ಕ್ಯಾಂಪಸ್‌

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ : ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಬೆಂಗಳೂರು: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಪ್ರಥಮ ಹಾಗೂ ದ.ಕ.ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಬಾಗಲಕೋಟೆಯ ಅಂಕಿತಾ 625 ರಲ್ಲಿ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಮಧುಗಿರಿಯ ಹರ್ಷಿತ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಮೇ 9 ರಂದು ಫಲಿತಾಂಶ ಪ್ರಕಟಿಸುವ ಕುರಿತು ಪರೀಕ್ಷಾ ಬೋರ್ಡ್ ತಿಳಿಸಿತ್ತು. ಯಾದಗಿರಿ ಕೊನೆಯ‌ ಸ್ಥಾನ ಪಡೆದಿದೆ. ಕಳೆದ ಬಾರಿಯ ಫಲಿತಾಂಶಕ್ಕೆ ಹೋಲಿಸಿದರೆ ಈ ಬಾರಿ ಶೇ.10 […]

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ : ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ Read More »

ಹೊಸ ತಂತ್ರಜ್ಞಾನಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ ‘ವಿಬ್ ಜಯಾರ್-2024’ ಸಮಾರಂಭದಲ್ಲಿ ಡಾ.ವೆಂಕಟ್ರಾಜ್ ಬಿ.

ಪುತ್ತೂರು: ಹೊಸ ಹೊಸ ತಂತ್ರಜ್ಞಾನಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ತಲುಪಿದಾಗ ಮಾತ್ರ ಅದರ ಆಶಯಗಳು ಸಾಕಾರವಾಗುತ್ತದೆ. ಅದಕ್ಕಾಗಿ ಯುವ ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನಗಳ ರಾಯಭಾರಿಗಳಾಗಬೇಕು ಎಂದು ಮೈಸೂರಿನ ಎಸ್ ಡಿ ಎಂ ರೀಸರ್ಚ್ ಸೆಂಟರ್ ಫಾರ್ ಮೆನೇಜ್ಮೆಂಟ್ ಸ್ಟಡೀಸ್ ಅಧ್ಯಕ್ಷ ಡಾ.ವೆಂಕಟ್ರಾಜ್.ಬಿ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಾರ್ಷಿಕೋತ್ಸವ ವಿಬ್ ಜಯಾರ್-2024 ಸಮಾರಂಭದ ಮುಖ್ಯ ಅತಿಥಿಯಾಗಿ ಮಾತಾಡಿದರು. ಶಿಕ್ಷಣ ನೀಡುವ ಸಂಸ್ಥೆಗಳು ಸಾಕಷ್ಟಿವೆ. ಆದರೆ ಜೀವನಾನುಭವಗಳನ್ನು, ಸಂಸ್ಕೃತಿ, ಉದ್ದೇಶ, ರಾಷ್ಟ್ರ

ಹೊಸ ತಂತ್ರಜ್ಞಾನಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ ‘ವಿಬ್ ಜಯಾರ್-2024’ ಸಮಾರಂಭದಲ್ಲಿ ಡಾ.ವೆಂಕಟ್ರಾಜ್ ಬಿ. Read More »

ವಿದ್ಯಾಸಂಸ್ಥೆಗಳು ವಿದ್ಯಾರ್ಥಿ ಸುಪ್ತ ಪ್ರತಿಭೆ ಹೊರ ತರುವ ಕೆಲಸ ಮಾಡುತ್ತದೆ | ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಸವಣೂರು ಕೆ. ಸೀತಾರಾಮ ರೈ

