ಕ್ಯಾಂಪಸ್‌

ಎ ವಿ ಜಿ ಶಾಲಾ ಶಿಕ್ಷಕ ರಕ್ಷಕ ಸಂಘದ ಮಹಾಸಭೆ | ಮಕ್ಕಳನ್ನು ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಶಿಕ್ಷಣದ ಉದ್ದೇಶ :. ಚಂದ್ರಶೇಖರ್ ಕೆದ್ದೋಟೆ

ಪುತ್ತೂರು: ನೈತಿಕತೆ ಎನ್ನುವಂತದ್ದು ಒತ್ತಾಯಪೂರ್ವಕವಾಗಿ ಬರುವಂತದ್ದಲ್ಲ .ಮಕ್ಕಳು ಭಯಮುಕ್ತರಾಗಿ ಖುಷಿ ಖುಷಿಯಿಂದ ಕಲಿಯುವಂತಾಗಬೇಕು ಎಂದು ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಚಂದ್ರಶೇಖರ  ಕೆದ್ದೋಟೆ ಹೇಳಿದರು.  ಅವರು ಎವಿಜಿ ಆಂಗ್ಲ ಮಾಧ್ಯಮ ಶಾಲೆಯ 2025 -26ನೇ ಸಾಲಿನ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಶಿಕ್ಷಣದಲ್ಲಿ ಪೋಷಕರ ಜವಾಬ್ದಾರಿಗಳ ಬಗ್ಗೆ ಮಾತನಾಡಿದರು. ಮಕ್ಕಳನ್ನು ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಿ ಕಾಲಕಾಲಕ್ಕೆ ಮಾರ್ಗದರ್ಶನವನ್ನು ನೀಡುತ್ತಾ ಒಳ್ಳೆಯ ಸಂಸ್ಕಾರಗಳನ್ನು ಕಲಿಯುವುದರ ಜೊತೆಗೆ ಕೆಟ್ಟ ಚಟಗಳತ್ತ ಮುಖ ಮಾಡದಂತೆ […]

ಎ ವಿ ಜಿ ಶಾಲಾ ಶಿಕ್ಷಕ ರಕ್ಷಕ ಸಂಘದ ಮಹಾಸಭೆ | ಮಕ್ಕಳನ್ನು ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಶಿಕ್ಷಣದ ಉದ್ದೇಶ :. ಚಂದ್ರಶೇಖರ್ ಕೆದ್ದೋಟೆ Read More »

ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಗುರುಪೂರ್ಣಿಮೆ ಆಚರಣೆ | ಗುರುಗಳ ಆಶೀರ್ವಾದದಿಂದ ಮಾತ್ರ ಕರ್ಮ ಬಂಧನದಿಂದ ಮುಕ್ತಿ : ಶ್ರೀಕೃಷ್ಣ ಉಪಾಧ್ಯಾಯ

ಪುತ್ತೂರು: ನಾವು ಮಾಡುವ ಪ್ರತಿ ಕೆಲಸಕ್ಕೆ ಪ್ರತಿಫಲವಿದೆ. ಜನ್ಮಜನ್ಮಾಂತರದ ಕರ್ಮಫಲ ನಮ್ಮ ಬದುಕನ್ನು ರೂಪಿಸುತ್ತದೆ. ಕರ್ಮ ಬಂಧನದಿಂದ ತಪ್ಪಿಸಿಕೊಳ್ಳುವುದು ಅಸಾಧ್ಯ. ಗುರುಗಳ ಆಶೀರ್ವಾದಕ್ಕೆ ಮಾತ್ರ ಕರ್ಮ ಬಂಧನವನ್ನು ತಪ್ಪಿಸುವ ಶಕ್ತಿ ಇದೆ. ಶಿವ ಪಥವರಿಯಲು ಗುರು ಪಥವೇ ಮೊದಲು. ಅಜ್ಞಾನಾಂಧಕಾರವನ್ನು ಹೊಡೆದೋಡಿಸುವವನು ಗುರು ಎಂದು ವೇ.ಮೂ. ಶ್ರೀಕೃಷ್ಣ ಉಪಾಧ್ಯಾಯ ಹೇಳಿದರು. ಅವರು ನಗರದ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಗುರುವಾರ ನಡೆದ ಗುರುಪೂರ್ಣಿಮೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವೇದಗಳ ವಿಂಗಡಣೆ ಮಾಡಿದ, ಅಷ್ಟದಶ ಪುರಾಣ ಮುಂತಾದ ಕೃತಿಗಳನ್ನು,

ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಗುರುಪೂರ್ಣಿಮೆ ಆಚರಣೆ | ಗುರುಗಳ ಆಶೀರ್ವಾದದಿಂದ ಮಾತ್ರ ಕರ್ಮ ಬಂಧನದಿಂದ ಮುಕ್ತಿ : ಶ್ರೀಕೃಷ್ಣ ಉಪಾಧ್ಯಾಯ Read More »

ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಗುರುಪೂರ್ಣಿಮೆ ಆಚರಣೆ

ಪುತ್ತೂರು: ನರಿಮೊಗರಿನ ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ಗುರುಪೂರ್ಣಿಮೆಯನ್ನು ಗುರುವಾರ ಆಚರಿಸಲಾಯಿತು. ಸಂಸ್ಥೆಯ ಸಂಚಾಲಕ ಭಾಸ್ಕರ ಆಚಾರ್ ಹಿಂದಾರು ಮಾತನಾಡಿ, ನಮಗೆ ದಾರಿ ತೋರಿಸುವವರು ಹಾಗೂ ನಮ್ಮ ತಪ್ಪುಗಳನ್ನು ತಿದ್ದಿ ಸರಿಯಾದ ದಾರಿಗೆ ಕರೆದುಕೊಂಡು ಹೋಗುವವರು ಗುರು, ಅದಕ್ಕಾಗಿ ಗುರುಹಿರಿಯರಿಗೆ ಗೌರವ ಕೊಟ್ಟು ಸನ್ಮಾರ್ಗದಲ್ಲಿ ನಡೆಯಿರಿ ಎಂದರು. ಸಂಸ್ಥೆಯ ಅಧ್ಯಕ್ಷ ಜಯರಾಮ ಕೆದಿಲಾಯ ಶಿಬರ ಮಾತನಾಡಿ, ಗುರು ಎಂದರೆ ಜ್ಞಾನ. ಜ್ಞಾನ ಎಂದರೆ ಬೆಳಕು. ಮನಸ್ಸಿನ ಕಲ್ಮಶವನ್ನು ತೆಗೆದಾಗ ಜ್ಞಾನವನ್ನು ಪಡೆಯಲು ಸಾಧ್ಯ ಜೀವನದಲ್ಲಿ ಯಶಸ್ಸು ನಿಮ್ಮದಾಗಲಿ

ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಗುರುಪೂರ್ಣಿಮೆ ಆಚರಣೆ Read More »

ವಿವೇಕಾನಂದ ಕಾಲೇಜಿನಲ್ಲಿ ಪೋಷಕರ ಸಭೆ | ವಿದ್ಯಾರ್ಥಿಗಳಲ್ಲಿ ಬೌದ್ಧಿಕ ಬೆಳವಣಿಗೆ ಅಗತ್ಯ-ಡಾ.ಶ್ರೀಪತಿ ಕಲ್ಲೂರಾಯ

