ಕ್ಯಾಂಪಸ್‌

ವಿವೇಕಾನಂದ ಕಾಲೇಜಿನಲ್ಲಿ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಸ್ಫರ್ಧೆ “ವಿವೇಕೋತ್ಸವ-2025”

ಪುತ್ತೂರು: ಮನುಷ್ಯನ ಮನಸ್ಸಿಗೆ ಶಾಂತಿ ಹಾಗೂ ಸಂತೋಷ ಎಂಬುದು ಬಹಳ ಮುಖ್ಯ, ಇದು ಕಲೆಯನ್ನು  ಆರಾಧಿಸುವುದರಿಂದ ಸಾಧ್ಯವಾಗುತ್ತದೆ. ಅದರೊಂದಿಗೆ ವೃತ್ತಿ ಜೀವನಕ್ಕೆ ಕಾಲಿಟ್ಟಾಗ ಒತ್ತಡದ ಜೀವನ ನಿರ್ವಹಣೆಗೂ ಕಲೆ ಸಹಕಾರಿಯಾಗುತ್ತದೆ. ಮುಂದಿನ ಸಾಂಸ್ಕೃತಿಕ ರಾಯಭಾರಿಗಳಾದ ವಿದ್ಯಾರ್ಥಿಗಳು ಕಲೆಯ ಮೌಲ್ಯವನ್ನು ಅರಿತುಕೊಂಡು ವಿವೇಕ ಉಳ್ಳವರಾಗಿ ಬದುಕಬೇಕು ಎಂದು ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ನೃತ್ಯ ನಿರ್ದೇಶಕ ವಿದ್ವಾನ್ ದೀಪಕ್ ಕುಮಾರ್ ಹೇಳಿದರು. ಅವರು ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ […]

ವಿವೇಕಾನಂದ ಕಾಲೇಜಿನಲ್ಲಿ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಸ್ಫರ್ಧೆ “ವಿವೇಕೋತ್ಸವ-2025” Read More »

ಪುತ್ತೂರಿನಲ್ಲಿ ಭಾವ ತೀರ ಯಾನ ಸಿನಿಮಾ ನಾಳೆ ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಅದ್ಭುತವಾಗಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಮಾ. 17 (ನಾಳೆ) ರಂದು ಸಂಜೆ 7:15 ರ ಸಮಯಕ್ಕೆ  ಶೋ ನೀಡಲು ನಿರ್ಧರಿಸಲಾಗಿದೆ.  ಕೌಂಟ‌ರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ  ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಪುತ್ತೂರಿನಲ್ಲಿ ಭಾವ ತೀರ ಯಾನ ಸಿನಿಮಾ ನಾಳೆ ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ Read More »

ಮಂಗಳೂರು ವಿವಿ ಪರೀಕ್ಷೆಯಲ್ಲಿ ಪುತ್ತೂರು ಅಕ್ಷಯ ಕಾಲೇಜಿಗೆ 2 ರ‍್ಯಾಂಕ್

ಪುತ್ತೂರು: ವಿನೂತನವಾದ ವೃತ್ತಿಪರ ಶಿಕ್ಷಣವನ್ನು ಪರಿಚಯಿಸಿ ಹಲವು ಶೈಕ್ಷಣಿಕ ಸಾಂಸ್ಕೃತಿಕ ಸಾಧನೆಯನ್ನು ಮಾಡುತ್ತಿರುವ ಸಂಪ್ಯದಲ್ಲಿರುವ ಅಕ್ಷಯ ಕಾಲೇಜು ಪ್ರತಿವರ್ಷದಂತೆ ಈ ವರ್ಷವೂ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ನಡೆಸಿದ 2023-24 ರ ಸಾಲಿನ ಪದವಿ ಪರೀಕ್ಷೆಗಳಲ್ಲಿ ಎರಡು ರ‍್ಯಾಂಕ್ ಪಡೆದಿದೆ. ಬಿ.ಎಸ್ಸಿ ಇಂಟೀರಿಯರ್ ಡಿಸೈನ್ ವಿಭಾಗದ ಜೀವಿತ ಎಸ್ ಕೆ 4550 ರಲ್ಲಿ 4144 (91.08%) ಅಂಕ ಪಡೆದು ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ಇವರು ಮಂಜುನಾಥ ಆಚಾರ್ಯ ಎಸ್.ಕೆ. ಹಾಗೂ ಚಂದ್ರಾವತಿ ದಂಪತಿ ಪುತ್ರಿ. ಇಂಟೀರಿಯರ್ ಡಿಸೈನ್ ವಿಭಾಗದ ಇನ್ನೊರ್ವ

