ಕ್ಯಾಂಪಸ್‌

ಡಿ.29-30: ಕಾವು ಬುಶ್ರಾ ವಿದ್ಯಾಸಂಸ್ಥೆಗಳ ಬೆಳ್ಳಿ ಹಬ್ಬ ಸಂಭ್ರಮ ‘ಬುವಿ ಉತ್ಸವ-2023’ | ನವೀಕೃತ ಸಭಾಂಗಣ ‘ಬುಶ್ರಾ ಅಡಿಟೋರಿಯಂ’ ಉದ್ಘಾಟನೆ

ಪುತ್ತೂರು: ಬೆಳ್ಳಿಹಬ್ಬದ ಹೊಸ್ತಿಲಲ್ಲಿರುವ ಪುತ್ತೂರಿನ ಗ್ರಾಮೀಣ ಪ್ರದೇಶದ ಕಾವು ಬುಶ್ರಾ ವಿದ್ಯಾಸಂಸ್ಥೆಯಲ್ಲಿ ಬೆಳ್ಳಿಹಬ್ಬ ಸಂಭ್ರಮ “ಬುವಿ ಉತ್ಸವ-2023” ಹಾಗೂ ನವೀಕೃತಗೊಂಡ ಸಭಾಂಗಣ “ಬುಶ್ರಾ ಅಡಿಟೋರಿಯಂ”ನ ಉದ್ಘಾಟನಾ ಸಮಾರಂಭ ಡಿ.29 ಹಾಗೂ 30 ರಂದು ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಶೈಕ್ಷಣಿಕ ಸಲಗಹೆಗಾರರಾದ ಕೃಷ್ಣಪ್ರಸಾದ್ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬೆಳಿಗ್ಗೆ 9.45 ಕ್ಕೆ ಧ್ವಜಾರೋಹಣವನ್ನು ಕಾವು ಬುಶ್ರಾ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಜ.ಅಬ್ದುಲ್ ಅಝೀಝ್‍ನೆರವೇರಿಸಲಿದ್ದು, ಶ್ರೀ ರಾಮಕೃಷ್ಣ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ […]

ಡಿ.29-30: ಕಾವು ಬುಶ್ರಾ ವಿದ್ಯಾಸಂಸ್ಥೆಗಳ ಬೆಳ್ಳಿ ಹಬ್ಬ ಸಂಭ್ರಮ ‘ಬುವಿ ಉತ್ಸವ-2023’ | ನವೀಕೃತ ಸಭಾಂಗಣ ‘ಬುಶ್ರಾ ಅಡಿಟೋರಿಯಂ’ ಉದ್ಘಾಟನೆ Read More »

ಬೆಳಿಯೂರುಕಟ್ಟೆ ಸರಕಾರಿ  ಪ ಪೂ ಕಾಲೇಜು ವಾರ್ಷಿಕೋತ್ಸವ

ಪುತ್ತೂರು: ಮಕ್ಕಳನ್ನು ತಿದ್ದುವ ಮತ್ತು ಉತ್ತಮ ದಾರಿ ತೋರಿಸುವ ಕೆಲಸ ಕೇವಲ ಶಿಕ್ಷಕರಿಂದ ‌ಮಾತ್ರವಲ್ಲ ಪೋಷಕರಿಂದಲೂ ಆಗಬೇಕು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಬೆಳಿಯೂರು ಕಟ್ಟೆ ಸರಕಾರಿ ಪ ಪೂ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರಕಾರಿ ಶಾಲೆಯಲ್ಲಿ ಶಿಸ್ತು ಕಡಿಮೆ ಎಂದು ಕೆಲವರು ಆಪಾದನೆ ಮಾಡುತ್ತಾರೆ. ಸರಕಾರಿ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ. ಶಿಸ್ತು ಪಾಲನೆ ಮಾಡಬೇಕಾದರೆ ಪೋಷಕರ ಸಹಕಾರ ಅತೀ ಅಗತ್ಯವಾಗಿದೆ ಎಂದ ಅವರು,

ಬೆಳಿಯೂರುಕಟ್ಟೆ ಸರಕಾರಿ  ಪ ಪೂ ಕಾಲೇಜು ವಾರ್ಷಿಕೋತ್ಸವ Read More »

