ಕ್ಯಾಂಪಸ್‌

ವಿವೇಕಾನಂದ ಕಾಲೇಜಿನಲ್ಲಿ ಶ್ರೀರಾಮೋತ್ಸವ

ಪುತ್ತೂರು: ರಾಮಾಯಣದಲ್ಲಿರುವ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪ್ರಭುದ್ಧರಾಗಬೇಕು. ಹಾಗೆಯೇ ಸಂವಿಧಾನವನ್ನು ಹೇಗೆ ಪಾಲಿಸಬೇಕೆಂದು ರಾಮನ ಆಡಳಿತದಲ್ಲಿ ಕಾಣಬಹುದು. ರಾಮನ ಆದರ್ಶಗಳನ್ನು ನಾವು ಬದುಕಿನಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಉತ್ತಮ ಬದುಕನ್ನು ನಡೆಸಬಹುದು ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ( ಸ್ವಾಯತ್ತ ), ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನ ಕೇಂದ್ರ, ಭಾರತೀಯ ಸಂಸ್ಕೃತಿ ಮತ್ತು ಲಲಿತಕಲೆಗಳ ಅಧ್ಯಯನ ಕೇಂದ್ರ, ವಿದ್ಯಾರ್ಥಿ […]

ವಿವೇಕಾನಂದ ಕಾಲೇಜಿನಲ್ಲಿ ಶ್ರೀರಾಮೋತ್ಸವ Read More »

ವಿವೇಕಾನಂದ ಕಾಲೇಜಿನಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ

ಪುತ್ತೂರು: ಕಳೆದ ಎಪ್ಪತ್ತಾರು ವರ್ಷಗಳಲ್ಲಿ ನಮ್ಮ ದೇಶ ಸಾಗಿ ಬಂದುದುರ ಬಗೆಗೆ ನಾವಿಂದು ವಿಶ್ಲೇಷಣೆ ಮಾಡಬೇಕಾದ ಸಮಯವಿದು. ನಮ್ಮ ದೇಶ ಅತ್ಯಂತ ವಿಶಿಷ್ಟವಾದ ದೇಶ. ಅತ್ಯಂತ ಹೆಚ್ಚು ಜನಸಂಖ್ಯೆ ಇರುವ ದೇಶವಾದರೂ ಈಗಾಗಲೇ ಎಲ್ಲಾ ಕ್ಷೇತ್ರಗಳಲ್ಲೂ ಸಾಕಷ್ಟ ಮುಂದುವರೆದಿದ್ದೇವೆ. ಅನೇಕ ವಿಚಾರಗಳಲ್ಲಿ ದೇಶ ತನ್ನದೇ ಆದ ರೀತಿಯಲ್ಲಿ ಗುರುತಿಸಿಕೊಂಡಿದೆ. ಕೃಷಿ ಕ್ಷೇತ್ರದಲ್ಲಿ ಅಗಣಿತ ಸಾಧನೆ ಮಾಡಿದುದು ಅಲ್ಲದೇ ತಂತ್ರಜ್ಞಾನ, ಕೈಗಾರಿಕಾ ಕ್ಷೇತ್ರದಲ್ಲಿಯೂ ಅಭಿವೃದ್ಧಿಯನ್ನು ಸಾಧಿಸಿಕೊಂಡು ಬಂದಿದೆ. ಆದರೆ ದೇಶ ಇಂದು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದೆ. ದೇಶ ಇಂದು

ವಿವೇಕಾನಂದ ಕಾಲೇಜಿನಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ Read More »

ಸಂಪ್ಯ ಅಕ್ಷಯ ಕಾಲೇಜಿನಲ್ಲಿ 76ನೇ ವರ್ಷದ ಗಣರಾಜ್ಯೋತ್ಸವ

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಐಕ್ಯೂಎಸಿ ಸಹಯೋಗದಲ್ಲಿ 76ನೇ ವರ್ಷದ ಗಣರಾಜ್ಯೋತ್ಸವವನ್ನು ಭಾನುವಾರ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಅಕ್ಷಯ ಕಾಲೇಜಿನ ಆಡಳಿತ ಅಧಿಕಾರಿ ಅರ್ಪಿತ್ ಟಿ.ಎ. ಧ್ವಜಾರೋಹಣ ನೆರವೇರಿಸಿದರು.  ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಗಳಾದ ಕಿಶೋರ್ ಕುಮಾರ್ ರೈ ಕುಮಾರಿ ಮೇಘಶ್ರೀ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಕುಮಾರ್  ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕ -ಸೇವಕಿಯರು ಹಾಜರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕಿ

ಸಂಪ್ಯ ಅಕ್ಷಯ ಕಾಲೇಜಿನಲ್ಲಿ 76ನೇ ವರ್ಷದ ಗಣರಾಜ್ಯೋತ್ಸವ Read More »

ಜ.24-25 : ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಕ್ರಿಕೆಟ್‍ : ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನ ಅನಘಾ ಕೆ.ಎನ್‍. ಆಯ್ಕೆ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿನಿ ಅನಘ.ಕೆ.ಎನ್. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿಯಾಗಿರುವ ಅನಘ ಕೆ.ಎನ್‍. ತುಮಕೂರಿನಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಜನವರಿ 24 ಹಾಗೂ 25 ರಂದು ಮೈಸೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಕ್ರಿಕೆಟ್ ಪಂದ್ಯಾಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ

ಜ.24-25 : ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಕ್ರಿಕೆಟ್‍ : ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನ ಅನಘಾ ಕೆ.ಎನ್‍. ಆಯ್ಕೆ Read More »

ರಾಜ್ಯ ಒಲಿಂಪಿಕ್ಸ್ ನಲ್ಲಿ ಮಿಂಚಿದ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿಗಳು

ಪುತ್ತೂರು: ರಾಜ್ಯ ಒಲಿಂಪಿಕ್ಸ್ ವೈಟ್‍ ಲಿಫ್ಟಿಂಗ್‍ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ದ್ವಿತೀಯ ಬಿಎಯ ರಂಜಿತ್ 108+ ಕೆ.ಜಿ. ವಿಭಾಗದಲ್ಲಿ ಚಿನ್ನ, ದ್ವಿತೀಯ ಬಿಎಸ್ಸಿಯ ಸ್ಪಂದನಾ 45 ಕೆ.ಜಿ. ವಿಭಾಗದಲ್ಲಿ ಬೆಳ್ಳಿ, ದ್ವಿತೀಯ ಎಂಕಾಂನ ಬ್ಯೂಲಾಹ್‍ ಪಿ.ಟಿ. 64 ಕೆ.ಜಿ. ವಿಭಾಗದಲ್ಲಿ ಬೆಳ್ಳಿ, ದ್ವಿತೀಯ ಬಿಎಸ್ಸಿಯ ಶಿವಾನಿ 45 ಕೆ.ಜಿ. ವಿಭಾಗದಲ್ಲಿ ಕಂಚಿನ ಪದಕಗಳನ್ನು ಗಳಿಸಿ ಈ ಮೂಲಕ ಕಾಲೇಜಿನ ಕ್ರೀಡಾ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲನ್ನು

ರಾಜ್ಯ ಒಲಿಂಪಿಕ್ಸ್ ನಲ್ಲಿ ಮಿಂಚಿದ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿಗಳು Read More »

ಜಿಲ್ಲಾ ಮಟ್ಟದ ಪಠ್ಯ ಪುಸ್ತಕಾಧಾರಿತ ನಾಟಕ ಸ್ಪರ್ಧೆ | ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಪ್ರಥಮ

ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಶಿಕ್ಷಣ ಕಛೇರಿ ಮಂಗಳೂರು ಇಲ್ಲಿ ಶಿಕ್ಷಣ ಗುಣಮಟ್ಟ ಸುಧಾರಣೆ ಕಾರ್ಯಕ್ರಮದ ಅಡಿಯಲ್ಲಿ ಶ್ರೀ ಆಲೂರು ವೆಂಕಟರಾವ್ ಭಾಷಾ ಕೌಶಲ್ಯ ಕೇಂದ್ರ ಅನುಮೋದಿತ ಕ್ರಿಯಾಯೋಜನೆಯ ಪಠ್ಯ ಪುಸ್ತಕಾಧಾರಿತ ನಾಟಕ ಸ್ಪರ್ಧೆಯಲ್ಲಿ ವಿವೇಕಾನಂದಕನ್ನಡ ಮಾಧ್ಯಮ ಶಾಲೆಯ ಪ್ರಾಥಮಿಕ ವಿಭಾಗ ಮತ್ತು ಪ್ರೌಢ ವಿಭಾಗದ ಮಕ್ಕಳ ತಂಡ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. 7ನೇ ತರಗತಿಯ ಪಠ್ಯ ಪೂರಕ ಗದ್ಯ ಭಾಗ [ಡಾ.ಎಚ್.ಎಸ್ ಅನುಪಮ] ಸಾವಿತ್ರಿಬಾಯಿ ಫುಲೆ ನಾಟಕ ಪಾತ್ರದಾರಿಗಳು ಶಾಲಾ ವಿದ್ಯಾರ್ಥಿಗಳಾದ ವೈಷ್ಣವಿ,

ಜಿಲ್ಲಾ ಮಟ್ಟದ ಪಠ್ಯ ಪುಸ್ತಕಾಧಾರಿತ ನಾಟಕ ಸ್ಪರ್ಧೆ | ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಪ್ರಥಮ Read More »

ಸಂತಫಿಲೋಮಿನಾ ಸ್ವಾಯತ್ತ ಕಾಲೇಜಿನ ಎನ್.ಎಸ್.ಎಸ್‍. ಘಟಕಕ್ಕೆ ತಾಲೂಕು ಅತ್ಯುತ್ತಮ ಎನ್ ಎಸ್ ಎಸ್‍ ಘಟಕ ಪ್ರಶಸ್ತಿ

ಪುತ್ತೂರು:  ಪುತ್ತೂರು ತಾಲ್ಲೂಕು ಯುವಜನ ಒಕ್ಕೂಟ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ತಾಲೂಕಿನಲ್ಲಿ ಅತ್ಯುತ್ತಮ ಸಾಧನೆಗೈದ ಕಾಲೇಜಿನ ಎನ್ ಎಸ್ ಎಸ್ ಘಟಕಗಳಿಗೆ ನೀಡುವ 2025ನೇ ಸಾಲಿನ ತಾಲೂಕಿನ ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನೆ ಘಟಕ ಪ್ರಶಸ್ತಿಗೆ ಸಂತಫಿಲೋಮಿನಾ ಸ್ವಾಯತ್ತ ಕಾಲೇಜಿನ ಎನ್ ಎಸ್ ಎಸ್‍ ಘಟಕ ಭಾಜನವಾಗಿದೆ. ಪುತ್ತೂರಿನ ಆಸ್ಮಿ ಕಂಫರ್ಟ್ನನಲ್ಲಿ  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರೋಟರಿ ಕ್ಲಬ್ ತಾಲ್ಲೂಕು ಯುವಜನ ಒಕ್ಕೂಟದ ಸಹಯೋಗದೊಂದಿಗೆನಡೆದ ಸ್ವಾಮಿ ವಿವೇಕಾನಂದ ಜಯಂತಿ ಮತ್ತು

ಸಂತಫಿಲೋಮಿನಾ ಸ್ವಾಯತ್ತ ಕಾಲೇಜಿನ ಎನ್.ಎಸ್.ಎಸ್‍. ಘಟಕಕ್ಕೆ ತಾಲೂಕು ಅತ್ಯುತ್ತಮ ಎನ್ ಎಸ್ ಎಸ್‍ ಘಟಕ ಪ್ರಶಸ್ತಿ Read More »

ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ ರಾಜೇಂದ್ರ ಪ್ರಸಾದ್ ಶೆಟ್ಟಿ ಆಯ್ಕೆ l ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಿಂದ ಸನ್ಮಾನ

