ಕ್ಯಾಂಪಸ್‌

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ವೃತ್ತಿಪರ ಮಾರ್ಗದರ್ಶನ ಕಾರ್ಯಾಗಾರ’ | ಇಂದಿನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನದ ಅವಶ್ಯಕತೆಯಿದೆ : ಪ್ರೋ. ಸಿ. ಬಸವರಾಜು

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಹುಬ್ಬಳ್ಳಿಯ ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಮಂಗಳೂರು ವಿಭಾಗ ಮಟ್ಟದ ಒಂದು ದಿನದ ‘ವೃತ್ತಿಪರ ಮಾರ್ಗದರ್ಶನ ಕಾರ್ಯಾಗಾರ’ ನಡೆಯಿತು. ಕಾರ್ಯಾಗಾರವನ್ನು ಹುಬ್ಬಳ್ಳಿಯ ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯದ ಉಪ ಕುಲಪತಿಗಳಾದ ಪ್ರೋ. ಸಿ. ಬಸವರಾಜು ಉದ್ಘಾಟಿಸಿ ಮಾತನಾಡಿ, ಕಾನೂನು ಕಲಿಕಾರ್ಥಿಗಳಿಗೆ ಜ್ಞಾನವನ್ನು ಗಳಿಸುವ ಆಸಕ್ತಿ ಇರಬೇಕು. ಅದಕ್ಕಾಗಿ ನಿರಂತರ ಪ್ರಯತ್ನವನ್ನು ಮಾಡುವ ಮನೋಭಾವನೆ ಬೆಳೆಸಿಕೊಂಡಾಗ ಸಾಧನೆಯನ್ನು ಮಾಡಬಹುದು. ಪ್ರತಿಯೊಬ್ಬರಲ್ಲೂ ಒಂದೊಂದು ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ವ್ಯಕ್ತಪಡಿಸಲು ಉತ್ತಮ ವೇದಿಕೆ ಬೇಕಾಗುತ್ತೆ. ಅಂತಹ […]

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ವೃತ್ತಿಪರ ಮಾರ್ಗದರ್ಶನ ಕಾರ್ಯಾಗಾರ’ | ಇಂದಿನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನದ ಅವಶ್ಯಕತೆಯಿದೆ : ಪ್ರೋ. ಸಿ. ಬಸವರಾಜು Read More »

ಭಾರೀ ಮಳೆ : ದ.ಕ.ಜಿಲ್ಲೆಯ ಐದು ತಾಲೂಕುಗಳಲ್ಲಿ ನಾಳೆ (ಜು.19) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ನಾಳೆ (ಜು.19) ರಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ದ.ಕ.ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಪ್ರೌಡಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ದ.ಕ., ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನದಿ ತೀರ, ಸಮುದ್ರ ದೆಡಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮೀನುಗಾರರಿಗೆ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ.

ಭಾರೀ ಮಳೆ : ದ.ಕ.ಜಿಲ್ಲೆಯ ಐದು ತಾಲೂಕುಗಳಲ್ಲಿ ನಾಳೆ (ಜು.19) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ Read More »

ಉಡುಪಿ ಜಿಲ್ಲಾದ್ಯಂತ ನಾಳೆ (ಜು.19) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಭಾರೀ ಮಳೆಯ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾದ್ಯಂತ ಎಲ್ಲಾ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.19 ನಾಳೆ ರಜೆ ಘೋಷಿಸಲಾಗಿದೆ. ಈ ಕುರಿತು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದು, ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಪ್ರೌಡಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಪದವಿ, ಸ್ನಾಥಕೋತ್ತರ ಪದವಿ, ಡಿಪ್ಲೋಮಾ, ಐಟಿಐ  ಇನ್ನಿತರ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿವೆ. ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನದಿ ತೀರ, ಸಮುದ್ರ ದೆಡಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮೀನುಗಾರರಿಗೆ

ಉಡುಪಿ ಜಿಲ್ಲಾದ್ಯಂತ ನಾಳೆ (ಜು.19) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಶಾಲಾ ಮೈದಾನಗಳಲ್ಲಿ ಹಿಂದೂ ಹಬ್ಬ ಆಚರಣೆಗೆ ಬ್ರೇಕ್ ಬೀಳುವ ಸಾಧ್ಯತೆ | ಶಿಕ್ಷಣ ಇಲಾಖೆಯಿಂದ ಹೊರಡಿಸಿದ ಸುತ್ತೋಲೆಯಲ್ಲಿ ಏನಿದೆ ?

