ಕ್ಯಾಂಪಸ್‌

ಕ್ರೀಡಾಕೂಟದಲ್ಲಿ ಮಣಿಕ್ಕರ ಸರಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ 

ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ನಡೆದ ಪುತ್ತೂರು ಶೈಕ್ಷಣಿಕ ವಲಯದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ- ಬಾಲಕಿಯರ ತಾಲೂಕು ಮಟ್ಟದಲ್ಲಿ ಕ್ರೀಡಾಕೂಟದಲ್ಲಿ ಮಣಿಕ್ಕರ ಸರಕಾರಿ ಪ್ರೌಢಶಾಲೆಯ ಮೂರು ವಿದ್ಯಾರ್ಥಿಗಳು ಪ್ರಶಸ್ತಿ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ  ನಿತಿನ್ ಪಿ 3000ಮೀ ಓಟದಲ್ಲಿ  ದ್ವಿತೀಯ ಹಾಗೂ 1500ಮೀ ಓಟದಲ್ಲಿ ತೃತಿಯ, ಮಹಮ್ಮದ್ ಐರಾಜ್ ಜಾವೇಲಿನ್ ತ್ರೋ ನಲ್ಲಿ ದ್ವಿತೀಯ, ಅನುಷ್ ಬಿ. ಸಿ. 400 ಮೀ ಓಟದಲ್ಲಿ ತೃತಿಯ ಸ್ಥಾನ ಪಡೆದುಕೊಂಡಿದ್ದಾರೆ. ನಿತಿನ್ ಮತ್ತು ಮಹಮ್ಮದ್ ಐರಾಜ್ […]

ಕ್ರೀಡಾಕೂಟದಲ್ಲಿ ಮಣಿಕ್ಕರ ಸರಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ  Read More »

ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ವಾರ್ಷಿಕೋತ್ಸವ – ಮಾನಸೋಲ್ಲಾಸ-2024 | ವಿದ್ಯಾರ್ಥಿಗಳಲ್ಲಿ ದೈಹಿಕ ಸಾಮರ್ಥ್ಯ ಕುಂಠಿತವಾಗುತ್ತಿದೆ : ಜಯಸೂರ್ಯ ರೈ

ಪುತ್ತೂರು: ಈಚೆಗಿನ ವರ್ಷಗಳಲ್ಲಿ ವಿದ್ಯಾರ್ಥಿಗಳಲ್ಲಿನ ದೈಹಿಕ ಸಾಮರ್ಥ್ಯ ಕುಂಠಿತವಾಗುತ್ತಿದೆ. ಕೆಲಹೊತ್ತು ಬಯಲಿನಲ್ಲಿ ನಿಂತರೆ ತಲೆತಿರುಗಿ ಕುಸಿಯುವ ವಿದ್ಯಾರ್ಥಿಗಳನ್ನು ಕಾಣುತ್ತಿದ್ದೇವೆ. ಮನೆಗಳಲ್ಲಿ ಮಕ್ಕಳಿಂದ ದೈಹಿಕ ಕೆಲಸ ಮಾಡಿಸದಿರುವುದು, ನಡೆದುಹೋಗಬಹುದಾದ ಜಾಗದಲ್ಲೂ ವಾಹನಗಳಲ್ಲೇ ಸಂಚರಿಸುವುದು ದೇಹಶಕ್ತಿಯ ಕ್ಷೀಣತೆಗೆ ಕಾರಣವಾಗುತ್ತಿದೆ. ಆದ್ದರಿಂದ ನಮ್ಮ ದೇಹಕ್ಕೆ ಶ್ರಮದಾಯಕ ಕಾರ್ಯಗಳಿಗೆ ಒಗ್ಗಿಕೊಳ್ಳುವ ಕಲೆಯನ್ನು ಕಲಿಸಿಕೊಡಬೇಕಿದೆ ಎಂದು ಕಾಣಿಯೂರಿನ ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ ಹೇಳಿದರು. ಅವರು ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ವಾರ್ಷಿಕೋತ್ಸವ – ‘ಮಾನಸೋಲ್ಲಾಸ-2024’ ವನ್ನು ಬಪ್ಪಳಿಗೆಯ

ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ವಾರ್ಷಿಕೋತ್ಸವ – ಮಾನಸೋಲ್ಲಾಸ-2024 | ವಿದ್ಯಾರ್ಥಿಗಳಲ್ಲಿ ದೈಹಿಕ ಸಾಮರ್ಥ್ಯ ಕುಂಠಿತವಾಗುತ್ತಿದೆ : ಜಯಸೂರ್ಯ ರೈ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಿಂದ ಕುಳ ಗ್ರಾಮದ ಗ್ರಾಮಸ್ಥರಿಗೆ ಸ್ತನ ಕ್ಯಾನ್ಸರ್ ಬಗ್ಗೆ ಮಾಹಿತಿ, ಕರಪತ್ರ ಹಂಚಿಕೆ | ಗ್ರಾಮ ವಿಕಾಸ ಯೋಜನೆಯ ಮತ್ತೊಂದು ಮೈಲಿಗಲ್ಲು

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸ್ಕಿಲ್ ಫೊರ್ಜ್ ವಿದ್ಯಾರ್ಥಿ ಬಳಗ, ಐಇಇಇ ವಿದ್ಯಾರ್ಥಿ ವಿಭಾಗ ಮತ್ತು ಗ್ರಾಮ ವಿಕಾಸ ಯೋಜನೆ ವಿಸಿಇಟಿ ಸಂಯುಕ್ತ ಆಶ್ರಯದಲ್ಲಿ ಕುಳ ಗ್ರಾಮದ ಗ್ರಾಮಸ್ಥರಿಗೆ ಸ್ತನ ಕ್ಯಾನ್ಸರ್ ಬಗ್ಗೆ ಮಾಹಿತಿ ಹಂಚುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಜ್ಞ ವೈದ್ಯರಿಂದ ಮಾಹಿತಿಯನ್ನು ಪಡೆದ ಸುಮಾರು 35 ವಿದ್ಯಾರ್ಥಿಗಳ ತಂಡ ಉಪನ್ಯಾಸಕರು ಹಾಗೂ ಊರವರ ಸಹಕಾರದೊಂದಿಗೆ 170 ಕ್ಕೂ ಹೆಚ್ಚಿನ ಮನೆಗಳಿಗೆ ಭೇಟಿ ನೀಡಿ ಕರಪತ್ರ ಹಂಚಿ, ಸ್ತನ ಕ್ಯಾನ್ಸರ್ ಬಗ್ಗೆ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಿಂದ ಕುಳ ಗ್ರಾಮದ ಗ್ರಾಮಸ್ಥರಿಗೆ ಸ್ತನ ಕ್ಯಾನ್ಸರ್ ಬಗ್ಗೆ ಮಾಹಿತಿ, ಕರಪತ್ರ ಹಂಚಿಕೆ | ಗ್ರಾಮ ವಿಕಾಸ ಯೋಜನೆಯ ಮತ್ತೊಂದು ಮೈಲಿಗಲ್ಲು Read More »

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಪ್ರಫುಲ್‍ ಯು.ಎಸ್‍. ಆಯ್ಕೆ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಪ್ರಫುಲ್ ಯು.ಎಸ್. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ಅಂತಿಮ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಪ್ರಫುಲ್ ಸಿಐಟಿ ಗುಬ್ಬಿಯಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇದೇ ಅ. ೩೦ ರಿಂದ ಚೆನ್ನೈನ ಎಸ್‌ಆರ್‌ ಎಮ್ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಕಬಡ್ಡಿ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಪ್ರಫುಲ್‍ ಯು.ಎಸ್‍. ಆಯ್ಕೆ Read More »

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಪುತ್ತೂರು ಇದರ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಚಿದಾನಂದ ಬೈಲಾಡಿ ಆಯ್ಕೆ

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಭಾರತ ಸರಕಾರದ ನೋಟರಿ ಪಬ್ಲಿಕ್ ನ್ಯಾಯವಾದಿ ಚಿದಾನಂದ ಬೈಲಾಡಿ ಆಯ್ಕೆಯಾಗಿದ್ದಾರೆ. ಚಿದಾನಂದ ಬೈಲಾಡಿಯವರು ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮತ್ತು ನ್ಯೂಸ್ ಪುತ್ತೂರು ಇದರ ನಿರ್ದೇಶಕರೂ ಆಗಿದ್ದಾರೆ. ಬೈಲಾಡಿಯವರು ವಿವಿಧ ಸಾಮಾಜಿಕ ಮತ್ತು ಧಾರ್ಮಿಕ ಸಂಘಟನೆಗಳಲ್ಲಿ ಕ್ರಿಯಾಶೀಲರಾಗಿದ್ದಾರೆ.

