ಕ್ಯಾಂಪಸ್‌

ಜಿಲ್ಲಾ ಮಟ್ಟದ ಈಜು ಸ್ಪರ್ಧೆ : ಅಂಬಿಕಾ ಕಾಲೇಜಿನ ವಿದ್ಯಾರ್ಥಿಗಳಿಗೆ 9 ಪದಕ

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಪುತ್ತೂರಿನ ಬಾಲವನದಲ್ಲಿ ನಡೆದ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾಥಿಗಳು ಚಿನ್ನ, ಬೆಳ್ಳಿ ಸೇರಿ 9 ಪದಕಗಳನ್ನು ಪಡೆದುಕೊಂಡು ಆ.20 ರಿಂದ ಸೆ.8 ರ ತನಕ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಲೈಫ್ ಸೇವಿಂಗ್ ಚಾಂಪಿಯನ್‌ ಶಿಪ್‌ ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾಲಯದ ಪ್ರಥಮ ಪಿಯು ವಾಣಿಜ್ಯ ಶಾಸ್ತ್ರದ ವಿದ್ಯಾರ್ಥಿನಿ ಪ್ರತೀಕ್ಷಾ ಎನ್. ಶೆಣೈ 50 ಮೀ., […]

ಜಿಲ್ಲಾ ಮಟ್ಟದ ಈಜು ಸ್ಪರ್ಧೆ : ಅಂಬಿಕಾ ಕಾಲೇಜಿನ ವಿದ್ಯಾರ್ಥಿಗಳಿಗೆ 9 ಪದಕ Read More »

ವಿವೇಕಾನಂದ ಕಾಲೇಜಿನಲ್ಲಿ ತುಳುನೆಂಪು ಕಾರ್ಯಕ್ರಮ

ಪುತ್ತೂರು: ಇಂದು ಗ್ರಾಮೀಣ ಭಾಗದಿಂದ ಅಂತರಾಷ್ಟೀಯ ಮಟ್ಟದವರೆಗೂ ಆಟಿ ತಿಂಗಳ ಆಚರಣೆಗಳನ್ನು ಆಚರಿಸುವುದು ವಾಡಿಕೆಯಾಗಿದೆ. ತುಳುನಾಡಿನಲ್ಲಿ ತುಳುವರು ಆಟಿ ತಿಂಗಳಿನ ಸಂದರ್ಭದಲ್ಲಿ ಯಾವುದೇ ಶುಭ ಕಾರ್ಯಕ್ರಮಗಳನ್ನು ಆಚರಿಸುವುದಿಲ್ಲ. ಆಟಿ ಕೆಲೆಂಜ ಮನೆಮನೆಗೆ ಬರುತ್ತಾನೆ. ಈ ಮೂಲಕ ಊರಿಗೆ ಬಂದು ಮಾರಿ ಕಳೆಯುತ್ತಾನೆ ಎಂಬುವುದು ಜನರ ನಂಬಿಕೆ ಎಂದು ವಕೀಲ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಕುಂಬ್ರ ದುರ್ಗಾಪ್ರಸಾದ್ ರೈ ಹೇಳಿದರು. ಅವರು  ವಿವೇಕಾನಂದ  ಕಲಾ,ವಿಜ್ಞಾನ  ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ಕಾಲೇಜಿನಲ್ಲಿ ತುಳು ಸಂಘ, ಪ್ರಾಚೀನ ವಸ್ತುಗಳ

ವಿವೇಕಾನಂದ ಕಾಲೇಜಿನಲ್ಲಿ ತುಳುನೆಂಪು ಕಾರ್ಯಕ್ರಮ Read More »

ಯೋಗಾಸನ ಸ್ಪರ್ಧೆ : ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ಕರ್ನಾಟಕ ಸಿದ್ಧಾಪುರ ಸರಸ್ವತಿ ವಿದ್ಯಾಲಯದಲ್ಲಿ ಆಯೋಜಿಸಿದ ರಾಜ್ಯಮಟ್ಟದ ತರುಣರ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ಕಾಲೇಜಿನ ವಾಣಿಜ್ಯ ವಿಭಾಗದ ಸಾತ್ವಿಕ್ ಮತ್ತು ಲಿಖಿತ್ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಆಂಧ್ರಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆ ಆಗಿದ್ದಾರೆ. ಅವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪದಾಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದೆ.