ಮಂಗಳೂರು: ಶಾಲಾ ಮೈದಾನಗಳಲ್ಲಿ ಗಣೇಶೋತ್ಸವ ಹಾಗೂ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆಗೆ ಈ ಬಾರಿ ಬ್ರೇಕ್ ಬೀಳುವ ಸಾಧ್ಯತೆಯಿದ್ದು, ಈ ಕುರಿತು ದ.ಕ. ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕರು ಹೊರಡಿಸಿರುವ ಸುತ್ತೋಲೆ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಮೂಲಕ ಶಿಕ್ಷಣ ಇಲಾಖೆಯ ಸುತ್ತೋಲೆ ಮಂಗಳೂರಿನಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಸುತ್ತೋಲೆಯಲ್ಲಿ ಶಾಲೆಗಳನ್ನ ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸದಂತೆ ಹೇಳಲಾಗಿದೆ. ಈ ಮೂಲಕ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಖಡಕ್ ಸಂದೇಶವನ್ನ ಸುತ್ತೋಲೆಯ ಮೂಲಕ ಹೊರಡಿಸಲಾಗಿದೆ.

ಶಾಲಾ ಮೈದಾನಗಳಲ್ಲಿ ಹಿಂದೂ ಹಬ್ಬ ಆಚರಣೆಗೆ ಬ್ರೇಕ್ ಬೀಳುವ ಸಾಧ್ಯತೆ | ಶಿಕ್ಷಣ ಇಲಾಖೆಯಿಂದ ಹೊರಡಿಸಿದ ಸುತ್ತೋಲೆಯಲ್ಲಿ ಏನಿದೆ ? Read More »

ಪಂಜದಲ್ಲಿ ಜನಸಂಪರ್ಕ ಅಭಿಯಾನ ಹಾಗೂ ಬೃಹತ್  ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ

ಪಂಜ: ಪುತ್ತೂರು ಭಾರತೀಯ ಅಂಚೆ ಇಲಾಖೆ ಮತ್ತು ಪಂಜ ಲಯನ್ಸ್‌ ಕ್ಲಬ್ ಇದರ ಸಹಯೋಗದೊಂದಿಗೆ ಬೃಹತ್ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ ಹಾಗೂ ಅಂಚೆ ಜನಸಂಪರ್ಕ ಅಭಿಯಾನ ಜು. 18 ರಂದು ಪಂಜ ಲಯನ್ಸ್ ಕ್ಲಬ್ ಸಭಾಭವನದಲ್ಲಿ ಜರುಗಿತು. ಪಂಜ ನಾಡ ಕಚೇರಿ, ಕಂದಾಯ ನಿರೀಕ್ಷಕ ರಂಜನ್ ಕಲ್ಕುದಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಪಂಜ ಲಯನ್ಸ್‌ ಕ್ಲಬ್ ಅಧ್ಯಕ್ಷ ಶಶಿಧರ್ ಪಳಂಗಾಯ ಸಭಾಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾದ ಪುತ್ತೂರು ವಿಭಾಗದ ಅಂಚೆ ಹಿರಿಯ ಅಧೀಕ್ಷಕ

ಪಂಜದಲ್ಲಿ ಜನಸಂಪರ್ಕ ಅಭಿಯಾನ ಹಾಗೂ ಬೃಹತ್  ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ Read More »

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಹೆತ್ತವರ ಸಭೆ

ಪುತ್ತೂರು: ಪ್ರತಿಯೊಂದು ವಿಷಯಗಳನ್ನು ಸಮಯಕ್ಕೆ ಸರಿಯಾಗಿ ನಿರ್ವಹಿಸುವ ಜವಾಬ್ದಾರಿಯನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಅಂತಹ ಜ್ಞಾನವನ್ನು ಶಿಕ್ಷಣ ಒದಗಿಸಿಕೊಡುತ್ತದೆ. ಶಿಕ್ಷಣ ಸಂಸ್ಥೆಗಳು ಮೌಖಿಕ ಸಂಗತಿಗಳೊಂದಿಗೆ ಪ್ರಾಯೋಗಿಕ ವಿಚಾರಗಳನ್ನೂ ತಿಳಿಸಿಕೊಟ್ಟಾಗ ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವೆನಿಸುತ್ತದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ರಕ್ಷಕ – ಶಿಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶಭಕ್ತಿಯನ್ನು

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಹೆತ್ತವರ ಸಭೆ Read More »

