ಕ್ಯಾಂಪಸ್‌

ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಕ್ಷಾಬಂಧನ ಕಾರ್ಯಕ್ರಮ

ಪುತ್ತೂರು: ರಕ್ಷಾಬಂಧನ ಸಹೋದರ -ಸಹೋದರಿಯರ ಸಂಬಂಧಕ್ಕೆ ಮಾತ್ರ ಸೀಮಿತವಾಗದೆ ವಿಶ್ವಬಂಧುತ್ವಕ್ಕೆ ಸಾಕ್ಷಿಯಾಗಿದೆ. ಭಾರತೀಯ ಸಂಪ್ರದಾಯಗಳು ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ. ಪ್ರತೀ ಹಬ್ಬದಲ್ಲೂ ಬದುಕಿಗೆ ಬೇಕಾದ ಸಂದೇಶಗಳು ಇರುತ್ತದೆ. ಅವುಗಳನ್ನು ನಾವು ಅರಿತುಕೊಳ್ಳಬೇಕು. ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟಗೊಳಿಸುವ ಹಬ್ಬ  ರಕ್ಷಾಬಂಧನ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗದ ಕಾಲೇಜು ವಿದ್ಯಾರ್ಥಿ ಪ್ರಮುಖ್ ರೋಹಿತ್  ಹೇಳಿದರು. ನರೇಂದ್ರ ಪದವಿ ಪೂರ್ವಕಾಲೇಜಿನಲ್ಲಿ ನಡೆದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಅವರು ರಕ್ಷಾಬಂಧನ ಆಚರಣೆಯ ಮಹತ್ವವನ್ನು ತಿಳಿಸಿದರು. ರಕ್ಷಾಬಂಧನ ಎಂಬುದರ ತಾತ್ಪರ್ಯವೇನೆಂದರೆ ಪ್ರೀತಿಯ ಭಾವದಿಂದ […]

ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಕ್ಷಾಬಂಧನ ಕಾರ್ಯಕ್ರಮ Read More »

ಚೆಸ್ ಪಂದ್ಯಾಟ : ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಸಾನ್ವಿಕ ಎಚ್. ರಾಜ್ಯಮಟ್ಟಕ್ಕೆ ಆಯ್ಕೆ

ಕಾಣಿಯೂರು: ಎಸ್ ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಚೆಸ್‌ ಪಂದ್ಯಾಟದಲ್ಲಿ ಪ್ರಾಥಮಿಕ ವಿಭಾಗದಲ್ಲಿ ಕಾಣಿಯರು ಪ್ರಗತಿ ವಿದ್ಯಾಸಂಸ್ಥೆಯ 8ನೇ ತರಗತಿಯ ವಿದ್ಯಾರ್ಥಿನಿ ಸಾನ್ವಿಕ ಎಚ್ 4ನೇ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಶೇರ ಯಾದವ ಎಚ್ ಮತ್ತು ವೀಣಲತಾ ದಂಪತಿ ಪುತ್ರಿ. ಅವರಿಗೆ ಸಂಸ್ಥೆಯ ಟ್ರಸ್ಟಿ ಹರಿಚರಣ್ ರೈ ಮಾದೋಡಿಯವರು ತರಬೇತಿ ನೀಡಿರುತ್ತಾರೆ. ದೈಹಿಕ ಶಿಕ್ಷಣ ಶಿಕ್ಷಕರು

ಚೆಸ್ ಪಂದ್ಯಾಟ : ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಸಾನ್ವಿಕ ಎಚ್. ರಾಜ್ಯಮಟ್ಟಕ್ಕೆ ಆಯ್ಕೆ Read More »

ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜು ಅಭಿವೃದ್ದಿ ಸಮಿತಿ ಸಭೆ | 10 ತಿಂಗಳೊಳಗೆ ಹೊಸ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ: ಶಾಸಕರ ಸೂಚನೆ