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ ಮಂಗಳವಾರ ನಡೆಯಿತು. ವಿದ್ಯಾರಶ್ಮಿ ಸಮೂಹ ಶಿಕ್ಷಣಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಸಮಾರಂಭ ಉದ್ಘಾಟಿಸಿ ಮಾತನಾಡಿ, ವಿದ್ಯಾಸಂಸ್ಥೆಗಳು ಪ್ರತಿಯೊಬ್ಬ ವಿದ್ಯಾರ್ಥಿಯ ಸುಪ್ತ ಪ್ರತಿಭೆಯನ್ನು ಗುರುತಿಸಿ ಹೊರತರುವಂತಹ ಕೆಲಸವನ್ನು ಮಾಡುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಜೀವನದಲ್ಲಿ ಒಬ್ಬ ವ್ಯಕ್ತಿಯನ್ನು ಆದರ್ಶವಾಗಿ ಇಟ್ಟುಕೊಂಡು ತಮ್ಮ ಸಾಧನೆಯನ್ನು ಮಾಡಬೇಕು. ಹಾಗೆಯೇ ಮತ್ತೊಬ್ಬರಲ್ಲಿರುವ ಒಳ್ಳೆಯತನವನ್ನು ಅನುಸರಿಸಿ ಕಲಿಯಬೇಕು ಎಂದರು. ಮುಖ್ಯ ಅತಿಥಿಯಾಗಿ ವಿವೇಕಾನಂದ ಮಹಾವಿದ್ಯಾಲಯದ ಪರೀಕ್ಷಾಂಗ ಕುಲಸಚಿವ, ನಿವೃತ್ತ ಉಪನ್ಯಾಸಕ ಡಾ.

ವಿದ್ಯಾಸಂಸ್ಥೆಗಳು ವಿದ್ಯಾರ್ಥಿ ಸುಪ್ತ ಪ್ರತಿಭೆ ಹೊರ ತರುವ ಕೆಲಸ ಮಾಡುತ್ತದೆ | ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಸವಣೂರು ಕೆ. ಸೀತಾರಾಮ ರೈ Read More »

ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಡಾಟಾ ಸೈನ್ಸ್ ವಿಭಾಗ ಮುಖ್ಯಸ್ಥರಾಗಿ ಪ್ರೊ.ರೂಪಾ ಜಿ.ಕೆ. ಪದ ಸ್ವೀಕಾರ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ಎಂಡ್ ಎಂಜಿನಿಯರಿಂಗ್ (ಡಾಟಾ ಸೈನ್ಸ್) ವಿಭಾಗದ ಮುಖ್ಯಸ್ಥರಾಗಿ ಪ್ರೊ.ರೂಪಾ.ಜಿ.ಕೆ ಪದ ಸ್ವೀಕಾರ ಮಾಡಿದ್ದಾರೆ. 19 ವರ್ಷಗಳ ಅಧ್ಯಾಪನದ ಅನುಭವವನ್ನು ಹೊಂದಿರುವ ಅವರು ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್, ನಾಚುರಲ್ ಲೇಂಗ್ವೇಜ್ ಪ್ರಾಸೆಸಿಂಗ್, ಬಿಗ್ ಡೇಟಾ ಎನಲಿಟಿಕ್ಸ್ ಮುಂತಾದ ವಿಷಯಗಳ ಬಗ್ಗೆ ಅಪಾರ ತಿಳುವಳಿಕೆಯನ್ನು ಹೊಂದಿದ್ದಾರೆ. ಪ್ರಸ್ತುತ ಸುರತ್ಕಲ್ಲಿನ ಎನ್‌ಐಟಿಕೆಯಲ್ಲಿ ನಾಚುರಲ್ ಲೇಂಗ್ವೇಜ್ ಪ್ರಾಸೆಸಿಂಗ್ ವಿಷಯದಲ್ಲಿ ಪಿಎಚ್‌ಡಿ ಮಾಡುತ್ತಿದ್ದಾರೆ. ಅವರು ಬರೆದಿರುವ 10 ಕ್ಕೂ

ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಡಾಟಾ ಸೈನ್ಸ್ ವಿಭಾಗ ಮುಖ್ಯಸ್ಥರಾಗಿ ಪ್ರೊ.ರೂಪಾ ಜಿ.ಕೆ. ಪದ ಸ್ವೀಕಾರ Read More »

