ಕ್ಯಾಂಪಸ್‌

ಅಕ್ಷಯ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಾಸ್ತು ವಿನ್ಯಾಸ ಕಾರ್ಯಾಗಾರ

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಂಟೀರಿಯರ್ ಡಿಸೈನ್ ವಿಭಾಗದ ಎಲೈಟ್ ಅಸೋಸಿಯೇಷನ್ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ “ವಾಸ್ತು ವಿನ್ಯಾಸ”ದ  ಕುರಿತು ರಾಜ್ಯ  ಮಟ್ಟದ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ಪುತ್ತೂರು ಸಿವಿಲ್ ಇಂಜಿನಿಯರಿಂಗ್ ಅಸೋಸಿಯೇಷನ್ ಅಧ್ಯಕ್ಷ ಸತ್ಯ ಗಣೇಶ್  ಎಂ. ಕಾರ್ಯಾಗಾರ ಉದ್ಘಾಟಿಸಿ, ವಾಸ್ತು ಶಾಸ್ತ್ರವು ಪ್ರಕೃತಿಗೆ ಹೊಂದಿಕೊಂಡು ಗೃಹ ನಿರ್ಮಾಣ  ಹಾಗೂ ಯಾವುದೇ ಸಂಸ್ಥೆಗಳನ್ನು ನಿರ್ಮಿಸಲು ಅನುಸರಿಸ ಬೇಕಾದ ನಿಯಮಗಳು. ಪುರಾತನ ನಾಗರಿಕತೆ ಕಾಲದಿಂದಲೂ  ವಾಸ್ತು ಶಾಸ್ತ್ರವನ್ನು ಅನುಸರಿಸಿಕೊಂಡು ಬಂದಿದ್ದೇವೆ. ವೈಜ್ಞಾನಿಕವಾಗಿ ವಾಸ್ತು ವಿನ್ಯಾಸ, ವಾಸ್ತು ಶಾಸ್ತ್ರವು  ಪ್ರಸ್ತುತ ವಿವಿಧ ಪದವಿಗಳ ಮೂಲಕ ಲಭ್ಯವಿದ್ದು ಬಹಳಷ್ಟು ವ್ಯಾಪ್ತಿ […]

ಅಕ್ಷಯ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಾಸ್ತು ವಿನ್ಯಾಸ ಕಾರ್ಯಾಗಾರ Read More »

ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ ಆ್ಯಂಟಿ ರ್ಯಾಗಿಂಗ್‍ ಕುರಿತು ಜಾಗೃತಿ ಕಾರ್ಯಕ್ರಮ

ಪುತ್ತೂರು: ಪುತ್ತೂರು: ಯಾವುದೇ ಅಪರಾಧವನ್ನು ಮಾಡಿ ಪೋಲಿಸ್ ಕೇಸುಗಳಾದರೆ ಅದರಿಂದ ಬಿಡಿಸಿಕೊಳ್ಳುವುದು ತುಂಬಾ ಕಷ್ಟ, ಇದರಿಂದ ವಿದ್ಯಾರ್ಥಿಯೊಬ್ಬನ ಜೀವನವೇ ಹಾಳಾಗಬಹುದು ಹೀಗಾಗಿ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮೂಡಿಸುವುದು ಆವಶ್ಯಕ ಎಂದು ಪುತ್ತೂರಿನ ಮಹಿಳಾ ಠಾಣೆಯ ಪೋಲಿಸ್ ಸಬ್-ಇನ್ಸ್‌ಪೆಕ್ಟರ್ ಭವಾನಿ ಗೌಡ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಂಟಿ ರ್ಯಾಗಿಂಗ್‍ ಕಮಿಟಿ, ಆಂಟಿ ರ್‍ಯಾಗಿಂಗ್ ಸ್ಕ್ವಾಡ್ ಮತ್ತು ಕಾಲೇಜು ಆಂತರಿಕ ದೂರು ಸಮಿತಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತಾಡಿದರು.

ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ ಆ್ಯಂಟಿ ರ್ಯಾಗಿಂಗ್‍ ಕುರಿತು ಜಾಗೃತಿ ಕಾರ್ಯಕ್ರಮ Read More »

ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕ ಹಾಗೂ ಸುಳ್ಯ ಆರೋಗ್ಯ ಇಲಾಖಾ ವತಿಯಿಂದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತ ರಸಪ್ರಶ್ನೆ ಸ್ಪರ್ಧೆ | ಜೀವನದ ಜಂಜಾಟದಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕಡೆಗೆ ಗಮನವಿರಲಿ : ಪ್ರಮೀಳಾ ಟಿ

ಸುಳ್ಯ: ಮನುಷ್ಯ ಆರೋಗ್ಯವಾಗಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಆದ್ದರಿಂದ ಬದುಕಿನ ಜಂಜಾಟದಲ್ಲಿ ಮನುಷ್ಯ ತನ್ನ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕಡೆಗೆ ಗಮನ ಹರಿಸಬೇಕಾದ ಅನಿವಾರ್ಯತೆ ಇದೆ ಎಂದು ಸುಳ್ಯ ತಾಲೂಕು ಕ್ಷೇತ್ರ  ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಟಿ ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ ಮೆಮೊರೀಯಲ್ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕ ಹಾಗೂ ತಾಲೂಕು ಆರೋಗ್ಯ ಇಲಾಖೆಯವರು ಜಂಟಿಯಾಗಿ ಹಮ್ಮಿಕೊಂಡ “ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತ ರಸಪ್ರಶ್ನೆ ಸ್ಪರ್ಧೆ” ಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ

ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕ ಹಾಗೂ ಸುಳ್ಯ ಆರೋಗ್ಯ ಇಲಾಖಾ ವತಿಯಿಂದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತ ರಸಪ್ರಶ್ನೆ ಸ್ಪರ್ಧೆ | ಜೀವನದ ಜಂಜಾಟದಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕಡೆಗೆ ಗಮನವಿರಲಿ : ಪ್ರಮೀಳಾ ಟಿ Read More »

ನಾಳೆ (ನ.7) : ಸವಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ರಂಗ-2024’

ಸವಣೂರು: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ರಂಗ-2024’ ನಾಳೆ ಕುದ್ಮಾರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಸವಣೂರು ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಕುದ್ಮಾರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಸಂಯುಕ್ತ ಆಶ್ರಯದಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ನ.7) : ಸವಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ರಂಗ-2024’ Read More »

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್‍ ನ ಶಾಲಾ ಮೈದಾನ ನವೀಕರಣಕ್ಕೆ ಗುದ್ದಲಿ ಪೂಜೆ, ವಸಂತ ಸಂಭ್ರಮದ ಲೋಗೋ, ಮನವಿ ಪತ್ರ ಬಿಡುಗಡೆ | | ಗುದ್ದಲಿ ಪೂಜೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಬೆಳ್ಳಾರೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ವಸಂತ ಸಂಭ್ರಮ ಕಾರ್ಯಕ್ರಮ ನಡೆಯಲಿದ್ದು, ಇದರ ಅಂಗವಾಗಿ ಶಾಲಾ ಮೈದಾನದ ನವೀಕರಣಕ್ಕೆ ಗುದ್ದಲಿ ಪೂಜೆ, ವಸಂತ ಸಂಭ್ರಮದ ಲೋಗೋ ಬಿಡುಗಡೆ ಹಾಗೂ ಮನವಿ ಪತ್ರ ಬಿಡುಗಡೆ ಇಂದು ನಡೆಯಿತು. ಕೆಪಿಎಸ್ ನ ಎಸ್.ಡಿ.ಎಂ.ಸಿ ಅಧ್ಯಕ್ಷೆ ಹಾಗೂ ಶಾಸಕಿ ಭಾಗೀರಥಿ ಮುರುಳ್ಯರವರು ಗುದ್ದಲಿ ಪೂಜೆ ನೆರವೇರಿಸಿ, ವಸಂತ ಸಂಭ್ರಮದ ಲೋಗೊ ಹಾಗು ಮನವಿ ಪತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವಸಂತ ಸಂಭ್ರಮ ಸಮಿತಿ ಕಾರ್ಯಾಧ್ಯಕ್ಷೆ ರಾಜೀವಿ ಆರ್.ರೈ, ಸಂಚಾಲಕ ಎಸ್.ಎನ್. ಮನ್ಮಥ,