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಪುತ್ತೂರು ಇದರ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಚಿದಾನಂದ ಬೈಲಾಡಿ ಆಯ್ಕೆ Read More »

ಪುತ್ತೂರು ಶೈಕ್ಷಣಿಕ ವಲಯದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಪುತ್ತೂರು: ಪುತ್ತೂರಿನಲ್ಲಿ ಸುಸಜ್ಜಿತ ಕ್ರೀಡಾಂಗಣಕ್ಕಾಗಿ 20 ಎಕ್ರೆ ಜಾಗ ಗುರುತಿಸಲಾಗಿದ್ದು, ಜತೆಗೆ 8 ಕೋಟಿ ಅನುದಾನ ಬಿಡುಗಡೆಯಾಗಿದೆ. ಕ್ರೀಡಾಂಗಣ ನಿರ್ಮಾಣಕ್ಕಾಗಿ ಸಂಬಂಧ ಪಟ್ಟ ಇಲಾಖೆಯಲ್ಲಿ ಕಡತದ ಕೆಲಸ ಕಾರ್ಯಗಳು ಪ್ರೊಸೆಸ್ ಹಂತದಲ್ಲಿದೆ ಎಂದು ಶಾಸಕ ಅಶೋಕ್ ಕುಮಾರ್ ಹೇಳಿದರು. ಅವರು ಸೋಮವಾರ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯುವ 2024-25ನೇ ಸಾಲಿನ ಪುತ್ತೂರು ಶೈಕ್ಷಣಿಕ ವಲಯದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡಾಂಗಣದಲ್ಲಿ ಒಳಾಂಗಣ

ಪುತ್ತೂರು ಶೈಕ್ಷಣಿಕ ವಲಯದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ Read More »

ಅಕ್ಷಯ ಕಾಲೇಜಿನಲ್ಲಿ “ಡೆಲಿಸಿಯಾ” ಹಾಸ್ಪಿಟಲಿಟಿ ಕ್ಲಬ್ ಆತಿಥ್ಯ ಉದ್ಯಮದ ಕುರಿತು ಸಂವಾದ

ಪುತ್ತೂರು: ಪುತ್ತೂರು : ಅಕ್ಷಯ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ  ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಬಿ.ಎಚ್.ಎಸ್. ವಿಭಾಗ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ   “ಡೆಲಿಸಿಯಾ” ಹಾಸ್ಪಿಟಲಿಟಿ ಕ್ಲಬ್  ಆತಿಥ್ಯ ಉದ್ಯಮದ  ಕುರಿತು  ಸಂವಾದ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಪೆಸ್ಟ್ರಿ ಶೇಫ್ Ncl ಕ್ರೂಸ್ ಲೈನ್ ನ ಯತೀರಾಜ್ ಪೂಜಾರಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ, ಹಾಸ್ಪಿಟಾಲಿಟಿ ಸೈನ್ಸ್  ಗ್ರಾಹಕರಿಗೆ ಆಹಾರ ಮತ್ತು ವಸತಿ ಅಗತ್ಯಗಳನ್ನು ಪೂರೈಸುವ ಸೇವಾ ಉದ್ಯಮವಾಗಿದೆ. ಹಾಸ್ಪಿಟಾಲಿಟಿ ಸೈನ್ಸ್ ನಲ್ಲಿ ವಿವಿಧ ಆಡಳಿತಾತ್ಮಕ,ವ್ಯವಸ್ಥಾಪನಾ

ಅಕ್ಷಯ ಕಾಲೇಜಿನಲ್ಲಿ “ಡೆಲಿಸಿಯಾ” ಹಾಸ್ಪಿಟಲಿಟಿ ಕ್ಲಬ್ ಆತಿಥ್ಯ ಉದ್ಯಮದ ಕುರಿತು ಸಂವಾದ Read More »

ಬೆಂಗಳೂರಿನಲ್ಲಿ ಸ್ನಾತಕೋತ್ತರ ಪದವಿ ಸ್ವೀಕರಿಸಿದ ಪುತ್ತೂರಿನ ಲಹರಿ ಕೆ.ಎಂ.

