ಕ್ಯಾಂಪಸ್‌

ಪ್ರೊ.ಶ್ರೀಕಾಂತ್ ರಾವ್ ಎಸ್‍.ಕೆ. ಅವರಿಗೆ ಡಾಕ್ಟರೇಟ್ ಪದವಿ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥ ಪ್ರೊ.ಶ್ರೀಕಾಂತ್ ರಾವ್.ಎಸ್.ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಕಂಪ್ಯೂಟರ್ ಎಯ್ಡೆಡ್ ಡಯಾಗ್ನೋಸಿಸ್ ಆಫ್ ಏಟ್ರಿಯಲ್ ಫೈಬ್ರಿಲ್ಲೇಶನ್ ಯೂಸಿಂಗ್ ಮೆಷಿನ್ ಲರ್ನಿಂಗ್ ಎಪ್ರೋಚ್ ಎಂಬ ವಿಷಯದ ಬಗ್ಗೆ ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯ ಅಸೋಸಿಯೇಟ್ ಪ್ರೊಫೆಸರ್ ಡಾ.ರೋಶನ್ ಜಾಯ್ ಮಾರ್ಟಿಸ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಮಾಡಿದ್ದಾರೆ. ಅವರು ಪ್ರಸ್ತುತ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ […]

ಪ್ರೊ.ಶ್ರೀಕಾಂತ್ ರಾವ್ ಎಸ್‍.ಕೆ. ಅವರಿಗೆ ಡಾಕ್ಟರೇಟ್ ಪದವಿ Read More »

ನವೋದಯ ಪ್ರವೇಶ ಪರೀಕ್ಷೆ: ವಿದ್ಯಾಮಾತಾ ಅಕಾಡೆಮಿಯ ತನ್ಮಯ್ ಪಿ.ಎಂ. ಜಿಲ್ಲೆಗೆ ದ್ವಿತೀಯ ಸ್ಥಾನ

ಪುತ್ತೂರು : ದಕ್ಷಿಣ ಕನ್ನಡದ ಪ್ರತಿಷ್ಟಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಜವಾಹರ್ ನವೋದಯ ವಸತಿ ಶಾಲಾ ಪ್ರವೇಶ ಪರೀಕ್ಷೆಗೆ ತರಬೇತಿ ಪಡೆದ ಸುಳ್ಯ ವಲಯ ಅರಣ್ಯಾಧಿಕಾರಿ ಎನ್ ಮಂಜುನಾಥ್ ರವರ ಪುತ್ರ ತನ್ಮಯ್ ಪಿ.ಎಂ. ಅವರು ಅತ್ಯುನ್ನತ ಶ್ರೇಣಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದು ಉತ್ತೀರ್ಣರಾಗಿದ್ದಾರೆ. ತನ್ಮಯ್ ಕಳೆದ ವಾರವಾಷ್ಟೇ ಪ್ರಕಟವಾಗಿದ್ದ ಸೈನಿಕ ಶಾಲಾ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾಮಾತಾ ಅಕಾಡೆಮಿಯಲ್ಲೇ ತರಬೇತಿ ಪಡೆದು ಉತ್ತೀರ್ಣರಾಗಿದ್ದು ಗಮನಾರ್ಹ ಅಂಶವಾಗಿದೆ. ಅತೀ ಕಡಿಮೆ

ನವೋದಯ ಪ್ರವೇಶ ಪರೀಕ್ಷೆ: ವಿದ್ಯಾಮಾತಾ ಅಕಾಡೆಮಿಯ ತನ್ಮಯ್ ಪಿ.ಎಂ. ಜಿಲ್ಲೆಗೆ ದ್ವಿತೀಯ ಸ್ಥಾನ Read More »

ರಜಾ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ ಶಿಬಿರ ಸ್ಪರ್ಧಾತ್ಮಕ ಮತ್ತು ಪ್ರವೇಶ ಪರೀಕ್ಷೆಗಳು |  ವಿದ್ಯಾರ್ಥಿವೇತನಗಳಿಗಾಗಿ ವಿದ್ಯಾಮಾತಾ ಅಕಾಡೆಮಿಯಲ್ಲಿ ವಿಶಿಷ್ಟ ತರಬೇತಿ ಶಿಬಿರ

