ಕ್ಯಾಂಪಸ್‌

ಅಕ್ಷಯ ಕಾಲೇಜಿನಲ್ಲಿ ಸ್ಪೋಕನ್ ಇಂಗ್ಲೀಷ್ ತರಗತಿಗಳ ಉದ್ಘಾಟನೆ

ಪುತ್ತೂರು:  ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಂಗ್ಲೀಷ್ ವಿಭಾಗ ಮತ್ತುಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ   ಸ್ಪೋಕನ್ ಇಂಗ್ಲೀಷ್  ತರಗತಿಗಳ ಉದ್ಘಾಟನಾ ಸಮಾರಂಭ ನಡೆಯಿತು. ಸುಳ್ಯ ಎನ್ಎಂಸಿ ಕಾಲೇಜು ಪ್ರಾಂಶುಪಾಲ ಮಿಥಾಲಿ ಪಿ. ರೈ ಸಮಾರಂಭದ ಉದ್ಘಾಟಿಸಿ ಮಾತನಾಡಿ, ಭಾರತದ ರಾಷ್ಟ್ರ ಭಾಷೆ ಹಿಂದಿಯಾದರು  ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕವಾಗಿ ಬಳಸಲ್ಪಡುವ ಭಾಷೆ ಇಂಗ್ಲೀಷ್ ಆಗಿದೆ.  ಈ ನಿಟ್ಟಿನಲ್ಲಿ ನಮ್ಮ ಮಾತೃಭಾಷೆಯ ರೀತಿ ಸರಳವಾಗಿ ಇಂಗ್ಲೀಷ್ ಮಾತನಾಡಲು ಕಲಿಯುವುದು […]

ಅಕ್ಷಯ ಕಾಲೇಜಿನಲ್ಲಿ ಸ್ಪೋಕನ್ ಇಂಗ್ಲೀಷ್ ತರಗತಿಗಳ ಉದ್ಘಾಟನೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಇಂಟರ್ನಲ್‌ ಹ್ಯಾಕಥಾನ್‌ ಗೆ ವಿಧ್ಯುಕ್ತ ಚಾಲನೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಇನ್‌ಸ್ಟಿಟ್ಯೂಶನ್ಸ್‌ ಇನ್ನೊವೇಶನ್‌ ಕೌನ್ಸಿಲ್‌ ಹಾಗೂ ಗಣಕವಿಜ್ಞಾನ ವಿಭಾಗಗಳ ವತಿಯಿಂದ ಸ್ಮಾರ್ಟ್‌ ಇಂಡಿಯಾ ಹ್ಯಾಕಥಾನ್‌ ಗೆ ಭಾಗವಹಿಸುವ ಪೂರ್ವತಯಾರಿಯಾಗಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಇಂಟರ್ ನಲ್‌ ಹ್ಯಾಕಥಾನ್‌ ಉದ್ಘಾಟಿಸಲಾಯಿತು. ಮಂಗಳೂರು ಸೈಂಟ್‌ ಜೋಸೆಫ್‌ ಇಂಜಿನಿಯರಿಂಗ್‌ ಕಾಲೇಜಿನ ಇಲೆಕ್ಟ್ರಾನಿಕ್ಸ್‌ ಆ್ಯಂಡ್‌ ಕಮ್ಯುನಿಕೇಶನ್‌ ವಿಭಾಗದ ಸಹಾಯಕ ಪ್ರಾಧ್ಯಾಪಕ, ಗ್ಲೆನ್ಸನ್‌ ಟೋನಿ ಚಾಲನೆ ನೀಡಿ ಮಾತನಾಡಿ, ಭಾರತದ ಉತ್ಕೃಷ್ಟ ಸಂಪನ್ಮೂಲಗಳನ್ನು ಬಳಸಿ ಉನ್ನತ ವಿದ್ಯಾಭ್ಯಾಸ ನಡೆಸಿದ ಅದೆಷ್ಟೋ ಪ್ರತಿಭಾವಂತ ಜನರು ಉದ್ಯೋಗಗಳನ್ನರಸಿ ವಿದೇಶಗಳಿಗೆ ಹೋಗುತ್ತಿದ್ದಾರೆ. ಈ ಪ್ರತಿಭಾ ಪಲಾಯನವನ್ನು

ಸಂತ ಫಿಲೋಮಿನಾ ಕಾಲೇಜಿನಲ್ಲಿ ಇಂಟರ್ನಲ್‌ ಹ್ಯಾಕಥಾನ್‌ ಗೆ ವಿಧ್ಯುಕ್ತ ಚಾಲನೆ Read More »

