ಎ ವಿ ಜಿ ಶಾಲಾ ಶಿಕ್ಷಕ ರಕ್ಷಕ ಸಂಘದ ಮಹಾಸಭೆ | ಮಕ್ಕಳನ್ನು ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಶಿಕ್ಷಣದ ಉದ್ದೇಶ :. ಚಂದ್ರಶೇಖರ್ ಕೆದ್ದೋಟೆ
ಪುತ್ತೂರು: ನೈತಿಕತೆ ಎನ್ನುವಂತದ್ದು ಒತ್ತಾಯಪೂರ್ವಕವಾಗಿ ಬರುವಂತದ್ದಲ್ಲ .ಮಕ್ಕಳು ಭಯಮುಕ್ತರಾಗಿ ಖುಷಿ ಖುಷಿಯಿಂದ ಕಲಿಯುವಂತಾಗಬೇಕು ಎಂದು ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಚಂದ್ರಶೇಖರ ಕೆದ್ದೋಟೆ ಹೇಳಿದರು. ಅವರು ಎವಿಜಿ ಆಂಗ್ಲ ಮಾಧ್ಯಮ ಶಾಲೆಯ 2025 -26ನೇ ಸಾಲಿನ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಶಿಕ್ಷಣದಲ್ಲಿ ಪೋಷಕರ ಜವಾಬ್ದಾರಿಗಳ ಬಗ್ಗೆ ಮಾತನಾಡಿದರು. ಮಕ್ಕಳನ್ನು ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಿ ಕಾಲಕಾಲಕ್ಕೆ ಮಾರ್ಗದರ್ಶನವನ್ನು ನೀಡುತ್ತಾ ಒಳ್ಳೆಯ ಸಂಸ್ಕಾರಗಳನ್ನು ಕಲಿಯುವುದರ ಜೊತೆಗೆ ಕೆಟ್ಟ ಚಟಗಳತ್ತ ಮುಖ ಮಾಡದಂತೆ […]