ಶ್ರೀ ಸೀತಾ ರಾಘವ ಪದವಿಪೂರ್ವ, ಪ್ರೌಢಶಾಲಾ ವಿಭಾಗದ ಸಾಂಸ್ಕೃತಿಕ ಉತ್ಸವ-2023

ಪೆರ್ನಾಜೆ: ಪೆಟ್ಟು ತಿಂದ ಕಲ್ಲು ಹೇಗೆ ಸುಂದರ ವಿಗ್ರಹವಾಗುತ್ತದೋ ಹಾಗೆ ವಿದ್ಯಾರ್ಥಿಗಳನ್ನು ಎಳವೆಯಲ್ಲೇ ತಿದ್ದಿ ತೀಡಿ ರೂಪ ನೀಡುವ ಶಿಕ್ಷಕರು ಆದರ್ಶ ಗುರು ಎಂದು ಹಿರಿಯ ವಿದ್ಯಾರ್ಥಿ ಕುಮಾರ್ ಪೆರ್ನಾಜೆ ಹೇಳಿದರು. ಅವರು ಪೆರ್ನಾಜೆ ಶ್ರೀ ಸೀತಾರಾಘವ ಪದವಿಪೂರ್ವ ಹಾಗೂ ಪ್ರೌಢಶಾಲಾ ಸಾಂಸ್ಕೃತಿಕ ಉತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಗಾಳಿ ನಮಗೆಷ್ಟು ಮುಖ್ಯವೋ ಗಾಳಿಮಾತು ಅಷ್ಟೇ ಅಪಾಯಕಾರಿ. ನಂಬಿಕೆ ಅನ್ನೋದು ಬೆಲೆಕಟ್ಟಲಾಗದ ಅಮೂಲ್ಯ ರತ್ನ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸ್ಪಷ್ಟಗುರಿ, ಒಳ್ಳೆಯ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಬೇಕು

ಶ್ರೀ ಸೀತಾ ರಾಘವ ಪದವಿಪೂರ್ವ, ಪ್ರೌಢಶಾಲಾ ವಿಭಾಗದ ಸಾಂಸ್ಕೃತಿಕ ಉತ್ಸವ-2023 Read More »

ಕೊಳ್ತಿಗೆ ಶಾಲಾ ವಾರ್ಷಿಕೋತ್ಸವ, ಹಳೆ ವಿದ್ಯಾರ್ಥಿ ಸಂಘದ ರಜತ ಸಂಭ್ರಮಕ್ಕೆ ಚಾಲನೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಕೊಳ್ತಿಗೆ ಹಿರಿಯ ಪ್ರಾಥಮಿಕ ಶಾಲೆ, ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ ಹಾಗೂ ರಜತ ಸಂಭ್ರಮ ಸಮಿತಿ ಸಂಯುಕ್ತ ಆಶ್ರಯದಲ್ಲಿ ಕೊಳ್ತಿಗೆ ಶಾಲಾ ವಾರ್ಷಿಕೋತ್ಸವ ಹಾಗೂ ಹಳೆ ವಿದ್ಯಾರ್ಥಿ ಸಂಘದ ರಜತ ಸಂಭ್ರಮ ಶನಿವಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ಕೊಳ್ತಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಕ್ಕಮ್ಮ ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಕೊಳ್ತಿಗೆ ಗ್ರಾಮ ಪಂಚಾಯಿತಿ ಸದಸ್ಯರಾದ ಶಾಮ್‍ ಸುಂದರ

ಕೊಳ್ತಿಗೆ ಶಾಲಾ ವಾರ್ಷಿಕೋತ್ಸವ, ಹಳೆ ವಿದ್ಯಾರ್ಥಿ ಸಂಘದ ರಜತ ಸಂಭ್ರಮಕ್ಕೆ ಚಾಲನೆ Read More »