ಇಂದು ಸಮರ್ಪಣಾದಲ್ಲಿ ಸಂಭ್ರಮದ ಘಳಿಗೆಗಳು.ಪುತ್ತೂರ ಜನತೆ ಪ್ರೀತಿಯಿಂದ ಸ್ವೀಕರಿಸಿ ತಮ್ಮ ಒಳಮನ-ಮನೆಗಳಿಗೆ ಬಿಟ್ಟುಕೊಂಡ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಲ್ಲಿಂದು ಸಂಭ್ರಮದ ವಾತಾವರಣ ಮನೆಮಾಡಿತ್ತು.ಟ್ರಸ್ಟ್ ನ ಅಧ್ಯಕ್ಷ ಶ್ರೀ ಕುರಿಯ ರಾಜೇಂದ್ರ ಪ್ರಸಾದ್ ಶೆಟ್ಟಿ ಎಣ್ಮೂರು ಅವರನ್ನು ಸನ್ಮಾನಿಸಿ ಸಂಭ್ರಮಿಸುವ ಕ್ಷಣಗಳು ಸೇರಿದ್ದ ಸರ್ವ ಸದಸ್ಯರ ಮತ್ತು ಆಹ್ವಾನಿತರ ಸಭೆಗೆ ಪ್ರಾಪ್ತವಾಗಿತ್ತು. ಶ್ರೀಯುತ ರಾಜೇಂದ್ರರು ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ ಗರಿಷ್ಠ ಮತಗಳಿಕೆಯೊಂದಿಗೆ ಆಯ್ಕೆಯಾದ ಬಾಬ್ತು ಅವರಿಗೆ ಆತ್ಮೀಯವಾದ ಸನ್ಮಾನವೊಂದು ಏರ್ಪಾಡಾಗಿತ್ತು. ನಿರ್ದೇಶಕರಲ್ಲೋರ್ವರಾದ ಶ್ರೀ

ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ ರಾಜೇಂದ್ರ ಪ್ರಸಾದ್ ಶೆಟ್ಟಿ ಆಯ್ಕೆ l ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಿಂದ ಸನ್ಮಾನ Read More »

ಜ.19 : ಎವಿಜಿ ಎಸೋಸಿಯೇಟ್ಸ್ ವತಿಯಿಂದ “ಎವಿಜಿ ಚಿತ್ರೋತ್ಸವ’

ಪುತ್ತೂರು : ರಜತ ಸಂಭ್ರಮದಲ್ಲಿರುವ ಎವಿಜಿ ಎಸೋಸಿಯೇಟ್ಸ್ ವತಿಯಿಂದ “ಎವಿಜಿ ಚಿತ್ರೋತ್ಸವ’ ಜ.19 ಭಾನುವಾರ ಬನ್ನೂರಿನಲ್ಲಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ನಡೆಯುವ ಕಾರ್ಯಕ್ರಮವನ್ನು ಯೋಗದಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದ ಮಿನ್ನಿತ್ ನೀರ್ಪಾಜೆ ಉದ್ಘಾಟಿಸಲಿದ್ದು, ಪುತ್ತೂರು ಬಾಲಾಜಿ ಪೈಂಟ್ಸ್‍ ನ ಕಳುವಾಜೆ ವೆಂಟ್ರಮಣ ಗೌಡ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಪುತ್ತೂರು ಐಕ್ಯಮ್‍ ಅಕಾಡೆಮಿ ಆಫ್‍ ಆರ್ಟ್ಸ್ ನ ನಿರ್ದೇಶಕ ನಿಖಿತಾ ಪಾಣಾಜೆ, ಫೈನ್ ಆರ್ಟ್‍ ಶಿಕ್ಷಕ ಕೆ.ದಿನೇಶ್‍ ವಿಶ್ವಕರ್ಮ ಪಾಲ್ಗೊಳ್ಳುವರು ಎಂದು

ಜ.19 : ಎವಿಜಿ ಎಸೋಸಿಯೇಟ್ಸ್ ವತಿಯಿಂದ “ಎವಿಜಿ ಚಿತ್ರೋತ್ಸವ’ Read More »

ನಾಟಕ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ತಾಲೂಕು ಮಟ್ಟದ ನಾಟಕ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳ ಎರಡೂ ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ನೆಲ್ಲಿಕಟ್ಟೆ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ನಾಟಕ ಪ್ರದರ್ಶನಗೊಂಡಿತ್ತು. ತಂಡವನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ನಾಟಕ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

error: Content is protected !!
Scroll to Top