ಪುತ್ತೂರು: ಪುತ್ತೂರಿನ ಲಹರಿ ಕೆ. ಎಂ. ಅವರು ಎಂ.ಬಿ.ಎ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರಿನ ದಯಾನಂದ ಸಾಗರ್ ಸಂಸ್ಥೆಗಳು ಏರ್ಪಡಿಸಿದ್ದ ಘಟಿಕೋತ್ಸವ ಸಮಾರಂಭದಲ್ಲಿ ಸ್ವೀಕರಿಸಿದರು. ಅವರು ದಯಾನಂದ ಸಾಗರ್ ಕಾಲೇಜ್ ಆಫ್ ಆರ್ಟ್ಸ್ ಸೈನ್ಸ್ ಅಂಡ್ ಕಾಮರ್ಸ್ ನ ವಿದ್ಯಾರ್ಥಿನಿಯಾಗಿದ್ದಾರೆ. ಲಹರಿ ಕೆ.ಎಂ. ಪುತ್ತೂರು ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷ ಮನೋಹರ್ ಕೆ ವಿ ಮತ್ತು ಮಮತಾ ಕೆ. ಎ. ದಂಪತಿ ಪುತ್ರಿ,

ಬೆಂಗಳೂರಿನಲ್ಲಿ ಸ್ನಾತಕೋತ್ತರ ಪದವಿ ಸ್ವೀಕರಿಸಿದ ಪುತ್ತೂರಿನ ಲಹರಿ ಕೆ.ಎಂ. Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ | ‘ನನಗಲ್ಲ ನಿನಗೆ’ ಎನ್ನುವ ಸೇವಾ ಭಾವನೆಯೇ ದೇಶ ಸೇವೆಯ ಮೊದಲ ಹೆಜ್ಜೆ : ಡಾ.ನಂದೀಶ್ ವೈ.ಡಿ.

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2023-24ನೇ ಸಾಲಿನ ಎನ್. ಎಸ್. ಎಸ್. ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ವಿಭಾಗದ ಮುಖ್ಯಸ್ಥ, ಸಹಾಯಕ ಪ್ರಾಧ್ಯಾಪಕ ಡಾ. ನಂದೀಶ್ ವೈ. ಡಿ., ಭಾವನಾತ್ಮಕ ಬುದ್ಧಿವಂತಿಕೆ ಮತ್ತು ದೇಶ ಪ್ರೇಮ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿ ನಮ್ಮ ಮನಸ್ಸು ಯಾವ ರೀತಿ ಯೋಚನೆ ಮಾಡುತ್ತದೆಯೋ ಅದೇ

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ | ‘ನನಗಲ್ಲ ನಿನಗೆ’ ಎನ್ನುವ ಸೇವಾ ಭಾವನೆಯೇ ದೇಶ ಸೇವೆಯ ಮೊದಲ ಹೆಜ್ಜೆ : ಡಾ.ನಂದೀಶ್ ವೈ.ಡಿ. Read More »

ನಾಳೆ (ಅ.28) : ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಪುತ್ತೂರು ಶೈಕ್ಷಣಿಕ ವಲಯದ ತಾಲೂಕು ಮಟ್ಟದ ಕ್ರೀಡಾಕೂಟ

ಪುತ್ತೂರು: 2024-25ನೇ ಸಾಲಿನ ಪುತ್ತೂರು ಶೈಕ್ಷಣಿಕ ವಲಯದ ತಾಲೂಕು ಮಟ್ಟದ ಕ್ರೀಡಾಕೂಟ ಅ.28 ರಂದು ಸಾಂದೀಪನಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ಕ್ರೀಡಾಕೂಟ ಇದಾಗಿದೆ. ದ.ಕ.ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ನರಿಮೊಗರು ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಕ್ರೀಡಾಕೂಟ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ನಾಳೆ (ಅ.28) : ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಪುತ್ತೂರು ಶೈಕ್ಷಣಿಕ ವಲಯದ ತಾಲೂಕು ಮಟ್ಟದ ಕ್ರೀಡಾಕೂಟ Read More »

error: Content is protected !!
Scroll to Top