ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯಗಳ ಅಂತರ್ ಕಾಲೇಜು ಮಟ್ಟದ ಗುಡ್ಡಗಾಡು ಓಟ | ವಿವೇಕಾನಂದ ಕಾನೂನು ಮಹಾವಿದ್ಯಾಲಯ ಸತತ ನಾಲ್ಕನೇ ಬಾರಿಗೆ ಚಾಂಪಿಯನ್
ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಮತ್ತೊಂದು ಸಾಧನೆ ಮಾಡುವ ಮಹಾವಿದ್ಯಾಲಯದ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿಯನ್ನು ಸೇರಿಸಿದ್ದಾರೆ. ಚಿಕ್ಕೋಡಿಯ ಕೆ.ಎಲ್.ಇ. ಸೊಸೈಟಿ ಕಾನೂನು ಮಹಾವಿದ್ಯಾಲಯದಲ್ಲಿ, ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯ ಆಯೋಜಿಸಿದ ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯಗಳ ಅಂತರ್ ಕಾಲೇಜು ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪುರುಷರ ಮತ್ತು ಮಹಿಳೆಯರ ವಿಭಾಗದಲ್ಲಿ ಸತತ ನಾಲ್ಕನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ಅಮೋಘ ಪ್ರದರ್ಶನ ನೀಡಿದ್ದಾರೆ. ಜೊತೆಗೆ ಚತುರ್ಥ ಬಿ.ಎ.ಎಲ್.ಎಲ್.ಬಿ.ಯ ವಿದ್ಯಾರ್ಥಿ ವಿಜಯ್ […]










