ಕ್ಯಾಂಪಸ್‌

ತ್ರೋಬಾಲ್ ಪಂದ್ಯಾಟ : ಪುತ್ತೂರಿನ ಬೆಥನಿ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ

ಪುತ್ತೂರು: ಡಿಸೆಂಬರ್ ನಲ್ಲಿ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗದಲ್ಲಿ ನಡೆಸಿದ ರಾಜ್ಯ ಮಟ್ಟದ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ಆಯಿಷತ್ ಹಿಬಾ ಮತ್ತು ನಿರೀಕ್ಷಾ ಎಚ್‍. ಪ್ರಥಮ ಸ್ಥಾನ ಪಡೆದಿದ್ದು, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ನಿರಂಜನ್, ಅಕ್ಷಯ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಸೆಲಿನ್ ಪೇತ್ರಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

ತ್ರೋಬಾಲ್ ಪಂದ್ಯಾಟ : ಪುತ್ತೂರಿನ ಬೆಥನಿ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ Read More »

ಆಲಂಕಾರು: ಕೊಂಡಾಡಿಕೊಪ್ಪ ಶಾಲಾ ಗೇಟ್ ಉದ್ಘಾಟನೆ

ಆಲಂಕಾರು: ಆಲಂಕಾರು ಗ್ರಾಮ ಪಂಚಾಯತ್ ವತಿಯಿಂದ ಕೊಂಡಾಡಿಕೊಪ್ಪ ಶಾಲೆಗೆ ಒದಗಿಸಿದ ಶಾಲಾ ಗೇಟ್ ಇದರ ಉದ್ಘಾಟನೆಯನ್ನು ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ನೆರವೇರಿಸಿದರು. ಆಲಂಕಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಶೀಲ ಕೊಂಡಾಡಿ, ಸದಸ್ಯರಾದ ಸದಾನಂದ ಆಚಾರ್ಯ, ವಾರಿಜಾ ಶ್ವೇತಕುಮಾರ್, ಆಲಂಕಾರು ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಪ್ರದೀಪ್ ರೈ ಮನವಳಿಕೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮೋಹನ ಕಮಿತ್ತಿಲು, ಉಪಾಧ್ಯಕ್ಷೆ ಲತಾ ಆಲಂಕಾರು, ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಪರಮೇಶ್ವರ ಗೌಡ, ನಿರ್ದೇಶಕ ಹರೀಶ್ ಗೌಡ

ಆಲಂಕಾರು: ಕೊಂಡಾಡಿಕೊಪ್ಪ ಶಾಲಾ ಗೇಟ್ ಉದ್ಘಾಟನೆ Read More »

ವಿದ್ಯಾರ್ಥಿಗಳು ವಿನಯತೆ ಬೆಳೆಸಿಕೊಳ್ಳಬೇಕು | ಮಾಣಿಲ ಶಾಲಾ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಾಹಿತಿ ಸವಿತಾ ಭಟ್

ಮಾಣಿಲ: ವಿದ್ಯಾರ್ಥಿಗಳು ವಿದ್ಯೆಯೊಂದಿಗೆ ವಿನಯತೆಯನ್ನು ಬೆಳೆಸಿಕೊಳ್ಳಬೇಕು ಎಂದು ಹಿರಿಯ ಸಾಹಿತಿ ಸವಿತಾ ಭಟ್ ಅಡ್ಯಾಯಿ ಹೇಳಿದರು. ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ನಡೆದ ಪ್ರತಿಭಾ ಪುರಸ್ಕಾರದ ಸಭಾ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿಎಂಸಿ ಅಧ್ಯಕ್ಷ ಶಿವಪ್ರಸಾದ್ ಸೊರಂಪಳ್ಳ ವಹಿಸಿ ಶಾಲೆಯ ಉನ್ನತಿಗೆ ಎಲ್ಲರ ಸಹಕಾರ ಕೋರಿದರು. ಮಾಣಿಲ ಗ್ರಾ.ಪಂ.ಅಧ್ಯಕ್ಷ ಶ್ರೀಧರ್ ಬಾಳೆಕಲ್ಲು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು. ಗ್ರಾ.ಪಂ ಸದಸ್ಯ ರಾಜೇಶ್ ಕುಮಾರ್ ಬಾಳೆಕಲ್ಲು, ಶಾಲಾ ಸ್ಥಳದಾನಿ