ಪುತ್ತೂರು: ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು 5ನೇ ತರಗತಿ ವಿದ್ಯಾರ್ಥಿಗಳಿಂದ ಪಿಯುಸಿ ವರೆಗಿನ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯಕೊಂದು ಅಡಿಗಲ್ಲು ಹಾಕುವ ನಿಟ್ಟಿನಲ್ಲಿ ವಿಶಿಷ್ಟವಾದ ತರಬೇತಿ ಶಿಬಿರವನ್ನು ಆಯೋಜಿಸುತ್ತಿದೆ. ನವೋದಯ /ಸೈನಿಕ್ / ಆದರ್ಶ / ಮೊರಾರ್ಜಿ / ಒಲಂಪಿಯಾಡ್ ಪ್ರವೇಶ ಪರೀಕ್ಷೆಗಳು ಮತ್ತು ಜೆಇಇ / ನೀಟ್ / ಎನ್ ಡಿ ಎ / ಕ್ಲಾಟ್ / ಎನ್.ಎಂ.ಎಂ.ಎಸ್ / ಕೆ.ಎ.ಎಸ್ / ಐ.ಎ.ಎಸ್ ವರೆಗಿನ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ರಿಲಯನ್ಸ್

ರಜಾ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ ಶಿಬಿರ ಸ್ಪರ್ಧಾತ್ಮಕ ಮತ್ತು ಪ್ರವೇಶ ಪರೀಕ್ಷೆಗಳು |  ವಿದ್ಯಾರ್ಥಿವೇತನಗಳಿಗಾಗಿ ವಿದ್ಯಾಮಾತಾ ಅಕಾಡೆಮಿಯಲ್ಲಿ ವಿಶಿಷ್ಟ ತರಬೇತಿ ಶಿಬಿರ Read More »

ನೇಲ್ಯಡ್ಕ ಶಾಲೆಯಲ್ಲಿ ನಡೆದ ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ 2024ನೇ ಸಾಲಿನ ಎನ್‍.ಎಸ್‍.ಎಸ್‍ ವಾರ್ಷಿಕ ಶಿಬಿರ

ಸವಣೂರು: ಸವಣೂರು ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2024ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಭಾನುವಾರ ಕಡಬ ತಾಲೂಕಿನ ನೇಲ್ಯಡ್ಕ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸುಬ್ರಹ್ಮಣ್ಯ ಕಣ್ಕಲ್ ದೀಪ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ನಿರಂಜನ್ ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಕೆ.ರಘುನಾಥ ರೈ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಗ್ರಾಮದಲ್ಲಿ ಬರುವ ಏಳು ಶಾಲೆಗಳ ಪೈಕಿ ಆರು ಶಾಲೆಗಳಲ್ಲಿ ಮಾತ್ರ

ನೇಲ್ಯಡ್ಕ ಶಾಲೆಯಲ್ಲಿ ನಡೆದ ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ 2024ನೇ ಸಾಲಿನ ಎನ್‍.ಎಸ್‍.ಎಸ್‍ ವಾರ್ಷಿಕ ಶಿಬಿರ Read More »

‘ಮೌನ ದೊಳಗಿನ ಮಾತು ‘ ಕವನ ಸಂಕಲನ ಬಿಡುಗಡೆ

ಪುತ್ತೂರು: ಅಮೃತ ಪ್ರಕಾಶನ ಪತ್ರಿಕೆಯಿಂದ ಸರಣಿ ಕೃತಿ ಬಿಡುಗಡೆ 39ನೇ ಕೃತಿ ಸಪ್ನ ದಿನಕರ್ ಅವರ ‘ಮೌನದೊಳಗಿನ ಮಾತು ‘ ಕವನ ಸಂಕಲನವನ್ನು  ಲೇಖಕಿ, ವಿಮರ್ಶಕಿ ವಿದ್ಯಾ ನಾಯಕ್ ಬಿಡುಗಡೆಗೊಳಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ ಹರೀಶ್ ರೈ ವಹಿಸಿದರು. ಮುಖ್ಯ ಅತಿಥಿಗಳಾಗಿ ಯುಗ ಪುರುಷ ಪತ್ರಿಕೆ ಸಂಪಾದಕ ಕುಡೆತ್ತೂರು ಭುವನಾಭಿರಾಮ ಉಡುಪ, ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಲೇಖಕಿ ವೀಣಾ ಟಿ. ಶೆಟ್ಟಿ, ಕವಿಯತ್ರಿ, ಶಿಕ್ಷಕಿ ಸುಧಾ ನಾಗೇಶ್ 