ಮಂಗಳೂರು ವಿವಿ ಪರೀಕ್ಷೆಯಲ್ಲಿ ಪುತ್ತೂರು ಅಕ್ಷಯ ಕಾಲೇಜಿಗೆ 2 ರ‍್ಯಾಂಕ್ Read More »

ವಿಶ್ವವಿದ್ಯಾನಿಲಯ ಪರೀಕ್ಷೆಯಲ್ಲಿ ವಿವೇಕಾನಂದ ಕಾಲೇಜಿಗೆ 5 ರ್‍ಯಾಂಕ್

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2023-24 ರ ಸಾಲಿನ ಪದವಿ ಪರೀಕ್ಷೆಗಳಲ್ಲಿ ವಿವೇಕಾನಂದ ಪದವಿ ಕಾಲೇಜಿಗೆ ಐದು ರ್‍ಯಾಂಕ್‌ಗಳು ಲಭಿಸಿದೆ. ಬಿಕಾಂ ನ ಸ್ವಾತಿ ಎಸ್. ಭಟ್ 4150 ರಲ್ಲಿ 3984  ಅಂಕ ಪಡೆದು ಮೂರನೇ ರ್‍ಯಾಂಕನ್ನು ಗಳಿಸಿದ್ದಾರೆ. ಇವರು ಪುತ್ತೂರಿನ ಕಲ್ಲಾರೆ ನಿವಾಸಿ ಶಿವಶಂಕರ ಭಟ್ ಎಸ್. ಹಾಗೂ ಉಷಾ ಎಸ್. ಭಟ್ ದಂಪತಿ ಪುತ್ರಿ. ಬಿಕಾಂ ನ ಇನ್ನೋರ್ವ ವಿದ್ಯಾರ್ಥಿ ಪವನ್ ರಾಜ್ 3969 ಅಂಕಗಳನ್ನು ಪಡೆದು 9ನೇ ನೇ ರ್‍ಯಾಂಕ್‍ ಗಳಿಸಿದ್ದಾರೆ. ಇವರು

ವಿಶ್ವವಿದ್ಯಾನಿಲಯ ಪರೀಕ್ಷೆಯಲ್ಲಿ ವಿವೇಕಾನಂದ ಕಾಲೇಜಿಗೆ 5 ರ್‍ಯಾಂಕ್ Read More »

ವಿಜ್ಞಾನ ದಿನಾಚರಣೆ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸಮಗ್ರ ಪ್ರಶಸ್ತಿ

ಪುತ್ತೂರು: ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಸಲುವಾಗಿ ಮಂಗಳೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ವಿಜ್ಞಾನ ಸಂಬಂಧಿತ ವಿಚಾರಗಳಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 12 ವಿದ್ಯಾರ್ಥಿಗಳ ತಂಡ ಭಾಗವಹಿಸಿ ಪ್ರಥಮ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ವಿದ್ಯಾರ್ಥಿಗಳಲ್ಲಿ ನಾವೀನ್ಯತೆ ಮತ್ತು ವೈಜ್ಞಾನಿಕ ಅವಿಷ್ಕಾರಗಳ ಬಗ್ಗೆ ಆಸಕ್ತಿ ಮತ್ತು ಕ್ರಿಯಾಶೀಲತೆಯನ್ನು ಬೆಳೆಸುವ ಸಲುವಾಗಿ ಆಯೋಜಿಸಲಾಗಿದ್ದ ಈ  ಸ್ಪರ್ಧೆಗಳ ಪೇಪರ್ ಪ್ರೆಸೆಂಟೇಷನ್ ವಿಭಾಗದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ನಿಲಿಷ್ಕಾ.ಕೆ.,  8ನೇ ತರಗತಿ ವಿದ್ಯಾರ್ಥಿನಿ ಅವನಿ ತಂಡ

