ಕ್ಯಾಂಪಸ್‌

ಎಕ್ಕಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

ಎಕ್ಕಡ್ಕ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ವಿನಯ್ ಪಾಂಬಾರು ಧ್ವಜಾರೋಹಣ ನೆರವೇರಿಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ವಸಂತ್ ಕುಮಾರ್ ದುಗ್ಗಲ, ಯತೀಂದ್ರ ಕೊಚ್ಚಿ ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಯಶೋಧ, ರೂಪಶ್ರೀ ,ಕೊಳ್ತಿಗೆ ಸಿಎ ಬ್ಯಾಂಕ್‌ ಸಿಬ್ಬಂದಿ ಸುಬ್ಬಯ್ಯ ನಾಯ್ಕ ಕೆ. ಹಾಗೂ ದಾನಿಗಳಾದ ಸತೀಶ್ ಪಾಂಬರು ಉಪಸ್ಥಿತರಿದ್ದರು.

ಎಕ್ಕಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ Read More »

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ 78ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ 78ನೇ ಸ್ವಾತಂತ್ರ್ಯೋತ್ಸವವನ್ನು ನೆಹರೂನಗರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಆಚರಿಸಲಾಯಿತು. ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಧ್ವಜಾರೋಹಣ ನೆರವೇರಿಸಿ, ವಿದೇಶಿಯರ ಗುಲಾಮಕ್ಕೆ ಒಳಗಾಗಿದ್ದ ಭಾರತೀಯರಿಗೆ ಸ್ವಾತಂತ್ರ್ಯ ದೊರತು ಇಂದಿಗೆ 78 ವರ್ಷಗಳಾಯಿತು. ಹಲವಾರು ದೇಶ ಭಕ್ತರ ತ್ಯಾಗ ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕಿತು. ಮಹಿಳೆಯರು ತಮ್ಮ ದೇಶಕ್ಕಾಗಿ ಹೋರಾಟ ಮಾಡಿದ ಇತಿಹಾಸ ಇದ್ದರೆ ಅದು ಭಾರತದಲ್ಲಿ ಮಾತ್ರ, ಎಂದರು. ವಿವೇಕಾನಂದ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯರು, ಪ್ರಿನ್ಸಿಪಾಲರು, ಬೋಧಕ-

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ 78ನೇ ಸ್ವಾತಂತ್ರ್ಯೋತ್ಸವ Read More »

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ 78ನೇ ಸ್ವಾತಂತ್ರ್ಯೋತ್ಸವ

ಪುತ್ತೂರು : ಭಾರತದ ಇತಿಹಾಸವನ್ನು ತಿರುಚಿದ್ದು ಇನ್ಯಾರೋ ಅಲ್ಲ, ಭಾರತೀಯರೇ ಅನ್ನುವುದು ದುರಂತ. ಸ್ವಾತಂತ್ರ್ಯಾನಂತರದ ಭಾರತದಲ್ಲಿ ನಿಜ ಇತಿಹಾಸವನ್ನು ದಾಖಲಿಸುವವರನ್ನು ಮೂಲೆಗುಂಪು ಮಾಡಿ ಮಿಥ್ಯ ಇತಿಹಾಸವನ್ನೇ ಸತ್ಯವೆಂದು ನಂಬಿಸಲಾಯಿತು. ಇದರ ಪರಿಣಾಮ ದೇಶಕ್ಕಾಗಿ ಹೋರಾಡಿದ ನೈಜ ರಾಷ್ಟ್ರಭಕ್ತರ ಪರಿಚಯ ಈಗಿನ ತಲೆಮಾರಿಗೆ ಇಲ್ಲದಾಗಿದೆ ಎಂದು ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಉಪನ್ಯಾಸಕ ಆದರ್ಶ ಗೋಖಲೆ ಹೇಳಿದರು. ಅವರು ನಗರದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಲಾದ 78ನೇ ಸ್ವಾತಂತ್ರ್ಯ ದಿನಾಚರಣೆರಣೆಯಲ್ಲಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಸಾಮಾಜಿಕ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ 78ನೇ ಸ್ವಾತಂತ್ರ್ಯೋತ್ಸವ Read More »

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶೀಂಟೂರು ಸ್ಮೃತಿ-2024 | ವಿದ್ಯಾರ್ಥಿಗಳು ಸೈನಿಕನ ಮನೋಸ್ಥಿತಿ ಬೆಳೆಸಿಕೊಳ್ಳಬೇಕು : ಕ್ಯಾ.ಬ್ರಿಜೇಶ್ ಚೌಟ