ಡಿ.16: ಕೊಳ್ತಿಗೆ ಶಾಲಾ ವಾರ್ಷಿಕೋತ್ಸವ , ಹಳೆ ವಿದ್ಯಾರ್ಥಿ ಸಂಘದ ರಜತ ಸಂಭ್ರಮ | ಪುತ್ತೂರು ತಾಲೂಕಿನಲ್ಲೇ ಪ್ರಪ್ರಥಮ ಬಾರಿಗೆ ತುಳು ಹಾಸ್ಯಮಯ ನಾಟಕ ‘ಶಾಂಭವಿ’ ಪ್ರದರ್ಶನ

ಪುತ್ತೂರು: ಪುತ್ತೂರು ತಾಲೂಕಿನ ಕೊಳ್ತಿಗೆ ಶಾಲಾ ವಾರ್ಷಿಕೋತ್ಸವ ಹಾಗೂ ಹಳೆ ವಿದ್ಯಾರ್ಥಿ ಸಂಘದ ರಜತ ಸಂಭ್ರಮದ ಅಂಗವಾಗಿ ಪುತ್ತೂರು ತಾಲೂಕಿನಲ್ಲೇ ಪ್ರಪ್ರಥಮ ಬಾರಿಗೆ ಉಡುಪಿ ಅಭಿನಯ ಕಲಾವಿದರು ತಂಡದಿಂದ ಕುತೂಹಲಭರಿತ ತುಳು ಹಾಸ್ಯಮಯ ನಾಟಕ ‘ಶಾಂಭವಿ’ ಕೊಳ್ತಿಗೆ ಶಾಲಾ ಸಭಾಂಗಣದಲ್ಲಿ ಡಿ.16 ಶನಿವಾರ ರಾತ್ರಿ ಗಂಟೆ 11 ರಿಂದ ಪ್ರದರ್ಶನಗೊಳ್ಳಲಿದೆ ಎಂದು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಯತ್ ಕೆಮ್ಮಾರ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಜೆ 6 ರಿಂದ ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ,

ಡಿ.16: ಕೊಳ್ತಿಗೆ ಶಾಲಾ ವಾರ್ಷಿಕೋತ್ಸವ , ಹಳೆ ವಿದ್ಯಾರ್ಥಿ ಸಂಘದ ರಜತ ಸಂಭ್ರಮ | ಪುತ್ತೂರು ತಾಲೂಕಿನಲ್ಲೇ ಪ್ರಪ್ರಥಮ ಬಾರಿಗೆ ತುಳು ಹಾಸ್ಯಮಯ ನಾಟಕ ‘ಶಾಂಭವಿ’ ಪ್ರದರ್ಶನ Read More »

ಕೃಷಿಕ ಸಮಸ್ಯೆ ಪರಿಹರಿಸಲು ಎಐ ಟೆಕ್ನಾಲಜಿ! | ಮರಹತ್ತುವ ಯಂತ್ರ ಅಭಿವೃದ್ಧಿಪಡಿಸಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು

ಪುತ್ತೂರು: ರೋಬೋಟಿಕ್ಸ್ ಮತ್ತು ಕೃತಕ ಬುದ್ಧಿಮತ್ತೆಯ ಮೂಲಕ ಮರಹತ್ತುವ ಯಂತ್ರವನ್ನು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆರ್ಟಿಫೀಶಿಯನ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗದ  ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ್ದಾರೆ. ಆಧುನಿಕ ಜೀವನ ಪದ್ದತಿಗೆ ಮಾರುಹೋಗಿರುವ ಯುವ ಜನತೆ ಕೃಷಿ ಕ್ಷೇತ್ರವನ್ನು ಕಡೆಗಣಿಸಿದೆ. ಇದರಿಂದಾಗಿ ಕೆಲವು ವಿಷಯಗಳಲ್ಲಿ ನುರಿತ ಕೆಲಸಗಾರರೇ ಸಿಗುತ್ತಿಲ್ಲ. ಅಡಿಕೆಗೆ ಔಷದ ಸಿಂಪಡಣೆ ಅಡಿಕೆ ಕೊಯ್ಲು, ತೆಂಗಿನಕಾಯಿ ಕೊಯ್ಲು ಮುಂತಾದ ನಾಜೂಕಿನ ಕೆಲಸಗಳನ್ನು ಬೆರಳೆಣಿಯಷ್ಟು ಮಂದಿಯಷ್ಟೇ ಮಾಡುತ್ತಿದ್ದಾರೆ. ಈ ಸಮಸ್ಯೆಗಳನ್ನು ಮನಗಂಡು ಪುತ್ತೂರಿನ