ವಿಜ್ಞಾನ ದಿನಾಚರಣೆ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸಮಗ್ರ ಪ್ರಶಸ್ತಿ Read More »

ಮುಳಿಯ ಜ್ಯುವೆಲ್ಲರ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ

ಬೆಳ್ತಂಗಡಿ : ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ವ್ಯವಹಾರದಲ್ಲಿ ಆತಿಥ್ಯವನ್ನು ಸದಾ ಗ್ರಾಹಕರಿಗೆ ನೀಡುತ್ತಿದ್ದು ಇದರಿಂದ ಸಂಸ್ಥೆ ಜನಮನಸದಲ್ಲಿ ನೆಳ್ಮೆಯ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಮುಂಡಾಜೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಹೇಳಿದರು. ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಮಾ.೩ರಂದು ನಡೆದ ಡೈಮಂಡ್ ಪೆಸ್ಟ್ ಚಾಲನೆ ನೀಡಿ ಮಾತನಾಡಿದರು. ಜೆಸಿಐ ಭಾರತದ ವಲಯ ೧೫ರ ಉಪಾಧ್ಯಕ್ಷ ರಂಜಿತ್ ಹೆಚ್.ಡಿ ಮಾತನಾಡಿ, ೮೦ ದಶಕದಿಂದ ಜನರೊಂದಿಗೆ ಅವಿನಾಭವ ಸಂಬಂಧವನ್ನು ಉಳಿಸಿಕೊಂಡು

ಮುಳಿಯ ಜ್ಯುವೆಲ್ಲರ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ Read More »

ಪುತ್ತೂರು ಬಿಜೆಪಿ ಮಹಿಳಾ ಮೋರ್ಚಾದಿಂದ ಮಹಿಳಾ ದಿನಾಚರಣೆ

ಪುತ್ತೂರು: ಪುತ್ತೂರು ಬಿಜೆಪಿ ಮಹಿಳಾ ಮೋರ್ಚಾದಿಂದ ಮಹಿಳಾ ದಿನಾಚರಣೆ ಗುರುವಾರ ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿದ್ಯಾ ಆರ್‍. ಗೌರಿ ಪ್ರಾಸ್ತಾವಿಕವಾಗಿ ಮಾತನಾಡಿ, ವೇತನ, ರಜೆ, ಮೂಲಭೂತ ಸೌಲ್ಯಗಳನ್ನು ಪಡೆದುಕೊಳ್ಳುವಲ್ಲಿ ತಾರತಮ್ಯ ಧೋರಣೆ ಇದ್ದ ಸಂದರ್ಭದಲ್ಲಿ ಪುರುಷರಷ್ಟೇ ಸಮಾನ ಹಕ್ಕುಗಳನ್ನು ಪಡೆದುಕೊಳ್ಳಲು 1909 ರಲ್ಲಿ ಮಹಿಳೆಯರು ದಂಗೆ ಎದ್ದು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳುವಲ್ಲಿ ಪ್ರತಿಭಟನೆ ಮಾಡಿ ಇದೊಂದು ಕ್ರಾಂತಿಯಾದ ಪರಿಣಾಮ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಯಿತು. ಮೋದಿ ಸರಕಾರ ಬಂದ ನಂತರ ಮಹಿಳಾ ಸಬಲೀಕರಣಗೊಳ್ಳುವಲ್ಲಿ