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್‍ ನ ಶಾಲಾ ಮೈದಾನ ನವೀಕರಣಕ್ಕೆ ಗುದ್ದಲಿ ಪೂಜೆ, ವಸಂತ ಸಂಭ್ರಮದ ಲೋಗೋ, ಮನವಿ ಪತ್ರ ಬಿಡುಗಡೆ | | ಗುದ್ದಲಿ ಪೂಜೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ Read More »

ನ.8 : ವಿವೇಕಾನಂದ ಕಾಲೇಜಿನಲ್ಲಿ ರಾಜ್ಯಮಟ್ಟದ ‘ಎನ್ವೋ-ಟೆಕ್‍-2024’ ಸಮಾರಂಭ | ವಿಚಾರ ಸಂಕಿರಣ, ಪ್ರಬಂಧ ಮಂಡನೆ ಹಾಗೂ ಭಿತ್ತಿಪತ್ರ ವಿನ್ಯಾಸ ಸ್ಪರ್ಧೆ

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಕಾಲೇಜಿನ ವತಿಯಿಂದ ಕಾಲೇಜಿನ ಸಂಶೋಧನಾ ಅಧ್ಯಯನ ಕೇಂದ್ರ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ, ಪ್ರಬಂಧ ಮಂಡನೆ ಹಾಗೂ ಭಿತ್ತಿಪತ್ರ ವಿನ್ಯಾಸ ಸ್ಪರ್ಧೆ ‘ಎನ್ವೋ-ಟೆಕ್‍-2024’ ನ.8 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್‍ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಸ್ತುತ ನಮ್ಮ ಸುತ್ತಮುತ್ತಲಿನ ಪರಿಸರದ ಸ್ವಾಸ್ಥ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಈ ಸಮಸ್ಯೆಗಳನ್ನು

ನ.8 : ವಿವೇಕಾನಂದ ಕಾಲೇಜಿನಲ್ಲಿ ರಾಜ್ಯಮಟ್ಟದ ‘ಎನ್ವೋ-ಟೆಕ್‍-2024’ ಸಮಾರಂಭ | ವಿಚಾರ ಸಂಕಿರಣ, ಪ್ರಬಂಧ ಮಂಡನೆ ಹಾಗೂ ಭಿತ್ತಿಪತ್ರ ವಿನ್ಯಾಸ ಸ್ಪರ್ಧೆ Read More »

ಸಹಪಠ್ಯ ಸ್ಪರ್ಧೆ : ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್‍ ಬಾಕಿಲ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ತಾಲೂಕು ಮಟ್ಟದ ಶಿಕ್ಷಕರ ಸಹಪಠ್ಯ ಸ್ಪರ್ಧೆಯಲ್ಲಿ ಶಾಂತಿನಗರ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್‍ ಬಾಕಿಲ ಆಶು ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಮತ್ತು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆಶ್ರಯದಲ್ಲಿ ಪುತ್ತೂರು ಸಂತ ವಿಕ್ಟರ್ ವಿದ್ಯಾಸಂಸ್ಥೆಯಲ್ಲಿ ಸಹಪಠ್ಯ ಸ್ಪರ್ಧೆ ನಡೆಯಿತು. ಈ ಮೂಲಕ ಪ್ರದೀಪ್‍ ಬಾಕಿಲ ಅವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಹಪಠ್ಯ ಸ್ಪರ್ಧೆ : ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್‍ ಬಾಕಿಲ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ರಕ್ತದಾನದಿಂದ ಮೂರು ಜೀವಗಳನ್ನು ಉಳಿಸಿದ ಪುಣ್ಯ ದೊರಕುತ್ತದೆ: ಡಾ. ಸೀತಾರಾಮ ಭಟ್ | ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ, ರೋಟರಿ-ಕ್ಯಾಂಪ್ಕೋ ರಕ್ತನಿಧಿ ಕೇಂದ್ರ ಪುತ್ತೂರು ಹಾಗೂ ಎಚ್.ಡಿ.ಎಫ್.ಸಿ. ಬ್ಯಾಂಕ್ ನ ಪುತ್ತೂರು ಘಟಕದ ಸಹಯೋಗದಲ್ಲಿ ಮಹಾವಿದ್ಯಾಲಯದ ಯುವ ರೆಡ್ ಕ್ರಾಸ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ “ಸ್ವಯಂಪ್ರೇರಿತ ರಕ್ತದಾನ ಶಿಬಿರ” ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗೀ ರೋಟರಿ-ಕ್ಯಾಂಪ್ಕೋ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಸೀತಾರಾಮ ಭಟ್, ರಕ್ತದಾನ ಶ್ರೇಷ್ಠ ದಾನವಾಗಿದೆ. ಆರೋಗ್ಯವಂತರೆಲ್ಲರೂ ರಕ್ತದಾನ ಮಾಡಬಹುದು. ಆರೋಗ್ಯವಂತ ವ್ಯಕ್ತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು.