ಸವಣೂರು: ದೇಶದ ವಿಚಾರ ಬಂದಾಗ ಸ್ವಾರ್ಥವನ್ನು ಮರೆತು ಇಡೀ ಸಮಾಜವನ್ನು ಒಂದಾಗಿ ಕೊಂಡೊಯ್ಯುವ ಮನೋಭಾವ ಸೈನಿಕರದ್ದಾಗಿದೆ. ಒಮ್ಮೆ ಸೈನಿಕನಾದಲ್ಲಿ ಜೀವನಪೂರ್ತಿ ಆತ ಅಂತಹ ಮನೋಸ್ಥಿತಿಯನ್ನು ಬೆಳೆಸಿಕೊಳ್ಳುತ್ತಾನೆ. ಆದರೆ ಅದನ್ನು ಅರ್ಥ ಮಾಡಿಕೊಳ್ಳುವಲ್ಲಿ ಸಮಾಜ ವಿಫಲವಾಗಿದೆ. ಭಾರತಕ್ಕೆ ಸೈನಿಕನ ಮನಸ್ಥಿತಿಯ ಚಿಂತನೆಯ ಅವಶ್ಯಕತೆಯಿದೆ ಎಂದು ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ಅವರು ಇಂದು ಸವಣೂರು ವಿದ್ಯಾಗಂಗೋತ್ರಿಯ ವಿದ್ಯಾಚೇತನ ಸಭಾಂಗಣದಲ್ಲಿ ಎಸ್.ಎನ್.ಆರ್. ರೂರಲ್ ಎಜ್ಯುಕೇಶನ್ ಟ್ರಸ್ಟ್ ಪ್ರವರ್ತಿತ, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸವಣೂರು ವಿದ್ಯಾರಶ್ಮಿ

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶೀಂಟೂರು ಸ್ಮೃತಿ-2024 | ವಿದ್ಯಾರ್ಥಿಗಳು ಸೈನಿಕನ ಮನೋಸ್ಥಿತಿ ಬೆಳೆಸಿಕೊಳ್ಳಬೇಕು : ಕ್ಯಾ.ಬ್ರಿಜೇಶ್ ಚೌಟ Read More »

ಪ್ರಗತಿ ಸ್ಟಡಿ ಸೆಂಟರ್ 18ನೇ ವರ್ಷಕ್ಕೆ ಪಾದಾರ್ಪಣೆ | ಆ.18 ರಂದು “ಅಷ್ಟಾದಶ ಸಂಗಮ” ಸ್ಥಾಪಕ ದಿನಾಚರಣೆ

ಪುತ್ತೂರು: ನಗರದ ಧರ್ಮಸ್ಥಳ ಬಿಲ್ಡಿಂಗ್‍ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‍ ರ್ 18ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಈ ನಿಟ್ಟಿನಲ್ಲಿ 18ನೇ ವರ್ಷದ “ಅಷ್ಟಾದಶ ಸಂಗಮ” ಸ್ಥಾಪಕ ದಿನಾಚರಣೆಯನ್ನು ಆ.18 ಭಾನುವಾರ ಹಮ್ಮಿಕೊಂಡಿದೆ. ಪ್ರಗತಿ ಸ್ಟಡಿ ಸೆಂಟರ್ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಮೊಗದಲ್ಲಿ ಹೊಸ ಮಂದಹಾಸ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಾಂತ ಹೆಸರು ವಾಸಿಯಾಗಿದೆ. ಇಲ್ಲಿ ಹತ್ತನೇ ತರಗತಿ, ದ್ವಿತೀಯ ಪಿಯುಸಿಯ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗ, ಕಂಪ್ಯೂಟರ್ ತರಗತಿ, ಸಿಇಟಿ, ನೀಟ್, ತರಗತಿ, ಜವಾಹರ್ ನವೋದಯ ತರಬೇತಿ,

ಪ್ರಗತಿ ಸ್ಟಡಿ ಸೆಂಟರ್ 18ನೇ ವರ್ಷಕ್ಕೆ ಪಾದಾರ್ಪಣೆ | ಆ.18 ರಂದು “ಅಷ್ಟಾದಶ ಸಂಗಮ” ಸ್ಥಾಪಕ ದಿನಾಚರಣೆ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲಾ ನೂತನ ರಕ್ಷಕ ಶಿಕ್ಷಕ ಸಂಘ ರಚನೆ