ಕೃಷಿಕ ಸಮಸ್ಯೆ ಪರಿಹರಿಸಲು ಎಐ ಟೆಕ್ನಾಲಜಿ! | ಮರಹತ್ತುವ ಯಂತ್ರ ಅಭಿವೃದ್ಧಿಪಡಿಸಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು Read More »

ವಾರ್ಷಿಕೋತ್ಸವ ಪ್ರಯುಕ್ತ ಪೋಷಕರ, ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ

ಕಾಣಿಯೂರು: ಚಾರ್ವಾಕ ಸ.ಉ. ಹಿ.ಪ್ರಾ. ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಶಾಲಾ ಪೋಷಕರ ಹಾಗೂ ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ ನಡೆಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ರಾಮಣ್ಣ ಗೌಡ ಪೊನ್ನೆತ್ತಡಿ, ಉಪಾಧ್ಯಕ್ಷೆ ಸಾರಿಕಾ ದೇವರತ್ತಿಮಾರು, ಶಾಲಾ ಮುಖ್ಯಗುರು ಪಾರ್ವತಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಶೇಖರ ಎರ್ಕ, ಕಾರ್ಯದರ್ಶಿ ಪರಮೇಶ್ವರ ಗೌಡ ಇಡ್ಯಡ್ಕ ಮೊದಲಾದವರು ಉಪಸ್ಥಿತರಿದ್ದರು. ಪೋಷಕರು ಹಾಗೂ ಹಿರಿಯ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದರು.

ವಾರ್ಷಿಕೋತ್ಸವ ಪ್ರಯುಕ್ತ ಪೋಷಕರ, ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ Read More »

ರಾಷ್ಟ್ರೀಯ ಮಹಿಳಾ ಕಬಡ್ಡಿಗೆ ಕಾಣಿಯೂರಿನ ಸೌಮ್ಯ ಪೂಜಾರಿ ಆಯ್ಕೆ

ಪುತ್ತೂರು : ಪಂಜಾಬ್‌ನ ಲ್ಯಾಮ್ರನ್ ಟೆಕ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ 70ನೇ ಸೀನಿಯ‌ರ್ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್  ಗೆ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಕಾಣಿಯೂರಿನ ಸೌಮ್ಯ ಪೂಜಾರಿ ಆಯ್ಕೆಯಾಗಿದ್ದಾರೆ. ಸೌಮ್ಯ ಪೂಜಾರಿ ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿ ಪುತ್ರಿ ಹಾಗೂ ಪುತ್ತೂರಿನ ಪೊಲೀಸ್‌ ಇಲಾಖೆಯ ಸಿಬ್ಬಂದಿ ಸಂತೋಷ್ ಕುಮಾರ್ ಅವರ ಸಹೋದರಿ. ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರಗತಿ ಆಂಗ್ಲಮಾದ್ಯಮ ಶಾಲೆ ಹಾಗೂ ಆಳ್ವಾಸ್‌ ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿನಿಯಾಗಿರುವ ಸೌಮ್ಯಾ ಅವರು

ರಾಷ್ಟ್ರೀಯ ಮಹಿಳಾ ಕಬಡ್ಡಿಗೆ ಕಾಣಿಯೂರಿನ ಸೌಮ್ಯ ಪೂಜಾರಿ ಆಯ್ಕೆ Read More »

ದಶಮಾನೋತ್ಸವ ಹೊಸ್ತಿಲಲ್ಲಿರುವ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯ | ಡಿ. 16: ‘ಅಂತರ್ಮನಸ್ಸಿನ ವಿಸ್ಮಯ ಶಕ್ತಿಗಳ’ ಕುರಿತು ವಿಶೇಷ ಕಾರ್ಯಕ್ರಮ

