ಕೇವಲ ಅಂಕ ಪಡೆಯುವುದಷ್ಟೇ ಶಿಕ್ಷಣವಲ್ಲ : ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವದಲ್ಲಿ ಸುಬ್ರಹ್ಮಣ್ಯ ನಟ್ಟೋಜ
ಪುತ್ತೂರು: ಅಂಕ ಪಡೆಯುವುದಷ್ಟೇ ಶಿಕ್ಷಣ ಅಲ್ಲ, ಬದಲಾಗಿ ಭಾರತದ ಸಂಸ್ಕೃತಿ ಮತ್ತು ದೇಶ ಪ್ರೇಮ ಶಿಕ್ಷಣದಲ್ಲಿ ಅಡಕವಾಗಿರಬೇಕು. ಹಾಗಾಗಿ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಟ್ಟು ರಾಷ್ಟ್ರಸಂಪತ್ತನ್ನು ಬೆಳೆಸಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ಆಶ್ರಯದಲ್ಲಿ ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಆಯೋಜಿಸಲಾದ ನೂತನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶದ ಅವ್ಯವಸ್ಥೆಗಳಿಗೆ ಶಿಕ್ಷಣ ಸಂಸ್ಥೆಗಳೇ ಹೊಣೆ. ಸಂಸ್ಕಾರಯುತ ಶಿಕ್ಷಣ ಕೊಟ್ಟಾಗ […]