ಪುತ್ತೂರು ಬಿಜೆಪಿ ಮಹಿಳಾ ಮೋರ್ಚಾದಿಂದ ಮಹಿಳಾ ದಿನಾಚರಣೆ Read More »

ರಾಷ್ಟ್ರೀಯ ಸಿಎಸ್‌ಸಿ ಹಿಂದಿ ಒಲಿಂಪಿಯಾಡ್ ಪರೀಕ್ಷೆ | ಸೃಜನ್ ಕೆ.ಪಿ ಪಲ್ಲತ್ತಾರು ರಾಜ್ಯ ಮಟ್ಟದಲ್ಲಿ ಪ್ರಥಮ ರ‍್ಯಾಂಕ್

ಪುತ್ತೂರು: ರಾಷ್ಟ್ರೀಯ ಸಿಎಸ್‌ಸಿ ಅಕಾಡೆಮಿ ಒಲಿಂಪಿಯಾಡ್ ನಡೆಸುವ ೨೦೨೪-೨೫ ನೇ ಸಿಎಸ್‌ಸಿ ಹಿಂದಿ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಒಳಮೊಗ್ರು ಗ್ರಾಮದ ಪಲ್ಲತ್ತಾರು ನಿವಾಸಿ ಸೃಜನ್ ಕೆ.ಪಿ.ರವರು ರಾಜ್ಯ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಪಡೆದುಕೊಂಡಿದ್ದಾರೆ. ರಾಷ್ಟ್ರಮಟ್ಟದಲ್ಲಿ ಆನ್ ಲೈನ್ ಮೂಲಕವೇ ಈ ಪರೀಕ್ಷೆ ನಡೆಯುತ್ತಿದ್ದು ಇದರಲ್ಲಿ ರಾಜ್ಯದಿಂದ ಇಬ್ಬರು ಪ್ರಥಮ ರ‍್ಯಾಂಕ್ ಪಡೆದುಕೊಂಡಿದ್ದು ಅದರಲ್ಲಿ ದ.ಕ ಜಿಲ್ಲೆಯಿಂದ ಸೃಜನ್ ಕೆ.ಪಿ.ಯರವರು ಓರ್ವರಾಗಿದ್ದಾರೆ. ಶೈಕ್ಷಣಿಕ ಕಾರ್ಯಕ್ಷಮತೆ ಸುಧಾರಿಸಲು ಜ್ಞಾನದ ಮಟ್ಟ ಮತ್ತು ಪರೀಕ್ಷೆಯ ಸಿದ್ಧತೆಯನ್ನು ಅಳೆಯಲು ಈ ಒಲಿಂಪಿಯಡ್ ಪರೀಕ್ಷೆ ಸಹಾಯಮಾಡುತ್ತದೆ.

ರಾಷ್ಟ್ರೀಯ ಸಿಎಸ್‌ಸಿ ಹಿಂದಿ ಒಲಿಂಪಿಯಾಡ್ ಪರೀಕ್ಷೆ | ಸೃಜನ್ ಕೆ.ಪಿ ಪಲ್ಲತ್ತಾರು ರಾಜ್ಯ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ Read More »