ಪುತ್ತೂರು: ಬದುಕಿನಲ್ಲಿ ಶಾಂತಿ ಹಾಗೂ ನೆಮ್ಮದಿಯನ್ನು ಕೊಡಬಹುದಾದ ಜೀವನ ಕ್ರಮ ನಮ್ಮ ಪರಂಪರೆಯಲ್ಲಿದೆ. ಹಾಗಾಗಿ ಅಂತಹ ಪರಂಪರೆಯನ್ನು ನಮ್ಮ ಇಂದಿನ ಯುವಜನತೆ ಕಲಿಯಬೇಕೆಂಬ ಉದ್ದೇಶವನ್ನು ಇಟ್ಟುಕೊಂಡು ನಮ್ಮ ಸಂಸ್ಥೆ ವಿದ್ಯಾರ್ಥಿಗಳಿಗೆ  ಸಂಸ್ಕಾರಯುತ ಜೀವನವನ್ನು ಅನುಷ್ಠಾನ ಮಾಡಲು ಉತ್ಕೃಷ್ಟ ಶಿಕ್ಷಣವನ್ನು ನೀಡುತ್ತಿದೆ. ಬೌದ್ಧಿಕವಾಗಿ ಇದು ಶೀಘ್ರವಾಗಿ ಬೆಳೆಯುವ ಕಾಲ. ಹಾಗಾಗಿ ಈ ಸಂದರ್ಭದಲ್ಲಿ ಬೌಧ್ದಿಕವಾಗಿ ಬೆಳೆಯಲು ಅತ್ಯಂತ ಶಿಸ್ತುಬದ್ಧವಾದ ಜೀವನ ಕ್ರಮವನ್ನು ಅನುಸರಿಸಿ ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ಹೇಳಿದರು ಅವರು ವಿವೇಕಾನಂದ

ವಿವೇಕಾನಂದ ಕಾಲೇಜಿನಲ್ಲಿ ಪೋಷಕರ ಸಭೆ | ವಿದ್ಯಾರ್ಥಿಗಳಲ್ಲಿ ಬೌದ್ಧಿಕ ಬೆಳವಣಿಗೆ ಅಗತ್ಯ-ಡಾ.ಶ್ರೀಪತಿ ಕಲ್ಲೂರಾಯ Read More »

ಅಂಬಿಕಾ ಸಿಬಿಎಸ್‌ ಇ ವಿದ್ಯಾಲಯದಲ್ಲಿ ಗುರುಪೂರ್ಣಿಮಾ ಆಚರಣೆ | ಪಶುತ್ವದಿಂದ ಪಾವನತ್ವಕ್ಕೆ ಕರೆದೊಯ್ಯುವವನು ಗುರು : ಪ್ರಿಯಾಶ್ರೀ ಕೆ.ಎಸ್.

ಪುತ್ತೂರು: ನಗರದ ಬಪ್ಪಳಿಗೆಯ ಅಂಬಿಕಾ ಸಿಬಿಎಸ್‌ ಇ ವಿದ್ಯಾಲಯದಲ್ಲಿ ಬುಧವಾರ ಗುರುಪಾದುಕೆಯನ್ನು ಪೂಜಿಸುವ ಮೂಲಕ ಗುರುಪೂರ್ಣಮಿ ದಿನವನ್ನು ಆಚರಿಸಲಾಯಿತು. ಶಿಕ್ಷಕಿ ಪ್ರಿಯಾಶ್ರೀ ಕೆ.ಎಸ್. ಮಾತನಾಡಿ, ಗುರು ಎಂದರೆ ಅಜ್ಞಾನದ ಅಂಧಕಾರವನ್ನು ದೂರಮಾಡುವವನು. ಮನುಷ್ಯ ಜಗತ್ತಿಗೆ ಅರಿವನ್ನು ತೋರಿದಾತ ಗುರು. ಪಶುತ್ವದಿಂದ ಪಾವನತ್ವಕ್ಕೆ ಕರೆದೊಯ್ಯುವವನು ಗುರುವೇ ಆಗಿದ್ದಾನೆ. ಹರಿ ಪಥವನ್ನರಿವೊಡೆ ಗುರು ಪಥವೇ ಮೊದಲು, ಹರಿ ಮುನಿದರೆ ಗುರು ಕಾಯುವ ಎಂಬ ಮಾತು ಸಹ ಇದೆ, ಆದ್ದರಿಂದ ನಮ್ಮ ಪರಂಪರೆ ದೇವರಿಗೂ ಮಿಗಿಲಾದ ಸ್ಥಾನವನ್ನು ಗುರುವಿಗೆ ನೀಡಿತ್ತು ಎನ್ನುವುದಕ್ಕೆ