ವಿವೇಕಾನಂದ ಪದವಿ ಕಾಲೇಜಿನಲ್ಲಿ ಸಪ್ತಪರ್ಣೋತ್ಸವ-ವಿದ್ಯಾರ್ಥಿ ಸಂಘದ ದಿನಾಚರಣೆ

ಪುತ್ತೂರು: ವಿದ್ಯಾರ್ಥಿ ಮತ್ತು ಅಧ್ಯಾಪಕ ಪರಂಪರೆ ಬೆಳೆಯಬೇಕು. ಇಂದಿನ ವಿದ್ಯಾರ್ಥಿ ಸಮೂಹವೇ ನಮ್ಮ ದೇಶದ ಮುಂದಿನ ಭವಿಷ್ಯದ ರೂವಾರಿಗಳು ಆದ್ದರಿಂದ ನಾವೆಲ್ಲರು ಒಗ್ಗಟ್ಟಾಗಿ ಶ್ರಮಿಸಬೇಕು. ಪರಸ್ಪರ ಗೌರವ ಕೊಡುವುದನ್ನು ಬೆಳೆಸಿಕೊಳ್ಳೋಣ, ಎಲ್ಲರಲ್ಲೂ ಸಮಾನತೆ ಕಾಣುವ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್ ಧರ್ಮ ಹೇಳಿದರು. ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ)ದಲ್ಲಿ ನಡೆದ ಸಪ್ತಪರ್ಣೊತ್ಸವ, ವಿದ್ಯಾರ್ಥಿ ಸಂಘದ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.

ವಿವೇಕಾನಂದ ಪದವಿ ಕಾಲೇಜಿನಲ್ಲಿ ಸಪ್ತಪರ್ಣೋತ್ಸವ-ವಿದ್ಯಾರ್ಥಿ ಸಂಘದ ದಿನಾಚರಣೆ Read More »

ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ‘ಜ್ಞಾನ ಸಂಗಮ-2024’ ಉದ್ಘಾಟನೆ

ಪುತ್ತೂರು: ಕೃತಕ ಬುದ್ದಿಮತ್ತೆ ತಂತ್ರಜ್ಞಾನವು ವ್ಯಾಪಕವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಿಲ್ಲದೆ ಭವಿಷ್ಯದ ದಿನಗಳಿಲ್ಲ ಎನ್ನುವವರೆಗೆ ಸರ್ವವ್ಯಾಪಿಯಾಗಿದೆ. ಯಾವುದೇ ತಂತ್ರಜ್ಞಾನವಾದರೂ ಅದರ ಬಳಕೆಯ ವಿಧಾನದ ಮೇಲೆ ಒಳಿತು ಕೆಡುಕುಗಳು ನಿರ್ಧರಿತವಾಗುತ್ತವೆ ಎಂದು ಎಂಐಟಿ ಮಣಿಪಾಲದ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ರಾಘವೇಂದ್ರ ಎಸ್. ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಭಾರತೀಯ ತಾಂತ್ರಿಕ ಶಿಕ್ಷಣ ಸಂಘ ನವದೆಹಲಿ, ವಿವೇಕಾನಂದ ಸಂಶೋಧನಾ ಕೇಂದ್ರ ಪುತ್ತೂರು ಮತ್ತು ಐಇಇಇ ವಿಸಿಇಟಿ ವಿದ್ಯಾರ್ಥಿ

ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ‘ಜ್ಞಾನ ಸಂಗಮ-2024’ ಉದ್ಘಾಟನೆ Read More »

ಅಂಬಿಕಾ ಮಹಾವಿದ್ಯಾಲಯದಲ್ಲಿ ಸಿಎ, ಐಬಿಪಿಎಸ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ | 9 ಮಂದಿ ವಿದ್ಯಾರ್ಥಿಗಳು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ

ಪುತ್ತೂರು: ಹತ್ತನೆಯ ತರಗತಿ ಮುಕ್ತಾಯವಾಗುತ್ತಿದ್ದಂತೆ ಅನೇಕ ವಿದ್ಯಾರ್ಥಿಗಳು ಸಿಎ ಆಗಬೇಕೆಂಬ ಯೋಚನೆ – ಯೋಜನೆಯೊಂದಿಗೆ ವಾಣಿಜ್ಯ ವಿಭಾಗಕ್ಕೆ ಅಡಿ ಇಡುವುದಿದೆ. ವಿದ್ಯಾರ್ಥಿಗಳ ಈ ಕನಸನ್ನು ನನಸು ಮಾಡುವುದಕ್ಕಾಗಿ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯ ಮಹತ್ವದ ಹೆಜ್ಜೆಯನ್ನಿಟ್ಟು ಯಶಸ್ಸಿನ ಹಾದಿಯಲ್ಲಿ ಮುನ್ನಡೆಯುತ್ತಿದೆ. ಈ ನಡುವೆ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲೂ ವಾಣಿಜ್ಯ ವಿದ್ಯಾರ್ಥಿಗಳಿಗೆ ಸಿಎ ಕೋಚಿಂಗ್ ನಡೆಸುತ್ತಿರುವುದರಿಂದ ಹತ್ತನೆಯ ನಂತರ ಅನೇಕ ವಿದ್ಯಾರ್ಥಿಗಳು ದಾಖಲಾತಿ ಮಾಡಿಸಿಕೊಳ್ಳುತ್ತಿದ್ದಾರೆ. ಒಟ್ಟು 9 ಮಂದಿ ವಿದ್ಯಾರ್ಥಿಗಳು ಸಿಎ ಫೌಂಡೇಶನ್ ಪರೀಕ್ಷೆಯನ್ನು ತೇರ್ಗಡೆ ಹೊಂದಿದ್ದಾರೆ, ಮೂವರು

ಅಂಬಿಕಾ ಮಹಾವಿದ್ಯಾಲಯದಲ್ಲಿ ಸಿಎ, ಐಬಿಪಿಎಸ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ | 9 ಮಂದಿ ವಿದ್ಯಾರ್ಥಿಗಳು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ Read More »

ಪ್ರೊ.ವಿ.ಬಿ.ಅರ್ತಿಕಜೆ ಯವರಿಗೆ ನಿರಂಜನ ಪ್ರಶಸ್ತಿ | ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ ಸಂಪ್ರತಿಷ್ಠಾನಕ್ಕೆ ಶಂಕರ ಸಾಹಿತ್ಯ ಪ್ರಶಸ್ತಿ |ಮೇ 9 ರಂದು ಪ್ರಶಸ್ತಿ ಪ್ರದಾನ

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಶಿವರಾಮ ಕಾರಂತ ಅಧ್ಯಯನ ಕೇಂದ್ರದಿಂದ ನೀಡುವ ನಿರಂಜನ ಪ್ರಶಸ್ತಿಯನ್ನು ಈ ವರ್ಷ ನಿವೃತ್ತ ಪ್ರಾಧ್ಯಾಪಕ, ಸಾಹಿತಿ ಪ್ರೊ. ವಿ. ಬಿ. ಅರ್ತಿಕಜೆ ಅವರಿಗೆ ಹಾಗೂ ಶಂಕರ ಸಾಹಿತ್ಯ ಪ್ರಶಸ್ತಿಯನ್ನು ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ ಸಂಪ್ರತಿಷ್ಠಾನಕ್ಕೆ ಶಂಕರ ಸಾಹಿತ್ಯ ಪ್ರಶಸ್ತಿ ನೀಡಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂಭ ಮೇ.9 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ. ನಿರಂಜನ ಸಾಹಿತ್ಯ ಪ್ರಶಸ್ತಿ: ಪ್ರೊ. ವಿ. ಬಿ.

ಪ್ರೊ.ವಿ.ಬಿ.ಅರ್ತಿಕಜೆ ಯವರಿಗೆ ನಿರಂಜನ ಪ್ರಶಸ್ತಿ | ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ ಸಂಪ್ರತಿಷ್ಠಾನಕ್ಕೆ ಶಂಕರ ಸಾಹಿತ್ಯ ಪ್ರಶಸ್ತಿ |ಮೇ 9 ರಂದು ಪ್ರಶಸ್ತಿ ಪ್ರದಾನ Read More »

ಜೀವನ ಕೌಶಲ್ಯ ಕರಗತ ಮಾಡಿಕೊಳ್ಳುವುದು ಅಗತ್ಯ | ಅಂಬಿಕಾ ಮಹಾವಿದ್ಯಾಲಯದಲ್ಲಿ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟಿಸಿ ಐತ್ತಪ್ಪ ನಾಯ್ಕ್

