ಕ್ಯಾಂಪಸ್‌

ಅಂಬಿಕಾ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ

ಪುತ್ತೂರು: ಮನಸ್ಸನ್ನು ಹಿಡಿತದಲ್ಲಿಟ್ಟುಕೊಳ್ಳಲು ಯೋಗ ಅತ್ಯಗತ್ಯ. ಯೋಗದ ಯಾವುದೇ ಪ್ರಕಾರಗಳಿರಲಿ ಆಸನ, ಪ್ರಾಣಾಯಾಮ, ಏಕಾಗ್ರತೆಯೊಂದಿಗೆ ಮಾಡುವ ಧ್ಯಾನ ಎಲ್ಲದರಲ್ಲೂ ಮೂಲವಾಗಿರುವಂತಹದ್ದು ಉಸಿರಾಟ.  ಉಸಿರಾಟ ಶರೀರದ ಎಲ್ಲ ಕೆಲಸಗಳನ್ನು ನಿಯಂತ್ರಿಸುವುದು, ಶರೀರ ಮತ್ತು ಮನಸ್ಸಿನ ಏರುಪೇರನ್ನು ನಿಯಂತ್ರಿಸುವುದು. ಯೋಗವು ಆಸನ, ಪ್ರಾಣಾಯಾಮ, ಧ್ಯಾನ, ಆಹಾರ ಪದ್ಧತಿ, ಜೀವನ ಶೈಲಿ ಎಲ್ಲವನ್ನು ಒಳಗೊಂಡಿರುವುದು ಎಂದು ಯೋಗಾರೋಗ್ಯ ಸಂಸ್ಥೆಯ ಚಿಕಿತ್ಸಕ, ಯೋಗ ತಜ್ಞ ಡಾ. ಉದಯ ಕುಮಾರ್ ಕೆ. ಹೇಳಿದರು. ಅವರು ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ […]

ಅಂಬಿಕಾ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ Read More »

ಸಂತ ಫಿಲೋಮಿನಾ ಕಾಲೇಜಿನ ಬಿಬಿಎ ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಗಾಗಿ ಕೈಗಾರಿಕಾ ಭೇಟಿ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಪ್ರಥಮ ಮತ್ತು ದ್ವಿತೀಯ ಬಿಬಿಎ ವಿದ್ಯಾರ್ಥಿಗಳು ಇತ್ತೀಚೆಗೆ ಮಂಗಳೂರಿನ ಕೊಣಾಜೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡೆಕ್ಕನ್ ಪ್ಲಾಸ್ಟ್ ಕೈಗಾರಿಕೆಗೆ ಭೇಟಿ ನೀಡಿದರು. ಕೈಗಾರಿಕೆ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಕೈಗಾರಿಕೆ ಬಗ್ಗೆ ಮಾಹಿತಿ ನೀಡಿದರು. ವಿವಿಧ ಬಗೆಯ ಚೇರ್ಸ್, ಟೇಬಲ್ಸ್ ಬೇಬಿ ಚೇರ್, ಟಬ್ಸ್, ಕಂಟೈನರ್ ಗಳ ತಯಾರಿಕೆಗಳ ಬಗ್ಗೆ ಮಾಹಿತಿ ನೀಡಿ ವಸ್ತುಗಳು ಹೇಗೆ ತಯಾರಾಗುತ್ತದೆ ಎಂದು ತೋರಿಸಿಕೊಟ್ಟರು. ಸುಮಾರು 8 ಕೂ ಹೆಚ್ಚು ಮಶೀನ್ ಗಳ ಕಾರ್ಯ ವೈಖರಿ ಬಗ್ಗೆ

ಸಂತ ಫಿಲೋಮಿನಾ ಕಾಲೇಜಿನ ಬಿಬಿಎ ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಗಾಗಿ ಕೈಗಾರಿಕಾ ಭೇಟಿ Read More »