ರಕ್ತದಾನದಿಂದ ಮೂರು ಜೀವಗಳನ್ನು ಉಳಿಸಿದ ಪುಣ್ಯ ದೊರಕುತ್ತದೆ: ಡಾ. ಸೀತಾರಾಮ ಭಟ್ | ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ Read More »

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕೀರ್ತಿ ಸತತ ಎರಡನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಜಿ.ಎಂ.ಕೀರ್ತಿ 17 ವಯೋಮಾನದ ಬಾಲಕಿಯರ ವಿಭಾಗದ ಎತ್ತರ ಜಿಗಿತದಲ್ಲಿ ಮತ್ತು ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕರುಗಳು ತರಬೇತಿ ನೀಡಿರುತ್ತಾರೆ. ಕೀರ್ತಿ ಗುಮ್ಮಟೆಗದ್ದೆ ನಿವಾಸಿ ಮೋನಪ್ಪ ಗೌಡ ಮತ್ತು ಲಲಿತಾ.ಕೆ ದಂಪತಿ ಪುತ್ರಿ.

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕೀರ್ತಿ ಸತತ ಎರಡನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆ Read More »

ಜಿಲ್ಲಾ ಮಟ್ಟದ ಕ್ರೀಡಾಕೂಟ | ಆನಡ್ಕ ಶಾಲಾ ವಿದ್ಯಾರ್ಥಿನಿ ಪ್ರಗತಿ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಆನಡ್ಕ ಹಿ ಪ್ರಾ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಪ್ರಗತಿ 600 ಮೀಟರ್ ಓಟದ ಸ್ವರ್ಧೆಯಲ್ಲಿ  ದ್ವಿತೀಯ ಸ್ಥಾನ ಪಡೆದು ಶಿವಮೊಗ್ಗದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಗತಿ ಗುರಿಯಡ್ಕ ನಿವಾಸಿ ನಾರಾಯಣ ನಾಯ್ಕ ಪೂರ್ಣಿಮಾ ದಂಪತಿ ಪುತ್ರಿ. ವಿದ್ಯಾರ್ಥಿನಿಯನ್ನು ಶಾಲಾ ಎಸ್‍ ಡಿಎಂಸಿ, ಮುಖ್ಯ ಶಿಕ್ಷಕರು, ಶಿಕ್ಷರು, ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ಜಿಲ್ಲಾ ಮಟ್ಟದ ಕ್ರೀಡಾಕೂಟ | ಆನಡ್ಕ ಶಾಲಾ ವಿದ್ಯಾರ್ಥಿನಿ ಪ್ರಗತಿ ರಾಜ್ಯಮಟ್ಟಕ್ಕೆ ಆಯ್ಕೆ Read More »

error: Content is protected !!
Scroll to Top