ಪುತ್ತೂರು: ದಶಮಾನೋತ್ಸವ ಹೊಸ್ತಿಲಲ್ಲಿರುವ ಬಪ್ಪಳಿಗೆ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ‘ದಶಾಂಬಿಕೋತ್ಸವ’ ಕಾರ್ಯಕ್ರಮದ ಅಂಗವಾಗಿ ‘ಅಂತರ್ಮನಸ್ಸಿನ ವಿಸ್ಮಯ ಶಕ್ತಿಗಳ’ ಕುರಿತು ವಿಶೇಷ ಕಾರ್ಯಕ್ರಮ ಡಿ. 16 ರಂದು ಹಮ್ಮಿಕೊಳ್ಳಲಾಗಿದೆ ಎಂದು ದಶಾಂಬಿಕೋತ್ಸವ ಸಮಿತಿ ಅಧ್ಯಕ್ಷ, ನ್ಯಾಯವಾದಿ ಮಹೇಶ್ ಕಜೆ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪುತ್ತೂರಿನಲ್ಲಿ ಪ್ರಥಮ ಬಾರಿಗೆ ಇಂತಹಾ ವಿಶೇಷ ಕಾರ್ಯಕ್ರಮ ನಡೆಯಲಿದ್ದು, ಖ್ಯಾತ ಸಮ್ಮೋಹಿನಿ ತಜ್ಞ, ಕುಂಡಲಿನಿ ಯೋಗ ಗುರು ಬೆಂಗಳೂರಿನ ಡಾ.ರಾಮಚಂದ್ರ ಗುರೂಜಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ತಿಳಿಸಿದರು. ಡಾ. ರಾಮಚಂದ್ರ ಗುರೂಜಿಯವರು ಅಂತರಾಷ್ಟ್ರೀಯ

ದಶಮಾನೋತ್ಸವ ಹೊಸ್ತಿಲಲ್ಲಿರುವ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯ | ಡಿ. 16: ‘ಅಂತರ್ಮನಸ್ಸಿನ ವಿಸ್ಮಯ ಶಕ್ತಿಗಳ’ ಕುರಿತು ವಿಶೇಷ ಕಾರ್ಯಕ್ರಮ Read More »

ವಿದ್ಯಾರ್ಥಿಯ ಅತಿರೇಕ ವರ್ತನೆ : ಮಕ್ಕಳ ಪೋಷಕರಿಂದ ವಿದ್ಯಾರ್ಥಿಯ ವಿರುದ್ಧ ಪ್ರತಿಭಟನೆ

ಪುತ್ತೂರು: ವಿದ್ಯಾರ್ಥಿಯೊಬ್ಬನ ಕಿರುಕುಳ ಸಹಿಸದೆ ವಿದ್ಯಾರ್ಥಿಗಳ ಪೋಷಕರು ಶಾಲೆಯ 6ನೇ ತರಗತಿ ವಿದ್ಯಾರ್ಥಿಯೊಬ್ಬನ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಮೇನಾಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದಿದೆ. ಶಾಲೆಯ 6ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಯೊಬ್ಬನ ವಿರುದ್ದ ಮಕ್ಕಳ ಪೋಷಕರು ಒಂದಾಗಿ ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಕ್ಕಳಿಗೆ ಹೊಡೆಯುವ ಅಧ್ಯಾಪಕರ ವಿರುದ್ಧ ಪೋಷಕರು ಪ್ರತಿಭಟನೆ ಮಾಡುವುದನ್ನು ಕೇಳಿದ್ದೇವೆ. ಆದರೆ ಇದು ಹಾಗಲ್ಲ ಬದಲಾಗಿ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಯೊಬ್ಬನ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ತುಂಟಾಟ, ಕೀಟಲೆ, ಪೋಕರಿತನದಿಂದ ಶಾಲೆಯಲ್ಲಿ

ವಿದ್ಯಾರ್ಥಿಯ ಅತಿರೇಕ ವರ್ತನೆ : ಮಕ್ಕಳ ಪೋಷಕರಿಂದ ವಿದ್ಯಾರ್ಥಿಯ ವಿರುದ್ಧ ಪ್ರತಿಭಟನೆ Read More »

error: Content is protected !!
Scroll to Top