ಮುಡಿಪು ಪಿ.ಎಂ.ಶ್ರೀ ಜವಾಹರ್ ನವೋದಯ ವಿದ್ಯಾಲಯದಲ್ಲಿ ಪಿಟಿಸಿ ಜನರಲ್ ಬಾಡಿ ಸಭೆ, ಓಣಂ ಆಚರಣೆ | ಸಮಾರಂಭ ಉದ್ಘಾಟಿಸಿದ ಸಂಸದ ಕ್ಯಾ.ಬ್ರಿಜೇಶ್‍ ಚೌಟ

ಮುಡಿಪು: ದ.ಕ.ಜಿಲ್ಲೆಯ ಮುಡಿಪು ಪಿ.ಎಂ.ಶ್ರೀ ಜವಹಾರ್ ನವೋದಯ ವಿದ್ಯಾಲಯದಲ್ಲಿ ಪಿಟಿಸಿ ಜನರಲ್ ಬಾಡಿ ಸಭೆ ಹಾಗೂ ಓಣಂ ಆಚರಣೆ ಇಂದು ವಿದ್ಯಾಲಯದ ಸಭಾಭವನದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ ಪಾಲ್ಗೊಂಡು ಸಮಾರಂಭದ ಉದ್ಘಾಟಿಸಿ ಶುಭ ಹಾರೈಸಿದರು. ನವೋದಯ ವಿದ್ಯಾಲಯದ ಪ್ರಾಂಶುಪಾಲ ಪಿ.ರಾಜೇಶ್‍ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪುತ್ತೂರು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಶೆಟ್ಟಿ, ಸಹಿತ ವಿವಿಧ ಗಣ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು. ಸಮಾರಂಭದಲ್ಲಿ ವಿವಿಧ ಚಟುವಟಿಕೆಗಳ ಕುರಿತು

ಮುಡಿಪು ಪಿ.ಎಂ.ಶ್ರೀ ಜವಾಹರ್ ನವೋದಯ ವಿದ್ಯಾಲಯದಲ್ಲಿ ಪಿಟಿಸಿ ಜನರಲ್ ಬಾಡಿ ಸಭೆ, ಓಣಂ ಆಚರಣೆ | ಸಮಾರಂಭ ಉದ್ಘಾಟಿಸಿದ ಸಂಸದ ಕ್ಯಾ.ಬ್ರಿಜೇಶ್‍ ಚೌಟ Read More »

ತಾಲೂಕು ಮಟ್ಟದ ತ್ರೋಬಾಲ್ : ಅಂಬಿಕಾದ ವಿದ್ಯಾರ್ಥಿನಿಯರು ಪ್ರಥಮ

ಪುತ್ತೂರು: ಶಾಲಾ ಶಿಕ್ಷಣ (ಪದವಿ ಪೂರ್ವ) ಹಾಗೂ ಬೆಟ್ಟಂಪಾಡಿ ಸರಕಾರಿ ಪದವಿ ಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಂಡವನ್ನು ದ್ವಿತೀಯ ಪಿಯುಸಿಯ ಅವನಿ ರೈ, ಮೇಘನಾ ವಿ ಎಚ್., ಪ್ರಥಮ ಪಿಯುಸಿಯ ವೈಶಾಲಿ ಕೆ, ರಿಯಾ ಜೆ ರೈ, ಯುಕ್ತ ವರ್ಷಿಣಿ, ಶ್ರೇಯಾ ವೈ, ಸಿಂಚನ ಎಂ, ಸಾನ್ವಿ ಆರ್, ಚರಿಷ್ಮ ಕೆ,

ತಾಲೂಕು ಮಟ್ಟದ ತ್ರೋಬಾಲ್ : ಅಂಬಿಕಾದ ವಿದ್ಯಾರ್ಥಿನಿಯರು ಪ್ರಥಮ Read More »

