ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಶ್ರೀ ಶಾರದಾ ಪೂಜೆ | ಅಕ್ಷರವನ್ನು ಆರಾಧಿಸುವ ಪರಂಪರೆ ನಮ್ಮದೆಂಬುದು ಹೆಮ್ಮೆ : ರಾಕೇಶ ಕಮ್ಮಜೆ
ಪುತ್ತೂರು: ಯಾರೂ ಅಕ್ಷರದ್ವೇಷಿಗಳಾಗಬಾರದು. ಅಕ್ಷರವನ್ನು ಪ್ರೀತಿಸುತ್ತಾ ಸಾಗಿದಂತೆ ನಮ್ಮ ಜ್ಞಾನ ವೃದ್ಧಿಯಾಗುತ್ತಾ ಹೋಗುತ್ತದೆ. ಅಕ್ಷರವನ್ನು ಗೌರವಿಸುವ, ಆರಾಧಿಸುವ ಪರಂಪರೆಗೆ ನಾವು ಸೇರಿದ್ದೇವೆ ಎಂಬ ಹೆಮ್ಮೆ ನಮ್ಮಲ್ಲಿರಬೇಕು. ಅಕ್ಷರ ಸರಸ್ವತಿಯ ವರಪುತ್ರ-ಪುತ್ರಿಯರಾಗಿ ನಾವು ಹೊರಹೊಮ್ಮಬೇಕು. ಆಗ ಸುಜ್ಞಾನ ನಮ್ಮದಾಗುತ್ತದೆ ಎಂದು ಅಂಬಿಕಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಹೇಳಿದರು. ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಶನಿವಾರ ಶ್ರೀ ಶಾರದಾ ಪೂಜೆಯ ಪ್ರಯುಕ್ತ ಆಯೋಜಿಸಲಾದ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪುಸ್ತಕಗಳನ್ನು ಓದುವುದು ಕೂಡ […]










