂದಿಸಿದ್ದಾರೆ.

ವಿವಿ ಮಟ್ಟದ ಭಾಷಣ ಸ್ಪರ್ಧೆ : ಸಂತ ಫಿಲೋಮಿನಾ ಕಾಲೇಜಿನ ಶ್ರೀದೇವಿ ಎನ್. ಪ್ರಥಮ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಕನ್ನಡ ವಿಭಾಗದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಪ್ರಸಾದ್ ಎನ್ ವಹಿಸಿದರು. ಕೆ ಎಸ್ ಎಸ್ ಕಾಲೇಜಿನ ಕಚೇರಿ ಸಿಬ್ಬಂದಿ ಸುಬ್ರಹ್ಮಣ್ಯ ಕೆ. ಉದ್ಘಾಟಿಸಿದರು. ಅತಿಥಿಗಳು ಕನ್ನಡ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ದಿಶಾಂತ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅನ್ವಿತಾ ಹಚ್ಚೇವು ಕನ್ನಡದ ದೀಪ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ Read More »

ವಿದ್ಯಾರಶ್ಮಿಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಆಚರಣೆ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ 69ನೇ ಕನ್ನಡ ರಾಜ್ಯೋತ್ಸವವು ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಸಂಚಾಲಕರಾದ, ಸಹಕಾರ ರತ್ನ ಸವಣೂರು ಸೀತಾರಾಮ ರೈ ಅವರು ಕನ್ನಡ ಧ್ವಜಾರೋಹಣ ಮಾಡುವುದರೊಂದಿಗೆ ಅರ್ಥಪೂರ್ಣವಾಗಿ ನಡೆಯಿತು. ಬಳಿಕ ಮಾತನಾಡಿದ ಅವರು, ಕನ್ನಡ ಭಾಷೆಯ ಮಹತ್ತ್ವವನ್ನು ತಿಳಿಸಿ ಹೇಳಿ ಭಾಷಾಭಿಮಾನ ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು. ವಿದ್ಯಾರ್ಥಿನಿಯರಾದ 10ನೇ ತರಗತಿಯ ಎಂ. ವೈಷ್ಣವಿ ಮತ್ತು ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಅವನಿ ಆರ್. ರೈ ಅವರು ಕನ್ನಡದ ಕುರಿತು ಮಾತನಾಡಿದರು. ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ

ವಿದ್ಯಾರಶ್ಮಿಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಆಚರಣೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಐಒಟಿ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಗಣಕ ವಿಜ್ಞಾನ ವಿಭಾಗ, ಪಿನ್ಯಾಕಲ್‌ಐಟಿ ಕ್ಲಬ್‌ಹಾಗೂ ಐಐಸಿಗಳ ಸಂಯುಕ್ತ ಆಶ್ರಯದಲ್ಲಿ ಐಒಟಿ ಮಾದರಿಗಳ ಪ್ರದರ್ಶನವನ್ನು ಬುಧವಾರ ಆಯೋಜಿಸಲಾಯಿತು. ಕಾಲೇಜಿನ ಪ್ರಿನ್ಸಿಪಾಲ್ ವಂ.ಡಾ. ಆ್ಯಂಟನಿ ಪ್ರಕಾಶ್‌ಮೊಂತೇರೊ ಅಧ್ಯಕ್ಷತೆ ವಹಿಸಿ, ಸಾಧಿಸುವ ಛಲ ಹಾಗೂ ಒಳ್ಳೆಯ ಮನಸ್ಸಿದ್ದಲ್ಲಿ ಯಾವುದೇ ಕಾರ್ಯವೂ ಕಷ್ಟವೆಂದೆನಿಸುವುದಿಲ್ಲ. ಯಾವುದೇ ಪರಿಸ್ಥಿತಿಯ ಬಗ್ಗೆ ದೂರು ನೀಡಬೇಡಿ ಬದಲಿಗೆ ಪೂರಕವಾಗಿ ಯೋಚನೆ ಮಾಡಲು ಪ್ರಾರಂಭಿಸಿ. ಐಒಟಿ ಮಾದರಿಗಳ ಪ್ರದರ್ಶನವನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದಕ್ಕಾಗಿ ಸಂಘಟಕರನ್ನು ಪ್ರಶಂಶಿಸಿದರು. ಕಾಲೇಜಿನ ಬಿಸಿಎ ವಿಭಾಗದ ವಿದ್ಯಾರ್ಥಿಗಳು ಹದಿನೈದಕ್ಕೂ ಹೆಚ್ಚಿನ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಐಒಟಿ ಮಾದರಿಗಳ ಪ್ರದರ್ಶನ ಕಾರ್ಯಕ್ರಮ Read More »

