ಕ್ಯಾಂಪಸ್‌

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಎನ್‌ಡಿಎ ತರಗತಿಗಳಿಗೆ ಚಾಲನೆ

ಪುತ್ತೂರು: ನ್ಯಾಷನಲ್‌ ಡಿಫೆನ್ಸ್‌ ಅಕಾಡೆಮಿ ನಡೆಸುವ ಪರೀಕ್ಷೆ ಸೈನ್ಯ ಸೇರುವವರಿಗೆ ಒಳ್ಳೆಯ ಅವಕಾಶ. ಇದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ಸೈನ್ಯದಲ್ಲಿ ಹುಡುಗರು ಮತ್ತು ಹುಡುಗಿಯರು ಇಬ್ಬರಿಗೂ  ಸಮಾನ ಅವಕಾಶವಿದೆ. ಆದರೆ ಪ್ರಸ್ತುತ ನಮ್ಮ ಪ್ರದೇಶಗಳಿಂದ ಯುವ ಸಮೂಹ ದೊಡ್ಡ ಉತ್ಸಾಹ ತೋರದಿರುವುದು, ಹೆಚ್ಚಿನ ಸಂಖ್ಯೆಯಲ್ಲಿ ಸೈನ್ಯಕ್ಕೆ ಸೇರದಿರುವುದು ವಿಷಾದಕರ ಎಂದು ರಾಷ್ಟ್ರೀಯ ಸೈನಿಕ ಸಂಸ್ಥೆಯ ರಾಜ್ಯ ಯುವ ಅಧ್ಯಕ್ಷ ಅರವಿಂದ ಹೇಳಿದರು. ಅವರು ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಎನ್‌.ಡಿ.ಎ. ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ […]

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಎನ್‌ಡಿಎ ತರಗತಿಗಳಿಗೆ ಚಾಲನೆ Read More »

ಪೆರಾಬೆ ಶಾಲಾ ಕಟ್ಟಡ ಕುಸಿತ ಪ್ರಕರಣ | ಜಿಲ್ಲಾ ಪಂಚಾಯತ್ ಇಂಜಿನಿಯರ್ ಸಂಗಪ್ಪ ಹುಕ್ಕೇರಿ ಹಾಗೂ ಶಾಲಾ ಮುಖ್ಯ ಶಿಕ್ಷಕ ರಮೇಶ್ ಅಮಾನತು

ಕಡಬ: ತಾಲೂಕಿನ ಪೆರಾಬೆ ಗ್ರಾಮದಲ್ಲಿ ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಒಂದು ಭಾಗ ಹಾಗೂ ಛಾವಣಿ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಪಂಚಾಯತ್ ಇಂಜಿನಿಯರ್ ಸಂಗಪ್ಪ ಹುಕ್ಕೇರಿ ಹಾಗೂ ಶಾಲಾ ಮುಖ್ಯ ಶಿಕ್ಷಕ ರಮೇಶ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅಮಾನತುಗೊಳಿಸಿದ್ದಾರೆ. ಶಾಲಾ ಕಟ್ಟಡದ ಛಾವಣಿ ಸಹಿತ ಒಂದು ಭಾಗ ಕುಸಿದು ಬಿದ್ದು ನಾಲ್ವರು ವಿದ್ಯಾರ್ಥಿಗಳಾದ 7ನೇ ತರಗತಿಯ ರಶ್ಮಿ ದೀಕ್ಷಾ, ಫಾತಿಮಾ ಸುಹಾನಾ ಮತ್ತು ಯಶಿತಾ ಗಾಯಗೊಂಡಿದ್ದರು. ಅದೃಷ್ಟವಶಾತ್, ಹೆಚ್ಚಿನ

ಪೆರಾಬೆ ಶಾಲಾ ಕಟ್ಟಡ ಕುಸಿತ ಪ್ರಕರಣ | ಜಿಲ್ಲಾ ಪಂಚಾಯತ್ ಇಂಜಿನಿಯರ್ ಸಂಗಪ್ಪ ಹುಕ್ಕೇರಿ ಹಾಗೂ ಶಾಲಾ ಮುಖ್ಯ ಶಿಕ್ಷಕ ರಮೇಶ್ ಅಮಾನತು Read More »