ಮಾ.8 : ಜಿಲ್ಲಾ ಮಟ್ಟದ ಮಹಿಳಾ ದಿನಾಚರಣೆ | ವಿವಿಧತೆಯಲ್ಲಿ ಏಕತೆ ವಿಶಿಷ್ಟ ವಾಹನ ಜಾಥಾ

ಪುತ್ತೂರು: ಮಹಿಳೆಯರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಉದ್ದೇಶದೊಂದಿಗೆ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಪುತ್ತೂರು ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ ಮಾ.8 ರಂದು ಜಿಲ್ಲಾ ಮಟ್ಟದ ಮಹಿಳಾ ದಿನಾಚರಣೆ ಹಾಗೂ ವಿವಿಧತೆಯಲ್ಲಿ ಏಕತೆ ವಿಶಿಷ್ಠ ವಾಹನ ಜಾಥಾ ಕಾರ್ಯಕ್ರಮ ನಡೆಸಲಾಗುವುದು ಎಂದು ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಗೌರವಾಧ್ಯಕ್ಷೆ ಚಂಚಲ ತೇಜೋಮಯ ಅವರು ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಳೆದ 37 ವರ್ಷಗಳಿಂದ ಮಹಿಳಾ ಒಕ್ಕೂಟ ಮಹಿಳೆಯರ ಸಮಗ್ರ ಅಭಿವೃದ್ದಿಗಾಗಿ ಕೆಲಸ ಮಾಡುತ್ತಿದೆ. ಮಹಿಳೆಯರಲ್ಲಿ ಜಾಗೃತಿ ಮೂಡಿಸುವ

ಮಾ.8 : ಜಿಲ್ಲಾ ಮಟ್ಟದ ಮಹಿಳಾ ದಿನಾಚರಣೆ | ವಿವಿಧತೆಯಲ್ಲಿ ಏಕತೆ ವಿಶಿಷ್ಟ ವಾಹನ ಜಾಥಾ Read More »

ಪ್ರತಿಷ್ಠಿತ ಮುಳಿಯ ಜ್ಯುವೆಲ್ಲರ್ಸ್ ನಲ್ಲಿ ‘ಡೈಮಂಡ್ ಫೆಸ್ಟ್’ಗೆ ಚಾಲನೆ

ಪುತ್ತೂರು:  ಮುಳಿಯ ಎಂಬುದು ನಂಬಿಕೆಯ ಪ್ರತೀಕ. ಆಭರಣ ಕ್ಷೇತ್ರದಲ್ಲಿ ವಿಶೇಷ ತೋರಿರುವ ಜತೆಗೆ ಸಾಮಾಜಿಕ ಕಾರ್ಯಗಳಲ್ಲೂ ಮುಳಿಯ ಸಂಸ್ಥೆ ತೊಡಗಿರುವುದು ಶ್ಲಾಘನೀಯ ಎಂದು ಸಾಯ ಎಂಟರ್ಪೈಸಸ್ ಮಾಲಕಿ ಸಂಧ್ಯಾ ಸಾಯ ಹೇಳಿದರು. ಅವರು ಮಾ.3ರಿಂದ ಜುವೆಲ್ಲರ್ಸ್ ನಲ್ಲಿ ಆರಂಭೂಂಡಿರುವ ಡೈಮೆಂಡ್ ಫೆಸ್ಟ್ ಅನ್ನು ಉದ್ಘಾಟಿಸಿ ಮಾತನಾಡಿದರು. ಡೈಮಂಡ್ ರೆಸ್ಟ್ ಗ್ರಾಹಕರಿಗೆ ಹತ್ತಾರು ಅವಕಾಶಗಳನ್ನು ತೆರೆದಿಟ್ಟಿದೆ. ಇಲ್ಲಿ ವಜ್ರಗಳ ಖರೀದಿಗೂ ಸಾಕಷ್ಟು ಆಯ್ಕೆಗಳಿವೆ ಎಂದರು. ಗಾಯಕಿ ಚೈತ್ರಿಕಾ ಕೋಡಿಬೈಲು ಮಾತನಾಡಿ, ವಜ್ರ ಹೊಳಪು ಹಾಗೂ ಬಲಕ್ಕೆ ಹೆಸರುವಾಸಿ. ಇದು

ಪ್ರತಿಷ್ಠಿತ ಮುಳಿಯ ಜ್ಯುವೆಲ್ಲರ್ಸ್ ನಲ್ಲಿ ‘ಡೈಮಂಡ್ ಫೆಸ್ಟ್’ಗೆ ಚಾಲನೆ Read More »

error: Content is protected !!
Scroll to Top