ವಿದ್ಯಾರ್ಥಿಗಳು ವಿನಯತೆ ಬೆಳೆಸಿಕೊಳ್ಳಬೇಕು | ಮಾಣಿಲ ಶಾಲಾ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಾಹಿತಿ ಸವಿತಾ ಭಟ್ Read More »

ಮೋದಿ ಆಡಳಿತದಿಂದ ದೇಶದಲ್ಲಿ ಪರಿವರ್ತನೆ | ವೀರಮಂಗಲ ಶಾಲೆಯಲ್ಲಿ ಪಿಎಂಶ್ರೀ ಕಾರ್ಯಚಟುವಟಿಕೆಗಳ ಶಾಲಾರ್ಪಣಾ ಕಾರ್ಯಕ್ರಮ ಉದ್ಘಾಟಿಸಿ ಸಂಸದ ನಳಿನ್ ಕುಮಾರ್ ಕಟೀಲ್ | ವೀರಮಂಗಲ ಶಾಲೆಗೆ ಗರಿಷ್ಠ ಅನುದಾನ ಒದಗಿಸಿದ ತೃಪ್ತಿ ನನಗಿದೆ : ಸಂಜೀವ ಮಠಂದೂರು

ಪುತ್ತೂರು: ನರೇಂದ್ರ ಮೋದಿಯವರು ಪ್ರಧಾನ ಮಂತ್ರಿಯಾಗಿ ದೇಶದ ಚುಕ್ಕಾಣಿ ಹಿಡಿದ ಬಳಿಕ ದೇಶ ಬಹಳಷ್ಟು ಕ್ಷೇತ್ರಗಳಲ್ಲಿ ಪ್ರಗತಿ ಕಂಡಿದೆ. ಈ ಮೂಲಕ  ಪರಿವರ್ತನೆಯ ಯುಗ ಆರಂಭವಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ವೀರಮಂಗಲ ಶಾಲೆಯಲ್ಲಿ ಪಿಎಂಶ್ರೀ ಕಾರ್ಯಚಟುವಟಿಕೆಗಳ ಶಾಲಾರ್ಪಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವೀರಮಂಗಲ ಶಾಲೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಈ ಶಾಲೆಯನ್ನು ಪಿಎಂಶ್ರೀಗೆ ಆಯ್ಕೆ ಮಾಡಿದ ಪುತ್ತೂರಿನ ನಿಕಟಪೂರ್ವ ಶಾಸಕ ಸಂಜೀವ ಮಠಂದೂರುರವರ ಕಾರ್ಯಕ್ಷಮತೆ ಪ್ರಶಂಸನೀಯ ಎಂದರು. ಪಿಎಂಶ್ರೀಗೆ ಆಯ್ಕೆಯಾದ ವೀರಮಂಗಲ

ಮೋದಿ ಆಡಳಿತದಿಂದ ದೇಶದಲ್ಲಿ ಪರಿವರ್ತನೆ | ವೀರಮಂಗಲ ಶಾಲೆಯಲ್ಲಿ ಪಿಎಂಶ್ರೀ ಕಾರ್ಯಚಟುವಟಿಕೆಗಳ ಶಾಲಾರ್ಪಣಾ ಕಾರ್ಯಕ್ರಮ ಉದ್ಘಾಟಿಸಿ ಸಂಸದ ನಳಿನ್ ಕುಮಾರ್ ಕಟೀಲ್ | ವೀರಮಂಗಲ ಶಾಲೆಗೆ ಗರಿಷ್ಠ ಅನುದಾನ ಒದಗಿಸಿದ ತೃಪ್ತಿ ನನಗಿದೆ : ಸಂಜೀವ ಮಠಂದೂರು Read More »

ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಬಲಿಷ್ಠ ಸಮಾಜ ನಿರ್ಮಾಣ‌ ಮಾಡಬೇಕಿದೆ | ಕಂಬಲದಡ್ಡ ಅಂಗನವಾಡಿ ಕೇಂದ್ರ ಉದ್ಘಾಟಿಸಿ ಶಾಸಕ ಅಶೋಕ್ ರೈ

ಪುತ್ತೂರು: ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಬಲಿಷ್ಡ ಸಮಾಜದ ನಿರ್ಮಾಣಕ್ಕೆ ಶ್ರಮ ಪಡಬೇಕಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಆರ್ಯಾಪು ಗ್ರಾಮದ ಕಂಬಲದಡ್ಡ ಅಂಗನವಾಡಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು. ಅಂಗನವಾಡಿಗಳಿಗೆ ಮಕ್ಕಳನ್ನು ದಾಖಲಿಸುವ ಮೂಲಕ ನಾವು ಪುಟ್ಟ ಹೃದಯಗಳಿಗೂ ಸಂಸ್ಕಾರದ ಶಿಕ್ಷಣ ಎಳೆಯದರಲ್ಲೇ ನೀಡಬೇಕು ಎಂದು ಹೇಳಿದರು. ವೇದಿಕೆಯಲ್ಲಿ ಆರ್ಯಾಪು  ಗ್ರಾಪಂ ಅಧ್ಯಕ್ಷೆ ಗೀತಾ, ಉಪಾಧ್ಯಕ್ಷೆ ಅಶೋಕ ನಾಯ್ಕ, ಅಂಗನವಾಡಿ ಮೇಲ್ವಿಚಾರಕಿ ಜಲಜಾಕ್ಷಿ, ಗ್ರಾಪಂ ಪಿಡಿಒ ನಾಗೇಶ್, ಗ್ರಾಪಂ ಸದಸ್ಯರುಗಳಾದ ಪೂರ್ಣಿಮಾ, ರತ್ನಾವತಿ,

ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಬಲಿಷ್ಠ ಸಮಾಜ ನಿರ್ಮಾಣ‌ ಮಾಡಬೇಕಿದೆ | ಕಂಬಲದಡ್ಡ ಅಂಗನವಾಡಿ ಕೇಂದ್ರ ಉದ್ಘಾಟಿಸಿ ಶಾಸಕ ಅಶೋಕ್ ರೈ Read More »

ಮುರುವ ಸರಕಾರಿ ಪ್ರೌಢ ಶಾಲೆ ರಸ್ತೆಗೆ ಶಿಲಾನ್ಯಾಸ

ಪುತ್ತೂರು: ಮಾಣಿಲ ಗ್ರಾಮದ ಮುರುವ ಸರಕಾರಿ ಪ್ರೌಢ ಶಾಲೆಗೆ ತೆರಳುವ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಗುದ್ದಲಿ ಪೂಜೆ ನಡೆಯಿತು. ಶಾಸಕ ಅಶೋಕ್ ರೈ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ನೀಡುವುದಾಗಿ ಭರವಸೆ ನೀಡಿದರು. ಮಾಣಿಲ ಗ್ರಾಪಂ ಅಧ್ಯಕ್ಷ ಶ್ರೀಧರ್ ಬಾಳೆಕಲ್ಲು ಮಾತನಾಡಿ, ಹಲವು ವರ್ಷಗಳ ಬೇಡಿಕೆ ಈ ಬಾರಿ ಈಡೇರಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಅನುಕೂಲಕ್ಕೆ ಈ ರಸ್ತೆ ಬಳಕೆಯಾಗಲಿದೆ ಎಂದು ಹೇಳಿದರು. ಈ ವೇಳೆ ಶಾಲೆಯ ಸ್ಥಳ ದಾನಿ ಮುರುವ ಮಹಾಬಲೆಭಟ್

ಮುರುವ ಸರಕಾರಿ ಪ್ರೌಢ ಶಾಲೆ ರಸ್ತೆಗೆ ಶಿಲಾನ್ಯಾಸ Read More »

