ಎನ್ ಎಸ್ ಎಸ್ ಶಿಬಿರಗಳು ಬದುಕಿನ ಶಿಕ್ಷಣಕ್ಕೆ ಪೂರಕ | ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ಉದ್ಘಾಟಿಸಿ ಶಿವರಾಮ ಪಿ.
ಪುತ್ತೂರು: ನಮ್ಮ ಜೀವನದಲ್ಲಿ ಶಿಕ್ಷಣ ಮಾತ್ರ ಮುಖ್ಯವಲ್ಲ ಶಿಕ್ಷಣದೊಂದಿಗೆ ಬದುಕಿಗೆ ಪೂರಕವಾದ ಅಂಶಗಳು ಬಹುಮುಖ್ಯ. ಎನ್.ಎಸ್.ಎಸ್ ಶಿಬಿರದಿಂದ ಬದುಕಿಗೆ ಪೂರಕವಾದ ಶಿಕ್ಷಣವನ್ನು ಪಡೆಯಬಹುದು ಎಂದು ಶ್ರೀ ಕ್ಷೇತ್ರ ಹನುಮಗಿರಿಯ ಧರ್ಮದರ್ಶಿ ಶಿವರಾಮ ಪಿ. ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ನೇತೃತ್ವದಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಹನುಮಗಿರಿ ಶ್ರೀ ಗಜಾನನ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ಶ್ರೀ ಗಜಾನನ ವಿದ್ಯಾಸಂಸ್ಥೆಯಲ್ಲಿ ನಡೆದ ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ ಎಂಬ ಶಿರೋನಾಮೆಯಲ್ಲಿ ಕೌಶಲ್ಯ ಮತ್ತು ಉದ್ಯಮಶೀಲತ್ವದ […]