ತಾಲೂಕು ಮಟ್ಟದ ವಾಲಿಬಾಲ್ | ಬಾಲಕರ ವಿಭಾಗದಲ್ಲಿ ಪಾಂಗ್ಲಾಯಿ ಬೆಥನಿ ಆಂಗ್ಲ ಮಾದ್ಯಮ ಶಾಲೆ ಹಾಗೂ ಬಾಲಕಿಯರ ವಿಭಾಗದಲ್ಲಿ ಪಾಪೆಮಜಲು ಸರಕಾರಿ ಶಾಲೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ನರಿಮೊಗರು ಗ್ರಾಮ ಪಂಚಾಯತ್ ಹಾಗೂ ಪಂಜಳ ಶಾಂತಿಗಿರಿ ವಿದ್ಯಾನಿಕೇತನ್ ಶಾಲೆಯ ಸಹಯೋಗದೊಂದಿಗೆ ಪಂಜಳ ಶಾಂತಿಗಿರಿ ವಿದ್ಯಾನಿಕೇತನ್ ಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಸ್ಥಾನ ಹಾಗೂ ಬಾಲಕಿಯರ ವಿಭಾಗದಲ್ಲಿ ಪಾಪೆಮಜಲು ಶಾಲೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಈ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ

ತಾಲೂಕು ಮಟ್ಟದ ವಾಲಿಬಾಲ್ | ಬಾಲಕರ ವಿಭಾಗದಲ್ಲಿ ಪಾಂಗ್ಲಾಯಿ ಬೆಥನಿ ಆಂಗ್ಲ ಮಾದ್ಯಮ ಶಾಲೆ ಹಾಗೂ ಬಾಲಕಿಯರ ವಿಭಾಗದಲ್ಲಿ ಪಾಪೆಮಜಲು ಸರಕಾರಿ ಶಾಲೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಚೆಸ್ ಪಂದ್ಯಾಟ : ಅಂಬಿಕಾದ ತ್ರಿಶೂಲ್‌ ಎನ್. ಡಿ. ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಮಂಗಳೂರಿನ ಬಾಸ್ಕೊ ಪದವಿ ಪೂರ್ವ ಕಾಲೇಜುಗಳ ಸಹಯೋಗದಲ್ಲಿ ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯದಲ್ಲಿ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿ ತ್ರಿಶೂಲ್‌ ಎನ್.ಡಿ. ನಾಲ್ಕನೇ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತ್ರಿಶೂಲ್ ಪುತ್ತೂರು ಹಾರಾಡಿ ನಿವಾಸಿ ದಾಮೋದರ ಎನ್. ಮತ್ತು ನವೀನ ಕುಮಾರಿಕೆ.ಎಸ್. ದಂಪತಿ ಪುತ್ರ. ವಿದ್ಯಾರ್ಥಿ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ಚೆಸ್ ಪಂದ್ಯಾಟ : ಅಂಬಿಕಾದ ತ್ರಿಶೂಲ್‌ ಎನ್. ಡಿ. ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ

ಪುತ್ತೂರು: ನರಿಮೊಗರಿನ ಸರಸ್ವತಿ ವಿದ್ಯಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸರಸ್ವತಿ ವಿದ್ಯಾಮಂದಿರದ ಆಡಳಿತ ಮಂಡಳಿ ಅಧ್ಯಕ್ಷ ಅವಿನಾಶ್‍ ಕೊಡಂಕಿರಿ ಶ್ರೀ ಕೃಷ್ಣ -ರಾಧಾ ವೇಷ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿ, ಪುರುಷೋತ್ತಮನಾದ ಭಗವಂತ ಶ್ರೀ ಕೃಷ್ಣನ ಆದರ್ಶ ಗುಣಗಳ ಅನುಸರಣೆಗಾಗಿ ಮಕ್ಕಳಿಗೆ ಕೃಷ್ಣ ವೇಷ ಹಾಕಿಸಿ ಬಾಲ್ಯದಲ್ಲೇ ಸಂಸ್ಕಾರ ನೀಡುವುದು ಅಭಿನಂದನೀಯ ಎಂದರು. ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಿಶ್ವನಾಥ ಬಲ್ಯಾಯ ಉಪಸ್ಥಿತರಿದ್ದರು. ಸದಸ್ಯ ರಂಗಯ್ಯ ಬಲ್ಲಾಳ್, ಹಿರಿಯ ಪಾಕತಜ್ಞ ಮುರಳಿ

ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ Read More »