ಪುತ್ತೂರು: ಪುತ್ತೂರಿನ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಹೊಸ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ ನಡೆಸಲಾಗಿದೆ , ಅನುದಾನವೂ ಬಂದಿದೆ ಆದರೆ ಕಾಮಗಾರಿ ಯಾಕೆ ಆರಂಭವಾಗಿಲ್ಲ, ಮುಂದಿನ ಹತ್ತು ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಕಾಲೇಜು ಅಭಿವೃದ್ದಿ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಅಶೋಕ್ ರೈ ಇಂಜನಿಯರ್‌ಗಳಿಗೆ ಸೂಚನೆ ನೀಡಿದ್ದಾರೆ. ಕಾಲೇಜಿನಲ್ಲಿ ನಡೆದ ಅಭಿವೃದ್ದಿ ಸಮಿತಿ ಸಭೆಯಲ್ಲಿ ಶಾಸಕರು ಈ ಸೂಚನೆಯನ್ನು ನೀಡಿದ್ದಾರೆ. ಈಗ ತರಗತಿ ನಡೆಯುತ್ತಿರುವ ಕಟ್ಟಡ ಹಳೇಯ ಕಟ್ಟಡವಾಗಿದೆ ಮತ್ತು ವಿದ್ಯಾರ್ಥಿಗಳು ಕಲಿಯಲು ಈ ಕಟ್ಟಡ

ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜು ಅಭಿವೃದ್ದಿ ಸಮಿತಿ ಸಭೆ | 10 ತಿಂಗಳೊಳಗೆ ಹೊಸ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ: ಶಾಸಕರ ಸೂಚನೆ Read More »

ಅಂಬಿಕಾ ಸಿಬಿಎಸ್‌ ಇ ವಿದ್ಯಾರ್ಥಿಗಳಿಗೆ ಈಜು ಸ್ಪರ್ಧೆಯಲ್ಲಿ ಹಲವು ಬಹುಮಾನ

ಪುತ್ತೂರು : ಮಂಗಳೂರಿನ ಶಕ್ತಿ ವಿದ್ಯಾಸಂಸ್ಥೆಯಲ್ಲಿ ನಡೆದ ವಿದ್ಯಾ ಭಾರತಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಅಂಬಿಕಾ ಸಿಬಿಎಸ್‌ಇ ವಿದ್ಯಾಸಂಸ್ಥೆಯ ಹತ್ತನೇ ತರಗತಿಯ ವಿದ್ಯಾರ್ಥಿ ವರ್ಧಿನ್ ದೀಪಕ್  ರೈ 17 ವರ್ಷಕ್ಕಿಂತ ಕೆಳಗಿನ ಹುಡುಗರ ವಿಭಾಗದ  50 ಮೀಟರ್ ಬಟರ್ ಫ್ಲೈ, 100 ಮೀಟರ್ ಬ್ರೆಸ್ಟ್‌ಸ್ಟ್ರೋಕ್,  50 ಮೀಟರ್ ಬ್ರೆಸ್ಟ್‌ಸ್ಟ್ರೋಕ್‌ನಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಆರನೇ ತರಗತಿಯ ವಿದ್ಯಾರ್ಥಿ ಪ್ರತ್ಯುಷ್ ಎಲ್.ಎಸ್. ಗೌಡ  14 ವರ್ಷ  ಕೆಳಗಿನ   ಹುಡುಗರ ವಿಭಾಗದ  50 ಮೀಟರ್ ಬಟರ್ ಫ್ಲೈ ಮತ್ತು

ಅಂಬಿಕಾ ಸಿಬಿಎಸ್‌ ಇ ವಿದ್ಯಾರ್ಥಿಗಳಿಗೆ ಈಜು ಸ್ಪರ್ಧೆಯಲ್ಲಿ ಹಲವು ಬಹುಮಾನ Read More »

