ಕ್ಯಾಂಪಸ್‌

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ, ಅಭಿನಂದನಾ ಸಮಾರಂಭ

ಪುತ್ತೂರು: ವಿದ್ಯಾರ್ಥಿಗಳು ಭವಿಷ್ಯದ ಜೀವನದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕಾದರೆ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮತ್ತು ಶ್ರದ್ಧೆಯಿಂದ ಕಲಿಕೆಯಲ್ಲಿ ತೊಡಗಿಕೊಳ್ಳಬೇಕು.ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿನ ಪ್ರತಿಭೆಯನ್ನು ಗುರುತಿಸಿ ಉತ್ತಮ ವಾತಾವರಣ ಕಲ್ಪಿಸಿಕೊಟ್ಟಾಗ ಪ್ರತಿಭೆ ವಿಕಸನಗೊಳ್ಳುತ್ತದೆ. ಭವಿಷ್ಯದ ಬಗ್ಗೆ ಸ್ಪಷ್ಟ ಗುರಿ ಇಟ್ಟುಕೊಂಡು ಮುನ್ನುಗ್ಗಬೇಕು ಎಂದು ಮುಕ್ರಂಪಾಡಿಯಲ್ಲಿರುವ ಎಸ್. ಆರ್. ಕೆ. ಲ್ಯಾಡರ್ಸ್ ನ ಮಾಲಕರಾದ ಕೇಶವ ಅಮೈ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳ ಸನ್ಮಾನ ಮತ್ತು ಅಭಿನಂದನಾ ಸಮಾರಂಭದಲ್ಲಿ ಅವರು […]

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ, ಅಭಿನಂದನಾ ಸಮಾರಂಭ Read More »

ರಾಷ್ಟ್ರಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಗೆ ವಿವೇಕಾನಂದದ ರಕ್ಷಾ ಜಿ. ಆಯ್ಕೆ

ಪುತ್ತೂರು: ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಜರುಗಿದ  ರಾಜ್ಯ ಮಟ್ಟದ  ಜೂನಿಯರ್ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ +87 ವಿಭಾಗದಲ್ಲಿ ಭಾಗವಹಿಸಿದ ಪುತ್ತೂರಿನ ವಿವೇಕಾನಂದ ಕಾಲೇಜಿನ  ವಿದ್ಯಾರ್ಥಿನಿ ರಕ್ಷಾ.ಜಿ ರಾಷ್ಟ್ರೀಯ ಮಟ್ಟದ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ. ಜೂ.18 ರಿಂದ 21 ರ ತನಕ ಮಧ್ಯಪ್ರದೇಶದ ಇಂಧೊರ್ ನಲ್ಲಿ ನಡೆಯಲಿರುವ ’ಅಸ್ಮಿತಾ ಖೇಲೊ ಇಂಡಿಯಾ’ ರಾಷ್ಟ್ರೀಯ ಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲಿದ್ದಾರೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ  ರವಿಶಂಕರ್ ಹಾಗೂ ಯತೀಶ್

ರಾಷ್ಟ್ರಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಗೆ ವಿವೇಕಾನಂದದ ರಕ್ಷಾ ಜಿ. ಆಯ್ಕೆ Read More »