ಅಂಬಿಕಾ ಸಿಬಿಎಸ್‌ ಇ ವಿದ್ಯಾಲಯದಲ್ಲಿ ಗುರುಪೂರ್ಣಿಮಾ ಆಚರಣೆ | ಪಶುತ್ವದಿಂದ ಪಾವನತ್ವಕ್ಕೆ ಕರೆದೊಯ್ಯುವವನು ಗುರು : ಪ್ರಿಯಾಶ್ರೀ ಕೆ.ಎಸ್. Read More »

ಪತಂಜಲಿ ಯೋಗ ಶಾಖೆಯಲ್ಲಿ ಗುರುಪೂರ್ಣಿಮಾ ಆಚರಣೆ

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ.ರಿ ಕರ್ನಾಟಕ ನೇತ್ರಾವತಿ ವಲಯ ಮಂಗಳೂರು ಇದರ ವತಿಯಿಂದ ಗೇರುಕಟ್ಟೆಯ ಕ್ಷೀರಸಂಗಮ ಸಭಾಭವನದಲ್ಲಿ ಜರಗುತ್ತಿರುವ ಯೋಗ ಶಿಬಿರದಲ್ಲಿ ಶ್ರೀ ಗುರು ಪೂರ್ಣಿಮೆ ದಿನವನ್ನು ಆಚರಿಸಲಾಯಿತು. ಭಗವಂತನ ಇನ್ನೊಂದು ರೂಪವಾಗಿಯೇ ಕಾಣಿಸಿಕೊಂಡ ವ್ಯಾಸ ಮಹರ್ಷಿಗಳು ಜ್ಞಾನದ ರಾಶಿಯನ್ನು ನಾಲ್ಕು ವೇದಗಳಾಗಿ ವಿಂಗಡಿಸಿ 18 ಪುರಾಣ, ಉಪ ಪುರಾಣ ಮತ್ತು ಮಹಾಭಾರತ ಕೃತಿಯನ್ನು ರಚಿಸಿ ಎಲ್ಲರಿಗೂ ಜೀವನದ ಮೌಲ್ಯಗಳನ್ನು ಬೋಧಿಸಿದ ಮಹಾನ್ ಗುರುಗಳೆಂದು ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್ ತಿಳಿಸಿದರು.ಗುರು ಪೂರ್ಣಿಮೆಯ ಬಗ್ಗೆ ಯೋಗಬಂಧು

ಪತಂಜಲಿ ಯೋಗ ಶಾಖೆಯಲ್ಲಿ ಗುರುಪೂರ್ಣಿಮಾ ಆಚರಣೆ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷಾಚರಣೆ | ವಿಶೇಷ ಉಪನ್ಯಾಸ

ಪುತ್ತೂರು: ಡಾ. ಕೇಶವ ಬಲಿರಾಮ್ ಹೆಡ್ಗೆವಾರ್ ಅವರು ಭಾರತದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರು. ಸಮಾಜ ಸುಧಾರಕರು ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಾಪಕರು. ಅವರು ಭಾರತದ ಏಕತೆ ಮತ್ತು ಸಂಸ್ಕೃತಿಯ ರಕ್ಷಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು..ಅವರ ರಾಷ್ಟ್ರೀಯತೆ, ಸಂಘಟನಾ ಕೌಶಲ್ಯ ಮತ್ತು ಸಮಾಜ ಸುಧಾರಣಾ ಪ್ರಯತ್ನಗಳು ಭಾರತದ ಸ್ವಾತಂತ್ರ್ಯ ಮತ್ತು ಏಕತೆಗೆ ಮಹತ್ವದ ಕೊಡುಗೆ ನೀಡಿವೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ವಿದ್ಯಾಸಂಸ್ಥೆಗಳ ಸಂಸ್ಕಾರ ಪರಿವೀಕ್ಷಣಾ ಪ್ರಮುಖರಾದ ಮೀನಾಕ್ಷಿ ಭಗಿನಿ ಹೇಳಿದರು. ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ನಡೆದ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷಾಚರಣೆ | ವಿಶೇಷ ಉಪನ್ಯಾಸ Read More »