ಪುತ್ತೂರು: ಪುತ್ತೂರು ಕೃಷ್ಣನಗರದ ಬನ್ನೂರಿನ ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಂಘವನ್ನು ರಚಿಸಲಾಯಿತು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಸೌಮ್ಯಶ್ರೀ ಶಿವಪ್ರಸಾದ್ ಹೆಗ್ಡೆ, ಉಪಾಧ್ಯಕ್ಷರಾಗಿ ಕಾವ್ಯ ಕೆ. ,ಕಾರ್ಯದರ್ಶಿಯಾಗಿ ಶಾಲಾ ಪ್ರಾಂಶುಪಾಲೆ ಸವಿತಾ ಆಯ್ಕೆಯಾದರು. ಸದಸ್ಯರಾಗಿ ಯೋಗೀಶ್, ಸುಮಲತಾ, ಅಶ್ವಿನಿ ,ರಾಧಿಕಾ ಹರೀಶ್ ಕೆ ತೆಂಕಪಾಡಿ ಆಯ್ಕೆಯಾದರು . ಶಾಲಾ ಆಡಳಿತ ಸಮಿತಿ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಸಭೆಯ ಅಧ್ಯಕ್ಷತೆ ವಹಿಸಿ, ನೂತನವಾಗಿ ಆಯ್ಕೆಯಾದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಿಗೆ ,ಉಪಾಧ್ಯಕ್ಷರಿಗೆ ಹಾಗೂ

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲಾ ನೂತನ ರಕ್ಷಕ ಶಿಕ್ಷಕ ಸಂಘ ರಚನೆ Read More »

ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

ಪುತ್ತೂರು: ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಎಂದು ಪರಿಗಣಿಸಲ್ಪಟ್ಟ ಪದ್ಮಶ್ರೀ ಡಾ. ಎಸ್ ಆರ್ ರಂಗನಾಥನ್ ಅವರ 132 ನೇ ಜನ್ಮ ದಿನದ ಅಂಗವಾಗಿ ಆಚರಿಸಲ್ಪಡುತ್ತಿರುವ  ರಾಷ್ಟ್ರೀಯ  ಗ್ರಂಥಪಾಲಕರ ದಿನಾಚರಣೆ’ ಯನ್ನು ಸಂತ ಫಿಲೋಮಿನಾ ಕಾಲೇಜು ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಆಯೋಜನೆಯಲ್ಲಿ ಕಾಲೇಜಿನ ಸ್ನಾತಕೋತ್ತರ ಸಭಾಭವನದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯಾರ್ ಮಾತನಾಡಿ,  ಪ್ರತಿಯೊಂದು ಜೀವಿಗೂ ಬದುಕಲು ನೀರು, ಗಾಳಿ, ಬೆಳಕು ಮತ್ತು ಆಹಾರ ಹೇಗೆ ಮುಖ್ಯವೋ ಹಾಗೆ ಮನುಷ್ಯನಲ್ಲಿ

ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲಾ ಮಂತ್ರಿ ಮಂಡಲ ರಚನೆ

ಪುತ್ತೂರು: ಬನ್ನೂರಿನ ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯ 2024-25ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಮಂತ್ರಿಮಂಡಲ ರಚಿಸಲಾಯಿತು. ಶಾಲಾ ವಿದ್ಯಾರ್ಥಿ ನಾಯಕನಾಗಿ 5ನೇ ತರಗತಿಯ ಅದ್ವಿಕ್ ಬಂಜನ್, ಉಪನಾಯಕನಾಗಿ 4ನೇ ತರಗತಿಯ ಅನ್ವಿತ್ ಕೆ ಎಲ್, ಶಿಕ್ಷಣ ಮಂತ್ರಿಯಾಗಿ ನಾಲ್ಕನೇ ತರಗತಿಯ ಗನ್ವಿತ್ ಹೆಚ್, ಕ್ರೀಡಾ ಮಂತ್ರಿಯಾಗಿ 5ನೇ ತರಗತಿಯ  ಚ್ಯವನ್ ಜಿ ಗೌಡ, ಸಾಂಸ್ಕೃತಿಕ ಮಂತ್ರಿಯಾಗಿ ಮೂರನೇ ತರಗತಿಯ  ಎ. ಎನ್ ಜ್ಯೋಸ್ತ್ನ ಗೌಡ  ಹಾಗೂ ಆರೋಗ್ಯಮಂತ್ರಿಯಾಗಿ 5ನೇ ತರಗತಿಯ ವಿಕ್ಯಾತ್ ಎನ್. ಆಯ್ಕೆಯಾದರು. ಶಾಲೆಯಲ್ಲಿ ನಡೆದ