ವಿವೇಕಾನಂದ ಕಾಲೇಜಿನಲ್ಲಿ 50 ಅಡಿ ಕೇಸರಿ ಧ್ವಜ ಸ್ಥಾಪನೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಯ ವಿವೇಕಾನಂದ ಪ್ರತಿಮೆಯ ಬಳಿ ವಿದ್ಯಾರ್ಥಿಗಳಿಂದ ಬೃಹತ್ 50 ಅಡಿಯ ಕೇಸರಿ ದ್ವಜವನ್ನು ಸ್ಥಾಪಿಸಲಾಯಿತು. ‘ಗಣೇಶೋತ್ಸವ’ ದ ತಯಾರಿಯ ಸಂಕೇತವಾಗಿ ಈ ಧ್ವಜ ಸ್ಥಾಪಿಸಲಾಯಿತು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯ ನಿರ್ವಹಣಾ ಅಧಿಕಾರಿ ಭಾಸ್ಕರ್ ಮತ್ತು ಪುತ್ತೂರು ನಗರಮಂಡಲ ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ನಿತೇಶ್ ಕಲ್ಲೇಗ ತೆಂಗಿನಕಾಯಿ ಹೊಡೆಯುವ ಮೂಲಕ ಚಾಲನೆ ನೀಡಿದರು.ಜೊತೆಗೆ ವಿವಿಧ ಸಂಸ್ಥೆಯ ದೇಶಭಕ್ತ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿವೇಕಾನಂದ ಕಾಲೇಜಿನಲ್ಲಿ 50 ಅಡಿ ಕೇಸರಿ ಧ್ವಜ ಸ್ಥಾಪನೆ Read More »

ವಿದ್ಯಾರಶ್ಮಿಯಲ್ಲಿ ಪ್ರೇರಣಾ ರಸಪ್ರಶ್ನೆ ಸ್ಪರ್ಧೆ

ಸವಣೂರು: ಪುತ್ತೂರಿನ ಸಮರ್ಪಣಾ ಚಾರಿಟೇಬ್’ಲ್ ಟ್ರಸ್ಟ್’ನ flagship ಕಾರ್ಯಕ್ರಮವಾದ ಶಿಷ್ಯ ವೇತನ (Scholarship) ವಿತರಣಾ ಕಾರ್ಯಕ್ರಮದ ಅಂಗವಾಗಿ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮವು ಸವಣೂರಿನ ವಿದ್ಯಾರಶ್ಮಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಸಮರ್ಪಣಾ ಚಾರಿಟೇಬ್’ಲ್ ಟ್ರಸ್ಟ್’ನ ಈ ಮೌಲಿಕವಾದ ಕಾರ್ಯಕ್ರಮವನ್ನು ದ.ಕ. ಜಿಲ್ಲೆಯಾದ್ಯಂತದ ಪದವಿಪೂರ್ವ ಕಾಲೇಜುಗಳಲ್ಲಿ ನಡೆಸುವ ಜವಾಬ್ದಾರಿಯನ್ನು ಪುತ್ತೂರಿನ ಪ್ರೇರಣಾ ಸಂಸ್ಥೆಯು ವಹಿಸಿಕೊಂಡಿದೆ. ಈ ಕಾರ್ಯಕ್ರಮದ ಭಾಗವಾಗಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ಆಯೋಜಿಸಿ ಪ್ರಥಮ ಮತ್ತು ದ್ವಿತೀಯ ಬಹುಮಾನಗಳನ್ನು ನೀಡಲಾಗುವುದು. ಇದರ ಜೊತೆಗೆ ದ್ವಿತೀಯ ಪಿಯುಸಿ

ವಿದ್ಯಾರಶ್ಮಿಯಲ್ಲಿ ಪ್ರೇರಣಾ ರಸಪ್ರಶ್ನೆ ಸ್ಪರ್ಧೆ Read More »