ಎಸ್.ಸಿ.ಐ. ಪುತ್ತೂರು ವತಿಯಿಂದ ನೋಟ್ ಪುಸ್ತಕ, ಲೇಖನಿ ವಿತರಣೆ

ಪುತ್ತೂರು: ಸಂಟ್ಯಾರು ಉನ್ನತ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ  ಸೀನಿಯರ್ ಚೇಂಬರ್  ಇಂಟರ್  ನ್ಯಾಷನಲ್ ಪುತ್ತೂರು ಲೀಜನ್ ಹಾಗೂ ಸ್ಪಂದನ ಟ್ರಸ್ಟ್ ವತಿಯಿಂದ ಸುಮಾರು ₹10000 /- ಮೌಲ್ಯದ ಪೆನ್ ಮತ್ತು ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಸೀನಿಯರ್ ಚೇಂಬರ್ ಇಂಟರ್  ನ್ಯಾಷನಲ್ ಪುತ್ತೂರು ಅಧ್ಯಕ್ಷೆ ಮಲ್ಲಿಕಾ ಜೆ ಆರ್. ರೈ, ಕಾರ್ಯದರ್ಶಿ ರೋಹಿಣಿ ಆಚಾರ್ಯ, ಕೋಶಾಧಿಕಾರಿ ಸುಮಂಗಲ ಶಣೈ, ಶಾರದಾ ಪ್ರಭು ಹಾಗೂ ಸದಸ್ಯರು, ಸ್ಪಂದನ ಟ್ರಸ್ಟ್ ನ ಅಧ್ಯಕ್ಷೆ ಸುಮಿತ್ರ, ಕೋಶಾಧಿಕಾರಿ ಕಾವ್ಯ, ಸದಸ್ಯ ಅವಿನಾಶ್,

ಎಸ್.ಸಿ.ಐ. ಪುತ್ತೂರು ವತಿಯಿಂದ ನೋಟ್ ಪುಸ್ತಕ, ಲೇಖನಿ ವಿತರಣೆ Read More »

ಬೆಥನಿ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ರಕ್ಷಕ ಶಿಕ್ಷಕ ಸಂಘದ ಮಹಾಸಭೆ

ಪುತ್ತೂರು: ದರ್ಬೆ ಪಾಂಗ್ಲಾಯ್ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ರಕ್ಷಕ – ಶಿಕ್ಷಕ ಸಂಫದ ಮಹಾಸಭೆ ಶನಿವಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಉಪನ್ಯಾಸಕ ಪ್ರೋ. ಸೆವ್ರಿನ್ ಪಿಂಟೊ ಮಾತನಾಡಿ, ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಪೋಷಕರು ಮತ್ತು ಶಿಕ್ಷಕರು ಎರಡು ಕಂಬಗಳಿದ್ದಂತೆ. ಎರಡು ಕಂಬಗಳಲ್ಲಿ ಒಂದು ಅಲ್ಲಾಡಿದರೂ ಮಕ್ಕಳ ಭವಿಷ್ಯಕ್ಕೆ ಅಪಾಯಕಾರಿ. ಆ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರು ಎಚ್ಚರಿಕೆಯಿಂದ ಕಾರ್ಯಪ್ರವೃತ್ತರಾಗಬೇಕು. ಮಕ್ಕಳ ಶೈಕ್ಷಣಿಕ ಪಯಣ ಅತೀ ಅಮೂಲ್ಯ ಈ

ಬೆಥನಿ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ರಕ್ಷಕ ಶಿಕ್ಷಕ ಸಂಘದ ಮಹಾಸಭೆ Read More »

ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ವಿಶ್ವ ಯೋಗ ದಿನಾಚರಣೆ

ಪುತ್ತೂರು: ಕೃಷ್ಣ ನಗರದ ಅಲುಂಬುಡದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಶಿಕ್ಷಕ ಹರಿಪ್ರಸಾದ್ ಪಿ.ಕೆ. ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯೋಗದಿಂದ ನಮ್ಮ ಶಾರೀರಿಕ ಹಾಗೂ ಮಾನಸಿಕ ಸಮತೋಲನವನ್ನು ಕಾಯ್ದುಕೊಳ್ಳುವ ಮೂಲಕ ಒತ್ತಡ ರಹಿತ ಬದುಕನ್ನು ನಡೆಸಬಹುದು ಎಂದರು. ಅಧ್ಯಕ್ಷತೆ ವಹಿಸಿದ್ದ ಎವಿಜಿ ಶಾಲಾ ಅಧ್ಯಕ್ಷರ ವೆಂಕಟರಮಣ ಗೌಡ ಕಳುವಾಜೆ ಶುಭ ಹಾರೈಸಿದರು. ಯೋಗ ತರಬೇತಿದಾರರಾಗಿ ಲಲಿತ, ಸತೀಶ್ ವೇದಿಕೆಯಲ್ಲಿ

ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ವಿಶ್ವ ಯೋಗ ದಿನಾಚರಣೆ Read More »

ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಮಾಣಿಲ: ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ, ಯೋಗ ಗುರು ವಿಶ್ವೇಶ್ವರ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ವಿವರಿಸಿ, ಹಲವು ಯೋಗಾಸನ ಹಾಗೂ ಪ್ರಾಣಾಯಾಮಗಳ ಅಭ್ಯಾಸ ಮಾಡಿಸಿದರು.    ಮಾಣಿಲ ಗ್ರಾಪಂ ಅಧ್ಯಕ್ಷ ಶ್ರೀಧರ ಬಾಳೆಕಲ್ಲು, ಸದಸ್ಯ ರಾಜೇಶ್ ಬಾಳೆಕಲ್ಲು ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಮುಖ್ಯಶಿಕ್ಷಕಿ ಲತಾ ಯು. ವಹಿಸಿದ್ದರು. ಯೋಗ ಗುರು ವಿಶ್ವೇಶ್ವರ ಭಟ್ , ಎಸ್ ಡಿ ಎಂ ಸಿ ಸದಸ್ಯ

ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ Read More »

ವೀರಮಂಗಲ ಶಾಲೆಗೆ ಯೋಗ ಟೀ ಶರ್ಟ್ ಕೊಡುಗೆ

ವೀರಮಂಗಲ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವೀರಮಂಗಲ ಇದರ ವತಿಯಿಂದ ಪಿಎಂಶ್ರೀ ವೀರಮಂಗಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ   ಯೋಗ ಟೀ ಶರ್ಟ್ ಕೊಡುಗೆಯಾಗಿ ನೀಡಲಾಯಿತು. ಪುತ್ತಿಲ ಪರಿವಾರದ ಮುಖ್ಯಸ್ಥರಾದ ಅರುಣ್ ಕುಮಾರ್ ಪುತ್ತಿಲ ಮಕ್ಕಳಿಗೆ ಟೀ ಶರ್ಟ್ ವಿತರಿಸಿ ಶುಭಹಾರೈಸಿದರು. ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರವಿಣ್ ಮಾರ್ತ, ಕಾರ್ಯದರ್ಶಿ ಉಮೇಶ್ ಕೋಡಿಬೈಲು, ಮಹಾವಿಷ್ಣು ಸೇವಾ ಟ್ರಸ್ಟ್ ಆನಾಜೆ ಇದರ ಅಧ್ಯಕ್ಷ ಗೋಪಾಲಕೃಷ್ಣ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್  ನ ಟ್ರಸ್ಟಿಗಳು ಉಪಸ್ಥಿತರಿದ್ದರು. ಶಾಲಾ ವತಿಯಿಂದ

ವೀರಮಂಗಲ ಶಾಲೆಗೆ ಯೋಗ ಟೀ ಶರ್ಟ್ ಕೊಡುಗೆ Read More »

ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕ ಭಾಸ್ಕರ್ ಆಚಾರ್ ಹಿಂದಾರ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಜಯಮಾಲಾ ಮಾತನಾಡಿ, ಯೋಗವು ಮನುಷ್ಯನ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ಪ್ರತಿನಿತ್ಯ ಯೋಗ ಮಾಡುವ ಮೂಲಕ ಆರೋಗ್ಯ ವೃದ್ಧಿಸಬಹುದು ಎಂದು ಹೇಳಿದರು. ಯೋಗ ಶಿಕ್ಷಕರುಗಳಾದ ನವೀನ್ ಕುಮಾರ್, ವೀಣಾ ವಿದ್ಯಾರ್ಥಿಗಳಿಗೆ ಯೋಗದ ವಿಶೇಷತೆಗಳನ್ನು ತಿಳಿಸಿ ಸಾಮೂಹಿಕ ಯೋಗಾಭ್ಯಾಸಗಳನ್ನು ನಡೆಸಿಕೊಟ್ಟರು.

ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ವಿದ್ಯಾರ್ಥಿಗಳು ನೈಜ ನಾಯಕರಂತೆ ಮುನ್ನಡೆಯಬೇಕು | ಅಂಬಿಕಾ ಪ.ಪೂ ವಿದ್ಯಾಲಯದಲ್ಲಿ ವಿದ್ಯಾರ್ಥಿ ನಾಯಕರ ಪ್ರಮಾಣವಚನದಲ್ಲಿ ಸುಬೇದಾರ್ ರಮೇಶ್ ಬಾಬು

ಪುತ್ತೂರು: ವಿದ್ಯಾರ್ಥಿಗಳು ನಾಯಕತ್ವ ಬೆಳೆಸಿಕೊಂಡು ತಮ್ಮಿಂದಾದ ಉತ್ಕ್ರಷ್ಟ ಪ್ರಯತ್ನ ಮಾಡುವುದಲ್ಲದೆ ತಾವು ವಿದ್ಯಾಭ್ಯಾಸಗೈಯುವ ವಿದ್ಯಾದೇಗುಲದ ಒಳಿತಿಗಾಗಿಯೂ ಚಿಂತನೆ ನಡೆಸಬೇಕು ಎಂದು ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಸುಬೇದಾರ್ ರಮೇಶ್ ಬಾಬು ಪಿ. ಹೇಳಿದರು. ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಆಯೋಜಿಸಲಾದ ಕಾಲೇಜು ಸಂಸತ್ತಿನ ಪದಗ್ರಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಜಾಪ್ರಭುತ್ವದಲ್ಲಿ ಹೇಗೆ ನಾಯಕರು ಮತ್ತು ಪ್ರಜೆಗಳ ಒಡನಾಟ, ಚರ್ಚೆ, ತೀರ್ಮಾನ ಕೈಗೊಳ್ಳುವ ಪರಿ ನಡೆಯುತ್ತದೆಯೋ ಅದೇ ರೀತಿ ವಿದ್ಯಾರ್ಥಿ ನಾಯಕರೂ ಮುನ್ನಡೆಯಬೇಕು ಎಂದು

ವಿದ್ಯಾರ್ಥಿಗಳು ನೈಜ ನಾಯಕರಂತೆ ಮುನ್ನಡೆಯಬೇಕು | ಅಂಬಿಕಾ ಪ.ಪೂ ವಿದ್ಯಾಲಯದಲ್ಲಿ ವಿದ್ಯಾರ್ಥಿ ನಾಯಕರ ಪ್ರಮಾಣವಚನದಲ್ಲಿ ಸುಬೇದಾರ್ ರಮೇಶ್ ಬಾಬು Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಶ್ವಯೋಗ ದಿನಾಚರಣೆ

ಪುತ್ತೂರು: ಯೋಗಾಭ್ಯಾಸ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಸಾಧನ. ಯೋಗದ ನಿರಂತರ ಅಭ್ಯಾಸದಿಂದ ಮನೋನಿಯಂತ್ರಣ, ಇಂದ್ರಿಯ ನಿಗ್ರಹ, ಅಧಿಕ ಕಾರ್ಯೋತ್ಸಾಹ ಮೊದಲಾದ ಸಾಮರ್ಥ್ಯಗಳನ್ನು ಬೆಳೆಸಿಕೊಳ್ಳಬಹುದು. ಪಾರಮಾರ್ಥಿಕ ಸತ್ಯದೆಡೆಗೆ, ಆತ್ಮದ ಅರಿವನ್ನು ಪಡೆಯುವುದರೆಡೆಗೆ ಸಾಗಲು ಮನುಷ್ಯರಿಗೆ ನೆರವಾಗುವಂತದ್ದೆಲ್ಲವೂ ಯೋಗವೇ ಎಂದು ಪುತ್ತೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಯೋಗಶಿಕ್ಷಕಿ ಶರಾವತಿ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿಶ್ವಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಯೋಗದ ಪ್ರಾಮುಖ್ಯತೆ ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಮಾತನಾಡಿ, ,ವಾಸ್ತವವಾಗಿ ಯೋಗ ಎಂಬುದು

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಶ್ವಯೋಗ ದಿನಾಚರಣೆ Read More »

error: Content is protected !!
Scroll to Top