ಕ್ಯಾಂಪಸ್‌

ಸಂತ ಫಿಲೋಮಿನಾ ಕಾಲೇಜಿನಲ್ಲಿ ಫ್ಯಾಕಲ್ಟಿ ಡೆವಲಪ್‌ಮೆಂಟ್‌ ಕಾರ್ಯಕ್ರಮ

ಪುತ್ತೂರು: ಸಿಬ್ಬಂದಿಗಳು ಸಂಸ್ಥೆಯ ಅಭಿವೃದ್ಧಿ ಹಾಗೂ ಅಭ್ಯುದಯವನ್ನೇ ಗುರಿಯಾಗಿಸಿ ಒಮ್ಮತದಿಂದ ಕರ್ತವ್ಯ ನಿಭಾಯಿಸಿದಲ್ಲಿ ಯಶಸ್ಸು ನಿಶ್ಚಿತ. ಪ್ರತಿಯೋರ್ವ ವ್ಯಕ್ತಿಯೂ ಬದಲಾವಣೆಗೆ ಧನಾತ್ಮಕವಾಗಿ ಸ್ಪಂದಿಸಿದಲ್ಲಿ ಪವಾಡಗಳನ್ನು ಸೃಷ್ಠಿಮಾಡಬಹುದು. ನಮ್ಮಲ್ಲಿ ಆತ್ಮವಿಶ್ವಾಸವಿದ್ದಲ್ಲಿ ನಾವು ಒಳ್ಳೆಯ ವಿಷಯಗಳೆಡೆಗೆ ಮಾತ್ರವೇ ಚಿಂತನೆ ನಡೆಸುವಂತಾಗುತ್ತದೆ. ನಮ್ಮನ್ನು ನಾವು ಪ್ರಶಂಸಿಸಲು ಕಲಿತುಕೊಳ್ಳಬೇಕು. ಯಾವುದೇ ಕಾರಣಕ್ಕೂ ನಮ್ಮನ್ನು ನಾವು ಕೆಳಕ್ಕೆ ತಳ್ಳಬಾರದು. ಧನಾತ್ಮಕವಾಗಿ ಚಿಂತಿಸಿ, ತಂಡವಾಗಿ ಕಾರ್ಯಪ್ರವೃತ್ತರಾದಲ್ಲಿ ಅಸಾಧ್ಯವಾದುದನ್ನು ಸಾಧಿಸಬಹುದು ಎಂದು ವಂ. ಡಾ. ಆ್ಯಂಟನಿ ಪ್ರಕಾಶ್‌ ಮೊಂತೇರೊ ಹೇಳಿದರು. ಸಂತ ಫಿಲೋಮಿನಾ ಕಾಲೇಜಿನ ಸ್ಟಾಫ್‌ ಡೆವಲಪ್‌ಮೆಂಟ್‌ […]

ಸಂತ ಫಿಲೋಮಿನಾ ಕಾಲೇಜಿನಲ್ಲಿ ಫ್ಯಾಕಲ್ಟಿ ಡೆವಲಪ್‌ಮೆಂಟ್‌ ಕಾರ್ಯಕ್ರಮ Read More »

ನರೇಂದ್ರ ಪ.ಪೂ ಕಾಲೇಜಿನಲ್ಲಿ ನಿತ್ಯಜೀವನದಲ್ಲಿ ಪರಿಸರ ಬಗ್ಗೆ ವಿಶೇಷ ಉಪನ್ಯಾಸ

ಪುತ್ತೂರು: ನಾವು ವಾಸಿಸುತ್ತಿರುವ ಸುತ್ತ ಮುತ್ತಲಿನ ವಾತಾವರಣವೇ ನಮ್ಮ ಪರಿಸರ. ಇದು ಮಾನವನ ಸಾಮಾಜಿಕ, ಮಾನಸಿಕ, ದೈಹಿಕ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಸ್ವಚ್ಛ ವಾಗಿರಿಸಿಕೊಳ್ಳುವುದು ನಮ್ಮ ಹೊಣೆ. ಪರಿಸರ ಮಾಲಿನ್ಯ ಮಿತಿಮೀರಿದರೆ ಮಾನವನಿಗೆ ಈ ಪರಿಸರದಲ್ಲಿ ಜೀವಿಸುವುದೇ ಅಸಾಧ್ಯವಾಗುತ್ತದೆ. ಆದುದರಿಂದ  ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಜವಾಬ್ದಾರಿ ನಮ್ಮದಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕ, ಪರಿಸರದ ರಾಜ್ಯ ಸಂಯೋಜಕ ಜಯರಾಮ್ ಬೊಳ್ಳಾಜೆ ಹೇಳಿದರು. ನರೇಂದ್ರ ಪ.ಪೂ. ಕಾಲೇಜಿನಲ್ಲಿ ಇಕೋ ಕ್ಲಬ್ ವತಿಯಿಂದ ಆಯೋಜಿಸಿದ ನಿತ್ಯಜೀವನದಲ್ಲಿ