ಪುತ್ತೂರು: ಪಠ್ಯದ ಸಂಗತಿಗಳಷ್ಟೇ ಜೀವನ ರೂಪಿಸುವುದಿಲ್ಲ. ಪಠ್ಯದ ಜತೆಗೆ ಯಾವ ಬಗೆಯ ಕೌಶಲ್ಯಗಳನ್ನು ನಮ್ಮದಾಗಿಸಿಕೊಳ್ಳುತ್ತೇವೆ ಎಂಬುದು ನಮ್ಮ ಭವಿಷ್ಯಕ್ಕೆ ಪೂರಕವೆನಿಸುತ್ತದೆ. ಅನೇಕ ವಿದ್ಯಾರ್ಥಿಗಳು ಅಂಕ ಗಳಿಸುವಲ್ಲಿ ಸೋತರೂ ತಮ್ಮಲ್ಲಿರುವ ಕೌಶಲ್ಯಗಳಿಂದಾಗಿ ಬದುಕಿನಲ್ಲಿ ಯಶಸ್ಸನ್ನು ಕಂಡ ನೂರಾರು ಉದಾಹರಣೆಗಳಿವೆ. ಹಾಗಾಗಿ ಜೀವನ ಕೌಶಲಗಳ ಬಗೆಗೆ ವಿದ್ಯಾರ್ಥಿಗಳು ಗಂಭೀರವಾಗಿ ಆಲೋಚಿಸಬೇಕು ಎಂದು ವಿಶ್ರಾಂತ ಮುಖ್ಯ ಶಿಕ್ಷಕ ಬಿ.ಐತ್ತಪ್ಪ ನಾಯ್ಕ್ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಪರ್ಸನಲ್ ಡೆವಲಪ್‌ಮೆಂಟ್ ಅಂಡ್ ಲೈಫ್ ಸ್ಕಿಲ್ಸ್ ಎಂಬ ವಿಷಯದ ಮೇಲೆ ವಿದ್ಯಾರ್ಥಿಗಳಿಗಾಗಿ ಆರಂಭಿಸಲಾದ

ಜೀವನ ಕೌಶಲ್ಯ ಕರಗತ ಮಾಡಿಕೊಳ್ಳುವುದು ಅಗತ್ಯ | ಅಂಬಿಕಾ ಮಹಾವಿದ್ಯಾಲಯದಲ್ಲಿ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟಿಸಿ ಐತ್ತಪ್ಪ ನಾಯ್ಕ್ Read More »

ಬೌದ್ಧಿಕತೆಯಷ್ಟೇ ದೈಹಿಕ ಕ್ಷಮತೆಯೂ ಮುಖ್ಯ : ಬಾಲಕೃಷ್ಣ ಬೋರ್ಕರ್| ಅಂಬಿಕಾ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

ಪುತ್ತೂರು: ಬೌದ್ಧಿಕತೆಯಷ್ಟೇ ದೈಹಿಕ ಕ್ಷಮತೆಯೂ ಮುಖ್ಯ. ಆಧುನಿಕ ಶಿಕ್ಷಣ ಬೌದ್ಧಿಕತೆಗಷ್ಟೇ ಆದ್ಯತೆ ನೀಡುತ್ತಿದೆ. ಆದರೆ ದೈಹಿಕ ದೃಢತೆ ಸಾಧಿಸುವುದು ಅತ್ಯಂತ ಅಗತ್ಯ. ಕ್ರೀಡೆಗಳಲ್ಲಿ ತೊಡಗುವುದರಿಂದ ನಾವು ದೈಹಿಕವಾಗಿಯೂ ಸಮರ್ಥರೆನಿಸಿಕೊಳ್ಳಬಹುದು. ಶಾಲಾ ಕಾಲೇಜುಗಳಲ್ಲಿ ಅಧ್ಯಯನ ನಡೆಸುವ ವಿದ್ಯಾರ್ಥಿಗಳು ಅವಕಾಶಗಳನ್ನು ಸೃಜಿಸಿಕೊಂಡು ದೇಹಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಬಾಲಕೃಷ್ಣ ಬೋರ್ಕರ್ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ 2024 ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ಅಂಬಿಕಾ ಸಮೂಹ

ಬೌದ್ಧಿಕತೆಯಷ್ಟೇ ದೈಹಿಕ ಕ್ಷಮತೆಯೂ ಮುಖ್ಯ : ಬಾಲಕೃಷ್ಣ ಬೋರ್ಕರ್| ಅಂಬಿಕಾ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ Read More »

error: Content is protected !!
Scroll to Top