ಕ್ಯಾಂಪಸ್‌

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಬಹುಮಾನ

ಪುತ್ತೂರು: ಕಡಬ ಸರಸ್ವತಿ ವಿದ್ಯಾಕೇಂದ್ರದಲ್ಲಿ ವಿದ್ಯಾಭಾರತಿ ಕರ್ನಾಟಕದ ವತಿಯಿಂದ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನರೇಂದ್ರ ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಗಳಿಸಿದ್ದಾರೆ. ಪ್ರಥಮ ವಾಣಿಜ್ಯ ವಿಭಾಗದ ಸಾತ್ವಿಕ್ ಎಸ್. ದ್ವಿತೀಯ, ಲಿಖಿತ್ ತೃತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪದಾಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಬಹುಮಾನ Read More »

ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಷಾ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು : ಭವ್ಯಾ ಪಿ.ಆರ್ ನಿಡ್ಪಳ್ಳಿ | ಶೈಕ್ಷಣಿಕ ವರ್ಷದ ಪ್ರಥಮ ಮಣಿಕರ್ಣಿಕ ಕಾರ್ಯಕ್ರಮ

ಪುತ್ತೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಇಂದು ವಿಫುಲವಾದ ಅವಕಾಶಗಳಿವೆ. ಆದರೆ ಯಶಸ್ವಿ ಪತ್ರಕರ್ತನಾಗಬೇಕೆಂದರೆ ಪತ್ರಿಕೋದ್ಯಮ ವಿದ್ಯಾರ್ಥಿಗಳು ಇಂದಿನಿಂದಲೇ ಅದಕ್ಕೆ ಪೂರಕವಾದ ತರಬೇತಿ ಹಾಗೂ ತಯಾರಿಯನ್ನು ಮಾಡಿಕೊಳ್ಳಬೇಕಿದೆ. ವಿದ್ಯಾರ್ಥಿ ದೆಸೆಯಲ್ಲಿಯೇ ಸಂವಹನ ಕೌಶಲ್ಯ, ಭಾಷಾ ನಿಪುಣತೆ, ಬರವಣಿಗೆ ಶೈಲಿಯನ್ನು ಉತ್ತಮಪಡಿಸಿಕೊಂಡರೆ ಉತ್ತಮ ಪತ್ರಕರ್ತನಾಗಲು ಸಾಧ್ಯ ಎಂದು ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯಾ.ಪಿ.ಆರ್.ನಿಡ್ಪಳ್ಳಿ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ,ಪತ್ರಿಕೋದ್ಯಮ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ ನಡೆದ ಈ ಸಾಲಿನ ಶೈಕ್ಷಣಿಕ ವರ್ಷದ

ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಷಾ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು : ಭವ್ಯಾ ಪಿ.ಆರ್ ನಿಡ್ಪಳ್ಳಿ | ಶೈಕ್ಷಣಿಕ ವರ್ಷದ ಪ್ರಥಮ ಮಣಿಕರ್ಣಿಕ ಕಾರ್ಯಕ್ರಮ Read More »

ಜಿಲ್ಲಾಮಟ್ಟದ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ

ಪುತ್ತೂರು: ಮಂಗಳೂರು ಶಾರದಾ ವಿದ್ಯಾಲಯದ ವತಿಯಿಂದ ನಡೆದ ’ಶಾರದಾ ಮಹೋತ್ಸವ’ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ ಲಭಿಸಿದೆ. ಶಾಲಾ ವಿದ್ಯಾರ್ಥಿ ಅದ್ವಿತ್.ಜಿ ಬಾಲವರ್ಗದ ಚಿತ್ರಕಲಾ ಸ್ಪರ್ಧೆಯಲ್ಲಿ – ದ್ವಿತೀಯ ಸ್ಥಾನ ಮತ್ತು ಶ್ರೀರಕ್ಷಾ ಕಿಶೋರವರ್ಗದ ಗೀತಕಂಠಪಾಠ ಸ್ಪರ್ಧೆಯಲ್ಲಿ –  ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಜಿಲ್ಲಾಮಟ್ಟದ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಾರ್ಗಿಲ್ ದಿವಸ್