ಸಂತ ಫಿಲೋಮಿನ ಕಾಲೇಜು ಮಾನವಿಕ ವಿಭಾಗದಿಂದ ‘ಬೇಸಾಯದತ್ತ ನಮ್ಮ ಚಿತ್ತ’ ಕಾರ್ಯಕ್ರಮ

ಪುತ್ತೂರು: ಸಂತ ಫಿಲೋಮಿನ ಕಾಲೇಜಿನ ಮಾನವಿಕ ವಿಭಾಗದಿಂದ ‘ಬೇಸಾಯದತ್ತ ನಮ್ಮ ಚಿತ್ತ’ ಕಾರ್ಯಕ್ರಮ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಶಿವ ಭಟ್ ಅವರ ಕೃಷಿ ಪ್ರದೇಶ ಕೆಯ್ಯೂರಿನ ಕಣಿಯಾರು ದೇವಳಿಕೆಯಲ್ಲಿ ನಡೆಯಿತು. ಮಾನವಿಕ ವಿಭಾಗದ ಮುಖ್ಯಸ್ಥ ಡಾ.ನೋರ್ಬರ್ಟ್ ಮಸ್ಕರೆನ್ಹಸ್ ಪ್ರಾಸ್ತಾವಿಕವಾಗಿ ಮಾತನಾಡಿ, ಕೃಷಿಯ ಮಹತ್ವ, ಗದ್ದೆಯಲ್ಲಿ ಬೆಳೆಯುವ ಭತ್ತ ಮತ್ತು ನಾಟಿ ನೆಡುವ ವಿಧಾನ, ಭತ್ತದ ವಿವಿಧ ತಳಿಗಳು, ತುಳುನಾಡಿನ ವಿವಿಧ ಕೃಷಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮ ಪ್ರಾಯೋಜಕ ಶಿವ ಭಟ್, ನಾಟಿ ಮಾಡುವ ವಿಧಾನವನ್ನು

ಸಂತ ಫಿಲೋಮಿನ ಕಾಲೇಜು ಮಾನವಿಕ ವಿಭಾಗದಿಂದ ‘ಬೇಸಾಯದತ್ತ ನಮ್ಮ ಚಿತ್ತ’ ಕಾರ್ಯಕ್ರಮ Read More »

ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿ ಒಕ್ಕೂಟದ ಉದ್ಘಾಟನೆ

ಪುತ್ತೂರು:  ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿ ಒಕ್ಕೂಟದ    ಉದ್ಘಾಟನೆ ನಡೆಯಿತು. ಸತೀಶ್ ಬೊಲಾರ್ ದೀಪ ಬೆಳಗಿಸಿ ಉದ್ಘಾಟಿಸಿ, ಜೀವನದಲ್ಲಿ ಸವಾಲುಗಳನ್ನು   ಧೈರ್ಯದಿಂದ  ಎದುರಿಸಿ.  ಎಲ್ಲಾ ವಿದ್ಯಾರ್ಥಿಗಳಿಗೂ ಒಂದಲ್ಲ ಒಂದು ರೀತಿಯ  ಕೌಶಲ್ಯ ಇದ್ದೇ ಇರುತ್ತದೆ. ಅದನ್ನು ನಾವು ಸಮಯೋಚಿತವಾಗಿ ಪ್ರಸ್ತುತ ಪಡಿಸಬೇಕು. ನಾಯಕತ್ವ ಗುಣ ಮೈಗೂಡಿಸಿ ಸಮಾಜದಲ್ಲಿ ಆದರ್ಶ ವ್ಯಕ್ತಿಯಾಗಿ  ಗುರುತಿಸಿಕೊಳ್ಳಬೇಕು ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಪುತ್ತೂರು ತಹಶೀಲ್ದಾರ್ ಪುರಂದರ ಹೆಗ್ಡೆ ಮಾತನಾಡಿ,   ಪೋಷಕರು ತಮ್ಮ ಮಕ್ಕಳಿಗೆ ಉತ್ತಮ

ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿ ಒಕ್ಕೂಟದ ಉದ್ಘಾಟನೆ Read More »

ಅಂಬಿಕಾ ವಿದ್ಯಾಲಯ ಸಿಬಿಎಸ್‌ ಇ ಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಪುತ್ತೂರು: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಹಬ್ಬದ ಆಚರಣೆಯ ಹಿನ್ನೆಲೆ ಹಾಗೂ ಮಹತ್ವವನ್ನು ಸಾರುವ ಸಲುವಾಗಿ, ಭಕ್ತಿ ಸಿಂಚನ ಕಾರ್ಯಕ್ರಮ ನಡೆಯಿತು. ಭಗವಧ್ಗೀತೆಯ ಪ್ರಥಮ ಅಧ್ಯಾಯದ ಪಠಣ, ಭಜನೆ ಹಾಡು, ಕುಣಿತ ಭಜನೆಗಳು ನಡೆದವು. ಮುದ್ದು ಕೃಷ್ಣ, ಮುದ್ದು ರಾಧೆಯರಿಗೆ ಆರತಿ ಬೆಳಗಿ, ತಿಲಕವಿಟ್ಟು ಹರಸಲಾಯಿತು. ಕಾರ್ಯಕ್ರಮದ ಅಂಗವಾಗಿ ಶ್ರೀಕೃಷ್ಣನ ಚಿತ್ರಕ್ಕೆ ಬಣ್ಣ ಹಚ್ಚುವ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ಕಿರೀಟ ತಯಾರಿ, ಮಡಕೆ ಚಿತ್ರಕಲೆ ಹಾಗೂ ಮೊಸರು ಕುಡಿಕೆ