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ | ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಪುತ್ತೂರು: ನಗರದ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳ ನೇತೃತ್ವದಲ್ಲಿ ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಪ್ರತಿಭಟನೆ ಹಾಗೂ ಹಿಂದೂ ವಿರೋಧಿ ಶಕ್ತಿಗಳ ಪ್ರತಿಕೃತಿ ದಹನ ನಡೆಯಿತು. ಅಂಬಿಕಾ ಪದವಿಪೂರ್ವ ವಿದ್ಯಾಲಯ ಹಾಗೂ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ಈ ಪ್ರತಿಭಟನಾ ಕಾರ್ಯಕ್ರಮಕ್ಕೆ ಸಾಥ್ ನೀಡಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಉಪನ್ಯಾಸಕ ಆದರ್ಶ ಗೋಖಲೆ, ಇಂದು ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂದೂ ದೌರ್ಜನ್ಯ ನಾಳೆ ಭಾರತದಲ್ಲೂ ನಡೆದರೆ ಅಚ್ಚರಿಯಿಲ್ಲ. ಇದನ್ನು ತಡೆಯಬೇಕಾದರೆ ಹಿಂದೂಗಳೆಲ್ಲರೂ ಒಂದಾಗಿ

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ | ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ Read More »

ಕುದ್ಮಾರು ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

ಕುದ್ಮಾರು : ದ.ಕ.ಜಿ.ಪಂ.ಸ.ಉ.ಹಿ ಪ್ರಾ ಶಾಲೆ ಕುದ್ಮಾರು ಇಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಪೂರ್ವಾಹ್ನ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ನವ್ಯ ಅನ್ಯಾಡಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸ್ವಾತಂತ್ರ್ಯ ಹೋರಾಟಗಾರರ ಚದ್ಮವೇಷದೊಂದಿಗೆ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ಸಾಗಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಪಾರ್ವತಿ ಮರಕ್ಕಡ ವಹಿಸಿದ್ದರು. ವೇದಿಕೆಯಲ್ಲಿ ದತ್ತಿನಿಧಿ ದಾನಿಗಳಾದ  ಶೂರಪ್ಪ ಗೌಡ ಪಟ್ಟೆತ್ತಾನ, ಆನಂದ ಗೌಡ, ರಂಜಿತ್ ಮುದ್ಯಾ, ಮೇದಪ್ಪ ಗೌಡ ಕುವೆತ್ತೋಡಿ, ರೇವತಿ,

ಕುದ್ಮಾರು ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ Read More »

ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

ಮಾಣಿಲ: ಭರತ ಭೂಮಿಯಲ್ಲಿ ಜನ್ಮತಳೆದ ನಮ್ಮ ಬಾಳು ಧನ್ಯ ಎಂದು ವಿಶ್ರಾಂತ ಪ್ರಾಧ್ಯಾಪಕ ಗೋವಿಂದ ಭಟ್ ಕನ್ನಡಗುಳಿ ಹೇಳಿದ್ದಾರೆ. ಅವರು ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ 78ನೇ  ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರ ಸಮರ್ಪಣಾ ಭಾವ ಅಗತ್ಯ ಎಂದ ಅವರು ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಂಡು ಪ್ರಜ್ಞಾವಂತ ನಾಗರಿಕರಾಗಲು ಕರೆ ನೀಡಿದರು. ಎಸ್ ಡಿ ಎಂ ಸಿ ಅಧ್ಯಕ್ಷ ಶಿವಪ್ರಸಾದ್ ಸೊರಂಪಳ್ಳ ಧ್ವಜಾರೋಹಣ ಮಾಡಿ, ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಈ

ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ Read More »

ಮಕ್ಕಳ ಮನೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ಬೊಳುವಾರಿನಲ್ಲಿರುವ ಮಕ್ಕಳ ಮನೆ ಶಾಲೆಯಲ್ಲಿ 78ನೇ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾ ಶಿಕ್ಷಕಿ ಸತ್ಯಪೂರ್ಣ ನೆರವೇರಿಸಿದರು. ಧ್ವಜಾರೋಹಣದ ನಂತರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮಕ್ಕಳ ಪೋಷಕರು, ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಕ್ಕಳಿಗೆ ಸಿಹಿತಿಂಡಿ ವಿತರಿಸಿ ಸಂಭ್ರಮಿಸಲಾಯಿತು.

ಮಕ್ಕಳ ಮನೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ Read More »

error: Content is protected !!
Scroll to Top