ಭಾರೀ ಮಳೆ : ದ.ಕ.ಜಿಲ್ಲಾದ್ಯಂತ ಇಂದು (ಜು.18) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು (ಜು.18) ರಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ಪುತ್ತೂರು, ಬೆಳ್ತಂಗಡಿ, ಸುಳ್ಯ, ಬಂಟ್ವಾಳ ಹಾಗೂ ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಪ್ರೌಡಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ದ.ಕ., ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನದಿ ತೀರ, ಸಮುದ್ರ ದೆಡಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮೀನುಗಾರರಿಗೆ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ

ಭಾರೀ ಮಳೆ : ದ.ಕ.ಜಿಲ್ಲಾದ್ಯಂತ ಇಂದು (ಜು.18) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ Read More »

ಜು.21 : ಸವಣೂರು ಯುವ ಸಭಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸವಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ, ಸುಳ್ಯ ಕೆ.ವಿ.ಜಿ.ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಆಶ್ರಯದಲ್ಲಿ ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಸವಣೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸವಣೂರು ಯುವಕ ಮಂಡಲ ಹಾಗೂ ಪುಣ್ಚಪ್ಪಾಡಿ ಸಮರ್ಥ ಜನಸೇವಾ ಟ್ರಸ್ಟ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಜು.21 ಭಾನುವಾರ ಸವಣೂರು ಯುವ ಸಭಾಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2

ಜು.21 : ಸವಣೂರು ಯುವ ಸಭಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ Read More »

ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಮಾಹಿತಿ ಕಾರ್ಯಾಗಾರ

ಪುತ್ತೂರು: ವಿದ್ಯಾರ್ಥಿ ಜೀವನದಲ್ಲಿ ಗುರಿ ಏನೆಂಬುವುದು ಸ್ಪಷ್ಟವಾಗಿರಬೇಕು. ಸ್ಪಷ್ಟವಾದ ಗುರಿ ರೂಪಿಸಿಕೊಂಡು ಕಲಿಕೆಯು ಮುಗಿದ ನಂತರ ನಾವು ಯಾವ ಹಾದಿಯಲ್ಲಿ ಮುಂದುವರೆಯಬೇಕು ಎಂದು  ನಿರ್ಧರಿಸಿಕೊಂಡಿರಬೇಕು.  ಯಾವ ಪದವಿ ಪಡೆದುಕೊಳ್ಳುತ್ತೇವೆ ಎಂಬುವುದಕ್ಕಿಂತ ಅದು ನಮ್ಮ ಮೇಲೆ ಯಾವ ರೀತಿಯಾದ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂಬುವುದು ಮುಖ್ಯ.  ನಮ್ಮ ಪ್ರತಿಭೆ, ಸಾಮರ್ಥ್ಯವನ್ನು ಗುರುತಿಸಿಕೊಳ್ಳುವುದೇ ಶಿಕ್ಷಣದ ಮೂಲ ಉದ್ದೇಶ ಎಂದು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಹೇಳಿದರು. ಅವರು  ವಿವೇಕಾನಂದ  ಕಲಾ, ವಿಜ್ಞಾನ  ಮತ್ತು ವಾಣಿಜ್ಯ ಮಹಾವಿದ್ಯಾಲಯ

ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಮಾಹಿತಿ ಕಾರ್ಯಾಗಾರ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಎರಡು ರ್ಯಾಂಕ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ನಡೆಸಿದ 2023-24ನೇ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 2  ರ್ಯಾಂಕ್‍ ಗಳನ್ನು ಪಡೆದುಕೊಂಡಿದ್ದಾರೆ. ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಕೇಶವ ಪ್ರಜ್ವಲ್.ಪಿ 9.38 ಸಿಜಿಪಿಎ ಅಂಕಗಳೊಂದಿಗೆ 3ನೇ ರ್ಯಾಂಕ್‍ ಹಾಗೂ ಕೆ.ಪಲ್ಲವಿ 9.33 ಸಿಜಿಪಿಎ ಅಂಕಗಳೊಂದಿಗೆ 5ನೇ ರ್‍ಯಾಂಕ್ ಗಳಿಸಿಕೊಂಡಿದ್ದಾರೆ. ಸಿವಿಲ್ ಇಂಜಿನಿಯರಿಂಗ್  ವಿಭಾಗ ಮುಖ್ಯಸ್ಥ ಪ್ರೊ.ಪ್ರಶಾಂತ್ ಹಾಗೂ ಪ್ರಾಧ್ಯಾಪಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಸಾಧನೆಯನ್ನು

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಎರಡು ರ್ಯಾಂಕ್ Read More »

error: Content is protected !!
Scroll to Top