ವಿವೇಕಾನಂದರ ತತ್ವಗಳು ಭಾರತದಲ್ಲಿ ಜೀವಂತವಾಗಿದೆ : ಶ್ರೀಕಾಂತ ಶೆಟ್ಟಿ ಕಾರ್ಕಳ | ವಿವೇಕ ಸ್ಮೃತಿ ಉಪನ್ಯಾಸ ಮಾಲಿಕೆ
ಪುತ್ತೂರು: ಎಲ್ಲರೊಳಗೆ ಒಳಗೊಳ್ಳುವ ಮಾನಸಿಕತೆ ಭಾರತೀಯರಿಗಿದೆ. ಅದನ್ನು ವಿಶ್ವದೆಲ್ಲೆಡೆ ಪಸರಿಸಿದ ಸ್ವಾಮಿ ವಿವೇಕಾನಂದರು ಶಾಂತಿ ಸಹಿಷ್ಣುತೆಗೆ ಹೊಸ ಆಯಾಮವನ್ನು ನೀಡಿದ್ದಾರೆ. ದೇಶಕ್ಕಾಗಿ, ಸಮಾಜಕ್ಕಾಗಿ ಪ್ರಾಣವನ್ನು ಮುಡಿಪಾಗಿಡುವ ಸಾವಿರಾರು ಯುವಕರಿಗೆ ವಿವೇಕಾನಂದರೇ ಪ್ರೇರಣೆ. ವಿವೇಕಾನಂದರು ಚಿಕಾಗೋ ಧರ್ಮ ಸಮ್ಮೇಳನದ ಮೂಲಕ ಭಾರತೀಯ ಸಂಸ್ಕೃತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಿದರು. ಮುಂದಿನ ಪೀಳಿಗೆಗೆ ವಿವೇಕಾನಂದರ ಚಿಂತನೆಗಳು ಹೊಸ ಬೆಳಕಾಗಲಿದೆ” ಎಂದು ಖ್ಯಾತ ವಾಗ್ಮಿ, ಚಿಂತಕ ಶ್ರೀಕಾಂತ ಶೆಟ್ಟಿ ಕಾರ್ಕಳ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) […]