ಸಂತ ಫಿಲೋಮಿನ ಕಾಲೇಜಿನಲ್ಲಿ ಯೂತ್ ರೆಡ್ ಕ್ರಾಸ್ ಓರಿಯೆಂಟೇಶನ್ ಕಾರ್ಯಕ್ರಮ

ಪುತ್ತೂರು: ಯೂತ್ ರೆಡ್ ಕ್ರಾಸ್, ಸೇಂಟ್ ಫಿಲೋಮಿನಾ ಕಾಲೇಜು ಜಂಟಿ ಆಶ್ರಯದಲ್ಲಿ ಯುವ ರೆಡ್ ಕ್ರಾಸ್ ಸ್ವಯಂ ಸೇವಕರಿಗೆ ಓರಿಯಂಟೇಶನ್ ಕಾರ್ಯಕ್ರಮ ಆಯೋಜಿಸಲಾಯಿತು. ರೆಡ್‌ಕ್ರಾಸ್‌ ಸಂಸ್ಥಾಪಕ ಮತ್ತು ಮೊದಲ ಉದಾತ್ತ ಶಾಂತಿ ಪ್ರಶಸ್ತಿಯನ್ನು ಪಡೆದ ಜೀನ್ ಹೆನ್ರಿ ಡ್ಯುನಾಂಟ್‌ಗೆ ಮಾಲಾರ್ಪಣೆ ಮಾಡುವ ಮೂಲಕ  ಕಾರ್ಯಕ್ರಮ ಉದ್ಘಾಟಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ವಂ.ಡಾ.ಆಂಟೋನಿ ಪ್ರಕಾಶ್ ಮೊಂತೇರೊ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಉತ್ಕೃಷ್ಟತೆಯತ್ತ ಗಮನಹರಿಸದೆ ಜೀವನದುದ್ದಕ್ಕೂ ಮಾರ್ಗದರ್ಶನ ನೀಡುವ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಸಹಾಯಕ ಉಪನ್ಯಾಸಕಿ

ಸಂತ ಫಿಲೋಮಿನ ಕಾಲೇಜಿನಲ್ಲಿ ಯೂತ್ ರೆಡ್ ಕ್ರಾಸ್ ಓರಿಯೆಂಟೇಶನ್ ಕಾರ್ಯಕ್ರಮ Read More »

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗೆಗಳಿಗೆ ಚಾಲನೆ, ಎರಡನೇ  ಘಟಕದ ಉದ್ಘಾಟನೆ

ಪುತ್ತೂರು:  ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗೆಗಳಿಗೆ ಚಾಲನೆ ಮತ್ತು ಎರಡನೇ  ಘಟಕದ  ಉದ್ಘಾಟನಾ  ಕಾರ್ಯಕ್ರಮ ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ  ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಯಿತು . ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ  ಶೇಷಪ್ಪ ಕೆ  ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಧಿಕೃತವಾಗಿ 2 ನೇ  ಘಟಕಕ್ಕೆ ಚಾಲನೆ ನೀಡಿ, ರಾಷ್ಟ್ರೀಯ ಸೇವಾ ಯೋಜನೆಯು  ಅಂತಾರಾಷ್ಟ್ರೀಯ ಮಟ್ಟದಲ್ಲೂ ಬಹುದೊಡ್ಡ ಕಾರ್ಯಕರ್ತರನ್ನು ಹೊಂದಿರುವ

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗೆಗಳಿಗೆ ಚಾಲನೆ, ಎರಡನೇ  ಘಟಕದ ಉದ್ಘಾಟನೆ Read More »

ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್‌ ಶಿಪ್‌ : ಅಂಬಿಕಾ ವಿದ್ಯಾಲಯದ ದೃಶಾನ ಪ್ರಥಮ

ಪುತ್ತೂರು: ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಎಂಟನೇ ತರಗತಿ ವಿದ್ಯಾರ್ಥಿನಿ ದೃಶಾನ ಸುರೇಶ ಸರಳಿಕಾನ ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಅಥ್ಲೆಟಿಕ್‌ ನ 14 ವಯೋಮಿತಿ ಒಳಗಿನ (ಬಾಲವರ್ಗ) ಸ್ಪರ್ಧೆಯಲ್ಲಿ ಭಾಗವಹಿಸಿ 100 ಮೀ., ಹಾಗೂ 200 ಮೀ ಓಟದಲ್ಲಿ ಪ್ರಥಮ ಸ್ಥಾನ ಮತ್ತು ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ದೃಶಾನ ಬೆಟ್ಟಂಪಾಡಿಯ ಸುರೇಶ ಗೌಡ ಸರಳಿಕಾನ ಮತ್ತು ವಿದ್ಯಾಶ್ರೀ ದಂಪತಿ ಪುತ್ರಿ. ವಿದ್ಯಾರ್ಥಿನಿಯನ್ನು ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕರು

ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್‌ ಶಿಪ್‌ : ಅಂಬಿಕಾ ವಿದ್ಯಾಲಯದ ದೃಶಾನ ಪ್ರಥಮ Read More »