ಅಂಬಿಕಾ ವಿದ್ಯಾಲಯ ಸಿಬಿಎಸ್‌ ಇ ಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ Read More »

ಎನ್‍.ಎಂ.ಸಿ. ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣದ ಆಮಂತ್ರಣ ಪತ್ರ ಹಾಗೂ ಕರಪತ್ರದ ಅನಾವರಣ

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆ.2 ರಂದು ನಡೆಯಲಿರುವ ರಾಷ್ಟ್ರೀಯ ವಿಚಾರ ಸಂಕಿರಣದ  ಆಮಂತ್ರಣ ಪತ್ರ ಹಾಗೂ ಕರಪತ್ರದ ಅನಾವರಣ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ.  ಹಾಗೂ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಆಮಂತ್ರಣ ಪತ್ರ ಹಾಗೂ ಕರಪತ್ರವನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಬಂಟಮಲೆ ಅಕಾಡೆಮಿಯ ಅಧ್ಯಕ್ಷ ಹಿಮಕರ ಎ.ಕೆ., ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ. ವಿಚಾರ ಸಂಕಿರಣದ ಸಂಯೋಜಕಿ ಡಾ. ಅನುರಾಧಾ ಕುರುಂಜಿ, ಸಹ ಸಂಯೋಜಕರಾದ ಸಂಜೀವ ಕುದ್ಪಾಜೆ,

ಎನ್‍.ಎಂ.ಸಿ. ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣದ ಆಮಂತ್ರಣ ಪತ್ರ ಹಾಗೂ ಕರಪತ್ರದ ಅನಾವರಣ Read More »

ಅಕ್ಷಯ ಕಾಲೇಜು ವಿದ್ಯಾರ್ಥಿ ಸ೦ಘ ಚುನಾವಣೆ : ಅಧ್ಯಕ್ಷರಾಗಿ ಜೀವನ್ ಆಯ್ಕೆ.

ಪುತ್ತೂರು:  ಅಕ್ಷಯ ಎಜ್ಯುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಕಾಲೇಜು ಚುನಾವಣಾ ಸಮಿತಿ ಮತ್ತು ಐಕ್ಯೂಎಸಿ ಸಹಭಾಗಿತ್ವದಲ್ಲಿ ವಿದ್ಯಾರ್ಥಿ ಸ೦ಘ ಚುನಾವಣೆ ವಿದ್ಯುನ್ಮಾನ ಮತಯಂತ್ರದ  ಮೂಲಕ ನೆರವೇರಿತು.  ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಕಾರ್ಯದರ್ಶಿ ಸ್ಥಾನಗಳಿಗೆ ಚುನಾವಣೆ  ನಡೆಸಲಾಯಿತು. ಅಧ್ಯಕ್ಷ  ಸ್ಥಾನಕ್ಕೆ ಸ್ಪರ್ಧಿಸಿರುವ ತೃತೀಯ ವಾಣಿಜ್ಯ ವಿಭಾಗದ  ವಿದ್ಯಾರ್ಥಿ ಜೀವನ್ ಆಯ್ಕೆಯಾದರೆ, ಉಪಾಧ್ಯಕ್ಷ  ಸ್ಥಾನಕ್ಕೆ  ತೃತೀಯ ಬಿ.ಎಸ್ಸಿ ಫ್ಯಾಷನ್ ಡಿಸೈನ್ ವಿಭಾಗದ ನವಮಿ ಹಾಗೂ ಕಾರ್ಯದರ್ಶಿ ಸ್ಥಾನಕ್ಕೆ ತೃತೀಯ ಇಂಟೀರಿಯರ್ ಡಿಸೈನ್ ವಿದ್ಯಾರ್ಥಿನಿ ಪೂಜಿತ

ಅಕ್ಷಯ ಕಾಲೇಜು ವಿದ್ಯಾರ್ಥಿ ಸ೦ಘ ಚುನಾವಣೆ : ಅಧ್ಯಕ್ಷರಾಗಿ ಜೀವನ್ ಆಯ್ಕೆ. Read More »

error: Content is protected !!
Scroll to Top