ಯೋಗಾಸನ ಸ್ಪರ್ಧೆ : ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಸವಣೂರು ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

ಸವಣೂರು: ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ  ಸವಣೂರು ವಲಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳ ಬಾಲಕ,ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಸದಸ್ಯೆ ಪದ್ಮಾವತಿ ಪಂದ್ಯಾಟ ಉದ್ಘಾಟಿಸಿದರು. ಎಸ್ ಡಿ ಎಮ್ ಸಿ ಅಧ್ಯಕ್ಷೆ ಅನುಪಮ ಅಧ್ಯಕ್ಷತೆ ವಹಿಸಿದ್ದರು. ನರಿಮೊಗರು ಕ್ಲಸ್ಟರ್ ಸಿ ಆರ್ ಪಿ ಪರಮೇಶ್ವರಿ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗೋಪಾಲಕೃಷ್ಣ, ಹಿರಿಯ ವಿದ್ಯಾರ್ಥಿ ಹರ್ಷ ಗುತ್ತು,  ಎಸ್

ಸವಣೂರು ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ Read More »

ವಿದ್ಯಾಭಾರತಿ ಯೋಗ : ವಿವೇಕಾನಂದ  ಕನ್ನಡ ಮಾಧ್ಯಮ  ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ಕರ್ನಾಟಕ ವತಿಯಿಂದ ಕಡಬ ಸರಸ್ವತಿ ವಿದ್ಯಾಲಯದಲ್ಲಿ ನಡೆದ ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಕಿಶೋರ ವಿಭಾಗ ಮತ್ತು ಬಾಲವರ್ಗ ಈ ಎರಡೂ  ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲವರ್ಗದ ಬಾಲಕರ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯೊಂದಿಗೆ ವೈಯಕ್ತಿಕ ವಿಭಾಗದಲ್ಲಿ ನಿಶಾಂತ್ ಪ್ರಥಮ, ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಹುಲ್  ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಕಿಶೋರ ವರ್ಗದ ಬಾಲಕರ ವಿಭಾಗದಲ್ಲಿ ಶೃಜನ್ ಜೆ ರೈ ದ್ವಿತೀಯ, ಸ್ಕಂದ

ವಿದ್ಯಾಭಾರತಿ ಯೋಗ : ವಿವೇಕಾನಂದ  ಕನ್ನಡ ಮಾಧ್ಯಮ  ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ Read More »

ಅಂಬಿಕಾ ಸಿಬಿಎಸ್‍ ಇ ವಿದ್ಯಾಲಯದಿಂದ ‘ಆಟಿದ ಬೆನ್ನಿಡ್ ಕೇಸರ್ದ ಗೊಬ್ಬು’

ಪುತ್ತೂರು: ಬಪ್ಪಳಿಗೆ ಅಂಬಿಕಾ ಸಿಬಿಎಸ್‍ ಇ ವಿದ್ಯಾಲಯದ ವತಿಯಿಂದ ‘ಆಟಿದ ಬೆನ್ನಿಡ್ ಕೇಸರ್ದ ಗೊಬ್ಬು’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಪ್ರಗತಿಪರ ಕೃಷಿಕ ಮಾಧವ ಗೌಡ ಕಾಂತಿಲ ಮಾತನಾಡಿ, ಇಂದಿನ ಕಾಲಘಟ್ಟದ ಕೃಷಿ ಕಾರ್ಯದಲ್ಲಿ ಗಣನೀಯ ಬದಲಾವಣೆ ಕಂಡಿದ್ದು, ಈ ಬದಲಾವಣೆಯು ಮಾನವರ ಆರೋಗ್ಯದ ಮೇಲೂ ಪ್ರಭಾವ ಬೀರಿದೆ. ಆದುದರಿಂದ ಆಧುನಿಕ ತಂತ್ರಜ್ಞಾನದ ಜೊತೆಗೆ ಸಾಂಪ್ರದಾಯಿಕ ಕೃಷಿ ಪದ್ಧತಿಯ ಪಾಲನೆಯೂ ಅವಶ್ಯಕ ಎಂದರು. ಅಂಬಿಕಾ ಸಮೂಹ ಸಂಸ್ಥೆಯ ಅಧ್ಯಕ್ಷ ಸುಬ್ರಹ್ಮಣ್ಯ ನಟೋಜ ಮಾತನಾಡಿ, ಕೋರೊನಾದಂತಹ ಸಂದಿಗ್ದ ಪರಿಸ್ಥಿತಿಯಲ್ಲೂ

ಅಂಬಿಕಾ ಸಿಬಿಎಸ್‍ ಇ ವಿದ್ಯಾಲಯದಿಂದ ‘ಆಟಿದ ಬೆನ್ನಿಡ್ ಕೇಸರ್ದ ಗೊಬ್ಬು’ Read More »

ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಆ.1 ರಂದು ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ,ಕ.ಜಿಲ್ಲಾದ್ಯಂತ ಆ.1 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ದ.ಕ., ಕಾಸರಗೋಡು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಸಮುದ್ರ ತೀರ ಪ್ರದೇಶಗಳಿಗೆ, ತುಂಬಿ ಹರಿಯುತ್ತಿರುವ ನದಿ ಸಮೀಪ ಸಾರ್ವಜನಿಕರು ತೆರಳದಂತೆ, ಮೀನುಗಾರಿಕೆಗೆ ತೆರಳದಂತೆ ಆದೇಶ ನೀಡಲಾಗಿದೆ.

ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಆ.1 ರಂದು ಶಾಲಾ-ಕಾಲೇಜುಗಳಿಗೆ ರಜೆ Read More »

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಬಹುಮಾನ

ಪುತ್ತೂರು: ಕಡಬ ಸರಸ್ವತಿ ವಿದ್ಯಾಕೇಂದ್ರದಲ್ಲಿ ವಿದ್ಯಾಭಾರತಿ ಕರ್ನಾಟಕದ ವತಿಯಿಂದ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನರೇಂದ್ರ ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಗಳಿಸಿದ್ದಾರೆ. ಪ್ರಥಮ ವಾಣಿಜ್ಯ ವಿಭಾಗದ ಸಾತ್ವಿಕ್ ಎಸ್. ದ್ವಿತೀಯ, ಲಿಖಿತ್ ತೃತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪದಾಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಬಹುಮಾನ Read More »

ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಷಾ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು : ಭವ್ಯಾ ಪಿ.ಆರ್ ನಿಡ್ಪಳ್ಳಿ | ಶೈಕ್ಷಣಿಕ ವರ್ಷದ ಪ್ರಥಮ ಮಣಿಕರ್ಣಿಕ ಕಾರ್ಯಕ್ರಮ

ಪುತ್ತೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಇಂದು ವಿಫುಲವಾದ ಅವಕಾಶಗಳಿವೆ. ಆದರೆ ಯಶಸ್ವಿ ಪತ್ರಕರ್ತನಾಗಬೇಕೆಂದರೆ ಪತ್ರಿಕೋದ್ಯಮ ವಿದ್ಯಾರ್ಥಿಗಳು ಇಂದಿನಿಂದಲೇ ಅದಕ್ಕೆ ಪೂರಕವಾದ ತರಬೇತಿ ಹಾಗೂ ತಯಾರಿಯನ್ನು ಮಾಡಿಕೊಳ್ಳಬೇಕಿದೆ. ವಿದ್ಯಾರ್ಥಿ ದೆಸೆಯಲ್ಲಿಯೇ ಸಂವಹನ ಕೌಶಲ್ಯ, ಭಾಷಾ ನಿಪುಣತೆ, ಬರವಣಿಗೆ ಶೈಲಿಯನ್ನು ಉತ್ತಮಪಡಿಸಿಕೊಂಡರೆ ಉತ್ತಮ ಪತ್ರಕರ್ತನಾಗಲು ಸಾಧ್ಯ ಎಂದು ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯಾ.ಪಿ.ಆರ್.ನಿಡ್ಪಳ್ಳಿ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ,ಪತ್ರಿಕೋದ್ಯಮ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ ನಡೆದ ಈ ಸಾಲಿನ ಶೈಕ್ಷಣಿಕ ವರ್ಷದ

ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಷಾ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು : ಭವ್ಯಾ ಪಿ.ಆರ್ ನಿಡ್ಪಳ್ಳಿ | ಶೈಕ್ಷಣಿಕ ವರ್ಷದ ಪ್ರಥಮ ಮಣಿಕರ್ಣಿಕ ಕಾರ್ಯಕ್ರಮ Read More »

ಜಿಲ್ಲಾಮಟ್ಟದ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ

ಪುತ್ತೂರು: ಮಂಗಳೂರು ಶಾರದಾ ವಿದ್ಯಾಲಯದ ವತಿಯಿಂದ ನಡೆದ ’ಶಾರದಾ ಮಹೋತ್ಸವ’ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ ಲಭಿಸಿದೆ. ಶಾಲಾ ವಿದ್ಯಾರ್ಥಿ ಅದ್ವಿತ್.ಜಿ ಬಾಲವರ್ಗದ ಚಿತ್ರಕಲಾ ಸ್ಪರ್ಧೆಯಲ್ಲಿ – ದ್ವಿತೀಯ ಸ್ಥಾನ ಮತ್ತು ಶ್ರೀರಕ್ಷಾ ಕಿಶೋರವರ್ಗದ ಗೀತಕಂಠಪಾಠ ಸ್ಪರ್ಧೆಯಲ್ಲಿ –  ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಜಿಲ್ಲಾಮಟ್ಟದ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ Read More »

error: Content is protected !!
Scroll to Top