ಎಳವೆಯಲ್ಲಿ ಸ್ಪಷ್ಟ ಮಾರ್ಗದರ್ಶನ ಇಲ್ಲದಿರುವುದೇ ಹಿಂದೂ ಧರ್ಮಕ್ಕೆ ಸವಾಲು | ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಶೃತಿ ಭಟ್

ಪುತ್ತೂರು: ಧರ್ಮದ ಬಗೆಗೆ ಎಳವೆಯಿಂದ ಸರಿಯಾದ ಮಾರ್ಗದರ್ಶನ ಇರದಿರುವುದೇ ಹಿಂದೂ ಧರ್ಮ ಇಂದು ಎದುರಿಸುತ್ತಿರುವ ಸಮಸ್ಯೆಗಳಿಗೆ ಮೂಲವೆನಿಸಿದೆ. ಯಾವಾಗ ಸನಾತನ ಧರ್ಮದ ಉತ್ಕೃಷ್ಟತೆ ಎಳೆಯ ವಯಸ್ಸಿನಿಂದಲೇ ಅರ್ಥವಾಗುತ್ತದೋ ಆಗ ಮತಾಂತರದಂತಹ ವಿಕೃತತೆಗೆ ಅವಕಾಶವಾಗುವುದಿಲ್ಲ. ಸನಾತನ ಹಿಂದೂ ಧರ್ಮದ ಮೇರು ಸಂಗತಿಗಳನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಾದ ಅಗತ್ಯವಿದೆ ಎಂದು ತಿರುವನಂತಪುರಂನ ಆರ್ಷ ವಿದ್ಯಾ ಸಮಾಜದ ಸ್ವಯಂಸೇವಕಿ ಶೃತಿ ಭಟ್ ಹೇಳಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಬಪ್ಪಳಿಗೆಯಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಆಯೋಜಿಸಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಶನಿವಾರ

ಎಳವೆಯಲ್ಲಿ ಸ್ಪಷ್ಟ ಮಾರ್ಗದರ್ಶನ ಇಲ್ಲದಿರುವುದೇ ಹಿಂದೂ ಧರ್ಮಕ್ಕೆ ಸವಾಲು | ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಶೃತಿ ಭಟ್ Read More »

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಅನಾವರಣಗೊಂಡ ಫಿಲೋ ಉತ್ಸವ  

ಪುತ್ತೂರು: ಶಿಕ್ಷಣ ಜಗತ್ತನ್ನು ಬದಲಾಯಿಸುವ ಪ್ರಮುಖ ಅಸ್ತ್ರವಾಗಿದ್ದು, ವ್ಯಕ್ತಿಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುವುದರೊಂದಿಗೆ ಜ್ಞಾನವುಳ್ಳ ನಾಗರಿಕನನ್ನಾಗಿ ಮಾಡಲು ಸಹಕಾರಿಯಾಗುತ್ತದೆ ಎಂದು ಕರ್ನಾಟಕ ಸರ್ಕಾರ ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿ ಅರುಣ್ ಫುಟ್ರಾಡೋ ಹೇಳಿದರು. ಸಂತ ಫಿಲೋಮಿನಾ  ಪದವಿ ಪೂರ್ವ ಕಾಲೇಜಿನಲ್ಲಿ ಡಿ.23 ರಂದು ನಡೆದ ‘ಫಿಲೋ ಉತ್ಸವ ಹಾಗೂ ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ಶಿಕ್ಷಣ ಎಲ್ಲರನ್ನೂ ಸಬಲಗೊಳಿಸುತ್ತದೆ. ಇದು ಆಧುನಿಕ ಮತ್ತು ಕೈಗಾರಿಕೀಕರಣಗೊಂಡ ಜಗತ್ತನ್ನು ರೂಪಿಸುವ ಪ್ರಮುಖ ಅಂಶವಾಗಿದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಅನಾವರಣಗೊಂಡ ಫಿಲೋ ಉತ್ಸವ   Read More »