‘ಮೌನ ದೊಳಗಿನ ಮಾತು ‘ ಕವನ ಸಂಕಲನ ಬಿಡುಗಡೆ Read More »

ವಿವೇಕಾನಂದ ಕಾಲೇಜಿನ ನವೀಕೃತ ಜಾಲತಾಣ ಲೋಕಾರ್ಪಣೆ

ಪುತ್ತೂರು: ಆಧುನಿಕ ಯುಗದಲ್ಲಿ ಸಂಸ್ಥೆಯ ಬೆಳವಣಿಗೆಗೆ ವೆಬ್ಸೈಟ್ ತುಂಬಾ ಪ್ರಾಮುಖ್ಯತೆಯನ್ನು ವಹಿಸುತ್ತದೆ. ಬಹಳ ವೇಗವಾಗಿ ಬದಲಾಗುವ ತಂತ್ರಜ್ಞಾನವನ್ನು ನಾವು ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಮತ್ತು ಸಮಾಜಕ್ಕೆ ಪರೀಕ್ಷೆಯ ವೇಳಾಪಟ್ಟಿಗಳು, ಶೈಕ್ಷಣಿಕ ನೆರವು, ಕೋರ್ಸ್ ವಿವರಣೆಗಳು ಮತ್ತು ಇತರ ಪ್ರಮುಖ ಪ್ರಕಟಣೆಗಳ ವಿವರಗಳನ್ನು ನೀಡಬಹುದು. ಈ ಮೂಲಕ ಕಾಲೇಜಿನ ಎಲ್ಲಾ ಮಾಹಿತಿ ಅಂಗೈ ಅಂಗಳದಲ್ಲೆ ದೊರಕುವುದು ಎಂದು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ  ಡಾ ಶ್ರೀಪತಿ ಕಲ್ಲೂರಾಯ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಐಕ್ಯೂಎಸಿ ಇದರ

ವಿವೇಕಾನಂದ ಕಾಲೇಜಿನ ನವೀಕೃತ ಜಾಲತಾಣ ಲೋಕಾರ್ಪಣೆ Read More »

ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಕಾಲೇಜಿಗೆ ದ್ವಿತೀಯ ಪ್ರಶಸ್ತಿ

ಪುತ್ತೂರು: ಮಂಗಳೂರಿನ ಸಂತ ಅಲೋಷಿಯಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಪದವಿ ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಕಾಲೇಜು ದ್ವಿತೀಯ ಸ್ಥಾನ ಪಡೆದಿದೆ. ಪುತ್ತೂರಿನ ವಿವೇಕಾನಂದ ಕಾಲೇಜಿನ (ಸ್ವಾಯತ್ತ) ಮಹಿಳಾ ತಂಡ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿದೆ. ತಂಡಕ್ಕೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ವಿ.ಎಸ್, ಡಾ.ಜ್ಯೋತಿ ಕುಮಾರಿ ಹಾಗೂ ಯತೀಶ್ ಕುಮಾರ್ ಬಿ. ತರಬೇತು ನೀಡಿದ್ದಾರೆ.

ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಕಾಲೇಜಿಗೆ ದ್ವಿತೀಯ ಪ್ರಶಸ್ತಿ Read More »

ಮತದಾನದ ಹಕ್ಕನ್ನು ಚಲಾಯಿಸುವುದು ನಮ್ಮ ಕರ್ತವ್ಯ: ಲಕ್ಷ್ಮೀಕಾಂತ ರೈ ಅನಿಕೂಟೇಲು | ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಬೆಳಂದೂರು: ಜನರಿಂದ ಆಳ್ವಿಕೆಯಾಗುವ ಈ ಸಮಾಜವು ಸಶಕ್ತವಾಗಬೇಕಾದರೆ ನಮ್ಮನ್ನು ಆಳುತ್ತಿರುವ ಸರ್ಕಾರ ಮತ್ತು ನಾವು ಆಯ್ಕೆ ಮಾಡುವ ಜನಪ್ರತಿನಿಧಿಗಳು ಸಚ್ಚಾರಿತ್ರರಾಗಿರಬೇಕು. ಅಂತಹ ವ್ಯಕ್ತಿಗಳಿಗೆ ನಾವು ಮತದಾನ ಮಾಡುವ ಮೂಲಕ ನಮ್ಮ ಹಕ್ಕನ್ನು ಚಲಾಯಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಪುತ್ತೂರು ತಾಲೂಕು ಮಟ್ಟದ ಸ್ವೀಪ್ ಸಮಿತಿ ತರಬೇತುದಾರ ಹಾಗೂ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ಲಕ್ಷ್ಮೀಕಾಂತ ರೈ ಅನಿಕೂಟೇಲು ಹೇಳಿದರು. ಅವರು ಕಡಬ ತಾಲೂಕಿನ ಬೆಳಂದೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ

ಮತದಾನದ ಹಕ್ಕನ್ನು ಚಲಾಯಿಸುವುದು ನಮ್ಮ ಕರ್ತವ್ಯ: ಲಕ್ಷ್ಮೀಕಾಂತ ರೈ ಅನಿಕೂಟೇಲು | ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ Read More »

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಆರಂಭ | ಪುತ್ತೂರು, ಕಡಬದಲ್ಲಿ ಮೊದಲ ದಿನವೇ 42 ವಿದ್ಯಾರ್ಥಿಗಳು ಗೈರು.

ಪುತ್ತೂರು: 2023-24ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯು ಇಂದಿನಿಂದ ಆರಂಭಗೊಂಡಿದ್ದು, ಮೊದಲ ದಿನವೇ ಪರೀಕ್ಷೆಗೆ ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ 42 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಪುತ್ತೂರು, ಕಡಬ ತಾಲೂಕಿನಲ್ಲಿ ಉಭಯ ತಾಲೂಕಿನಲ್ಲಿ ಒಟ್ಟು 4732 ಮಂದಿ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಒಟ್ಟು 4690ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮೂಲಕ ಶೇ.99.11ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದಾರೆ. ಸೋಮವಾರ ಪ್ರಥಮ ಭಾಷಾ ಪರೀಕ್ಷೆ ನಡೆದಿದೆ. ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ತೆರೆಯಲಾಗಿರುವ 13 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದೆ.

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಆರಂಭ | ಪುತ್ತೂರು, ಕಡಬದಲ್ಲಿ ಮೊದಲ ದಿನವೇ 42 ವಿದ್ಯಾರ್ಥಿಗಳು ಗೈರು. Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಯಕ್ಷ ಸಂವಾದ ಕಾರ್ಯಕ್ರಮ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಯಕ್ಷಕಲಾ ಕೇಂದ್ರ ಹಾಗೂ ಕೆದಂಬಾಡಿ ಎನ್‌ ಎಸ್‌ ಕಿಲ್ಲೆ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಯಕ್ಷ ಸಂವಾದ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಕೆದಂಬಾಡಿ ಕಿಲ್ಲೆ ಪ್ರತಿಷ್ಠಾನದ ಅಧ್ಯಕ್ಷ ಕಡಮಜಲು ಸುಭಾಷ್‌ ರೈ ಕಾರ್ಯಕ್ರಮ ಉದ್ಘಾಟಿಸಿ, ಸಂತ ಫಿಲೋಮಿನಾ ಕಾಲೇಜಿನ ಯಕ್ಷ ಕಲಾಕೇಂದ್ರವು ಭಾರತೀಯ ಮಹಾ ಕಾವ್ಯ ಹಾಗೂ  ಕಲಾ ಶ್ರೀಮಂತಿಕೆಯನ್ನು ಯಕ್ಷಪ್ರೇಮಿಗಳಿಗೆ ಯಕ್ಷಸಂವಾದ ಸರಣಿ ಕಾರ್ಯಕ್ರಮಗಳ ಮೂಲಕ ಉಣಬಡಿಸುತ್ತಿದೆ.  ಯಕ್ಷ ಕಲಾ ಕೇಂದ್ರದ ವತಿಯಿಂದ ಇನ್ನಷ್ಟು ಒಳ್ಳೆಯ ಕಾರ್ಯಕ್ರಮಗಳು ಮೂಡಿಬರಲಿ. ಕೇಂದ್ರವು ಆಯೋಜಿಸುವ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಯಕ್ಷ ಸಂವಾದ ಕಾರ್ಯಕ್ರಮ Read More »

error: Content is protected !!
Scroll to Top