ಅಕ್ಷಯ ಕಾಲೇಜಿನಲ್ಲಿ ಅಧ್ಯಾಪಕರಿಗೆ ಒಂದು ದಿನದ “ಅಧ್ಯಾಪಕರ ತರಬೇತಿ” ಕಾರ್ಯಾಗಾರ

ಪುತ್ತೂರು:  ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಮಾಸ್ಟರ್ ಮೈಂಡ್ ಎಂಟರ್ಪ್ರೈಸಸ್ ಸಹಭಾಗಿತ್ವದಲ್ಲಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರಿಗೆ ಒಂದು ದಿನದ “ಅಧ್ಯಾಪಕರ ತರಬೇತಿ ಕಾರ್ಯಗಾರ” ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಗಾರವನ್ನು ಕಾಲೇಜಿನ ಅಧ್ಯಕ್ಷ ಜಯಂತ ನಡುಬೈಲು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿ, ಅಧ್ಯಾಪಕರ ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು ಕಳೆದ ಮೂರು

ಅಕ್ಷಯ ಕಾಲೇಜಿನಲ್ಲಿ ಅಧ್ಯಾಪಕರಿಗೆ ಒಂದು ದಿನದ “ಅಧ್ಯಾಪಕರ ತರಬೇತಿ” ಕಾರ್ಯಾಗಾರ Read More »

ಭಾರೀ ಮಳೆ ಹಿನ್ನಲೆ : ಇಂದು ಕಡಬ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ

ಕಡಬ: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕಡಬ ತಾಲೂಕಿನಾದ್ಯಂತ ವ್ಯಾಪಕ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಕಡಬ ತಾಲೂಕಿನ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿಗೆ ಇಂದು (ಜು.3) ರಜೆ  ಘೋಷಿಸಲಾಗಿದೆ. ತಾಲೂಕಿನಲ್ಲಿ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿ, ತೋಡುಗಳ ಬಳಿ ಹೋಗುವುದಾಗಲಿ, ವಿದ್ಯುತ್ ಕಂಬದ ಸಮೀಪ ಹೋಗುವುದನ್ನು ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ಪ್ರಾಕೃತಿಕವಾಗಿ ಯಾವುದೇ ಘಟನೆಗಳು ಸಂಭವಿಸಿದಲ್ಲಿ ಸಾರ್ವಜನಿಕರು ತಕ್ಷಣ ಸಂಬಂಧ ಪಟ್ಟ ಪಂಚಾಯತ್, ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ

ಭಾರೀ ಮಳೆ ಹಿನ್ನಲೆ : ಇಂದು ಕಡಬ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ Read More »

ಅಂತಿಮ ವರ್ಷದ ಇಂಜಿನಿಯರಿಂಗ್‍ ಪರೀಕ್ಷೆ | ವಿವೇಕಾನಂದ ಇಂಜಿನಿಯರಿಂಗ್‍ & ಟೆಕ್ನಾಲಜಿಗೆ 7 ರ‍್ಯಾಂಕ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ 2024-25 ನೇ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ‍್ಯಾಂಕ್ ಗಳನ್ನು ಪಡೆದು ದಾಖಲೆ ನಿರ್ಮಿಸಿದ್ದಾರೆ. ಕಾಲೇಜಿನ ಡಾಟಾ ಸೈನ್ಸ್ ವಿಭಾಗಕ್ಕೆ 4, ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗಕ್ಕೆ 2ಮತ್ತು ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವಿಭಾಗಕ್ಕೆ ಒಂದು ರ‍್ಯಾಂಕ್ ಲಭಿಸಿರುತ್ತದೆ.   4 ವರ್ಷಗಳ ಕೆಳಗೆ ನೂತನವಾಗಿ ಆರಂಭವಾದ ಡಾಟಾ ಸೈನ್ಸ್ ವಿಭಾಗದ

ಅಂತಿಮ ವರ್ಷದ ಇಂಜಿನಿಯರಿಂಗ್‍ ಪರೀಕ್ಷೆ | ವಿವೇಕಾನಂದ ಇಂಜಿನಿಯರಿಂಗ್‍ & ಟೆಕ್ನಾಲಜಿಗೆ 7 ರ‍್ಯಾಂಕ್ Read More »

error: Content is protected !!
Scroll to Top