ನರೇಂದ್ರ ಪ.ಪೂ ಕಾಲೇಜಿನಲ್ಲಿ ನಿತ್ಯಜೀವನದಲ್ಲಿ ಪರಿಸರ ಬಗ್ಗೆ ವಿಶೇಷ ಉಪನ್ಯಾಸ Read More »

ಅಕ್ಷಯ ಕಾಲೇಜಿನಲ್ಲಿ ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಅಳವಡಿಸಿಕೊಂಡು ಇಂದಿನ ಸ್ಪರ್ಧಾತ್ಮಕ ವೃತ್ತಿ ಬದುಕಿನಲ್ಲಿ ಯಶಸ್ವಿ ಕಾಣಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ ಪಕ್ಕಳ ಮಾತನಾಡಿ, ಈ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಸಾಧನೆ ಅಭೂತಪೂರ್ವ ಇದೆ. ಸಾಧನೆ ನಿಮ್ಮ ಭವಿಷ್ಯಧಲ್ಲಿ, ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದರು. ವೇದಿಕೆಯಲ್ಲಿ ಕಾಲೇಜಿನ

ಅಕ್ಷಯ ಕಾಲೇಜಿನಲ್ಲಿ ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ Read More »

ವಿದ್ಯಾರಶ್ಮಿಯಲ್ಲಿ ವಿದ್ಯಾರ್ಥಿ ಸರಕಾರದ ಉದ್ಘಾಟನೆ

ಸವಣೂರು: ಸವಣೂರಿನ ವಿದ್ಯಾರಶ್ಮಿಯಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಸರಕಾರವನ್ನು ಸಂಚಾಲಕರಾದ ಸಹಕಾರಿ ರತ್ನ ಸವಣೂರು ಸೀತಾರಾಮ ರೈಯವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಪ್ರಾಥಮಿಕ ಅರಿವು ಈ ವಿದ್ಯಾರ್ಥಿ ಸರಕಾರದ ಚಟುವಟಿಕೆಗಳ ಸಿಗುತ್ತದೆ. ಈ ಮೂಲಕ ನೀವು ಸಮರ್ಪಕತೆಯನ್ನು ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದರು. ಮುಖ್ಯ ಅತಿಥಿಯವರಾಗಿ ಆಗಮಿಸಿದ್ದ ಸುಳ್ಯದ ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಮಿಥಾಲಿ ಪ್ರಸನ್ನ ಅವರು ಮಾತನಾಡಿ ವಿದ್ಯಾರ್ಥಿ ಸರಕಾರದ ಪದಾಧಿಕಾರಿಗಳು ಯಾವುದೇ ತಪ್ಪು ಮಾಡದೇ

ವಿದ್ಯಾರಶ್ಮಿಯಲ್ಲಿ ವಿದ್ಯಾರ್ಥಿ ಸರಕಾರದ ಉದ್ಘಾಟನೆ Read More »

ಅಂಬಿಕಾದಲ್ಲಿ ನೀಟ್ ರಿಪೀಟರ್ಸ್ ಬ್ಯಾಚ್ ತರಗತಿಗಳಿಗೆ ಚಾಲನೆ

ಪುತ್ತೂರು: ದೃಢ ನಿಶ್ಚಯ ಮಾಡಿ ಛಲದಿಂದ ಮುನ್ನುಗ್ಗಿದಾಗ ಯಶಸ್ಸು ಸಾಧ್ಯ. ಆ ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರಯತ್ನಪಡಬೇಕು. ಪರಿಶ್ರಮವಿಲ್ಲದೆ ಫಲ ದೊರಕುವುದಕ್ಕೆ ಸಾಧ್ಯವಿಲ್ಲ. ಆದ್ದರಿಂದ ನಮ್ಮ ಗುರಿಯೆಡೆಗೆ ನಿರಂತರವಾದ ನಡಿಗೆಯನ್ನು ನಾವು ನಡೆಸುತ್ತಿರಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್.ನಟ್ಟೋಜ ಹೇಳಿದರು. ಅವರು ಅಂಬಿಕಾ ನೀಟ್ ಅಕಾಡೆಮಿ ವತಿಯಿಂದ ಆಯೋಜಿಸಲಾದ ನೀಟ್ ಮರುಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ದೀರ್ಘಾವಧಿ ತರಗತಿಗಳನ್ನು ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಉದ್ಘಾಟಿಸಿ ಮಾತನಾಡಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ,