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲಾ ಮಂತ್ರಿ ಮಂಡಲ ರಚನೆ Read More »

ಅಕ್ಷಯ ಕಾಲೇಜಿನಲ್ಲಿ ಪ್ರಥಮ ಬಿಸಿಎ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ

ಪುತ್ತೂರು: ವಿದ್ಯಾರ್ಥಿಗಳಿಗೆ ಐಒಟಿ ಮತ್ತು ಉದಯೋನ್ಮುಖ ತಂತ್ರಜ್ಞಾನಗಳ ಸಂಬಂಧಿತ ಮೂಲಭೂತ ವಿಷಯಗಳ ಬಗ್ಗೆ ಮಾಹಿತಿ ನೀಡುವುದಕ್ಕಾಗಿ ಅಕ್ಷಯ ಕಾಲೇಜಿನ ಬಿ.ಸಿ.ಎ. ವಿಭಾಗ, ಮತ್ತು ಐಕ್ಯೂಎಸಿ ಇವುಗಳ ಸಹಯೋಗದಲ್ಲಿ ಪ್ರಥಮ ಬಿ.ಸಿ.ಎ. ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರವು ನಡೆಯಿತು. ವ್ಯಾಪಕವಾದ ಡೇಟಾ ಯುಗದಲ್ಲಿ, ಐಒಟಿ (ಇಂಟರ್ನೆಟ್ ಆಫ್ ಥಿಂಗ್ಸ್) ಜ್ಞಾನ ಅತ್ಯಮೂಲ್ಯವಾದ ಮತ್ತು ಅನಿವಾರ್ಯವಾದ ಒಂದು ಅಂಶವಾಗಿದೆ. ಈಗಿನ ಪೈಪೋಟಿಯ ಯುಗದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ತಂತ್ರಜ್ಞಾನವನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಅದನ್ನು ಅನುಸರಿಸುವ ಜ್ಞಾನ ಅತ್ಯವಶ್ಯವಾಗಿದೆ. ಐಒಟಿ ಮತ್ತು ಡಿಜಿಟಲ್

ಅಕ್ಷಯ ಕಾಲೇಜಿನಲ್ಲಿ ಪ್ರಥಮ ಬಿಸಿಎ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ನೂತನ ಸಭಾಂಗಣದ ಉದ್ಘಾಟನೆ, 36ನೇ ವಾರ್ಷಿಕೋತ್ಸವ | ಭಾರತೀಯ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆಯಿರಲಿ: ಡಾ. ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ

ಪುತ್ತೂರು: ಭಾರತೀಯ ಸಂಸ್ಕೃತಿಗೆ ಜಗತ್ತಿನಲ್ಲೇ ಅತ್ಯಂತ ವಿಶಿಷ್ಟ ಸ್ಥಾನಮಾನವಿದೆ. ಅರ್ಥಪೂರ್ಣವಾಗಿ ಹಾಗೂ ಮೌಲ್ಯಯುತವಾಗಿ ಯಾವ ರೀತಿ ಬದುಕಬೇಕೆನ್ನುವ ಆದರ್ಶ ಜೀವನಶೈಲಿಯನ್ನು ಜಗತ್ತಿಗೆ ಕೊಟ್ಟ ಶ್ರೇಷ್ಠ ಪರಂಪರೆ ನಮ್ಮದಾಗಿದೆ. ನಮ್ಮ ಭಾರತೀಯ ಭವ್ಯ ಸಂಸ್ಕೃತಿಯನ್ನು ಹೆಮ್ಮೆಯಿಂದ ಗೌರವಿಸುವ ಮನಸ್ಸು ನಮ್ಮದಾಗಲಿ. ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದು ಜೈನಕಾಶಿ ಮೂಡುಬಿದಿರೆಯ ಜೈನಮಠದ ಪರಮಪೂಜ್ಯ ಜಗದ್ಗುರು, ಭಾರತಭೂಷಣ, ಸ್ವಸ್ಥಿಶ್ರೀ ಡಾ. ಭಟ್ಟಾರಕ ಚಾರುಕೀರ್ತಿ  ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಹೇಳಿದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ 36ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ,

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ನೂತನ ಸಭಾಂಗಣದ ಉದ್ಘಾಟನೆ, 36ನೇ ವಾರ್ಷಿಕೋತ್ಸವ | ಭಾರತೀಯ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆಯಿರಲಿ: ಡಾ. ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ Read More »

error: Content is protected !!
Scroll to Top