ಕ್ರೀಡಾಕೂಟದಲ್ಲಿ ಮಣಿಕ್ಕರ ಸರಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ 

ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ನಡೆದ ಪುತ್ತೂರು ಶೈಕ್ಷಣಿಕ ವಲಯದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ- ಬಾಲಕಿಯರ ತಾಲೂಕು ಮಟ್ಟದಲ್ಲಿ ಕ್ರೀಡಾಕೂಟದಲ್ಲಿ ಮಣಿಕ್ಕರ ಸರಕಾರಿ ಪ್ರೌಢಶಾಲೆಯ ಮೂರು ವಿದ್ಯಾರ್ಥಿಗಳು ಪ್ರಶಸ್ತಿ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ  ನಿತಿನ್ ಪಿ 3000ಮೀ ಓಟದಲ್ಲಿ  ದ್ವಿತೀಯ ಹಾಗೂ 1500ಮೀ ಓಟದಲ್ಲಿ ತೃತಿಯ, ಮಹಮ್ಮದ್ ಐರಾಜ್ ಜಾವೇಲಿನ್ ತ್ರೋ ನಲ್ಲಿ ದ್ವಿತೀಯ, ಅನುಷ್ ಬಿ. ಸಿ. 400 ಮೀ ಓಟದಲ್ಲಿ ತೃತಿಯ ಸ್ಥಾನ ಪಡೆದುಕೊಂಡಿದ್ದಾರೆ. ನಿತಿನ್ ಮತ್ತು ಮಹಮ್ಮದ್ ಐರಾಜ್

ಕ್ರೀಡಾಕೂಟದಲ್ಲಿ ಮಣಿಕ್ಕರ ಸರಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ  Read More »

ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ವಾರ್ಷಿಕೋತ್ಸವ – ಮಾನಸೋಲ್ಲಾಸ-2024 | ವಿದ್ಯಾರ್ಥಿಗಳಲ್ಲಿ ದೈಹಿಕ ಸಾಮರ್ಥ್ಯ ಕುಂಠಿತವಾಗುತ್ತಿದೆ : ಜಯಸೂರ್ಯ ರೈ

ಪುತ್ತೂರು: ಈಚೆಗಿನ ವರ್ಷಗಳಲ್ಲಿ ವಿದ್ಯಾರ್ಥಿಗಳಲ್ಲಿನ ದೈಹಿಕ ಸಾಮರ್ಥ್ಯ ಕುಂಠಿತವಾಗುತ್ತಿದೆ. ಕೆಲಹೊತ್ತು ಬಯಲಿನಲ್ಲಿ ನಿಂತರೆ ತಲೆತಿರುಗಿ ಕುಸಿಯುವ ವಿದ್ಯಾರ್ಥಿಗಳನ್ನು ಕಾಣುತ್ತಿದ್ದೇವೆ. ಮನೆಗಳಲ್ಲಿ ಮಕ್ಕಳಿಂದ ದೈಹಿಕ ಕೆಲಸ ಮಾಡಿಸದಿರುವುದು, ನಡೆದುಹೋಗಬಹುದಾದ ಜಾಗದಲ್ಲೂ ವಾಹನಗಳಲ್ಲೇ ಸಂಚರಿಸುವುದು ದೇಹಶಕ್ತಿಯ ಕ್ಷೀಣತೆಗೆ ಕಾರಣವಾಗುತ್ತಿದೆ. ಆದ್ದರಿಂದ ನಮ್ಮ ದೇಹಕ್ಕೆ ಶ್ರಮದಾಯಕ ಕಾರ್ಯಗಳಿಗೆ ಒಗ್ಗಿಕೊಳ್ಳುವ ಕಲೆಯನ್ನು ಕಲಿಸಿಕೊಡಬೇಕಿದೆ ಎಂದು ಕಾಣಿಯೂರಿನ ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ ಹೇಳಿದರು. ಅವರು ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ವಾರ್ಷಿಕೋತ್ಸವ – ‘ಮಾನಸೋಲ್ಲಾಸ-2024’ ವನ್ನು ಬಪ್ಪಳಿಗೆಯ

ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ವಾರ್ಷಿಕೋತ್ಸವ – ಮಾನಸೋಲ್ಲಾಸ-2024 | ವಿದ್ಯಾರ್ಥಿಗಳಲ್ಲಿ ದೈಹಿಕ ಸಾಮರ್ಥ್ಯ ಕುಂಠಿತವಾಗುತ್ತಿದೆ : ಜಯಸೂರ್ಯ ರೈ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಿಂದ ಕುಳ ಗ್ರಾಮದ ಗ್ರಾಮಸ್ಥರಿಗೆ ಸ್ತನ ಕ್ಯಾನ್ಸರ್ ಬಗ್ಗೆ ಮಾಹಿತಿ, ಕರಪತ್ರ ಹಂಚಿಕೆ | ಗ್ರಾಮ ವಿಕಾಸ ಯೋಜನೆಯ ಮತ್ತೊಂದು ಮೈಲಿಗಲ್ಲು

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸ್ಕಿಲ್ ಫೊರ್ಜ್ ವಿದ್ಯಾರ್ಥಿ ಬಳಗ, ಐಇಇಇ ವಿದ್ಯಾರ್ಥಿ ವಿಭಾಗ ಮತ್ತು ಗ್ರಾಮ ವಿಕಾಸ ಯೋಜನೆ ವಿಸಿಇಟಿ ಸಂಯುಕ್ತ ಆಶ್ರಯದಲ್ಲಿ ಕುಳ ಗ್ರಾಮದ ಗ್ರಾಮಸ್ಥರಿಗೆ ಸ್ತನ ಕ್ಯಾನ್ಸರ್ ಬಗ್ಗೆ ಮಾಹಿತಿ ಹಂಚುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಜ್ಞ ವೈದ್ಯರಿಂದ ಮಾಹಿತಿಯನ್ನು ಪಡೆದ ಸುಮಾರು 35 ವಿದ್ಯಾರ್ಥಿಗಳ ತಂಡ ಉಪನ್ಯಾಸಕರು ಹಾಗೂ ಊರವರ ಸಹಕಾರದೊಂದಿಗೆ 170 ಕ್ಕೂ ಹೆಚ್ಚಿನ ಮನೆಗಳಿಗೆ ಭೇಟಿ ನೀಡಿ ಕರಪತ್ರ ಹಂಚಿ, ಸ್ತನ ಕ್ಯಾನ್ಸರ್ ಬಗ್ಗೆ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಿಂದ ಕುಳ ಗ್ರಾಮದ ಗ್ರಾಮಸ್ಥರಿಗೆ ಸ್ತನ ಕ್ಯಾನ್ಸರ್ ಬಗ್ಗೆ ಮಾಹಿತಿ, ಕರಪತ್ರ ಹಂಚಿಕೆ | ಗ್ರಾಮ ವಿಕಾಸ ಯೋಜನೆಯ ಮತ್ತೊಂದು ಮೈಲಿಗಲ್ಲು Read More »

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಪ್ರಫುಲ್‍ ಯು.ಎಸ್‍. ಆಯ್ಕೆ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಪ್ರಫುಲ್ ಯು.ಎಸ್. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ಅಂತಿಮ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಪ್ರಫುಲ್ ಸಿಐಟಿ ಗುಬ್ಬಿಯಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇದೇ ಅ. ೩೦ ರಿಂದ ಚೆನ್ನೈನ ಎಸ್‌ಆರ್‌ ಎಮ್ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಕಬಡ್ಡಿ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಪ್ರಫುಲ್‍ ಯು.ಎಸ್‍. ಆಯ್ಕೆ Read More »

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಪುತ್ತೂರು ಇದರ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಚಿದಾನಂದ ಬೈಲಾಡಿ ಆಯ್ಕೆ

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಭಾರತ ಸರಕಾರದ ನೋಟರಿ ಪಬ್ಲಿಕ್ ನ್ಯಾಯವಾದಿ ಚಿದಾನಂದ ಬೈಲಾಡಿ ಆಯ್ಕೆಯಾಗಿದ್ದಾರೆ. ಚಿದಾನಂದ ಬೈಲಾಡಿಯವರು ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮತ್ತು ನ್ಯೂಸ್ ಪುತ್ತೂರು ಇದರ ನಿರ್ದೇಶಕರೂ ಆಗಿದ್ದಾರೆ. ಬೈಲಾಡಿಯವರು ವಿವಿಧ ಸಾಮಾಜಿಕ ಮತ್ತು ಧಾರ್ಮಿಕ ಸಂಘಟನೆಗಳಲ್ಲಿ ಕ್ರಿಯಾಶೀಲರಾಗಿದ್ದಾರೆ.

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಪುತ್ತೂರು ಇದರ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಚಿದಾನಂದ ಬೈಲಾಡಿ ಆಯ್ಕೆ Read More »

error: Content is protected !!
Scroll to Top