ಪುತ್ತೂರು: ಕೊರೆಯುವ ಚಳಿಯಲ್ಲಿ ಪರ್ವತದ ಮೇಲ್ಭಾಗದಿಂದ ಸುರಿಯುವ ಗುಂಡಿನ ದಾಳಿಯ ಮಧ್ಯೆ ಕಾರ್ಗಿಲ್ ಯುದ್ಧದಲ್ಲಿ ಕೆಚ್ಚೆದೆಯ ಹೋರಾಟವನ್ನು ಮಾಡಿ ಹುತಾತ್ಮರಾಗಿರುವ ಹಾಗೂ ಅದರಲ್ಲಿ ಪಾಲ್ಗೊಂಡಿರುವ ಸೇನಾಪಡೆಗಳ ಎಲ್ಲಾ ಅಧಿಕಾರಿಗಳೂ ನಿತ್ಯ ಸ್ಮರಣೀಯರು ಎಂದು ಭಾರತೀಯ ಸೇನಾಪಡೆಯ ವಿಶ್ರಾಂತ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಎಸ್.ಟಿ.ರಮಾಕಾಂತನ್ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಆಶ್ರಯದಲ್ಲಿ ನಡೆದ ಕಾರ್ಗಿಲ್ ವಿಜಯ ದಿವಸ ಸಮಾರಂಭದಲ್ಲಿ ಯೋಧ ನಮನ ಸಲ್ಲಿಸಿ ಮಾತಾಡಿದರು. ವಿಶ್ವದಲ್ಲಿಯೇ ಶ್ರೇಷ್ಟ ಸೇನಾ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಾರ್ಗಿಲ್ ದಿವಸ್ Read More »

ಸಂತ ಫಿಲೋಮಿನಾ ಕಾಲೇಜಿನಿಂದ 25ನೇ ಕಾರ್ಗಿಲ್ ವಿಜಯೋತ್ಸವ, ವನಮಹೋತ್ಸವ, ಪೌಷ್ಠಿಕಾಂಶ ದಿನ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ಇದರ ಎನ್.ಸಿ.ಸಿ. ಘಟಕ 3/19 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಭೂದಳ , 5 ಕರ್ನಾಟಕ ಎನ್.ಸಿ.ಸಿ. ನೌಕಾ ದಳ,  ಸಂತ ಫಿಲೋಮಿನಾ  ಅನುದಾನಿತ ಪ್ರೌಢ ಶಾಲೆ ಪುತ್ತೂರು ಇದರ ಎನ್.ಸಿ.ಸಿ. ಘಟಕ 91/19 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಭೂದಳ, 41A/5 ಕರ್ನಾಟಕ ಎನ್.ಸಿ.ಸಿ. ನೌಕಾ ದಳ, 44/6 ಕರ್ನಾಟಕ ವಾಯುದಳ ಮತ್ತು ಕುಡಿಪಾಡಿ ದ.ಕ.ಜಿ.ಪಂ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಜಂಟಿ ಆಶ್ರಯದಲ್ಲಿ 25ನೇ ಕಾರ್ಗಿಲ್ ವಿಜಯೋತ್ಸವ,

ಸಂತ ಫಿಲೋಮಿನಾ ಕಾಲೇಜಿನಿಂದ 25ನೇ ಕಾರ್ಗಿಲ್ ವಿಜಯೋತ್ಸವ, ವನಮಹೋತ್ಸವ, ಪೌಷ್ಠಿಕಾಂಶ ದಿನ Read More »

ಜು.29 : ಮುಡಿಪು ನವೋದಯ ವಿದ್ಯಾಲಯದ ಪಿಎಂ ಶ್ರೀ ಸ್ಕೂಲ್ ನಲ್ಲಿ ಶಿಕ್ಷಕರ ಹುದ್ದೆಗೆ ನೇರ ಸಂದರ್ಶನ

ಕೊಣಾಜೆ: ಮುಡಿಪು ನವೋದಯ ವಿದ್ಯಾಲಯದ ಪಿಎಂ ಶ್ರೀ ಸ್ಕೂಲ್ ನಲ್ಲಿ 2024-25 ನೇ ಶೈಕ್ಷಣಿಕ ವರ್ಷಕ್ಕೆ ಖಾಲಿ ಇರುವ ಗಣಿತ, ಭೌತಶಾಸ್ತ್ರ ಕಂಪ್ಯೂಟರ್ ಸಯನ್ಸ್ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಯಾ ವಿಷಯದಲ್ಲಿ ಎಂಎಸ್ಸಿ ಹಾಗೂ ಬಿ.ಇಡಿ ಅರ್ಹತೆಯೊಂದಿಗೆ ಅರ್ಹ ಅಭ್ಯರ್ಥಿಗಳು ಮೂಲ ದಾಖಲೆಯೊಂದಿಗೆ ಜುಲೈ 29 ರಂದು ಮುಡಿಪು ನವೋದಯ ವಿದ್ಯಾಲಯದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಹಾಜರಾಗುವಂತೆ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಷಿನ ಮಾಹಿತಿಗಾಗಿ 08255-261300 ಪೋನ್ ನಂಬರನ್ನು ಸಂಪರ್ಕಿಸಬಹುದಾಗಿದೆ.