ಕ್ಯಾಂಪ್ಕೋ ನೇಮಕಾತಿ ಲಿಖಿತ ಪರೀಕ್ಷೆ : ವಿದ್ಯಾಮಾತಾ ಅಕಾಡೆಮಿಯಲ್ಲಿ ಆನ್ಲೈನ್ ತರಗತಿ ಪ್ರಾರಂಭ

ಪುತ್ತೂರು: ಡಿ31ರಂದು ನಡೆಯಲಿರುವ ಕ್ಯಾಂಪ್ಕೋ ನೇಮಕಾತಿಯ ಲಿಖಿತ ಪರೀಕ್ಷೆ ಎದುರಿಸುವ ಅಭ್ಯರ್ಥಿಗಳಿಗೆ ವಿದ್ಯಾಮಾತಾ ಅಕಾಡೆಮಿ ಡಿ.25 ರಿಂದ ಡಿ.30ರ ವರೆಗೆ ಆನ್ಲೈನ್ ತರಗತಿಯನ್ನು ಆರಂಭಿಸಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಈ ತರಗತಿಗಳ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ಅಕಾಡೆಮಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ತರಗತಿಗಳು ರಾತ್ರಿ ಆನ್ಲೈನ್ ಮೂಲಕ 7.00ರಿಂದ 9.00ರವರೆಗೆ 2 ಗಂಟೆಗಳ ಅವಧಿಯದ್ದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ವಿದ್ಯಾಮಾತಾ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್,ಎ.ಪಿ.ಯಂ.ಸಿ ರೋಡ್, ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು, ಫೋನ್: 96204

ಕ್ಯಾಂಪ್ಕೋ ನೇಮಕಾತಿ ಲಿಖಿತ ಪರೀಕ್ಷೆ : ವಿದ್ಯಾಮಾತಾ ಅಕಾಡೆಮಿಯಲ್ಲಿ ಆನ್ಲೈನ್ ತರಗತಿ ಪ್ರಾರಂಭ Read More »

ಮಾಧ್ಯಮ ಜಗತ್ತು ಊಹೆಗೂ ಮೀರಿ ಬದಲಾಗಿದೆ | ಮಾಧ್ಯಮಗಳ ಸವಾಲು ಮತ್ತು ಸಾಧ್ಯತೆಗಳ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಪ್ರೊ. ವಿ. ಬಿ ಅರ್ತಿಕಜೆ

ಪುತ್ತೂರು: ಸಂವಾದ ಕಾರ್ಯಕ್ರಮಗಳು ಪತ್ರಿಕೋದ್ಯಮ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುತ್ತವೆ. ಪತ್ರಿಕೋದ್ಯಮ ವಿದ್ಯಾರ್ಥಿಯಾದವನು ಪ್ರಶ್ನಿಸುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಸಮಾಜದಲ್ಲಿ ಪತ್ರಿಕೋದ್ಯಮ ಬೆಳೆಯಬೇಕಾದರೆ ಪ್ರೋತ್ಸಾಹ ಬಹಳ ಮುಖ್ಯ ಎಂದು ವಿಶ್ರಾಂತ ಇತಿಹಾಸ ಪ್ರಾಧ್ಯಾಪಕ ಹಾಗೂ ಹಿರಿಯ ಪತ್ರಕರ್ತ ಪ್ರೊ. ವಿ. ಬಿ ಅರ್ತಿಕಜೆ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಸ್ವಾಯತ್ತ ಮಹಾವಿದ್ಯಾಲಯ, ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗ, ಐಕ್ಯೂಎಸಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ

ಮಾಧ್ಯಮ ಜಗತ್ತು ಊಹೆಗೂ ಮೀರಿ ಬದಲಾಗಿದೆ | ಮಾಧ್ಯಮಗಳ ಸವಾಲು ಮತ್ತು ಸಾಧ್ಯತೆಗಳ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಪ್ರೊ. ವಿ. ಬಿ ಅರ್ತಿಕಜೆ Read More »

error: Content is protected !!
Scroll to Top