ಅಂಬಿಕಾದಲ್ಲಿ ನೀಟ್ ರಿಪೀಟರ್ಸ್ ಬ್ಯಾಚ್ ತರಗತಿಗಳಿಗೆ ಚಾಲನೆ Read More »

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ

ಪುತ್ತೂರು: ಶಾಲಾ ಜೀವನದಲ್ಲಿಯೇ ಮಕ್ಕಳಿಗೆ ಚುನಾವಣಾ ಅರಿವು ಮೂಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ಚುನಾವಣೆಯ ಮೂಲಕ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ ಪ್ರಕ್ರಿಯೆ ನಡೆಯಿತು. ಪ್ರೌಢ ಶಾಲಾ ವಿಭಾಗದಲ್ಲಿ ವಿದ್ಯಾರ್ಥಿ ನಾಯಕನಾಗಿ 10ನೇ ತರಗತಿಯ ಆಕಾಶ್ ಪ್ರಭು, ಉಪನಾಯಕಿಯಾಗಿ 9 ನೇ ತರಗತಿಯ ಸುಪ್ರಜಾ ರಾವ್ ಆಯ್ಕೆಯಾದರು. ಪ್ರಾಥಮಿಕ ಶಾಲಾ ವಿಭಾಗದಲ್ಲಿ ವಿದ್ಯಾರ್ಥಿ ನಾಯಕನಾಗಿ 7ನೇ ತರಗತಿಯ ಸಾಕ್ಷಿನ್ ಆರ್.ರೈ, ಉಪನಾಯಕನಾಗಿ 6 ನೇ ತರಗತಿಯ ಸ್ಕಂದನ್ ಎಸ್. ಆಯ್ಕೆಯಾದರು. ಸಭಾಪತಿಯಾಗಿ ವರ್ಣಾ.ಕೆ,

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ Read More »

ಸಂತ ಫಿಲೋಮಿನಾ ಕಾಲೇಜಿನಿಂದ ಉಚಿತ ಆರೋಗ್ಯ ಮತ್ತು ದಂತ ತಪಾಸಣೆ ಶಿಬಿರ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ, ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಹಾಗೂ ಅರಿಯಡ್ಕ ಗ್ರಾಮ ಪಂಚಾಯತ್‌ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ  ಎ.ಜೆ. ಶೆಟ್ಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ಮತ್ತು ದಂತ ತಪಾಸಣೆ ಶಿಬಿರವನ್ನು ಪಾಪೆಮಜಲು ಹಿ.ಪ್ರಾ. ಶಾಲೆಯಲ್ಲಿ ನಡೆಯಿತು. ಸವಣೂರಿನ ವಿದ್ಯಾ ರಶ್ಮಿ ವಿದ್ಯಾಲಯದ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಶಿಬಿರ ಉದ್ಘಾಟಿಸಿದರು. ಮಂಗಳೂರು ಎ.ಜೆ. ಶೆಟ್ಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಎಂಡಿಎಸ್‌ ವಿಭಾಗದ

ಸಂತ ಫಿಲೋಮಿನಾ ಕಾಲೇಜಿನಿಂದ ಉಚಿತ ಆರೋಗ್ಯ ಮತ್ತು ದಂತ ತಪಾಸಣೆ ಶಿಬಿರ Read More »

ಅಂಬಿಕಾ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ

ಪುತ್ತೂರು: ಮನಸ್ಸನ್ನು ಹಿಡಿತದಲ್ಲಿಟ್ಟುಕೊಳ್ಳಲು ಯೋಗ ಅತ್ಯಗತ್ಯ. ಯೋಗದ ಯಾವುದೇ ಪ್ರಕಾರಗಳಿರಲಿ ಆಸನ, ಪ್ರಾಣಾಯಾಮ, ಏಕಾಗ್ರತೆಯೊಂದಿಗೆ ಮಾಡುವ ಧ್ಯಾನ ಎಲ್ಲದರಲ್ಲೂ ಮೂಲವಾಗಿರುವಂತಹದ್ದು ಉಸಿರಾಟ.  ಉಸಿರಾಟ ಶರೀರದ ಎಲ್ಲ ಕೆಲಸಗಳನ್ನು ನಿಯಂತ್ರಿಸುವುದು, ಶರೀರ ಮತ್ತು ಮನಸ್ಸಿನ ಏರುಪೇರನ್ನು ನಿಯಂತ್ರಿಸುವುದು. ಯೋಗವು ಆಸನ, ಪ್ರಾಣಾಯಾಮ, ಧ್ಯಾನ, ಆಹಾರ ಪದ್ಧತಿ, ಜೀವನ ಶೈಲಿ ಎಲ್ಲವನ್ನು ಒಳಗೊಂಡಿರುವುದು ಎಂದು ಯೋಗಾರೋಗ್ಯ ಸಂಸ್ಥೆಯ ಚಿಕಿತ್ಸಕ, ಯೋಗ ತಜ್ಞ ಡಾ. ಉದಯ ಕುಮಾರ್ ಕೆ. ಹೇಳಿದರು. ಅವರು ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ

ಅಂಬಿಕಾ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ Read More »

ಸಂತ ಫಿಲೋಮಿನಾ ಕಾಲೇಜಿನ ಬಿಬಿಎ ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಗಾಗಿ ಕೈಗಾರಿಕಾ ಭೇಟಿ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಪ್ರಥಮ ಮತ್ತು ದ್ವಿತೀಯ ಬಿಬಿಎ ವಿದ್ಯಾರ್ಥಿಗಳು ಇತ್ತೀಚೆಗೆ ಮಂಗಳೂರಿನ ಕೊಣಾಜೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡೆಕ್ಕನ್ ಪ್ಲಾಸ್ಟ್ ಕೈಗಾರಿಕೆಗೆ ಭೇಟಿ ನೀಡಿದರು. ಕೈಗಾರಿಕೆ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಕೈಗಾರಿಕೆ ಬಗ್ಗೆ ಮಾಹಿತಿ ನೀಡಿದರು. ವಿವಿಧ ಬಗೆಯ ಚೇರ್ಸ್, ಟೇಬಲ್ಸ್ ಬೇಬಿ ಚೇರ್, ಟಬ್ಸ್, ಕಂಟೈನರ್ ಗಳ ತಯಾರಿಕೆಗಳ ಬಗ್ಗೆ ಮಾಹಿತಿ ನೀಡಿ ವಸ್ತುಗಳು ಹೇಗೆ ತಯಾರಾಗುತ್ತದೆ ಎಂದು ತೋರಿಸಿಕೊಟ್ಟರು. ಸುಮಾರು 8 ಕೂ ಹೆಚ್ಚು ಮಶೀನ್ ಗಳ ಕಾರ್ಯ ವೈಖರಿ ಬಗ್ಗೆ

ಸಂತ ಫಿಲೋಮಿನಾ ಕಾಲೇಜಿನ ಬಿಬಿಎ ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಗಾಗಿ ಕೈಗಾರಿಕಾ ಭೇಟಿ Read More »

ಎಸ್.ಸಿ.ಐ. ಪುತ್ತೂರು ವತಿಯಿಂದ ನೋಟ್ ಪುಸ್ತಕ, ಲೇಖನಿ ವಿತರಣೆ

ಪುತ್ತೂರು: ಸಂಟ್ಯಾರು ಉನ್ನತ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ  ಸೀನಿಯರ್ ಚೇಂಬರ್  ಇಂಟರ್  ನ್ಯಾಷನಲ್ ಪುತ್ತೂರು ಲೀಜನ್ ಹಾಗೂ ಸ್ಪಂದನ ಟ್ರಸ್ಟ್ ವತಿಯಿಂದ ಸುಮಾರು ₹10000 /- ಮೌಲ್ಯದ ಪೆನ್ ಮತ್ತು ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಸೀನಿಯರ್ ಚೇಂಬರ್ ಇಂಟರ್  ನ್ಯಾಷನಲ್ ಪುತ್ತೂರು ಅಧ್ಯಕ್ಷೆ ಮಲ್ಲಿಕಾ ಜೆ ಆರ್. ರೈ, ಕಾರ್ಯದರ್ಶಿ ರೋಹಿಣಿ ಆಚಾರ್ಯ, ಕೋಶಾಧಿಕಾರಿ ಸುಮಂಗಲ ಶಣೈ, ಶಾರದಾ ಪ್ರಭು ಹಾಗೂ ಸದಸ್ಯರು, ಸ್ಪಂದನ ಟ್ರಸ್ಟ್ ನ ಅಧ್ಯಕ್ಷೆ ಸುಮಿತ್ರ, ಕೋಶಾಧಿಕಾರಿ ಕಾವ್ಯ, ಸದಸ್ಯ ಅವಿನಾಶ್,

ಎಸ್.ಸಿ.ಐ. ಪುತ್ತೂರು ವತಿಯಿಂದ ನೋಟ್ ಪುಸ್ತಕ, ಲೇಖನಿ ವಿತರಣೆ Read More »

error: Content is protected !!
Scroll to Top