ಜು.29 : ಮುಡಿಪು ನವೋದಯ ವಿದ್ಯಾಲಯದ ಪಿಎಂ ಶ್ರೀ ಸ್ಕೂಲ್ ನಲ್ಲಿ ಶಿಕ್ಷಕರ ಹುದ್ದೆಗೆ ನೇರ ಸಂದರ್ಶನ Read More »

ವಿವೇಕಾನಂದ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವದ ಬೆಳ್ಳಿ ನೆನಪು ಕಾರ್ಯಕ್ರಮ | ಕಾರ್ಗಿಲ್ ಬದುಕನ್ನು ನೆನೆದು ಭಾವುಕರಾದ ಲೆ.ಕರ್ನಲ್ ಅಶೋಕ್ ಕಿಣಿ

ಪುತ್ತೂರು: ಕಾರ್ಗಿಲ್ ಯುದ್ದ ಭಾರತ ಎಂದೆಂದಿಗೂ ಮರೆಯಲಾಗದ  ಯುದ್ದ.  ಸೈನಿಕರು  ದೇಶಭಕ್ತಿ ಮತ್ತು ದೇಶ ಸೇವೆ ಮಾಡಬೇಕು ಎಂಬ ಮನಸ್ಸು ಬಂದಾಗ ಅವರು  ಯಾವುದೇ ಕಾರ್ಯಕ್ಕೂ ಸಿದ್ಧರಿರುತ್ತಾರೆ. ಕಾರ್ಗಿಲ್ ಯುದ್ಧದ ಸಮಯದಲ್ಲಿ ಅದೇ ವೀರ ಸೈನಿಕರು ತಮ್ಮ ಪ್ರಾಣವನ್ನು ರಾಷ್ಟ್ರಕ್ಕಾಗಿ ಮುಡಿಪಿಡಲು ತಾವಾಗಿಯೇ ಮುಂದೆ ಬಂದಿದ್ದಾರೆ. ಕಾರ್ಗಿಲ್ ಯುದ್ದದಲ್ಲಿ 527 ಸೈನಿಕರು ತಮ್ಮ ನಾಳೆಯನ್ನು ನಮಗಾಗಿ ಸಮರ್ಪಿಸಿದ್ದಾರೆ. ನಾವೆಲ್ಲರೂ ದೇಶಕ್ಕಾಗಿ ಚಿಂತನೆ ಮಾಡುವುದರೊಂದಿಗೆ  ದೇಶ ಸೇವೆಗೆ ಅವಕಾಶ ಸಿಕ್ಕರೆ, ಯಾವುದೇ ಕಾರಣಕ್ಕೂ ಅದನ್ನು ಬಿಡಬಾರದು ಎಂದು ಲೆಫ್ಟಿನೆಟ್

ವಿವೇಕಾನಂದ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವದ ಬೆಳ್ಳಿ ನೆನಪು ಕಾರ್ಯಕ್ರಮ | ಕಾರ್ಗಿಲ್ ಬದುಕನ್ನು ನೆನೆದು ಭಾವುಕರಾದ ಲೆ.ಕರ್ನಲ್ ಅಶೋಕ್ ಕಿಣಿ Read More »

ಅಕ್ಷಯ ಕಾಲೇಜಿನಲ್ಲಿ ನೂತನ ವರ್ಷದ ವಿದ್ಯಾರ್ಥಿಗಳಿಗೆ “ದೃಷ್ಟಿ” ಮಾಹಿತಿ ಕಾರ್ಯಾಗಾರ

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತಿರುವ ಅಕ್ಷಯ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷ -2024 25ನೇ ಸಾಲಿಗೆ ದಾಖಲಾತಿಗೊಂಡ ವಿದ್ಯಾರ್ಥಿಗಳಿಗೆ ಒಂದು ದಿನದ “ದೃಷ್ಟಿ” ಮಾಹಿತಿ ಕಾರ್ಯಾಗಾರ ನಡೆಯಿತು. ಕಾಲೇಜಿನ ಆಡಳಿತ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ ಜಯಂತ ಕಾರ್ಯಾಗಾರ ಉದ್ಘಾಟಿಸಿ, ಅಕ್ಷಯ ಕಾಲೇಜನ್ನು ಆಯ್ಕೆ ಮಾಡಿರುವುದಕ್ಕೆ ಅಭಿನಂದನೆ ತಿಳಿಸಿ, ವಿದ್ಯಾರ್ಥಿಗಳ ಭವಿಷ್ಯ ಸಧೃಡಗೊಳ್ಳಲು ಅಕ್ಷಯ ಕಾಲೇಜು ಎಂದಿಗೂ ಜೊತೆಯಲಿರಲಿದೆ ಎಂದು ಶುಭ ಹಾರೈಸಿದರು. ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಸ್ತಿನಿಂದ ಶಿಕ್ಷಣ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಈಗಿನಿಂದಲೇ

ಅಕ್ಷಯ ಕಾಲೇಜಿನಲ್ಲಿ ನೂತನ ವರ್ಷದ ವಿದ್ಯಾರ್ಥಿಗಳಿಗೆ “ದೃಷ್ಟಿ” ಮಾಹಿತಿ ಕಾರ್ಯಾಗಾರ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಗುರುಪೂರ್ಣಿಮೆ ಹಾಗೂ ಗುರುವಂದನಾ ಕಾರ್ಯಕ್ರಮ

ಪುತ್ತೂರು: ಬನ್ನೂರು ಕೃಷ್ಣನಗರದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ ಗುರು ಪೂರ್ಣಿಮೆ ಹಾಗೂ ಗುರುವಂದನಾ ಕಾರ್ಯಕ್ರಮ ಇಂದು ನಡೆಯಿತು. ಮುಖ್ಯ ಅತಿಥಿಯಾಗಿ ಸಂದರ್ಶಕ ಉಪನ್ಯಾಸಕ ಪೂರ್ಣಾತ್ಮರಾಮ ಪಾಲ್ಗೊಂಡು ಗುರು ಪೂರ್ಣಿಮೆಯ ಮಹತ್ವ ಹಾಗೂ ವೇದವ್ಯಾಸರ ಪರಿಪೂರ್ಣ ವ್ಯಕ್ತಿತ್ವದ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲೆ ಜಯಲಕ್ಷ್ಮಿ ಕೆ ಅವರನ್ನು ಶಾಲಾ ಸಂಚಾಲಕ ಎ.ವಿ. ನಾರಾಯಣ ಹಾಗೂ ಪ್ರತಿಭಾ ದೇವಿ ದಂಪತಿ ಗೌರವಿಸಿ ಗುರುವಂದನೆ ಸಲ್ಲಿಸಿ ಆಶೀರ್ವಾದ

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಗುರುಪೂರ್ಣಿಮೆ ಹಾಗೂ ಗುರುವಂದನಾ ಕಾರ್ಯಕ್ರಮ Read More »

ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಿಗೆ ಮಾಹಿತಿ ಕಾರ್ಯಾಗಾರ

ಪುತ್ತೂರು: ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು. ಶಿಕ್ಷಕರು ಸಮಾಜದಲ್ಲಿ ಎಂದೆಂದಿಗೂ ಉತ್ಕೃಷ್ಟ ಸ್ಥಾನದಲ್ಲಿರುವವರು. ವಿದ್ಯಾರ್ಥಿಗಳಲ್ಲಿ ಶ್ರೇಷ್ಠ ಮೌಲ್ಯಗಳನ್ನು ತುಂಬಿ ಒಬ್ಬ ಉತ್ತಮ ನಾಗರೀಕನನ್ನಾಗಿ ಬೆಳೆಸುವವರು ಶಿಕ್ಷಕರು.ದೇಶದ  ಉನ್ನತ  ಪ್ರಜೆಯ ಹಿಂದೆ ಆತನ ಶಿಕ್ಷಕರ ಪಾತ್ರ ಇದ್ದೇ ಇರುತ್ತದೆ. ಹಾಗಾಗಿ ಒಬ್ಬ ಶಿಕ್ಷಕ ಸದಾ ನಿರಂತರ ಕಲಿಕೆಯಲ್ಲಿ ತೊಡಗಿಸಿಕೊಂಡಿರಬೇಕು. ಸಮಾಜದ ಏಳಿಗೆಯಲ್ಲಿ ಹಾಗೂ ದೇಶದ ಪ್ರಗತಿಯಲ್ಲಿ ಶಿಕ್ಷಕರು ಬಹು ಮುಖ್ಯ ಪಾತ್ರ ವಹಿಸಬೇಕು  ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ. ಎನ್

ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಿಗೆ ಮಾಹಿತಿ ಕಾರ್ಯಾಗಾರ Read More »

error: Content is protected !!
Scroll to Top