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ

ಪುತ್ತೂರು: ಬನ್ನೂರು ಕೃಷ್ಣ ನಗರದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಭರತನಾಟ್ಯ ತರಗತಿ ಸೆ.9ರಂದು ಪ್ರಾರಂಭಗೊಂಡಿತು. ಐಕ್ಯಮ್ ಕಲಾ ಅಕಾಡೆಮಿ ಶಿಕ್ಷಕಿ ವಿದುಷಿ ನಿಖಿತಾ ಪಾಣಾಜೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ಭರತನಾಟ್ಯ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು. ಅಧ್ಯಕ್ಷ ತೆಯನ್ನು ಸಂಸ್ಥೆಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ವಹಿಸಿದ್ದು ಭರತನಾಟ್ಯದ ಮಹತ್ವದ ಬಗ್ಗೆ ಮಾತನಾಡಿದರು. ವೇದಿಕೆಯಲ್ಲಿ ಸಂಸ್ಥೆಯ ನಿರ್ದೇಶಕಿ ಪ್ರತಿಭಾ ದೇವಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಸವಿತಾ ಕೆ. ಸ್ವಾಗತಿಸಿದರು. ಶಿಕ್ಷಕಿ ಯಶುಭ ರೈ

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ Read More »

ತ್ರೋಬಾಲ್ ಪಂದ್ಯಾಟ : ಬಾಲಕಿಯರ ವಿಭಾಗದಲ್ಲಿ ಪಾಂಗ್ಲಾಯಿ ಬೆಥನಿ ಆಂಗ್ಲ ಮಾದ್ಯಮ ಪ್ರಾಥಮಿಕ  ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಶ್ರೀ ಬಾಲಸುಬ್ರಹ್ಮಣ್ಯ ಅನುದಾನಿತ ಹಿ .ಪ್ರಾ ಶಾಲೆ ಸಹಯೋಗದೊಂದಿಗೆ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ/ಬಾಲಕಿಯರ ತ್ರೋಬಾಲ್ ಪಂದ್ಯಾಟ ಸುಳ್ಯಪದವು ಸರ್ವೋದಯ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪುತ್ತೂರು ಪಾಂಗ್ಲಯಿ ಬೆಥನಿ ಆಂಗ್ಲ ಮಾದ್ಯಮ  ಶಾಲೆ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಈ ಪಂದ್ಯಾಟದಲ್ಲಿ ಉತ್ತಮ ಆಲ್ರೌಂಡರ್ ಆಗಿ ಬೆಥನಿಯ ಆದ್ಯಾ ಕೆ. ಪ್ರಶಸ್ತಿಯನ್ನು ಪಡೆದಿರುತ್ತಾರೆ. ತಂಡದ ಆಟಗಾರರಾದ

ತ್ರೋಬಾಲ್ ಪಂದ್ಯಾಟ : ಬಾಲಕಿಯರ ವಿಭಾಗದಲ್ಲಿ ಪಾಂಗ್ಲಾಯಿ ಬೆಥನಿ ಆಂಗ್ಲ ಮಾದ್ಯಮ ಪ್ರಾಥಮಿಕ  ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ನವಾರಂಭ್’ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

ಪುತ್ತೂರು: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಕಲಿಕೆ ಮತ್ತು ಕ್ರೀಡೆ ಎರಡಕ್ಕೂ ಸಮಾನ ಪ್ರಾಶಸ್ತ್ಯ ನೀಡಬೇಕು. ಕ್ರೀಡೆಗೆ ಮಾತ್ರ ಹೆಚ್ಚಿನ ಪ್ರಾಮುಖ್ಯತೆ ನೀಡುವುದರಿಂದ ಮುಂದೆ ವೃತ್ತಿ ಜೀವನದಲ್ಲಿ ಕಷ್ಟ ಎದುರಿಸಬೇಕಾಗುತ್ತದೆ. ಒಬ್ಬ ಉತ್ತಮ ಮನುಷ್ಯನಾಗಲು ತಾರ್ಕಿಕ ಜ್ಞಾನ, ಸೂಕ್ಷ್ಮತೆ, ಓದುವ ಮತ್ತು ಬರೆಯುವ ಕೌಶಲ್ಯ, ಸಾಮಾನ್ಯ ಜ್ಞಾನ ಮತ್ತು ಉತ್ತಮ ಸಂವಹನ ಕೌಶಲ ಎಂಬ ಆರು ಅಂಶಗಳನ್ನು ಉಪಯೋಗಿಸಬೇಕು ಎಂದು ಪ್ರಾಂಶುಪಾಲ ವಂದನೀಯ ಡಾ. ಆಂಟನಿ ಪ್ರಕಾಶ್ ಮೋ೦ತೆರೋ ಹೇಳಿದರು. ಸಂತ ಫಿಲೋಮಿನಾ ಕಾಲೇಜಿನ ಮಾನವಿಕ ವಿಭಾಗದ

ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ನವಾರಂಭ್’ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ Read More »

error: Content is protected !!
Scroll to Top