ಪಿಯು ಅತಿಥಿ ಉಪನ್ಯಾಸಕರ ನೇಮಕಾತಿಗೆ ಬಿಇಡಿ ಕಡ್ಡಾಯ | ಆದೇಶ ರದ್ದುಗೊಳಿಸುವಂತೆ ಶಾಸಕರಿಗೆ ಮನವಿ

ಪುತ್ತೂರು; ಪಿಯು ಅತಿಥಿ ಉಪನ್ಯಾಸಕರ ನೇಮಕಾತಿ ಮಾಡುವಲ್ಲಿ ಬಿಇಡಿ ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಸುತ್ತೋಲೆಯನ್ನು ಹೊರಡಿಸಿದ್ದು ಈ ಸುತ್ತೋಲೆಯನ್ನು ರದ್ದು ಮಾಡುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರಿಗೆ ಉಪನ್ಯಾಸಕರು ಮನವಿ ಮಾಡಿದ್ದಾರೆ. ಈಗಾಗಲೇ ಪಿಜಿ ಪದವಿಧರರು ಅತಿಥಿ ಉಪನ್ಯಾಸಕರಾಗಿ ಕರ್ತವ್ಯದಲ್ಲಿದ್ದಾರೆ. ಹಲವು ವರ್ಷಗಳಿಂದ ಉಪನ್ಯಾಸವನ್ನು ಮಾಡುತ್ತಿದ್ದಾರೆ. ಇವರು ಮುಂದಿನ ದಿನಗಳಲ್ಲಿ ಉಪನ್ಯಾಸಕರಾಗಿ ಮುಂದುವರೆಯಬೇಕಾದಲ್ಲಿ ಬಿಇಡಿ ಕಡ್ಡಾಯವಾಗಿ ಮಾಡಬೇಕಿದೆ ಎಂಬುದು ಶಿಕ್ಷಣ ಇಲಾಖೆಯ ಆದೇಶವಾಗಿದೆ. ಈ ಆದೇಶ ಜಾರಿಯಾದಲ್ಲಿ ಹಲವು ಮಂದಿ ಉಪನ್ಯಾಸಕರು ಕೆಲಸವನ್ನು ಕಳೆದುಕೊಳ್ಳಲಿದ್ದೇವೆ. ಅತಿಥಿ

ಪಿಯು ಅತಿಥಿ ಉಪನ್ಯಾಸಕರ ನೇಮಕಾತಿಗೆ ಬಿಇಡಿ ಕಡ್ಡಾಯ | ಆದೇಶ ರದ್ದುಗೊಳಿಸುವಂತೆ ಶಾಸಕರಿಗೆ ಮನವಿ Read More »

ಪಾಪೆಮಜಲು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ರಚನೆ, ವೈಜ್ಞಾನಿಕ ಚಟುವಟಿಕೆ ಆಯೋಜನೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಹಾಗೂ ಸಮಾಜಕಾರ್ಯ ವಿಭಾಗಗಳ ಸಹಯೋಗದಲ್ಲಿ  ಪಾಪೆಮಜಲು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ರಚನೆ ಹಾಗೂ ವಿವಿಧ ಬಗೆಯ ವೈಜ್ಞಾನಿಕ ಚಟುವಟಿಕೆಗಳನ್ನು ನಡೆಸಲಾಯಿತು. ಪಾಪೆಮಜಲು ಪ್ರೌಢಶಾಲಾ ಮುಖ್ಯ ಶಿಕ್ಷಕ ಮೋನಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ವೈಜ್ಞಾನಿಕ ಮನೋಧರ್ಮವನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಂದನ್ನೂ ವೈಜ್ಞಾನಿಕ ನೆಲೆಯಲ್ಲಿ ಪ್ರಶ್ನಿಸಿ ವಿಶ್ಲೇಷಿಸುವ ಗುಣವನ್ನು ಈ ಕಾರ್ಯಕ್ರಮದ ಮೂಲಕ ಬೆಳೆಸಿ ಕೊಳ್ಳಬೇಕು ಎಂದು ಹೇಳಿದರು.  ಪಾಪೆಮಜಲು ಪ್ರೌಢಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.

ಪಾಪೆಮಜಲು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ರಚನೆ, ವೈಜ್ಞಾನಿಕ ಚಟುವಟಿಕೆ ಆಯೋಜನೆ Read More »

ಜಿಲ್ಲಾಮಟ್ಟದ ಇನ್‍ ಸ್ಪೈರ್ ಅವಾರ್ಡ್ ಗೆ ಕುದ್ಮಾರು ಶಾಲಾ ವಿದ್ಯಾರ್ಥಿ ಕುಶನ್ ಕೆ. ಆಯ್ಕೆ

ಕಾಣಿಯೂರು: ಡಿಪಾರ್ಟೆಂಟ್ ಆಫ್ ಸೈನ್ಸ್ ಆಂಡ್ ಟೆಕ್ನಾಲಜಿ ಆಂಡ್ ನ್ಯಾಷನಲ್ ಫೌಂಡೇಶನ್ ಆಫ್ ಇಂಡಿಯಾ ಇದರ ವತಿಯಿಂದ ನಡೆದ ಜಿಲ್ಲಾಮಟ್ಟದ INSPIRE AWARD 2022-23 ಸ್ಪರ್ಧೆಯಲ್ಲಿ ಕುದ್ಮಾರು ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಿದ್ದು ಅದರಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿ  ಕುಶನ್ ಕೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ಸಹ ಶಿಕ್ಷಕಿ ಶ್ರೀಲತಾ ಇವರ ಮಾರ್ಗದರ್ಶನದಲ್ಲಿ ತಯಾರಿಸಿದ Foldable and potable solar nest to dry areca nuts ಎಂಬ ಮಾದರಿಯು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ

ಜಿಲ್ಲಾಮಟ್ಟದ ಇನ್‍ ಸ್ಪೈರ್ ಅವಾರ್ಡ್ ಗೆ ಕುದ್ಮಾರು ಶಾಲಾ ವಿದ್ಯಾರ್ಥಿ ಕುಶನ್ ಕೆ. ಆಯ್ಕೆ Read More »

ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

ಪುತ್ತೂರು: ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಜೂ.13 ರಂದು ಕಾಲೇಜಿನ ದಿ.ಶ್ರೀ ಮಂಜುನಾಥ ಶೆಟ್ಟಿ ಮಲಾರು ಬೀಡು ಸಭಾಭವನದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪಾಲ್ಗೊಂಡು ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಸವಣೂರು ಜಿನಮಂದಿರದ ಆಡಳಿತ ಮಂಡಳಿ ಅಧ್ಯಕ್ಷ ಶತ್ರುಂಜಯ ಆರಿಗ ಮಾತನಾಡಿ, ಸಾಮಾಜಿಕ ಮಾಧ್ಯಮಗಳು ಯುವಜನತೆಯ ಮೇಲೆ ಬೀರುವ ದುಷ್ಪರಿಣಾಮಗಳ ಕುರಿತು ಎಚ್ಚರಿಕೆಯಿಂದ ಇರಬೇಕು ಎಂದು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದರು. ಪ್ರವೀಣ್ ಕುಮಾರ್ ಕೆಡೆಂಜಿಗುತ್ತು ಮಾತನಾಡಿ, ಕಾಲೇಜಿನ

ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ಪರಿಸರ ಮತ್ತು ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ಮತ್ತು ಪರಿಸರ ಕ್ಲಬ್ ಗಳ ಸಹಯೋಗದೊಂದಿಗೆ ವಿಶ್ವ ಪರಿಸರ ಹಾಗೂ ಅಂತರಾಷ್ಟ್ರೀಯ ಜೀವವೈವಿಧ್ಯ ದಿನವನ್ನು ಆಚರಿಸಲಾಯಿತು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಲತಾ ಜಿ. ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ನಾವು ಸಂಪನ್ಮೂಲಗಳನ್ನು ಸಂರಕ್ಷಿಸುವ ಜತೆಗೆ ಹಲವಾರು ವಸ್ತುಗಳನ್ನು ಮರುಬಳಕೆ ಮಾಡಬೇಕು. ಹಸಿ ತ್ಯಾಜ್ಯವಸ್ತುಗಳನ್ನು ಕಾಂಪೋಸ್ಟ್ ಮಾಡಿ ಭೂಮಿಯ ಫಲವತ್ತತೆಯನ್ನು ಉಳಿಸುವಲ್ಲಿ ನೆರವಾಗಬೇಕು. ಭೂಮಿಯು ಮುಂದಿನ ಪೀಳಿಗೆಗೆ ಸೇರಿದೆ. ಅದರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದರು. ಮುಖ್ಯ ಅತಿಥಿಯಾಗಿ ಪುತ್ತೂರು

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ಪರಿಸರ ಮತ್ತು ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ Read More »

ಮಕ್ಕಳು ಹೆತ್ತವರ ಕಣ್ಣೀರಿಗೆ ಕಾರಣರಾಗಬಾರದು :  ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಪಾರಂಪರಿಕ ದಿನಾಚರಣೆಯಲ್ಲಿ ಸುರೇಶ ಶೆಟ್ಟಿ

ಪುತ್ತೂರು: ಪಾರಂಪರಿಕ ದಿನಾಚರಣೆ ಕೇವಲ ಒಂದು ದಿನದ ಪ್ರೇರಣೆಯಾಗದೆ, ನಿತ್ಯ ಜೀವನದಲ್ಲಿ ನಮ್ಮ ಬದುಕಿನ ಮೇಲೆ ಪ್ರಭಾವ ಬೀರುವ ಆಚರಣೆ ಎನಿಸಬೇಕು. ನಮ್ಮ ಜೀವನಪದ್ಧತಿ, ಆಚಾರ ವಿಚಾರಗಳು ಸಂಸ್ಕಾರದ ನೆಲೆಯಲ್ಲಿ ಬೆಳೆದು ಬಂದಾಗ ನಮ್ಮ ವ್ಯಕ್ತಿತ್ವ ಬೆಳಗುವುದಕ್ಕೆ ಸಾಧ್ಯ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಸರೇಶ ಶೆಟ್ಟಿ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಆಯೋಜಿಸಲಾದ ಪಾರಂಪರಿಕ ದಿನಾಚರಣೆ ಹಾಗೂ ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಅಂಬಿಕಾ

ಮಕ್ಕಳು ಹೆತ್ತವರ ಕಣ್ಣೀರಿಗೆ ಕಾರಣರಾಗಬಾರದು :  ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಪಾರಂಪರಿಕ ದಿನಾಚರಣೆಯಲ್ಲಿ ಸುರೇಶ ಶೆಟ್ಟಿ Read More »

ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈಯವರ 77ನೇ ಹುಟ್ಟುಹಬ್ಬ ಆಚರಣೆ | ಅಂತಿಮ ಪದವಿಯ ವಿದ್ಯಾರ್ಥಿಗಳಿಗೆ ವಿದಾಯಕೂಟ ಸಮಾರಂಭ

ಸವಣೂರು: ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಕೆ ಸೀತಾರಾಮ ರೈ ಸವಣೂರು ಅ಻ವರ ಹುಟ್ಟುಹಬ್ಬದ ಆಚರಣೆ ಮತ್ತು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಪದವಿಯ ವಿದ್ಯಾರ್ಥಿಗಳಿಗೆ ವಿದಾಯಕೂಟ ಸಮಾರಂಭ ಕಾಲೇಜಿನಲ್ಲಿ ನಡೆಯಿತು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಕೆ ಸೀತಾರಾಮ ರೈ ಸವಣೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,  ವಿದ್ಯಾರ್ಥಿಗಳು ಒಂದು ಸಂಸ್ಥೆಯ ರಾಯಭಾರಿಗಳಿದ್ದಂತೆ ಎನ್ನುವುದರ ಮೂಲಕ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಇಂಜಿನಿಯರ್ ಅಶ್ವಿನ್

ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈಯವರ 77ನೇ ಹುಟ್ಟುಹಬ್ಬ ಆಚರಣೆ | ಅಂತಿಮ ಪದವಿಯ ವಿದ್ಯಾರ್ಥಿಗಳಿಗೆ ವಿದಾಯಕೂಟ ಸಮಾರಂಭ Read More »

ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿಲ್ಲಿ ನಡೆದ ಮೂರು ದಿನಗಳ ರಾಷ್ಟ್ರಮಟ್ಟದ ಕಾರ್ಯಾಗಾರ “ಸೈನ್ಸಿಫಿಕ್ ರೈಟಿಂಗ್, ರಿಸರ್ಚ್ ಇಂಟೆಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್’ ಸಂಪನ್ನ

ಸುಳ್ಯ: ಕೆವಿಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನ್ಯಾಷನಲ್ ಕೌನ್ಸಿಲ್ ಆಫ್ ಇಂಡಿಯನ್ ಸಿಸ್ಟಮ್ ಆಫ್ ಮೆಡಿಸಿನ್ ಸಹಯೋಗದೊಂದಿಗೆ ಮೂರು ದಿನಗಳ ಕಾಲ ನಡೆದ ರಾಷ್ಟ್ರೀಯ ಮಟ್ಟದ “ಸೈನ್ಸಿಫಿಕ್ ರೈಟಿಂಗ್, ರಿಸರ್ಚ್ ಇಂಟೆಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್’ನ ಸ್ನಾತಕೋತ್ತರ ಪದವಿ ಮಾರ್ಗದರ್ಶಕರ ಕಾರ್ಯಾಗಾರ ಕಾಲೇಜು ಸಭಾಂಗಣದಲ್ಲಿ  ಸಮಾರೋಪಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ವಹಿಸಿದ್ದರು. ಅತಿಥಿಗಳಾಗಿ ಕೆವಿಜಿ ಮೆಡಿಕಲ್ ಕಾಲೇಜಿನ ವೈದ್ಯಕೀಯ ಅಧೀಕ್ಷಕ ಡಾ. ಸಿ. ರಾಮಚಂದ್ರ ಭಟ್,

ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿಲ್ಲಿ ನಡೆದ ಮೂರು ದಿನಗಳ ರಾಷ್ಟ್ರಮಟ್ಟದ ಕಾರ್ಯಾಗಾರ “ಸೈನ್ಸಿಫಿಕ್ ರೈಟಿಂಗ್, ರಿಸರ್ಚ್ ಇಂಟೆಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್’ ಸಂಪನ್ನ Read More »

error: Content is protected !!
Scroll to Top