ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ವೃತ್ತಿಪರ ಮಾರ್ಗದರ್ಶನ ಕಾರ್ಯಾಗಾರ’ | ಇಂದಿನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನದ ಅವಶ್ಯಕತೆಯಿದೆ : ಪ್ರೋ. ಸಿ. ಬಸವರಾಜು
ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಹುಬ್ಬಳ್ಳಿಯ ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಮಂಗಳೂರು ವಿಭಾಗ ಮಟ್ಟದ ಒಂದು ದಿನದ ‘ವೃತ್ತಿಪರ ಮಾರ್ಗದರ್ಶನ ಕಾರ್ಯಾಗಾರ’ ನಡೆಯಿತು. ಕಾರ್ಯಾಗಾರವನ್ನು ಹುಬ್ಬಳ್ಳಿಯ ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯದ ಉಪ ಕುಲಪತಿಗಳಾದ ಪ್ರೋ. ಸಿ. ಬಸವರಾಜು ಉದ್ಘಾಟಿಸಿ ಮಾತನಾಡಿ, ಕಾನೂನು ಕಲಿಕಾರ್ಥಿಗಳಿಗೆ ಜ್ಞಾನವನ್ನು ಗಳಿಸುವ ಆಸಕ್ತಿ ಇರಬೇಕು. ಅದಕ್ಕಾಗಿ ನಿರಂತರ ಪ್ರಯತ್ನವನ್ನು ಮಾಡುವ ಮನೋಭಾವನೆ ಬೆಳೆಸಿಕೊಂಡಾಗ ಸಾಧನೆಯನ್ನು ಮಾಡಬಹುದು. ಪ್ರತಿಯೊಬ್ಬರಲ್ಲೂ ಒಂದೊಂದು ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ವ್ಯಕ್ತಪಡಿಸಲು ಉತ್ತಮ ವೇದಿಕೆ ಬೇಕಾಗುತ್ತೆ. ಅಂತಹ […]









